Homeಚಳವಳಿರಸ್ತೆ ಸಾರಿಗೆ ಕ್ಷೇತ್ರವನ್ನು ಉಳಿಸಲು ದೇಶಾದ್ಯಂತ ಸಾರಿಗೆ ಕಾರ್ಮಿಕರ ಪ್ರತಿಭಟನೆ

ರಸ್ತೆ ಸಾರಿಗೆ ಕ್ಷೇತ್ರವನ್ನು ಉಳಿಸಲು ದೇಶಾದ್ಯಂತ ಸಾರಿಗೆ ಕಾರ್ಮಿಕರ ಪ್ರತಿಭಟನೆ

ಇತ್ತೀಚಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ವಿರುದ್ಧ ಕಾರ್ಮಿಕ ಸಂಘಗಳು ಹಲವಾರು ಪ್ರತಿಭಟನೆಗಳನ್ನು ನಡೆಸಿದ್ದು, ಸಾರಿಗೆ ಕಾರ್ಮಿಕರು ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ 2019 ಅನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

- Advertisement -
- Advertisement -

ಆಗಸ್ಟ್ 5 ರ ಬುಧವಾರದಂದು ರಸ್ತೆ ಸಾರಿಗೆ ಕಾರ್ಮಿಕರ ಅಖಿಲ ಭಾರತ ಸಮನ್ವಯ ಸಮಿತಿಯ (AICCORTWO) ಕರೆಯ ಮೇರೆಗೆ, ಸಾರ್ವಜನಿಕ ಮತ್ತು ಖಾಸಗಿ ಸಾರಿಗೆ ಕಾರ್ಮಿಕರು ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಸರ್ಕಾರದ ನಿರ್ಬಂಧಗಳ ನಡುವೆ ರಾಜ್ಯಗಳಾದ್ಯಂತ ರಾಷ್ಟ್ರೀಯ ಪ್ರತಿಭಟನಾ ದಿನವನ್ನು ಆಚರಿಸಿದರು.

“ಕೇರಳ, ಕರ್ನಾಟಕ, ರಾಜಸ್ಥಾನ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ಮಧ್ಯಪ್ರದೇಶ ಮತ್ತು ಜಾರ್ಖಂಡ್‌ನಲ್ಲಿ ಪ್ರತಿಭಟನೆಗಳು ಯಶಸ್ವಿಯಾಗಿವೆ, ಅಲ್ಲಿ ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರು ಹಲವಾರು ರಾಜ್ಯಗಳಲ್ಲಿ ಪೊಲೀಸ್ ಪಡೆಗಳ ದಬ್ಬಾಳಿಕೆಯ ಹೊರತಾಗಿಯೂ ವಿವಿಧ ಪ್ರತಿಭಟನಾ ಪ್ರದರ್ಶನಗಳನ್ನು ನಡೆಸಿದರು” ಎಂದು ಅಖಿಲ ಭಾರತ ರಸ್ತೆ ಸಾರಿಗೆ ಕಾರ್ಮಿಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಕೆ. ದಿವಾಕರನ್ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಮುಂಚಿತವಾಗಿ ರಸ್ತೆ ಸಾರಿಗೆ ಉದ್ಯಮದಲ್ಲಿ ಕಾರ್ಮಿಕರು ಬಿಕ್ಕಟ್ಟಿನಲ್ಲಿದ್ದರು. ಸಾಂಕ್ರಾಮಿಕ ರೋಗವು ಅವರನ್ನು ಮತ್ತಷ್ಟು ಸಮಸ್ಯೆಗಳಿಗೆ ಕೆಡವಿತು. ಅಲ್ಲದೆ ಲಾಕ್‌ಡೌನ್‌ನಿಂದಾಗಿ ಉದ್ಯಮವು ವಾಸ್ತವಿಕವಾಗಿ ಕುಸಿದಿದೆ” ಎಂದು ದಿವಾಕರನ್ ಹೇಳಿದರು. ನಾವು ಮಂಡಿಸಿದ ಬೇಡಿಕೆಗಳು ರಸ್ತೆ ಸಾರಿಗೆ ಉದ್ಯಮದಲ್ಲಿರುವ 10 ಕೋಟಿ ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತವೆ ಎಂದು ಅವರು ಹೇಳಿದ್ದಾರೆ.

ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ವರ್ಧಿತ ಅಬಕಾರಿ ಸುಂಕವನ್ನು ಹಿಂತೆಗೆದುಕೊಳ್ಳುವುದು ಹಾಗೂ ಜೂನ್ 7 ರಿಂದ ಹೆಚ್ಚಿದ ತೈಲ ಬೆಲೆಗಳನ್ನು ಹಿಂತೆಗೆದುಕೊಳ್ಳುವುದು ಸೇರಿದಂತೆ ತಮ್ಮ 12 ಅಂಶಗಳ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ ನಡೆದಿದೆ. ಕಳೆದ ತಿಂಗಳು AICCORTWO ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಈ ಕುರಿತು ಮನವಿ ಮಾಡಿತ್ತು.

ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ ಅಡಿಯಲ್ಲಿ ತರುವುದು; ರಸ್ತೆ ಸಾರಿಗೆ ಕಾರ್ಮಿಕರಿಗೆ ಪ್ರತ್ಯೇಕ ಸಾಮಾಜಿಕ ಭದ್ರತಾ ಕಾನೂನು; ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ 2019 ರ ವಾಪಸಾತಿ; ಅಸಂಘಟಿತ ವಲಯದ ಸಾರಿಗೆ ಕಾರ್ಮಿಕರಿಗೆ ರಾಷ್ಟ್ರೀಯ ವೇತನ ನೀತಿ; ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಿಗೆ (ಎಸ್‌ಟಿಯು) ಬಜೆಟ್ ಬೆಂಬಲ; ಎಸ್‌ಟಿಯುಗಳನ್ನು ಅಬಕಾರಿ ಸುಂಕ ಮತ್ತು ಡೀಸೆಲ್ ಮತ್ತು ಮೋಟಾರು ವಾಹನಗಳ ಮೇಲಿನ ಮಾರಾಟ ತೆರಿಗೆಯಿಂದ ವಿನಾಯಿತಿ; ಎಸ್‌ಟಿಯುಗಳಿಗೆ ಮಾತ್ರ ವಿದ್ಯುತ್ ಬಸ್‌ಗಳು ಮತ್ತು ಆರು ತಿಂಗಳ ಅವಧಿಗೆ ಎಲ್ಲಾ ಅಸಂಘಟಿತ ವಲಯದ ಸಾರಿಗೆ ಕಾರ್ಮಿಕರಿಗೆ 7,500 ರೂ ಇವುಗಳು ಪ್ರತಿಭಟನಾಕಾರರ ಇತರ ಬೇಡಿಕೆಗಳಾಗಿದ್ದವು.

“ರಾಮ ಮಂದಿರ ವಿಚಾರದಿಂದಾಗಿ ಸಿಆರ್‌ಪಿಸಿ ಯ ಸೆಕ್ಷನ್ 144 ಅನ್ನು ಹೇರಿದ ಕಾರಣ ಇಡೀ ಅಸ್ಸಾಂ ಕಟ್ಟುನಿಟ್ಟಾದ ಲಾಕ್‌ಡೌನ್ ಆಗಿದೆ. ಅದರಂತೆ, ಗುವಾಹಟಿ ಮತ್ತು ಬೊಂಗೈಗಾಂವ್‌ನಲ್ಲಿ ಪ್ರತಿಭಟನಾ ಪ್ರದರ್ಶನಗಳನ್ನು ಆಚರಿಸಲಾಯಿತು”ಎಂದು ದಿವಾಕರನ್ ಹೇಳಿದರು. ಅಲ್ಲದೆ ದೇಶಾದ್ಯಂತದ ವಿವಿಧ ಪ್ರತಿಭಟನೆಗಳ ಬಗ್ಗೆ ಅವರು ಮಾತನಾಡಿದರು.

“ರಾಜ್ಯದಾದ್ಯಂತದ ಎಸ್‌ಟಿಯುಗಳು ಕಾರ್ಯಾಚರಣೆಯ ವೆಚ್ಚ, ಖಾಸಗಿ ಗಾಡಿಗಳ ಅಕ್ರಮ ಕಾರ್ಯಾಚರಣೆ ಮತ್ತು ಇತರ ಕಾರಣಗಳಿಂದಾಗಿ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿವೆ. ಅಂತಹ ಪರಿಸ್ಥಿತಿಯಲ್ಲಿ ಮಾನವಶಕ್ತಿಯ ಕಡಿತ ಮತ್ತು ಅದರ ಪರಿಣಾಮವಾಗಿ ಕೆಲಸದ ಹೊರೆ ಹೆಚ್ಚಳ, ವೇತನ ಪಾವತಿಸದಿರುವುದು, ನಿವೃತ್ತಿ ವೇತನ ಬಾಕಿ ಅಥವಾ ವಿಳಂಬ ಪಾವತಿ ಸಮಸ್ಯೆಗಳಿಂದ ಕಾರ್ಮಿಕರು ಬಳಲುತ್ತಿದ್ದಾರೆ” ಎಂದು AICCORTWO ಹೇಳಿದೆ.

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಎಸ್‌ಆರ್‌ಟಿಸಿ) ನೌಕರರ ಒಕ್ಕೂಟದ ಕೆ.ರಾಜಿ ರೆಡ್ಡಿ ಮಾತನಾಡಿ, ರಾಜ್ಯ ಪೊಲೀಸರು ಹೈದರಾಬಾದ್‌ನಲ್ಲಿ ಹಲವಾರು ಕಾರ್ಮಿಕರನ್ನು ವಶಕ್ಕೆ ಪಡೆದಿದ್ದಾರೆ ಮತ್ತು ತೆಲಂಗಾಣದ ಎಲ್ಲಾ ಬಸ್ ಡಿಪೋಗಳ ಮುಂದೆ ಕಾರ್ಮಿಕರು ಮತ್ತು ನೌಕರರು ಪ್ರತಿಭಟನೆ ನಡೆಸಿದ್ದಾರೆ ಎಂದು ಹೇಳಿದರು.

ಸಾರಿಗೆ ಕಾರ್ಮಿಕರ ರಾಷ್ಟ್ರೀಯ ಒಕ್ಕೂಟ, ಅಖಿಲ ಭಾರತ ರಸ್ತೆ ಸಾರಿಗೆ ಕಾರ್ಮಿಕರ ಒಕ್ಕೂಟ, ಭಾರತೀಯ ರಾಷ್ಟ್ರೀಯ ಸಾರಿಗೆ ಕಾರ್ಮಿಕರ ಒಕ್ಕೂಟ, ಮಹಾರಾಷ್ಟ್ರ ರಾಜ್ಯ ಸಾರಿಗೆ ಕಮಾರ್ ಸಂಘತಾನ, ಕಾರ್ಮಿಕ ಪ್ರಗತಿಪರ ಒಕ್ಕೂಟ, ದೆಹಲಿ ಸಾರಿಗೆ ನಿಗಮ (ಡಿಟಿಸಿ) ಕಾರ್ಮಿಕರ ಏಕತಾ ಕೇಂದ್ರ, ತೆಲಂಗಾಣ ಮಜ್ದೂರ್ ಯೂನಿಯನ್, ತಮಿಳುನಾಡು ಸರ್ಕಾರಿ ಸಾರಿಗೆ ನಿಗಮಗಳ ಸಿಬ್ಬಂದಿ ಒಕ್ಕೂಟ, ಸರ್ವ ಕರ್ಮಚಾರಿ ಸಂಘ ಹೀಗೆ ಹಲವಾರು ಕೇಂದ್ರ ಕಾರ್ಮಿಕ ಸಂಘಗಳ ಸಂಯೋಜಿತ ಒಕ್ಕೂಟಗಳನ್ನು AICCORTWO ಒಳಗೊಂಡಿದೆ.

ದೆಹಲಿ, ಮುಂಬೈ, ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್‌ನಂತಹ ಪ್ರಮುಖ ನಗರಗಳಲ್ಲಿ ಉಬರ್, ಓಲಾ, ಸ್ವಿಗ್ಗಿ ಮತ್ತು ಇತರ ಅಪ್ಲಿಕೇಶನ್‌ಗಳೊಂದಿಗೆ ಕೆಲಸ ಮಾಡುವ ಅಪ್ಲಿಕೇಶನ್ ಆಧಾರಿತ ಸಾರಿಗೆ ಕಾರ್ಮಿಕರು ಸಹ ಪ್ರತಿಭಟನೆಯಲ್ಲಿ ಸೇರಿದ್ದಾರೆ.

ಸಾರಿಗೆ ಕಾರ್ಮಿಕರ ಸಂಘಗಳು ಮಂಡಿಸಿದ ಬೇಡಿಕೆಗಳನ್ನು ಬೆಂಬಲಿಸುತ್ತಾ, ಆ್ಯಪ್ ಆಧಾರಿತ ಸಾರಿಗೆ ಕಾರ್ಮಿಕರ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿ ಶೈಕ್ ಸಲಾವುದ್ದೀನ್, “ಲಾಕ್‌ಡೌನ್ ಸಮಯದಲ್ಲಿ ಮತ್ತು ನಂತರ ಅಪ್ಲಿಕೇಶನ್ ಆಧಾರಿತ ಚಾಲಕರು ಮತ್ತು ವಿತರಣಾ ಕಾರ್ಮಿಕರು ರಸ್ತೆಗಳಲ್ಲಿದ್ದಾರೆ. ಅವರಿಗೆ ಯಾವುದೇ ಸಾಮಾಜಿಕ ಭದ್ರತೆ ಸೌಲಭ್ಯಗಳಿಲ್ಲ. 25 ಲಕ್ಷಕ್ಕೂ ಹೆಚ್ಚು ಆ್ಯಪ್ ಆಧಾರಿತ ಕಾರ್ಮಿಕರ ಕುಂದುಕೊರತೆಗಳನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು ಮತ್ತು ಅವರಿಗೆ ಸಾಮಾಜಿಕ ರಕ್ಷಣೆ ನೀಡಬೇಕು” ಎಂದು ಹೇಳಿದ್ದಾರೆ.

ಇತ್ತೀಚಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ವಿರುದ್ಧ ಕಾರ್ಮಿಕ ಸಂಘಗಳು ಹಲವಾರು ಪ್ರತಿಭಟನೆಗಳನ್ನು ನಡೆಸಿದ್ದು, ಸಾರಿಗೆ ಕಾರ್ಮಿಕರು ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ 2019 ಅನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

ಫೋಟೋ ಹಾಗೂ ಸುದ್ದಿ ಕೃಪೆ: ನ್ಯೂಸ್ ಕ್ಲಿಕ್


ಓದಿ: ಕಾರ್ಮಿಕರಿಗೆ ಮತ್ತೇ ಬರೆ ಎಳೆಯಲು ತಯಾರಿ; ಪಿಎಫ್ ಬಡ್ಡಿದರ ಕಡಿತ…!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...