Homeಅಂಕಣಗಳುಚೀನಾ ದೇಶದ ಎರಡು ಸಣ್‌ಸಣ್ ಕತೆ

ಚೀನಾ ದೇಶದ ಎರಡು ಸಣ್‌ಸಣ್ ಕತೆ

- Advertisement -
- Advertisement -

ಸ್ವಾತಂತ್ರ್ಯ

ಒಂದು ದಿನ ಚುವಾಂಗ್ ತ್ಸು ಮೀನು ಹಿಡಿಯುತ್ತಾ ಇರುವ ಸಮಯದಲ್ಲಿ, ಚು ರಾಜ್ಯದ ರಾಜ ಆತನಿಗೆ ತನ್ನ
ಅಧಿಕಾರಿಗಳ ಮೂಲಕ ಹೇಳಿಕಳಿಸಿದನು. ಆ ಪ್ರಕಾರ ಸರ್ಕಾರದ ಆಡಳಿತದಲ್ಲಿ ಚುವಾಂಗ್ ತ್ಸುವಿನ ಸಲಹೆ ಮತ್ತು ಸಹಾಯವನ್ನು ರಾಜ ನಿರೀಕ್ಷಿಸುತ್ತಿರುವುದಾಗಿ ತಿಳಿಸಲಾಯಿತು. ಇದರಿಂದ ರಾಜ ಸಂತುಷ್ಟನಾಗಲಿದ್ದಾನೆ ಎಂಬ ವಿಷಯವನ್ನೂ ಹೇಳಲಾಯಿತು.

ಆದರೆ ಹಿಂತಿರುಗಿ ನೋಡದೆ ಮೀನು ಹಿಡಿಯುವುದನ್ನು ಮುಂದುವರೆಸಿದ ತ್ಸು ಹೀಗೆ ಪ್ರತಿಕ್ರಿಯಿಸಿದನು: “ಚು ರಾಜ್ಯದಲ್ಲಿ ಒಂದು ಆಮೆಯಿದೆ ಎಂದು ಕೇಳಲ್ಪಟ್ಟಿದ್ದೇನೆ. ಅದು ಸತ್ತು ಮೂರು ಸಾವಿರ ವರ್ಷಗಳಾಗಿದ್ದರೂ ರಾಜ ತನ್ನ ಪೂರ್ವಿಕರ ಪವಿತ್ರ ದೇವಸ್ಥಾನದ ಗರ್ಭಗುಡಿಯಲ್ಲಿ ಅದರ ಕಳೇಬರವನ್ನು ಸಂರಕ್ಷಿಸಿ ಇಟ್ಟಿದ್ದಾನೆಂದು” ಕೂಡ. “ಈಗ ನೀವೇ ಹೇಳಿ, ಆ ಆಮೆ ಸತ್ತು ತನ್ನ ಕಳೇಬರವನ್ನು ಗೌರವಿಸಬೇಕು ಅಂತ ನಿರೀಕ್ಷಿಸುತ್ತದೆಯೇ ಅಥವಾ ಕೆಸರಿನಲ್ಲಿ ಬಾಲವಲ್ಲಾಡಿಸುತ್ತಾ ಬದುಕಿರಬೇಕೆಂದೆಣಿಸುತ್ತಾ?” ಆಗ ಆ ಆಧಿಕಾರಿಗಳು ಒಮ್ಮೆಗೇ “ಅದು ಬದುಕಿ ಕೆಸರಿನಲ್ಲಿ ಬಾಲವಲ್ಲಾಡಿಸುವುದನ್ನು ಇಷ್ಟ ಪಡುತ್ತದೆ” ಎಂದು ಉತ್ತರಿಸಿದರು.

ತತ್‌ಕ್ಷಣವೇ ಚುವಾಂಗ್ ತ್ಸು ಕೂಗಿ ಹೇಳಿದ “ಸರಿಯಾಗಿ ಹೇಳಿದಿರಿ! ನಾನು ಕೂಡ ಕೆಸರಿನಲ್ಲಿ ಬಾಲ ಅಲ್ಲಾಡಿಸಿಕೊಂಡಿರಲು ಇಷ್ಟ ಪಡುತ್ತೇನೆ”.

ಹುಲಿಯಿದ್ದರೂ ಕಾಡು ತೊರೆಯಲಾರೆ

ಥೈ ಶಿಖರದ ಬಳಿಯಲ್ಲಿ ಹಾದು ಹೋಗಬೇಕಾದರೆ, ಕಂಫ್ಯುಶಿಯಸ್, ಒಂದು ಸಮಾಧಿ ಬಳಿ ಜೋರಾಗಿ ಅಳುತ್ತಿದ್ದ ಹೆಂಗಸನ್ನು ಕಂಡು, ಅವಳ ಬಳಿಗೆ ನಡೆದು, ಜೊತೆಗಿದ್ದ ತನ್ನ ಶಿಷ್ಯನಿಗೆ ಕಾರಣ ವಿಚಾರಿಸುವಂತೆ ಹೇಳಿದ. “ಯಾಕವ್ವ ಅಳುತ್ತಿದ್ದೀಯ, ದುಃಖದ ಮೇಲೆ ದುಃಖ ಅನುಭವಿಸುತ್ತಿರುವ ತಾಯಿಯೇ” ಎಂದು ಶಿಷ್ಯ ತ್ಸೆ-ಲು ಕೇಳಿದ್ದಕ್ಕೆ, ಆ ಮಹಿಳೆ “ಹೌದಪ್ಪ, ಹಿಂದೊಮ್ಮೆ ನನ್ನ ಗಂಡನ ಅಪ್ಪನನ್ನು ಹುಲಿಯೊಂದು ಇಲ್ಲೇ ಕೊಂದು ಹಾಕಿತ್ತು, ನನ್ನ ಗಂಡನನ್ನೂ ಕೊಂದಿತು, ಈಗ ನನ್ನ ಮಗನನ್ನು ಕೊಂದು ಹಾಕಿದೆ” ಎಂದು ದುಃಖಿಸತೊಡಗಿದಳು. ಆಗ ಮಾಸ್ಟರ್ “ನೀನು ಈ ಜಾಗವನ್ನೇಕೆ ತೊರೆದು ಬೇರೆಡೆಗೆ ಹೋಗುತ್ತಿಲ್ಲ ತಾಯಿ” ಎಂದು ಕೇಳಿದ್ದಕ್ಕೆ, ಆಕೆ “ಇಲ್ಲಿ ನಮ್ಮ ಮೇಲೆ ದಬ್ಬಾಳಿಕೆ ನಡೆಸಿ ತುಳಿಯುವ ಸರ್ಕಾರ ಇಲ್ಲ ಎಂದು ಉತ್ತರಿಸಿದಳಂತೆ.

ಅದಕ್ಕೆ ಕಂಫ್ಯುಶಿಯಸ್ ಶಿಷ್ಯಂದಿರಿಗೆ “ನೋಡಿ ಮಕ್ಕಳೇ ಯಾವ ಸರ್ಕಾರವು ಹುಲಿಗಳಿಗಿಂತ ಕ್ರೂರವಾಗಬಾರದು” ಎಂದು ಹಿತವಚನ ನುಡಿದು ಮುಂದೆ ಸಾಗಿದರಂತೆ.


ಇದನ್ನೂ ಓದಿ: ಹೋರಾಟದ ಬದುಕಿನ ಎರಡು ಆತ್ಮಕಥೆಗಳು ಒಂದು ಆತ್ಮಕಥಾನಕ ಕಾದಂಬರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...