Homeಚಳವಳಿರಸ್ತೆ ಸಾರಿಗೆ ಕ್ಷೇತ್ರವನ್ನು ಉಳಿಸಲು ದೇಶಾದ್ಯಂತ ಸಾರಿಗೆ ಕಾರ್ಮಿಕರ ಪ್ರತಿಭಟನೆ

ರಸ್ತೆ ಸಾರಿಗೆ ಕ್ಷೇತ್ರವನ್ನು ಉಳಿಸಲು ದೇಶಾದ್ಯಂತ ಸಾರಿಗೆ ಕಾರ್ಮಿಕರ ಪ್ರತಿಭಟನೆ

ಇತ್ತೀಚಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ವಿರುದ್ಧ ಕಾರ್ಮಿಕ ಸಂಘಗಳು ಹಲವಾರು ಪ್ರತಿಭಟನೆಗಳನ್ನು ನಡೆಸಿದ್ದು, ಸಾರಿಗೆ ಕಾರ್ಮಿಕರು ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ 2019 ಅನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

- Advertisement -
- Advertisement -

ಆಗಸ್ಟ್ 5 ರ ಬುಧವಾರದಂದು ರಸ್ತೆ ಸಾರಿಗೆ ಕಾರ್ಮಿಕರ ಅಖಿಲ ಭಾರತ ಸಮನ್ವಯ ಸಮಿತಿಯ (AICCORTWO) ಕರೆಯ ಮೇರೆಗೆ, ಸಾರ್ವಜನಿಕ ಮತ್ತು ಖಾಸಗಿ ಸಾರಿಗೆ ಕಾರ್ಮಿಕರು ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಸರ್ಕಾರದ ನಿರ್ಬಂಧಗಳ ನಡುವೆ ರಾಜ್ಯಗಳಾದ್ಯಂತ ರಾಷ್ಟ್ರೀಯ ಪ್ರತಿಭಟನಾ ದಿನವನ್ನು ಆಚರಿಸಿದರು.

“ಕೇರಳ, ಕರ್ನಾಟಕ, ರಾಜಸ್ಥಾನ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ಮಧ್ಯಪ್ರದೇಶ ಮತ್ತು ಜಾರ್ಖಂಡ್‌ನಲ್ಲಿ ಪ್ರತಿಭಟನೆಗಳು ಯಶಸ್ವಿಯಾಗಿವೆ, ಅಲ್ಲಿ ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರು ಹಲವಾರು ರಾಜ್ಯಗಳಲ್ಲಿ ಪೊಲೀಸ್ ಪಡೆಗಳ ದಬ್ಬಾಳಿಕೆಯ ಹೊರತಾಗಿಯೂ ವಿವಿಧ ಪ್ರತಿಭಟನಾ ಪ್ರದರ್ಶನಗಳನ್ನು ನಡೆಸಿದರು” ಎಂದು ಅಖಿಲ ಭಾರತ ರಸ್ತೆ ಸಾರಿಗೆ ಕಾರ್ಮಿಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಕೆ. ದಿವಾಕರನ್ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಮುಂಚಿತವಾಗಿ ರಸ್ತೆ ಸಾರಿಗೆ ಉದ್ಯಮದಲ್ಲಿ ಕಾರ್ಮಿಕರು ಬಿಕ್ಕಟ್ಟಿನಲ್ಲಿದ್ದರು. ಸಾಂಕ್ರಾಮಿಕ ರೋಗವು ಅವರನ್ನು ಮತ್ತಷ್ಟು ಸಮಸ್ಯೆಗಳಿಗೆ ಕೆಡವಿತು. ಅಲ್ಲದೆ ಲಾಕ್‌ಡೌನ್‌ನಿಂದಾಗಿ ಉದ್ಯಮವು ವಾಸ್ತವಿಕವಾಗಿ ಕುಸಿದಿದೆ” ಎಂದು ದಿವಾಕರನ್ ಹೇಳಿದರು. ನಾವು ಮಂಡಿಸಿದ ಬೇಡಿಕೆಗಳು ರಸ್ತೆ ಸಾರಿಗೆ ಉದ್ಯಮದಲ್ಲಿರುವ 10 ಕೋಟಿ ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತವೆ ಎಂದು ಅವರು ಹೇಳಿದ್ದಾರೆ.

ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ವರ್ಧಿತ ಅಬಕಾರಿ ಸುಂಕವನ್ನು ಹಿಂತೆಗೆದುಕೊಳ್ಳುವುದು ಹಾಗೂ ಜೂನ್ 7 ರಿಂದ ಹೆಚ್ಚಿದ ತೈಲ ಬೆಲೆಗಳನ್ನು ಹಿಂತೆಗೆದುಕೊಳ್ಳುವುದು ಸೇರಿದಂತೆ ತಮ್ಮ 12 ಅಂಶಗಳ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ ನಡೆದಿದೆ. ಕಳೆದ ತಿಂಗಳು AICCORTWO ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಈ ಕುರಿತು ಮನವಿ ಮಾಡಿತ್ತು.

ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ ಅಡಿಯಲ್ಲಿ ತರುವುದು; ರಸ್ತೆ ಸಾರಿಗೆ ಕಾರ್ಮಿಕರಿಗೆ ಪ್ರತ್ಯೇಕ ಸಾಮಾಜಿಕ ಭದ್ರತಾ ಕಾನೂನು; ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ 2019 ರ ವಾಪಸಾತಿ; ಅಸಂಘಟಿತ ವಲಯದ ಸಾರಿಗೆ ಕಾರ್ಮಿಕರಿಗೆ ರಾಷ್ಟ್ರೀಯ ವೇತನ ನೀತಿ; ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಿಗೆ (ಎಸ್‌ಟಿಯು) ಬಜೆಟ್ ಬೆಂಬಲ; ಎಸ್‌ಟಿಯುಗಳನ್ನು ಅಬಕಾರಿ ಸುಂಕ ಮತ್ತು ಡೀಸೆಲ್ ಮತ್ತು ಮೋಟಾರು ವಾಹನಗಳ ಮೇಲಿನ ಮಾರಾಟ ತೆರಿಗೆಯಿಂದ ವಿನಾಯಿತಿ; ಎಸ್‌ಟಿಯುಗಳಿಗೆ ಮಾತ್ರ ವಿದ್ಯುತ್ ಬಸ್‌ಗಳು ಮತ್ತು ಆರು ತಿಂಗಳ ಅವಧಿಗೆ ಎಲ್ಲಾ ಅಸಂಘಟಿತ ವಲಯದ ಸಾರಿಗೆ ಕಾರ್ಮಿಕರಿಗೆ 7,500 ರೂ ಇವುಗಳು ಪ್ರತಿಭಟನಾಕಾರರ ಇತರ ಬೇಡಿಕೆಗಳಾಗಿದ್ದವು.

“ರಾಮ ಮಂದಿರ ವಿಚಾರದಿಂದಾಗಿ ಸಿಆರ್‌ಪಿಸಿ ಯ ಸೆಕ್ಷನ್ 144 ಅನ್ನು ಹೇರಿದ ಕಾರಣ ಇಡೀ ಅಸ್ಸಾಂ ಕಟ್ಟುನಿಟ್ಟಾದ ಲಾಕ್‌ಡೌನ್ ಆಗಿದೆ. ಅದರಂತೆ, ಗುವಾಹಟಿ ಮತ್ತು ಬೊಂಗೈಗಾಂವ್‌ನಲ್ಲಿ ಪ್ರತಿಭಟನಾ ಪ್ರದರ್ಶನಗಳನ್ನು ಆಚರಿಸಲಾಯಿತು”ಎಂದು ದಿವಾಕರನ್ ಹೇಳಿದರು. ಅಲ್ಲದೆ ದೇಶಾದ್ಯಂತದ ವಿವಿಧ ಪ್ರತಿಭಟನೆಗಳ ಬಗ್ಗೆ ಅವರು ಮಾತನಾಡಿದರು.

“ರಾಜ್ಯದಾದ್ಯಂತದ ಎಸ್‌ಟಿಯುಗಳು ಕಾರ್ಯಾಚರಣೆಯ ವೆಚ್ಚ, ಖಾಸಗಿ ಗಾಡಿಗಳ ಅಕ್ರಮ ಕಾರ್ಯಾಚರಣೆ ಮತ್ತು ಇತರ ಕಾರಣಗಳಿಂದಾಗಿ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿವೆ. ಅಂತಹ ಪರಿಸ್ಥಿತಿಯಲ್ಲಿ ಮಾನವಶಕ್ತಿಯ ಕಡಿತ ಮತ್ತು ಅದರ ಪರಿಣಾಮವಾಗಿ ಕೆಲಸದ ಹೊರೆ ಹೆಚ್ಚಳ, ವೇತನ ಪಾವತಿಸದಿರುವುದು, ನಿವೃತ್ತಿ ವೇತನ ಬಾಕಿ ಅಥವಾ ವಿಳಂಬ ಪಾವತಿ ಸಮಸ್ಯೆಗಳಿಂದ ಕಾರ್ಮಿಕರು ಬಳಲುತ್ತಿದ್ದಾರೆ” ಎಂದು AICCORTWO ಹೇಳಿದೆ.

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಎಸ್‌ಆರ್‌ಟಿಸಿ) ನೌಕರರ ಒಕ್ಕೂಟದ ಕೆ.ರಾಜಿ ರೆಡ್ಡಿ ಮಾತನಾಡಿ, ರಾಜ್ಯ ಪೊಲೀಸರು ಹೈದರಾಬಾದ್‌ನಲ್ಲಿ ಹಲವಾರು ಕಾರ್ಮಿಕರನ್ನು ವಶಕ್ಕೆ ಪಡೆದಿದ್ದಾರೆ ಮತ್ತು ತೆಲಂಗಾಣದ ಎಲ್ಲಾ ಬಸ್ ಡಿಪೋಗಳ ಮುಂದೆ ಕಾರ್ಮಿಕರು ಮತ್ತು ನೌಕರರು ಪ್ರತಿಭಟನೆ ನಡೆಸಿದ್ದಾರೆ ಎಂದು ಹೇಳಿದರು.

ಸಾರಿಗೆ ಕಾರ್ಮಿಕರ ರಾಷ್ಟ್ರೀಯ ಒಕ್ಕೂಟ, ಅಖಿಲ ಭಾರತ ರಸ್ತೆ ಸಾರಿಗೆ ಕಾರ್ಮಿಕರ ಒಕ್ಕೂಟ, ಭಾರತೀಯ ರಾಷ್ಟ್ರೀಯ ಸಾರಿಗೆ ಕಾರ್ಮಿಕರ ಒಕ್ಕೂಟ, ಮಹಾರಾಷ್ಟ್ರ ರಾಜ್ಯ ಸಾರಿಗೆ ಕಮಾರ್ ಸಂಘತಾನ, ಕಾರ್ಮಿಕ ಪ್ರಗತಿಪರ ಒಕ್ಕೂಟ, ದೆಹಲಿ ಸಾರಿಗೆ ನಿಗಮ (ಡಿಟಿಸಿ) ಕಾರ್ಮಿಕರ ಏಕತಾ ಕೇಂದ್ರ, ತೆಲಂಗಾಣ ಮಜ್ದೂರ್ ಯೂನಿಯನ್, ತಮಿಳುನಾಡು ಸರ್ಕಾರಿ ಸಾರಿಗೆ ನಿಗಮಗಳ ಸಿಬ್ಬಂದಿ ಒಕ್ಕೂಟ, ಸರ್ವ ಕರ್ಮಚಾರಿ ಸಂಘ ಹೀಗೆ ಹಲವಾರು ಕೇಂದ್ರ ಕಾರ್ಮಿಕ ಸಂಘಗಳ ಸಂಯೋಜಿತ ಒಕ್ಕೂಟಗಳನ್ನು AICCORTWO ಒಳಗೊಂಡಿದೆ.

ದೆಹಲಿ, ಮುಂಬೈ, ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್‌ನಂತಹ ಪ್ರಮುಖ ನಗರಗಳಲ್ಲಿ ಉಬರ್, ಓಲಾ, ಸ್ವಿಗ್ಗಿ ಮತ್ತು ಇತರ ಅಪ್ಲಿಕೇಶನ್‌ಗಳೊಂದಿಗೆ ಕೆಲಸ ಮಾಡುವ ಅಪ್ಲಿಕೇಶನ್ ಆಧಾರಿತ ಸಾರಿಗೆ ಕಾರ್ಮಿಕರು ಸಹ ಪ್ರತಿಭಟನೆಯಲ್ಲಿ ಸೇರಿದ್ದಾರೆ.

ಸಾರಿಗೆ ಕಾರ್ಮಿಕರ ಸಂಘಗಳು ಮಂಡಿಸಿದ ಬೇಡಿಕೆಗಳನ್ನು ಬೆಂಬಲಿಸುತ್ತಾ, ಆ್ಯಪ್ ಆಧಾರಿತ ಸಾರಿಗೆ ಕಾರ್ಮಿಕರ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿ ಶೈಕ್ ಸಲಾವುದ್ದೀನ್, “ಲಾಕ್‌ಡೌನ್ ಸಮಯದಲ್ಲಿ ಮತ್ತು ನಂತರ ಅಪ್ಲಿಕೇಶನ್ ಆಧಾರಿತ ಚಾಲಕರು ಮತ್ತು ವಿತರಣಾ ಕಾರ್ಮಿಕರು ರಸ್ತೆಗಳಲ್ಲಿದ್ದಾರೆ. ಅವರಿಗೆ ಯಾವುದೇ ಸಾಮಾಜಿಕ ಭದ್ರತೆ ಸೌಲಭ್ಯಗಳಿಲ್ಲ. 25 ಲಕ್ಷಕ್ಕೂ ಹೆಚ್ಚು ಆ್ಯಪ್ ಆಧಾರಿತ ಕಾರ್ಮಿಕರ ಕುಂದುಕೊರತೆಗಳನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು ಮತ್ತು ಅವರಿಗೆ ಸಾಮಾಜಿಕ ರಕ್ಷಣೆ ನೀಡಬೇಕು” ಎಂದು ಹೇಳಿದ್ದಾರೆ.

ಇತ್ತೀಚಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ವಿರುದ್ಧ ಕಾರ್ಮಿಕ ಸಂಘಗಳು ಹಲವಾರು ಪ್ರತಿಭಟನೆಗಳನ್ನು ನಡೆಸಿದ್ದು, ಸಾರಿಗೆ ಕಾರ್ಮಿಕರು ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ 2019 ಅನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

ಫೋಟೋ ಹಾಗೂ ಸುದ್ದಿ ಕೃಪೆ: ನ್ಯೂಸ್ ಕ್ಲಿಕ್


ಓದಿ: ಕಾರ್ಮಿಕರಿಗೆ ಮತ್ತೇ ಬರೆ ಎಳೆಯಲು ತಯಾರಿ; ಪಿಎಫ್ ಬಡ್ಡಿದರ ಕಡಿತ…!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...