Homeಕರ್ನಾಟಕ1785ರಿಂದ 1798ರ ಅವಧಿಯ ಟಿಪ್ಪುವಿನ ಕನಸುಗಳು

1785ರಿಂದ 1798ರ ಅವಧಿಯ ಟಿಪ್ಪುವಿನ ಕನಸುಗಳು

- Advertisement -
- Advertisement -

ಕನಸು 1

ಮರಾಠ ಸೇನೆಯ ಮೂವರು ಅಧಿಕಾರಿಗಳು

ಚಂದ್ರಮಾನದ ಪ್ರಕಾರ ಮೊದಲ ’ಅಹ್ಮದಿ’ ತಿಂಗಳ ಗುರುವಾರ ರಾತ್ರಿ. ಹಿಜರಿಯ 1200 ದಾಲ್ವ್ ವರ್ಷದ ಆರಂಭದಲ್ಲಿ, ರಾತ್ರಿಯ ಮೂರು ಭಾಗ ಹಾಗೂ ಐದು ಪ್ರಹರಗಳು ಕಳೆದಿದ್ದವು. ಶಮ್ಸಾಬಾದ್‌ನಲ್ಲಿ ಇದ್ದಾಗ ನಾನು ಈ ಕನಸ ಕಂಡೆನು.

ಮರಾಠ ಸೈನ್ಯವು ಬಂದಂತೆ ನಾನು ಏಕಾಂಗಿಯಾಗಿ ಮುನ್ನುಗ್ಗಿ ಅದರ ಸೇನಾಧಿಪತಿಗಳ ಬಳಿ ಒಬ್ಬೊಬ್ಬರಾಗಿ ಹೋರಾಡುವ ಸವಾಲು ಹಾಕಿದಂತೆ ಕಾಣಿಸಿತು. ಆ ಸೈನ್ಯದ ಮುಸ್ಲಿಮ್ ಸೇನಾಧಿಕಾರಿ ನನ್ನನ್ನು ಎದುರಿಸಿ ನಿಂತ. ಸಮರಾಂಗಣದಲ್ಲಿ ಎರಡೂ ಸೈನ್ಯಗಳು ಮುಖಾಮುಖಿಯಾಗಿ ಕದನ ನಡೆಸುತ್ತಿರುವಾಗ ನನ್ನ ಖಡ್ಗದ ಒಂದೇ ಏಟಿಗೆ ಆ ಮುಸ್ಲಿಮ್ ಸೇನಾಧಿಪತಿಯನ್ನು ಕೊಂದೆನು. ಅದಾದ ನಂತರ ಸೈನ್ಯದ ನಾಯಕನಾಗಿದ್ದ ಯುವಕ ಅಲ್ಲಿಂದ ಕಾಲ್ಕಿತ್ತು ಓಡಿದ. ನಾನು ಅವನ ಬೆನ್ನಟ್ಟಿದೆ. ಮತ್ತು ಮುಖಾಮುಖಿಯಾಗಿ ಒಂದೇ ಹೊಡೆತಕ್ಕೆ ಅವನನ್ನು ಮುಗಿಸಿದೆ. ಅದೇ ರೀತಿಯಾಗಿ ಮೂರನೇ ಮುಖ್ಯ ಸೇನಾಧಿಪತಿಯನ್ನು ಕೊಂದುಹಾಕಿದೆ. ಮೂವರು ಸೇನಾಧಿಕಾರಿಗಳನ್ನೂ ತಲಾ ಒಂದೊಂದು ಏಟಿಗೆ ಮುಗಿಸಿ ಮರಳಿದೆ. ನನ್ನ ಸೈನ್ಯ ವಿಜಯಶಾಲಿಯಾಗಿ ಸಂಭ್ರಮದಲ್ಲಿತ್ತು.

ಆಗ ಕನಸಿನಲ್ಲಿ ನನ್ನ ಸೈನ್ಯದ ಎಲ್ಲ ಅಧಿಕಾರಿಗಳು ಹಾಗೂ ಹೈದರ್ ಸಾಹಿಬ್ ಅವರು ಮನೆಯಲ್ಲಿ ಊಟ ಮಾಡುತ್ತಿರುವಂತೆ ಕಂಡೆನು. ತುಂಬಾ ದಣಿದಿದ್ದ ನಾನು ಕುಡಿಯುವುದಕ್ಕಾಗಿ ನೀರು ಕೇಳಿದೆ. ಅಲ್ಲಿದ್ದವರು ನನಗೆ ಶುಭಾಶಯ ಕೋರಿದರು ಹಾಗೂ ಊಟ ಮಾಡಿದ ನಂತರ ನೀರು ಕುಡಿಯುವಂತೆ ಮನವಿ ಮಾಡಿದರು. ಈ ಮಧ್ಯೆ ದುರ್ಬಲನಾದ ಬಿಳಿಗಡ್ಡದ ಮುದುಕನೊಬ್ಬ ನನ್ನ ಮುಂದೆ ಕಾಣಿಸಿಕೊಂಡ. ಅವನ ಕೈಯಲ್ಲಿ ಕೆನೆ ಹಾಗೂ ಸಿಹಿಯಾದ ತಿಂಡಿಗಳಿದ್ದವು. ಅವನ್ನು ತೆಗೆದುಕೊಳ್ಳುವಂತೆ ಕೇಳಿದ. ಆ ಸಿಹಿ ತಿಂಡಿಗಳನ್ನು ಅವನಿಂದ ಪಡೆದು ತಿಂದ ನಂತರ ನನ್ನಷ್ಟಕ್ಕೆ ನಾನೇ ಹೇಳಿಕೊಂಡೆ. “ಇಷ್ಟೊಂದು ಸ್ವಾದಿಷ್ಟ ಹಾಗೂ ರುಚಿಯಾದ ಆಹಾರ ಹಿಂದೆಂದೂ ತಿಂದಿರಲಿಲ್ಲ. ಅವು ಅತ್ಯಂತ ರುಚಿಕರವಾಗಿದ್ದವು.” ಸ್ನಾನ ಮಾಡಿ ಶುದ್ಧಿಯಾದ ನಂತರ ನನ್ನ ಅಧಿಕಾರಿಗಳ ಬಳಿ ವಿಚಾರಿಸಿದೆ. ಅವರು ಕಾಫಿರರ ಸೈನ್ಯವನ್ನು ನಾಶ ಮಾಡಿದ ಬಗ್ಗೆ; ಹೈದರಿ ಸೈನ್ಯದ ಅಧಿಕಾರಿಗಳು ಇಲ್ಲ ಎಂದು ಉತ್ತರಿಸಿದರು. ಮತ್ತು ಈ ವಿಷಯದಲ್ಲಿ ಅಂತಹ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಹಾಗೂ ಅವರು ಸೂಕ್ತ ಆದೇಶಕ್ಕಾಗಿ ಕಾಯುತ್ತಿದ್ದುದಾಗಿ ತಿಳಿಸಿದರು.

ಈ ಮಧ್ಯೆ ಅವರು, ಕಾಫಿರರ /ಸತ್ಯನಿಷೇಧಿಗಳ/ ನಂಬಿಕೆ ಇಲ್ಲದವರ ಸೈನ್ಯದ ಬಳಿ ನೆಲೆನಿಂತ ಹಳ್ಳಿಯಲ್ಲಿ ಕೊಳ್ಳೆಹೊಡೆದ ವಸ್ತುಗಳಿದ್ದವು ಎಂದು ಹೇಳಿದರು. ನಾನು ನನ್ನ ಸೈನ್ಯವನ್ನು ಸಿದ್ಧಗೊಳಿಸಿ, ಆ ಸೈನ್ಯ ಇರುವಲ್ಲಿಗೆ ಹೊರಟೆ. ಸಹಾಯಕರ ನೆರವಿನಿಂದ ಸೊಂಟಕ್ಕೆ ಕಟ್ಟಿದ ಒರೆಯಿಂದ ನನ್ನ ಖಡ್ಗ ಹೊರ ತೆಗೆದೆ. ಸೈಯದ್ ಜುನೈದ್, ಸೈಯದ್ ಗಫಾರ್ ಮತ್ತು ಇತರ ಅಧಿಕಾರಿಗಳಿಗೆ ಯುದ್ಧಕ್ಕೆ ಸಿದ್ಧರಾಗುವಂತೆ ಹೇಳಿದೆ. ಈ ಕನಸಿನಲ್ಲಿ ಕಂಡದ್ದು ಇಷ್ಟೇ.

***

ಕನಸು 21

ನಿಜಾಮ್‌ನ ಪ್ರತಿನಿಧಿ

ರಾಸಿಕ್ ವರ್ಷದ ರಬ್ಬಾನಿ ತಿಂಗಳಿನ 25ನೇ ದಿನ. ಮುಹಮ್ಮದರು ಜನಿಸಿದ ದಿನದಿಂದ ಆರಂಭಿಸಿದ 1222ನೇ ವರ್ಷಕ್ಕೆ ಸಮನಾಗುತ್ತದೆ. ದಿನದ ನಾಲ್ಕು ಗಂಟೆಗಳು ಉಳಿದಿದ್ದವು. ಆಗ ಈ ಕನಸ ಕಂಡೆ. ನಿಜಾಮ್ ಅಲಿಖಾನ್ ಅವರ ದಿವಾನ್ ಬರುವುದ ಕಂಡೆ. ಕಾಣಿಸುತ್ತಿದ್ದಂತೆಯೇ ಅವನಿಗೆ ಹಲ್ಲು ಇಲ್ಲದೇ ಇರುವುದು ಹಾಗೆಯೇ ತಲೆಗೂದಲಿಗೆ ಬಣ್ಣ ಹಚ್ಚಿಕೊಂಡಿರುವುದನ್ನು ಗಮನಿಸಿದೆ. ಅವನು ನನ್ನಿಂದ ಸಹಾಯ ಯಾಚಿಸಿದ. ದೇವರ ಸೇವಕನು ಅವನಿಗೆ ಹೇಳಿದ, “ಆಗಲಿ, ನೀನು ನೆಮ್ಮದಿಯಿಂದಿರು, ನನ್ನ ಸಲಹೆಗಾರರ ಜೊತೆ ಮಾತನಾಡುವೆ, ಅದಾದ ನಂತರ ನಿನಗೆ ಉತ್ತರ ನೀಡುವೆ.” ಈ ರೀತಿಯಲ್ಲಿ ಮಾತನಾಡಿದ ನಂತರ ಅವನನ್ನು ಕೋಟೆಯಿಂದ ಹೊರಗೆ ಕಳುಹಿಸಿದೆ. ಇಂತಹ ವ್ಯಕ್ತಿಗಳ ಜೊತೆಗೆ ಸಾಂತ್ವನ ಹೇಳುವ ರೀತಿಯಲ್ಲಿಯೇ ಮಾತನಾಡಬೇಕು ಎಂದು ನನ್ನಷ್ಟಕ್ಕೆ ನಾನೇ ಹೇಳಿಕೊಂಡೆ. ಹೀಗೆ ಸಹಾಯ ಕೇಳಿದವರಲ್ಲಿ ಪೂನಾದವರು ಮೊದಲಿಗರು. ಮತ್ತು ಈಗ ಇವರು ಸಹಾಯ ಕೇಳಲು ಬಂದಿದ್ದಾರೆ. ಆದರೆ, ಅವರ ಮಾತುಗಳನ್ನ ನಂಬುವ ಹಾಗಿಲ್ಲ. ಈ ಹಂತದಲ್ಲಿ ಎಚ್ಚರಾಗಿ ಎದ್ದು ಕುಳಿತೆ.

***

ಕನಸು 22

ಅಸಾಧಾರಣ ಮೂರ್ತಿಗಳು, ಪ್ರತಿಮೆ, ಶಿಲ್ಪ

ಹಿರಾಸತ್ ವರ್ಷದ ಝಕಾರಿ ತಿಂಗಳಿನ 8ನೇ ದಿನ, ಮಂಗಳವಾರ ರಾತ್ರಿ, ಮರುದಿನ ಬುಧವಾರ ಇತ್ತು. ಅದು ಮುಹಮ್ಮದ್ ಜನಿಸಿದ ದಿನದಿಂದ ಆರಂಭಿಸಿ 1224ನೇ ವರ್ಷದ ಜಮಾದಿ-ಉಲ್ ಥಾನಿಯ 7ನೇ ದಿನಕ್ಕೆ ಸಮನಾಗುತ್ತದೆ. ಬೆಳಗಿನ ಜಾವ ಈ ಕನಸು ಕಂಡೆ. ಅಲ್ಲೊಂದು ಬೃಹತ್ ದೇವಾಲಯ ಕಾಣಿಸಿತು. ಅದರ ಹಿಂಭಾಗ ಸ್ವಲ್ಪ ಮಟ್ಟಿಗೆ ಧಕ್ಕೆಗೆ ಒಳಗಾಗಿತ್ತು. ಅದರಲ್ಲಿ ಹಲವು ದೊಡ್ಡಗಾತ್ರದ ಪ್ರತಿಮೆಗಳಿದ್ದವು. ನಾನು ಹಲವು ಜನರೊಡನೆ ಸೇರಿ ದೇವಾಲಯದೊಳಕ್ಕೆ ಹೋದೆ. ಪ್ರತಿಮೆಗಳು ಮನುಷ್ಯರ ಹಾಗೆ ನೋಡುತ್ತಿರುವ ಹಾಗೆ ಅವುಗಳ ಕಣ್ಣುಗಳು ಅಲುಗಾಡುತ್ತಿರುವುದನ್ನು ಗಮನಿಸಿದೆವು. ಪ್ರತಿಮೆಗಳ ಕಣ್ಣುಗಳು ಜೀವಂತ ಇರುವವರಂತೆ ಅಲುಗಾಡುವುದ ನೋಡಿದೆ, ಅದೇಕೆ ಹಾಗಿರಬಹುದು ಎಂದು ಅಚ್ಚರಿಯಾಯಿತು. ಆಗ ನಾನು ಅವುಗಳ ಸಮೀಪ ಹೋದೆ. ಕೊನೆಯ ಸಾಲಿನಲ್ಲಿ ಎರಡು ಸ್ತ್ರೀಪ್ರತಿಮೆಗಳಿದ್ದವು. ಆ ಎರಡರ ಪೈಕಿ ಒಂದು ಪ್ರತಿಮೆಯ ಸೀರೆ ಉಟ್ಟ ಕಾಲುಗಳು ಕಾಣಿಸಿದವು. ಅದರಿಂದ ಇಬ್ಬರು ಮಹಿಳೆಯರು ಉಳಿದೆಲ್ಲ ಪ್ರತಿಮೆಗಳು ಪುರುಷರು ಮತ್ತು ಇತರ ವಸ್ತುಗಳು ಎಂದು ಗೊತ್ತಾಯಿತು. ಅವಳು ಹೇಳಿದಳು, ತಾವು ದೀರ್ಘಕಾಲದಿಂದ ದೇವರ ಹತ್ತಿರ ಪ್ರಾರ್ಥಿಸುತ್ತಿದ್ದೇವೆ ಮತ್ತು ಪ್ರತಿಯೊಬ್ಬರೂ ನಮ್ಮನ್ನು ನಾವೇ ನೋಡಿಕೊಳ್ಳುತ್ತಿದ್ದೇವೆ. ನಾನು ಅವಳಿಗೆ ಹೇಳಿದೆ “ಒಳ್ಳೆಯದಾಯಿತು. ನಿಮ್ಮಷ್ಟಕ್ಕೆ ನೀವು ದೇವರ ಸ್ಮರಣೆಯನ್ನು ಮುಂದುವರಿಸಿರಿ”. ಹಾಗೆ ಹೇಳಿದ ಮೇಲೆ ಕಟ್ಟಡದ ಶಿಥಿಲಗೊಂಡ ಭಾಗವನ್ನು ದುರಸ್ತಿ ಮಾಡುವಂತೆ ಆದೇಶಿಸಿದೆ. ಈ ಮಧ್ಯೆ ನನಗೆ ಎಚ್ಚರವಾಯಿತು.

(1785ರಿಂದ 1798ರ ಅವಧಿಯಲ್ಲಿ ಟಿಪ್ಪು ಸುಲ್ತಾನ ದಾಖಲಿಸಿದ 37 ಕನಸುಗಳನ್ನು ಇಂಗ್ಲಿಷ್‌ನಲ್ಲಿ ’ದ ಬುಕ್ ಆಫ್ ಡ್ರೀಮ್ಸ್’ ಎಂದು ಪ್ರಕಟಿಸಲಾಗಿದೆ. ಬ್ರಿಟಿಷರು, ನಿಜಾಮ, ಮರಾಠರನ್ನು ಯುದ್ಧದಲ್ಲಿ ಸೋಲಿಸುವ ಬಗ್ಗೆ ಹಾಗೂ ಇನ್ನೂ ಹಲವು ವಿಷಯಗಳ ಬಗ್ಗೆ ಟಿಪ್ಪುವಿನ ಸುಪ್ತಮನಸ್ಸಿನ ದಾಖಲೆಗಳಿವು. ಈ ಕನಸುಗಳನ್ನು ಕನ್ನಡಕ್ಕೆ ದೇವು ಪತ್ತಾರ ದೀರ್ಘ ಪ್ರಸ್ತಾವನೆಯೊಂದಿಗೆ ಅನುವಾದಿಸಿದ್ದಾರೆ. ಗೌರಿ ಮೀಡಿಯಾ ಟ್ರಸ್ಟ್ ಇದನ್ನು ಡಿಸೆಂಬರ್ ತಿಂಗಳಿನಲ್ಲಿ ಪ್ರಕಟಿಸಲಿದೆ.)

ದೇವು ಪತ್ತಾರ

(ಕನ್ನಡಕ್ಕೆ): ದೇವು ಪತ್ತಾರ
ಹಿರಿಯ ಪತ್ರಕರ್ತರು. ಕ್ಯಾಮರಾ ಇಂಜಿನಿಯರ್ ಗುಲಾಂ ಮುಂತಕಾ, ಮಹಾದೇವ ಬಾಬಾ ಮೆಡೋಸ್ ಟೇಲರ್(ಸಂಪಾದಿತ), ಈಗ ಹೀಗಿರುವ ಲೋಕದಲ್ಲಿ (ವ್ಯಕ್ತಿಚಿತ್ರ), ಬಹಮನಿ ಸಾಮ್ರಾಜ್ಯ ಅವರ ಪ್ರಕಟಿತ ಕೃತಿಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...