Homeಚಳವಳಿರಸ್ತೆ ಸಾರಿಗೆ ಕ್ಷೇತ್ರವನ್ನು ಉಳಿಸಲು ದೇಶಾದ್ಯಂತ ಸಾರಿಗೆ ಕಾರ್ಮಿಕರ ಪ್ರತಿಭಟನೆ

ರಸ್ತೆ ಸಾರಿಗೆ ಕ್ಷೇತ್ರವನ್ನು ಉಳಿಸಲು ದೇಶಾದ್ಯಂತ ಸಾರಿಗೆ ಕಾರ್ಮಿಕರ ಪ್ರತಿಭಟನೆ

ಇತ್ತೀಚಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ವಿರುದ್ಧ ಕಾರ್ಮಿಕ ಸಂಘಗಳು ಹಲವಾರು ಪ್ರತಿಭಟನೆಗಳನ್ನು ನಡೆಸಿದ್ದು, ಸಾರಿಗೆ ಕಾರ್ಮಿಕರು ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ 2019 ಅನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

- Advertisement -
- Advertisement -

ಆಗಸ್ಟ್ 5 ರ ಬುಧವಾರದಂದು ರಸ್ತೆ ಸಾರಿಗೆ ಕಾರ್ಮಿಕರ ಅಖಿಲ ಭಾರತ ಸಮನ್ವಯ ಸಮಿತಿಯ (AICCORTWO) ಕರೆಯ ಮೇರೆಗೆ, ಸಾರ್ವಜನಿಕ ಮತ್ತು ಖಾಸಗಿ ಸಾರಿಗೆ ಕಾರ್ಮಿಕರು ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಸರ್ಕಾರದ ನಿರ್ಬಂಧಗಳ ನಡುವೆ ರಾಜ್ಯಗಳಾದ್ಯಂತ ರಾಷ್ಟ್ರೀಯ ಪ್ರತಿಭಟನಾ ದಿನವನ್ನು ಆಚರಿಸಿದರು.

“ಕೇರಳ, ಕರ್ನಾಟಕ, ರಾಜಸ್ಥಾನ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ಮಧ್ಯಪ್ರದೇಶ ಮತ್ತು ಜಾರ್ಖಂಡ್‌ನಲ್ಲಿ ಪ್ರತಿಭಟನೆಗಳು ಯಶಸ್ವಿಯಾಗಿವೆ, ಅಲ್ಲಿ ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರು ಹಲವಾರು ರಾಜ್ಯಗಳಲ್ಲಿ ಪೊಲೀಸ್ ಪಡೆಗಳ ದಬ್ಬಾಳಿಕೆಯ ಹೊರತಾಗಿಯೂ ವಿವಿಧ ಪ್ರತಿಭಟನಾ ಪ್ರದರ್ಶನಗಳನ್ನು ನಡೆಸಿದರು” ಎಂದು ಅಖಿಲ ಭಾರತ ರಸ್ತೆ ಸಾರಿಗೆ ಕಾರ್ಮಿಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಕೆ. ದಿವಾಕರನ್ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಮುಂಚಿತವಾಗಿ ರಸ್ತೆ ಸಾರಿಗೆ ಉದ್ಯಮದಲ್ಲಿ ಕಾರ್ಮಿಕರು ಬಿಕ್ಕಟ್ಟಿನಲ್ಲಿದ್ದರು. ಸಾಂಕ್ರಾಮಿಕ ರೋಗವು ಅವರನ್ನು ಮತ್ತಷ್ಟು ಸಮಸ್ಯೆಗಳಿಗೆ ಕೆಡವಿತು. ಅಲ್ಲದೆ ಲಾಕ್‌ಡೌನ್‌ನಿಂದಾಗಿ ಉದ್ಯಮವು ವಾಸ್ತವಿಕವಾಗಿ ಕುಸಿದಿದೆ” ಎಂದು ದಿವಾಕರನ್ ಹೇಳಿದರು. ನಾವು ಮಂಡಿಸಿದ ಬೇಡಿಕೆಗಳು ರಸ್ತೆ ಸಾರಿಗೆ ಉದ್ಯಮದಲ್ಲಿರುವ 10 ಕೋಟಿ ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತವೆ ಎಂದು ಅವರು ಹೇಳಿದ್ದಾರೆ.

ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ವರ್ಧಿತ ಅಬಕಾರಿ ಸುಂಕವನ್ನು ಹಿಂತೆಗೆದುಕೊಳ್ಳುವುದು ಹಾಗೂ ಜೂನ್ 7 ರಿಂದ ಹೆಚ್ಚಿದ ತೈಲ ಬೆಲೆಗಳನ್ನು ಹಿಂತೆಗೆದುಕೊಳ್ಳುವುದು ಸೇರಿದಂತೆ ತಮ್ಮ 12 ಅಂಶಗಳ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ ನಡೆದಿದೆ. ಕಳೆದ ತಿಂಗಳು AICCORTWO ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಈ ಕುರಿತು ಮನವಿ ಮಾಡಿತ್ತು.

ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ ಅಡಿಯಲ್ಲಿ ತರುವುದು; ರಸ್ತೆ ಸಾರಿಗೆ ಕಾರ್ಮಿಕರಿಗೆ ಪ್ರತ್ಯೇಕ ಸಾಮಾಜಿಕ ಭದ್ರತಾ ಕಾನೂನು; ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ 2019 ರ ವಾಪಸಾತಿ; ಅಸಂಘಟಿತ ವಲಯದ ಸಾರಿಗೆ ಕಾರ್ಮಿಕರಿಗೆ ರಾಷ್ಟ್ರೀಯ ವೇತನ ನೀತಿ; ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಿಗೆ (ಎಸ್‌ಟಿಯು) ಬಜೆಟ್ ಬೆಂಬಲ; ಎಸ್‌ಟಿಯುಗಳನ್ನು ಅಬಕಾರಿ ಸುಂಕ ಮತ್ತು ಡೀಸೆಲ್ ಮತ್ತು ಮೋಟಾರು ವಾಹನಗಳ ಮೇಲಿನ ಮಾರಾಟ ತೆರಿಗೆಯಿಂದ ವಿನಾಯಿತಿ; ಎಸ್‌ಟಿಯುಗಳಿಗೆ ಮಾತ್ರ ವಿದ್ಯುತ್ ಬಸ್‌ಗಳು ಮತ್ತು ಆರು ತಿಂಗಳ ಅವಧಿಗೆ ಎಲ್ಲಾ ಅಸಂಘಟಿತ ವಲಯದ ಸಾರಿಗೆ ಕಾರ್ಮಿಕರಿಗೆ 7,500 ರೂ ಇವುಗಳು ಪ್ರತಿಭಟನಾಕಾರರ ಇತರ ಬೇಡಿಕೆಗಳಾಗಿದ್ದವು.

“ರಾಮ ಮಂದಿರ ವಿಚಾರದಿಂದಾಗಿ ಸಿಆರ್‌ಪಿಸಿ ಯ ಸೆಕ್ಷನ್ 144 ಅನ್ನು ಹೇರಿದ ಕಾರಣ ಇಡೀ ಅಸ್ಸಾಂ ಕಟ್ಟುನಿಟ್ಟಾದ ಲಾಕ್‌ಡೌನ್ ಆಗಿದೆ. ಅದರಂತೆ, ಗುವಾಹಟಿ ಮತ್ತು ಬೊಂಗೈಗಾಂವ್‌ನಲ್ಲಿ ಪ್ರತಿಭಟನಾ ಪ್ರದರ್ಶನಗಳನ್ನು ಆಚರಿಸಲಾಯಿತು”ಎಂದು ದಿವಾಕರನ್ ಹೇಳಿದರು. ಅಲ್ಲದೆ ದೇಶಾದ್ಯಂತದ ವಿವಿಧ ಪ್ರತಿಭಟನೆಗಳ ಬಗ್ಗೆ ಅವರು ಮಾತನಾಡಿದರು.

“ರಾಜ್ಯದಾದ್ಯಂತದ ಎಸ್‌ಟಿಯುಗಳು ಕಾರ್ಯಾಚರಣೆಯ ವೆಚ್ಚ, ಖಾಸಗಿ ಗಾಡಿಗಳ ಅಕ್ರಮ ಕಾರ್ಯಾಚರಣೆ ಮತ್ತು ಇತರ ಕಾರಣಗಳಿಂದಾಗಿ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿವೆ. ಅಂತಹ ಪರಿಸ್ಥಿತಿಯಲ್ಲಿ ಮಾನವಶಕ್ತಿಯ ಕಡಿತ ಮತ್ತು ಅದರ ಪರಿಣಾಮವಾಗಿ ಕೆಲಸದ ಹೊರೆ ಹೆಚ್ಚಳ, ವೇತನ ಪಾವತಿಸದಿರುವುದು, ನಿವೃತ್ತಿ ವೇತನ ಬಾಕಿ ಅಥವಾ ವಿಳಂಬ ಪಾವತಿ ಸಮಸ್ಯೆಗಳಿಂದ ಕಾರ್ಮಿಕರು ಬಳಲುತ್ತಿದ್ದಾರೆ” ಎಂದು AICCORTWO ಹೇಳಿದೆ.

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಎಸ್‌ಆರ್‌ಟಿಸಿ) ನೌಕರರ ಒಕ್ಕೂಟದ ಕೆ.ರಾಜಿ ರೆಡ್ಡಿ ಮಾತನಾಡಿ, ರಾಜ್ಯ ಪೊಲೀಸರು ಹೈದರಾಬಾದ್‌ನಲ್ಲಿ ಹಲವಾರು ಕಾರ್ಮಿಕರನ್ನು ವಶಕ್ಕೆ ಪಡೆದಿದ್ದಾರೆ ಮತ್ತು ತೆಲಂಗಾಣದ ಎಲ್ಲಾ ಬಸ್ ಡಿಪೋಗಳ ಮುಂದೆ ಕಾರ್ಮಿಕರು ಮತ್ತು ನೌಕರರು ಪ್ರತಿಭಟನೆ ನಡೆಸಿದ್ದಾರೆ ಎಂದು ಹೇಳಿದರು.

ಸಾರಿಗೆ ಕಾರ್ಮಿಕರ ರಾಷ್ಟ್ರೀಯ ಒಕ್ಕೂಟ, ಅಖಿಲ ಭಾರತ ರಸ್ತೆ ಸಾರಿಗೆ ಕಾರ್ಮಿಕರ ಒಕ್ಕೂಟ, ಭಾರತೀಯ ರಾಷ್ಟ್ರೀಯ ಸಾರಿಗೆ ಕಾರ್ಮಿಕರ ಒಕ್ಕೂಟ, ಮಹಾರಾಷ್ಟ್ರ ರಾಜ್ಯ ಸಾರಿಗೆ ಕಮಾರ್ ಸಂಘತಾನ, ಕಾರ್ಮಿಕ ಪ್ರಗತಿಪರ ಒಕ್ಕೂಟ, ದೆಹಲಿ ಸಾರಿಗೆ ನಿಗಮ (ಡಿಟಿಸಿ) ಕಾರ್ಮಿಕರ ಏಕತಾ ಕೇಂದ್ರ, ತೆಲಂಗಾಣ ಮಜ್ದೂರ್ ಯೂನಿಯನ್, ತಮಿಳುನಾಡು ಸರ್ಕಾರಿ ಸಾರಿಗೆ ನಿಗಮಗಳ ಸಿಬ್ಬಂದಿ ಒಕ್ಕೂಟ, ಸರ್ವ ಕರ್ಮಚಾರಿ ಸಂಘ ಹೀಗೆ ಹಲವಾರು ಕೇಂದ್ರ ಕಾರ್ಮಿಕ ಸಂಘಗಳ ಸಂಯೋಜಿತ ಒಕ್ಕೂಟಗಳನ್ನು AICCORTWO ಒಳಗೊಂಡಿದೆ.

ದೆಹಲಿ, ಮುಂಬೈ, ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್‌ನಂತಹ ಪ್ರಮುಖ ನಗರಗಳಲ್ಲಿ ಉಬರ್, ಓಲಾ, ಸ್ವಿಗ್ಗಿ ಮತ್ತು ಇತರ ಅಪ್ಲಿಕೇಶನ್‌ಗಳೊಂದಿಗೆ ಕೆಲಸ ಮಾಡುವ ಅಪ್ಲಿಕೇಶನ್ ಆಧಾರಿತ ಸಾರಿಗೆ ಕಾರ್ಮಿಕರು ಸಹ ಪ್ರತಿಭಟನೆಯಲ್ಲಿ ಸೇರಿದ್ದಾರೆ.

ಸಾರಿಗೆ ಕಾರ್ಮಿಕರ ಸಂಘಗಳು ಮಂಡಿಸಿದ ಬೇಡಿಕೆಗಳನ್ನು ಬೆಂಬಲಿಸುತ್ತಾ, ಆ್ಯಪ್ ಆಧಾರಿತ ಸಾರಿಗೆ ಕಾರ್ಮಿಕರ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿ ಶೈಕ್ ಸಲಾವುದ್ದೀನ್, “ಲಾಕ್‌ಡೌನ್ ಸಮಯದಲ್ಲಿ ಮತ್ತು ನಂತರ ಅಪ್ಲಿಕೇಶನ್ ಆಧಾರಿತ ಚಾಲಕರು ಮತ್ತು ವಿತರಣಾ ಕಾರ್ಮಿಕರು ರಸ್ತೆಗಳಲ್ಲಿದ್ದಾರೆ. ಅವರಿಗೆ ಯಾವುದೇ ಸಾಮಾಜಿಕ ಭದ್ರತೆ ಸೌಲಭ್ಯಗಳಿಲ್ಲ. 25 ಲಕ್ಷಕ್ಕೂ ಹೆಚ್ಚು ಆ್ಯಪ್ ಆಧಾರಿತ ಕಾರ್ಮಿಕರ ಕುಂದುಕೊರತೆಗಳನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು ಮತ್ತು ಅವರಿಗೆ ಸಾಮಾಜಿಕ ರಕ್ಷಣೆ ನೀಡಬೇಕು” ಎಂದು ಹೇಳಿದ್ದಾರೆ.

ಇತ್ತೀಚಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ವಿರುದ್ಧ ಕಾರ್ಮಿಕ ಸಂಘಗಳು ಹಲವಾರು ಪ್ರತಿಭಟನೆಗಳನ್ನು ನಡೆಸಿದ್ದು, ಸಾರಿಗೆ ಕಾರ್ಮಿಕರು ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ 2019 ಅನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

ಫೋಟೋ ಹಾಗೂ ಸುದ್ದಿ ಕೃಪೆ: ನ್ಯೂಸ್ ಕ್ಲಿಕ್


ಓದಿ: ಕಾರ್ಮಿಕರಿಗೆ ಮತ್ತೇ ಬರೆ ಎಳೆಯಲು ತಯಾರಿ; ಪಿಎಫ್ ಬಡ್ಡಿದರ ಕಡಿತ…!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...