Homeಅಂಕಣಗಳುಚೀನಾ ದೇಶದ ಎರಡು ಸಣ್‌ಸಣ್ ಕತೆ

ಚೀನಾ ದೇಶದ ಎರಡು ಸಣ್‌ಸಣ್ ಕತೆ

- Advertisement -
- Advertisement -

ಸ್ವಾತಂತ್ರ್ಯ

ಒಂದು ದಿನ ಚುವಾಂಗ್ ತ್ಸು ಮೀನು ಹಿಡಿಯುತ್ತಾ ಇರುವ ಸಮಯದಲ್ಲಿ, ಚು ರಾಜ್ಯದ ರಾಜ ಆತನಿಗೆ ತನ್ನ
ಅಧಿಕಾರಿಗಳ ಮೂಲಕ ಹೇಳಿಕಳಿಸಿದನು. ಆ ಪ್ರಕಾರ ಸರ್ಕಾರದ ಆಡಳಿತದಲ್ಲಿ ಚುವಾಂಗ್ ತ್ಸುವಿನ ಸಲಹೆ ಮತ್ತು ಸಹಾಯವನ್ನು ರಾಜ ನಿರೀಕ್ಷಿಸುತ್ತಿರುವುದಾಗಿ ತಿಳಿಸಲಾಯಿತು. ಇದರಿಂದ ರಾಜ ಸಂತುಷ್ಟನಾಗಲಿದ್ದಾನೆ ಎಂಬ ವಿಷಯವನ್ನೂ ಹೇಳಲಾಯಿತು.

ಆದರೆ ಹಿಂತಿರುಗಿ ನೋಡದೆ ಮೀನು ಹಿಡಿಯುವುದನ್ನು ಮುಂದುವರೆಸಿದ ತ್ಸು ಹೀಗೆ ಪ್ರತಿಕ್ರಿಯಿಸಿದನು: “ಚು ರಾಜ್ಯದಲ್ಲಿ ಒಂದು ಆಮೆಯಿದೆ ಎಂದು ಕೇಳಲ್ಪಟ್ಟಿದ್ದೇನೆ. ಅದು ಸತ್ತು ಮೂರು ಸಾವಿರ ವರ್ಷಗಳಾಗಿದ್ದರೂ ರಾಜ ತನ್ನ ಪೂರ್ವಿಕರ ಪವಿತ್ರ ದೇವಸ್ಥಾನದ ಗರ್ಭಗುಡಿಯಲ್ಲಿ ಅದರ ಕಳೇಬರವನ್ನು ಸಂರಕ್ಷಿಸಿ ಇಟ್ಟಿದ್ದಾನೆಂದು” ಕೂಡ. “ಈಗ ನೀವೇ ಹೇಳಿ, ಆ ಆಮೆ ಸತ್ತು ತನ್ನ ಕಳೇಬರವನ್ನು ಗೌರವಿಸಬೇಕು ಅಂತ ನಿರೀಕ್ಷಿಸುತ್ತದೆಯೇ ಅಥವಾ ಕೆಸರಿನಲ್ಲಿ ಬಾಲವಲ್ಲಾಡಿಸುತ್ತಾ ಬದುಕಿರಬೇಕೆಂದೆಣಿಸುತ್ತಾ?” ಆಗ ಆ ಆಧಿಕಾರಿಗಳು ಒಮ್ಮೆಗೇ “ಅದು ಬದುಕಿ ಕೆಸರಿನಲ್ಲಿ ಬಾಲವಲ್ಲಾಡಿಸುವುದನ್ನು ಇಷ್ಟ ಪಡುತ್ತದೆ” ಎಂದು ಉತ್ತರಿಸಿದರು.

ತತ್‌ಕ್ಷಣವೇ ಚುವಾಂಗ್ ತ್ಸು ಕೂಗಿ ಹೇಳಿದ “ಸರಿಯಾಗಿ ಹೇಳಿದಿರಿ! ನಾನು ಕೂಡ ಕೆಸರಿನಲ್ಲಿ ಬಾಲ ಅಲ್ಲಾಡಿಸಿಕೊಂಡಿರಲು ಇಷ್ಟ ಪಡುತ್ತೇನೆ”.

ಹುಲಿಯಿದ್ದರೂ ಕಾಡು ತೊರೆಯಲಾರೆ

ಥೈ ಶಿಖರದ ಬಳಿಯಲ್ಲಿ ಹಾದು ಹೋಗಬೇಕಾದರೆ, ಕಂಫ್ಯುಶಿಯಸ್, ಒಂದು ಸಮಾಧಿ ಬಳಿ ಜೋರಾಗಿ ಅಳುತ್ತಿದ್ದ ಹೆಂಗಸನ್ನು ಕಂಡು, ಅವಳ ಬಳಿಗೆ ನಡೆದು, ಜೊತೆಗಿದ್ದ ತನ್ನ ಶಿಷ್ಯನಿಗೆ ಕಾರಣ ವಿಚಾರಿಸುವಂತೆ ಹೇಳಿದ. “ಯಾಕವ್ವ ಅಳುತ್ತಿದ್ದೀಯ, ದುಃಖದ ಮೇಲೆ ದುಃಖ ಅನುಭವಿಸುತ್ತಿರುವ ತಾಯಿಯೇ” ಎಂದು ಶಿಷ್ಯ ತ್ಸೆ-ಲು ಕೇಳಿದ್ದಕ್ಕೆ, ಆ ಮಹಿಳೆ “ಹೌದಪ್ಪ, ಹಿಂದೊಮ್ಮೆ ನನ್ನ ಗಂಡನ ಅಪ್ಪನನ್ನು ಹುಲಿಯೊಂದು ಇಲ್ಲೇ ಕೊಂದು ಹಾಕಿತ್ತು, ನನ್ನ ಗಂಡನನ್ನೂ ಕೊಂದಿತು, ಈಗ ನನ್ನ ಮಗನನ್ನು ಕೊಂದು ಹಾಕಿದೆ” ಎಂದು ದುಃಖಿಸತೊಡಗಿದಳು. ಆಗ ಮಾಸ್ಟರ್ “ನೀನು ಈ ಜಾಗವನ್ನೇಕೆ ತೊರೆದು ಬೇರೆಡೆಗೆ ಹೋಗುತ್ತಿಲ್ಲ ತಾಯಿ” ಎಂದು ಕೇಳಿದ್ದಕ್ಕೆ, ಆಕೆ “ಇಲ್ಲಿ ನಮ್ಮ ಮೇಲೆ ದಬ್ಬಾಳಿಕೆ ನಡೆಸಿ ತುಳಿಯುವ ಸರ್ಕಾರ ಇಲ್ಲ ಎಂದು ಉತ್ತರಿಸಿದಳಂತೆ.

ಅದಕ್ಕೆ ಕಂಫ್ಯುಶಿಯಸ್ ಶಿಷ್ಯಂದಿರಿಗೆ “ನೋಡಿ ಮಕ್ಕಳೇ ಯಾವ ಸರ್ಕಾರವು ಹುಲಿಗಳಿಗಿಂತ ಕ್ರೂರವಾಗಬಾರದು” ಎಂದು ಹಿತವಚನ ನುಡಿದು ಮುಂದೆ ಸಾಗಿದರಂತೆ.


ಇದನ್ನೂ ಓದಿ: ಹೋರಾಟದ ಬದುಕಿನ ಎರಡು ಆತ್ಮಕಥೆಗಳು ಒಂದು ಆತ್ಮಕಥಾನಕ ಕಾದಂಬರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....