Homeಕರ್ನಾಟಕನಾಳೆಯು ಸಾರಿಗೆ ಮುಷ್ಕರ ಮುಂದುವರಿಕೆ - ಯುಗಾದಿಗೆ ನೌಕರರಿಂದ ಭಿಕ್ಷಾಟನೆ ಪ್ರತಿಭಟನೆ!

ನಾಳೆಯು ಸಾರಿಗೆ ಮುಷ್ಕರ ಮುಂದುವರಿಕೆ – ಯುಗಾದಿಗೆ ನೌಕರರಿಂದ ಭಿಕ್ಷಾಟನೆ ಪ್ರತಿಭಟನೆ!

- Advertisement -
- Advertisement -

ಆರನೇ ವೇತನ ಆಯೋಗದ ವರದಿ ಜಾರಿ ಮಾಡಬೇಕು ಎಂಬ ಪ್ರಮುಖ ಬೇಡಿಕೆ ಮುಂದಿಟ್ಟುಕೊಂಡು ಸಾರಿಗೆ ನೌಕರರು ಆರು ದಿನದಿಂದ ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರ ನಾಳೆಯು ಮುಂದುವರೆಯಲಿದ್ದು, ಯುಗಾದಿಗೆ ತಟ್ಟೆ ಹಿಡಿದು ಭಿಕ್ಷಾಟನೆ ಮಾಡುವ ಮೂಲಕ ಪ್ರತಿಭಟನೆ ಮಾಡಲಾಗುವುದು ಎಂದು ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸೋಮವಾರ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾಳೆ ಯುಗಾದಿ ಹಬ್ಬ ಆಚರಿಸಬೇಕು, ಆದರೆ ಮಾರ್ಚ್ ತಿಂಗಳ ವೇತನ ನೀಡದೇ ಸರ್ಕಾರ ವಂಚನೆ ಮಾಡಿದೆ. ಸರ್ಕಾರಕ್ಕೆ ಉಪ ಚುನಾವಣೆ ಮುಖ್ಯವಾಗಿದೆ. 1.30 ಲಕ್ಷ ನೌಕರರ ಜೀವನ ನೋಡುತ್ತಿಲ್ಲ. ಮಾತುಕತೆ ಮಾಡಲ್ಲ, ಸಮಸ್ಯೆ ಕೇಳಲ್ಲ ಎನ್ನುವುದು ತಪ್ಪು ನಿರ್ಧಾರ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಾರಿಗೆ ಮುಷ್ಕರ ಆರನೇ ದಿನಕ್ಕೆ-ತಟ್ಟೆ, ಲೋಟ ಬಡಿದು ನೌಕರರ ಪ್ರತಿಭಟನೆ!

“ನೌಕರರ ಕುಟುಂಬದ ಸದಸ್ಯರೆಲ್ಲ ಇಂದು ತಟ್ಟೆ, ಲೋಟ ಬಾರಿಸಿ ಹೋರಾಟ ಮಾಡಿದ್ದಾರೆ. ಈ ಅಹಿಂಸಾತ್ಮಕ ಚಳುವಳಿ ಮುಂದುವರೆಯುತ್ತದೆ. ನಾಳೆ ಯುಗಾದಿ ಹಬ್ಬದ ದಿನ ತಟ್ಟೆ ಹಿಡಿದು ಭಿಕ್ಷೆ ಬೇಡುವ ಮೂಲಕ ಹೋರಾಟ ಮಾಡಲಾಗುತ್ತದೆ. ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಕುಟುಂಬದ ಸದಸ್ಯರಿಂದ ಭಿಕ್ಷಾಟನೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

“ಹಬ್ಬ ಮಾಡಲು ವೇತನ ನೀಡುವುದಿಲ್ಲ‌ ಎಂದರೆ ಹೇಗೆ? ಅದ್ಯಾವ ಹಿಂದು ಪರಿಪಾಲಕರು ನೀವು? ಹಿಂದೂ ಧರ್ಮ ಪ್ರತಿಪಾದಕರೇ ಎಲ್ಲಿದ್ದೀರಿ? ಸಚಿವರೇ, ಹಿಂದೂ ಮುಖಂಡರೇ ಮುಂದೆ ಬನ್ನಿ, ನಮ್ಮ ಸಮಸ್ಯೆ ಬಗೆಹರಿಸಿ. ಕೆಲಸ‌ ಮಾಡಿದ ವೇತನ ಯಾಕೆ‌ ಕೊಡುತ್ತಿಲ್ಲ. ಮುಖ್ಯಮಂತ್ರಿಗೆ ಹೇಳಿ ವೇತನ ಕೊಡಿಸಿ ಸಮಸ್ಯೆ ಬಗೆಹರಿಸಿ. ಮಾತು ಕೊಟ್ಟಿದ್ದೀರಿ, ಲಿಖಿತವಾಗಿ ಸರಕಾರದ‌ ಪ್ರತಿನಿಧಿಗಳು ಬರೆದುಕೊಟ್ಟಿದ್ದೀರಿ, ಅದರಂತೆ ನಡೆದುಕೊಳ್ಳಿ” ಎಂದು ಅವರು ಆಗ್ರಹಿಸಿದರು.

“ಮುಖ್ಯಮಂತ್ರಿ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಬೇಕು. ಅದು ಬಿಟ್ಟು ಕೆಲಸಕ್ಕೆ‌ ಬರುವವರಿಗೆ ಮಾತ್ರ ವೇತನ ನೀಡುವುದು ಸರಿಯಲ್ಲ. ಮುಖ್ಯಮಂತ್ರಿಗಳೇ ಈ ತಪ್ಪು ಮಾಡಬಾರದು. ಡಿಪೋ ಮ್ಯಾನೇಜರ್ ವಿರುದ್ದ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಾರ್ಚ್ ತಿಂಗಳ ವೇತನ ಕೊಟ್ಟಿಲ್ಲ ಎಂದು ನಾಳೆ ದೂರು ದಾಖಲಿಸುತ್ತೇವೆ” ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...