Homeಚಳವಳಿದೇಶಾದ್ಯಂತ ಸರಕು ಸಾಗಣೆ ನಿಲ್ಲಿಸಿ ಭಾರತ್‌ ಬಂದ್‌ಗೆ ಬೆಂಬಲ ನೀಡಲಿರುವ ಸರಕು ಸಾರಿಗೆ ಸಂಘಗಳು

ದೇಶಾದ್ಯಂತ ಸರಕು ಸಾಗಣೆ ನಿಲ್ಲಿಸಿ ಭಾರತ್‌ ಬಂದ್‌ಗೆ ಬೆಂಬಲ ನೀಡಲಿರುವ ಸರಕು ಸಾರಿಗೆ ಸಂಘಗಳು

ರೈತರು ನಮ್ಮ ವ್ಯವಹಾರದ ಬೇರುಗಳಾಗಿದ್ದು, ನಾವು ನಮ್ಮ ರೈತ ಸಹೋದರರನ್ನು ಬೆಂಬಲಿಸುತ್ತಿದ್ದೇವೆ.

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ನಿರಂತರ 11 ದಿನಗಳಿಂದ ನಡೆಯುತ್ತಿರುವ ರೈತ ಹೋರಾಟಕ್ಕೆ ಸಾರಿಗೆ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಡಿಸೆಂಬರ್ 8 ರಂದು ನಡೆಯುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡುವುದಾಗಿ ತಿಳಿಸಿವೆ. ದೆಹಲಿ ಗೂಡ್ಸ್ ಟ್ರಾನ್ಸ್‌‌ಪೋರ್ಟ್ ಅಸೋಸಿಯೇಷನ್ ಮತ್ತು ಇಂಡಿಯಾ ಟೂರಿಸ್ಟ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್‌‌ ರೈತರ ಪ್ರತಿಭಟನೆಗಳಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದೆ.

“ಕೃಷಿ ಮತ್ತು ಸಾಗಣೆ ತಂದೆಯ ಇಬ್ಬರು ಮಕ್ಕಳಂತೆ” ಎಂದು ಹೇಳಿರುವ ಇಂಡಿಯಾ ಟೂರಿಸ್ಟ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್ ಸಂಘದ ಅಧ್ಯಕ್ಷ ಸತೀಶ್ ಸೆಹ್ರಾವತ್ ಅವರು ಹೇಳಿದ್ದಾರೆ. ಅವರು 51 ಸಾರಿಗೆ ಸಂಘಟನೆಗಳು ತಮ್ಮ ಭಾರತ್ ಬಂದ್ ಕರೆಯಲ್ಲಿ ರೈತರನ್ನು ಬೆಂಬಲಿಸಲು ನಿರ್ಧರಿಸಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:  ಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ದೆಹಲಿ ಗೂಡ್ಸ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಶನ್ ಅಧ್ಯಕ್ಷ ಪರ್ಮೀತ್ ಸಿಂಗ್ ಗೋಲ್ಡಿ ಮಾತನಾಡಿ, ರೈತರು ನಮ್ಮ ವ್ಯವಹಾರದ ಬೇರುಗಳಾಗಿದ್ದು, ನಾವು ನಮ್ಮ ರೈತ ಸಹೋದರರನ್ನು ಬೆಂಬಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಡಿಸೆಂಬರ್ 2 ರಂದು, ರೈತರ ಬೇಡಿಕೆ ಈಡೇರದಿದ್ದರೆ ಡಿಸೆಂಬರ್ 08 ರಿಂದ ದೇಶಾದ್ಯಂತ ಅಗತ್ಯ ಸರಕುಗಳ ಸಾಗಾಣಿಕೆ ನಿಲ್ಲಿಸುತ್ತೇವೆ ಎಂದು ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ (AIMTC) ಎಚ್ಚರಿಕೆ ನೀಡಿತ್ತು. AIMTC ರಾಷ್ಟ್ರದಾದ್ಯಂತ 95 ಲಕ್ಷ ಟ್ರಕ್ಕರ್‌ ಮತ್ತು ಇತರ ಘಟಕಗಳನ್ನು ಪ್ರತಿನಿಧಿಸುತ್ತದೆ.

“ನಾವು ಹೋರಾಟ ನಿರತ ರೈತರಿಗೆ ಬೆಂಬಲ ಸೂಚಿಸುತ್ತೇವೆ. ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ  ಡಿಸೆಂಬರ್ 08 ರಂದು ಬಂದ್‌ಗೆ ಕರೆ ನೀಡಲಿದ್ದೇವೆ. ಉತ್ತರ ಭಾರತದ ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಚಕ್ಕಾ ಜಾಮ್ ಮಾಡಲಿದ್ದೇವೆ. ನಮ್ಮ ವಾಹನಗಳ ಸಂಚಾರವನ್ನು ಬಂದ್‌ ಮಾಡಿ ಅಗತ್ಯ ಸರಕುಗಳ ಸಾಗಾಣಿಕೆಯನ್ನು ನಿಲ್ಲುಸುತ್ತೇವೆ” ಎಂದು AIMTC ಅಧ್ಯಕ್ಷ ಕುಲ್ತರಣ್ ಸಿಂಗ್ ಅತ್ವಲ್ ತಿಳಿಸಿದ್ದರು.

ಇದನ್ನೂ ಓದಿ: ರೈತರ ಬೇಡಿಕೆ ಈಡೇರದಿದ್ದರೆ ದೇಶಾದ್ಯಂತ ಅಗತ್ಯ ಸರಕುಗಳ ಸಾಗಾಣಿಕೆ ನಿಲ್ಲಿಸುತ್ತೇವೆ: ಸಾಗಾಣಿಕೆದಾರ ಒಕ್ಕೂಟದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...