Homeಮುಖಪುಟಹೈಕೋರ್ಟ್ ತರಾಟೆ: ಸಾರಿಗೆ ನೌಕರರ ಮುಷ್ಕರ ವಾಪಸ್

ಹೈಕೋರ್ಟ್ ತರಾಟೆ: ಸಾರಿಗೆ ನೌಕರರ ಮುಷ್ಕರ ವಾಪಸ್

- Advertisement -
- Advertisement -

ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಅಡಿ ಬಂಧಿಸಲು ಪೊಲೀಸರಿಗೆ ನಿರ್ದೇಶಿಸಲಾಗುವುದು, ನ್ಯಾಯಾಂಗ ನಿಂದನೆ ಅಡಿ ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್‌ ಎಚ್ಚರಿಸಿದ ಬಳಿಕ, ಸಾರಿಗೆ ನೌಕಕರು ತಮ್ಮ ಮುಷ್ಕರವನ್ನು ಮಂಗಳವಾರ ಸಂಜೆ (ಆ.5) ವಾಪಸ್ ಪಡೆದಿದ್ದಾರೆ.

ಹಿಂಬಾಕಿ ಪಾವತಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಘೋಷಣೆ ಮಾಡಿದ್ದ ಅನಿರ್ಧಾಷ್ಟವಧಿ ಮುಷ್ಕರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬೆಂಗಳೂರಿನ ಜೆ ಸುನೀಲ್‌ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ಮಂಗಳವಾರ ನಡೆಸಿತು.

ರಾಜ್ಯ ಸರ್ಕಾರ ಜುಲೈ 17ರಂದು ಎಸ್ಮಾ ಜಾರಿ ಮಾಡಿದ್ದು, ಕಾಯ್ದೆಯ ನಿಬಂಧನೆಯ ಪ್ರಕಾರ ಯೂನಿಯನ್‌ ಕರೆ ನೀಡಿರುವ ಮುಷ್ಕರವು ಅಕ್ರಮವಾಗಿದೆ. ಹೀಗಾಗಿ, ದಂಡನೀಯ ಕ್ರಮಕೈಗೊಳ್ಳಬಹುದಾಗಿದೆ. ನಿನ್ನೆ (ಸೋಮವಾರ) ಮುಷ್ಕರಕ್ಕೆ ತಡೆ ನೀಡಿರುವ ಮಧ್ಯಂತರ ಆದೇಶವನ್ನು ಮುಂದಿನ ವಿಚಾರಣೆವರೆಗೆ ವಿಸ್ತರಿಸಲಾಗಿದೆ” ಎಂದು ನ್ಯಾಯಾಲಯವು ಆದೇಶಿಸಿದೆ.

ಸಂಧಾನಕ್ಕೆ ಒಳಪಟ್ಟು ಮುಷ್ಕರವನ್ನು ವಾಪಸ್ ಪಡೆಯಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಸಿಬ್ಬಂದಿ, ಕೆಲಸಗಾರರ ಒಕ್ಕೂಟ (ಐಐಟಿಯುಸಿ) ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಅಖಿಲ ಕರ್ನಾಟಕ ರಾಜ್ಯ ರಸ್ತೆ ನೌಕರರ ಮಹಾಮಂಡಳಿ; ಉಳಿದ ಯೂನಿಯನ್‌ಗಳನ್ನು ಪ್ರತ್ಯೇಕವಾಗಿ ಪಕ್ಷಕಾರರನ್ನಾಗಿಸಲು ಅರ್ಜಿದಾರರಿಗೆ ಆದೇಶಿಸಿರುವ ನ್ಯಾಯಾಲಯವು, ಇಂದಿನ (ಮಂಗಳವಾರ) ಆದೇಶವನ್ನು ಅವರಿಗೆ ತಲುಪಿಸುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಆಗಸ್ಟ್‌ 7ಕ್ಕೆ ಮುಂದೂಡಿದೆ.

ಇದಕ್ಕೂ ಮುನ್ನ ಪೀಠವು, ಮುಷ್ಕರಕ್ಕೆ ಕರೆ ನೀಡಿರುವ ಯೂನಿಯನ್‌ಗಳ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಹೇಳಿದೆ. ಎಸ್ಮಾ ಜಾರಿಯಾಗಿರುವಾಗ ಮುಷ್ಕರ ನಡೆಸಿರುವುದು ಕಾನೂನುಬಾಹಿರವಾಗಿದೆ. ಎಸ್ಮಾ ಅಡಿ ಮುಷ್ಕರಕ್ಕೆ ಬೆಂಬಲ ನೀಡುವ ಯಾರನ್ನು ಬೇಕಾದರೂ ಪೊಲೀಸರು ಬಂಧಿಸುವ ಅಧಿಕಾರ ಹೊಂದಲಿದ್ದಾರೆ ಎಂದಿದೆ.

ಈಗಾಗಲೇ ನಡೆಸಿರುವ ಮುಷ್ಕರವು ಕಾನೂನಿನ ಪ್ರಕಾರ ಅಕ್ರಮವಾಗಿದೆ. ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿರುವುದಕ್ಕೆ ಯೂನಿಯನ್‌ಗಳ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕೈಗೊಳ್ಳಬೇಕಾಗುತ್ತದೆ. ನಾಳೆ (ಬುಧವಾರ) ಮುಷ್ಕರ ನಿಲ್ಲಬೇಕು. ಎಸ್ಮಾ ಕಾಯ್ದೆಯ ಸೆಕ್ಷನ್‌ 8ರ ಅಡಿ ಪೊಲೀಸರು ಬಂಧಿಸುವ ಅಧಿಕಾರ ಹೊಂದಲಿದ್ದು, ಪದಾಧಿಕಾರಿಗಳನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸಲಾಗುವುದು” ಎಂದು ಮೌಖಿಕವಾಗಿ ನ್ಯಾಯಾಲಯ ಹೇಳಿದೆ.

ನಿಮ್ಮ ಬೇಡಿಕೆಗಳನ್ನು ಸರ್ಕಾರದ ಜೊತೆ ಚರ್ಚಿಸಿ ಬಗೆ ಹರಿಸಿಕೊಳ್ಳಿ. ಜನರಿಗೆ ತೊಂದೆರೆ ಉಂಟು ಮಾಡಲು ಸಾಧ್ಯವಿಲ್ಲ. ಯೂನಿಯನ್ ಅದನ್ನೇ ಮಾಡುತ್ತಿದೆ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಒಟ್ಟು ನಾಲ್ಕು ನಿಗಮಗಳಿದ್ದು, ನ್ಯಾಯಾಲಯದ ಮಧ್ಯಂತರ ಆದೇಶದ ಹೊರತಾಗಿಯೂ ಮೂರು ನಿಗಮಗಳ ಸಿಬ್ಬಂದಿ ಮುಷ್ಕರ ಮುಂದುವರಿಸಿದ್ದಾರೆ. ಸಿಬ್ಬಂದಿ ಕೊರತೆಯಿಂದ ಶೇ.30-40 ಬಸ್‌ಗಳು ಮಾತ್ರ ಓಡಾಡುತ್ತಿವೆ. ಮುಖ್ಯಮಂತ್ರಿ ಸಾರಿಗೆ ಸಿಬ್ಬಂದಿಯ ಜಂಟಿ ಕ್ರಿಯಾ ಸಮಿತಿಯೊಂದಿಗೆ ಸಭೆ ನಡೆಸಿದ್ದಾರೆ. ಕೈಗಾರಿಕಾ ವಿವಾದ ಇತ್ಯರ್ಥ ಕಾಯ್ದೆ ಅಡಿ ಸಾರಿಗೆ ಆಯುಕ್ತರ ಜೊತೆ ಸಂಬಂಧಿತ ಸಂಧಾನ ಸಭೆ ನಡೆಸಲಾಗಿದೆ. ಇದರ ಮುಂದಿನ ಸಭೆಯು ಆಗಸ್ಟ್‌ 7ಕ್ಕೆ ನಿಗದಿಯಾಗಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಸಿಬ್ಬಂದಿ, ಕೆಲಸಗಾರರ ಒಕ್ಕೂಟದ ಪರ ವಕೀಲರು, “ಸೋಮವಾರ ಸಂಜೆ ಮುಷ್ಕರಕ್ಕೆ ತಡೆ ಕೋರಿರುವ ಅರ್ಜಿ ಕೊಟ್ಟಿದ್ದಾರೆ. ಇದಕ್ಕೆ ವಕಾಲತ್ತು ಹಾಕಲಾಗಿದೆ. ಬೆಂಗಳೂರಿನಲ್ಲಿ ಶೇ. 90ರಷ್ಟು ಬಿಎಂಟಿಸಿ ಬಸ್‌ಗಳು ಕಾರ್ಯನಿರ್ವಹಿಸುತ್ತಿವೆ. ಸಂಧಾನ ನಡೆಯುತ್ತಿದೆ. ಮುಷ್ಕರವನ್ನು ನಿಲ್ಲಿಸುತ್ತಿದ್ದೇವೆ” ಎಂದು ಪೀಠಕ್ಕೆ ವಾಗ್ದಾನ ನೀಡಿದ್ದಾರೆ ಎಂದು barandbench.com ವರದಿ ಮಾಡಿದೆ.

ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...