Homeಅಂಕಣಗಳುಚೀನಾ ದೇಶದ ಎರಡು ಸಣ್‌ಸಣ್ ಕತೆ

ಚೀನಾ ದೇಶದ ಎರಡು ಸಣ್‌ಸಣ್ ಕತೆ

- Advertisement -
- Advertisement -

ಸ್ವಾತಂತ್ರ್ಯ

ಒಂದು ದಿನ ಚುವಾಂಗ್ ತ್ಸು ಮೀನು ಹಿಡಿಯುತ್ತಾ ಇರುವ ಸಮಯದಲ್ಲಿ, ಚು ರಾಜ್ಯದ ರಾಜ ಆತನಿಗೆ ತನ್ನ
ಅಧಿಕಾರಿಗಳ ಮೂಲಕ ಹೇಳಿಕಳಿಸಿದನು. ಆ ಪ್ರಕಾರ ಸರ್ಕಾರದ ಆಡಳಿತದಲ್ಲಿ ಚುವಾಂಗ್ ತ್ಸುವಿನ ಸಲಹೆ ಮತ್ತು ಸಹಾಯವನ್ನು ರಾಜ ನಿರೀಕ್ಷಿಸುತ್ತಿರುವುದಾಗಿ ತಿಳಿಸಲಾಯಿತು. ಇದರಿಂದ ರಾಜ ಸಂತುಷ್ಟನಾಗಲಿದ್ದಾನೆ ಎಂಬ ವಿಷಯವನ್ನೂ ಹೇಳಲಾಯಿತು.

ಆದರೆ ಹಿಂತಿರುಗಿ ನೋಡದೆ ಮೀನು ಹಿಡಿಯುವುದನ್ನು ಮುಂದುವರೆಸಿದ ತ್ಸು ಹೀಗೆ ಪ್ರತಿಕ್ರಿಯಿಸಿದನು: “ಚು ರಾಜ್ಯದಲ್ಲಿ ಒಂದು ಆಮೆಯಿದೆ ಎಂದು ಕೇಳಲ್ಪಟ್ಟಿದ್ದೇನೆ. ಅದು ಸತ್ತು ಮೂರು ಸಾವಿರ ವರ್ಷಗಳಾಗಿದ್ದರೂ ರಾಜ ತನ್ನ ಪೂರ್ವಿಕರ ಪವಿತ್ರ ದೇವಸ್ಥಾನದ ಗರ್ಭಗುಡಿಯಲ್ಲಿ ಅದರ ಕಳೇಬರವನ್ನು ಸಂರಕ್ಷಿಸಿ ಇಟ್ಟಿದ್ದಾನೆಂದು” ಕೂಡ. “ಈಗ ನೀವೇ ಹೇಳಿ, ಆ ಆಮೆ ಸತ್ತು ತನ್ನ ಕಳೇಬರವನ್ನು ಗೌರವಿಸಬೇಕು ಅಂತ ನಿರೀಕ್ಷಿಸುತ್ತದೆಯೇ ಅಥವಾ ಕೆಸರಿನಲ್ಲಿ ಬಾಲವಲ್ಲಾಡಿಸುತ್ತಾ ಬದುಕಿರಬೇಕೆಂದೆಣಿಸುತ್ತಾ?” ಆಗ ಆ ಆಧಿಕಾರಿಗಳು ಒಮ್ಮೆಗೇ “ಅದು ಬದುಕಿ ಕೆಸರಿನಲ್ಲಿ ಬಾಲವಲ್ಲಾಡಿಸುವುದನ್ನು ಇಷ್ಟ ಪಡುತ್ತದೆ” ಎಂದು ಉತ್ತರಿಸಿದರು.

ತತ್‌ಕ್ಷಣವೇ ಚುವಾಂಗ್ ತ್ಸು ಕೂಗಿ ಹೇಳಿದ “ಸರಿಯಾಗಿ ಹೇಳಿದಿರಿ! ನಾನು ಕೂಡ ಕೆಸರಿನಲ್ಲಿ ಬಾಲ ಅಲ್ಲಾಡಿಸಿಕೊಂಡಿರಲು ಇಷ್ಟ ಪಡುತ್ತೇನೆ”.

ಹುಲಿಯಿದ್ದರೂ ಕಾಡು ತೊರೆಯಲಾರೆ

ಥೈ ಶಿಖರದ ಬಳಿಯಲ್ಲಿ ಹಾದು ಹೋಗಬೇಕಾದರೆ, ಕಂಫ್ಯುಶಿಯಸ್, ಒಂದು ಸಮಾಧಿ ಬಳಿ ಜೋರಾಗಿ ಅಳುತ್ತಿದ್ದ ಹೆಂಗಸನ್ನು ಕಂಡು, ಅವಳ ಬಳಿಗೆ ನಡೆದು, ಜೊತೆಗಿದ್ದ ತನ್ನ ಶಿಷ್ಯನಿಗೆ ಕಾರಣ ವಿಚಾರಿಸುವಂತೆ ಹೇಳಿದ. “ಯಾಕವ್ವ ಅಳುತ್ತಿದ್ದೀಯ, ದುಃಖದ ಮೇಲೆ ದುಃಖ ಅನುಭವಿಸುತ್ತಿರುವ ತಾಯಿಯೇ” ಎಂದು ಶಿಷ್ಯ ತ್ಸೆ-ಲು ಕೇಳಿದ್ದಕ್ಕೆ, ಆ ಮಹಿಳೆ “ಹೌದಪ್ಪ, ಹಿಂದೊಮ್ಮೆ ನನ್ನ ಗಂಡನ ಅಪ್ಪನನ್ನು ಹುಲಿಯೊಂದು ಇಲ್ಲೇ ಕೊಂದು ಹಾಕಿತ್ತು, ನನ್ನ ಗಂಡನನ್ನೂ ಕೊಂದಿತು, ಈಗ ನನ್ನ ಮಗನನ್ನು ಕೊಂದು ಹಾಕಿದೆ” ಎಂದು ದುಃಖಿಸತೊಡಗಿದಳು. ಆಗ ಮಾಸ್ಟರ್ “ನೀನು ಈ ಜಾಗವನ್ನೇಕೆ ತೊರೆದು ಬೇರೆಡೆಗೆ ಹೋಗುತ್ತಿಲ್ಲ ತಾಯಿ” ಎಂದು ಕೇಳಿದ್ದಕ್ಕೆ, ಆಕೆ “ಇಲ್ಲಿ ನಮ್ಮ ಮೇಲೆ ದಬ್ಬಾಳಿಕೆ ನಡೆಸಿ ತುಳಿಯುವ ಸರ್ಕಾರ ಇಲ್ಲ ಎಂದು ಉತ್ತರಿಸಿದಳಂತೆ.

ಅದಕ್ಕೆ ಕಂಫ್ಯುಶಿಯಸ್ ಶಿಷ್ಯಂದಿರಿಗೆ “ನೋಡಿ ಮಕ್ಕಳೇ ಯಾವ ಸರ್ಕಾರವು ಹುಲಿಗಳಿಗಿಂತ ಕ್ರೂರವಾಗಬಾರದು” ಎಂದು ಹಿತವಚನ ನುಡಿದು ಮುಂದೆ ಸಾಗಿದರಂತೆ.


ಇದನ್ನೂ ಓದಿ: ಹೋರಾಟದ ಬದುಕಿನ ಎರಡು ಆತ್ಮಕಥೆಗಳು ಒಂದು ಆತ್ಮಕಥಾನಕ ಕಾದಂಬರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...