Homeಮುಖಪುಟಹೈಕೋರ್ಟ್ ತರಾಟೆ: ಸಾರಿಗೆ ನೌಕರರ ಮುಷ್ಕರ ವಾಪಸ್

ಹೈಕೋರ್ಟ್ ತರಾಟೆ: ಸಾರಿಗೆ ನೌಕರರ ಮುಷ್ಕರ ವಾಪಸ್

- Advertisement -
- Advertisement -

ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಅಡಿ ಬಂಧಿಸಲು ಪೊಲೀಸರಿಗೆ ನಿರ್ದೇಶಿಸಲಾಗುವುದು, ನ್ಯಾಯಾಂಗ ನಿಂದನೆ ಅಡಿ ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್‌ ಎಚ್ಚರಿಸಿದ ಬಳಿಕ, ಸಾರಿಗೆ ನೌಕಕರು ತಮ್ಮ ಮುಷ್ಕರವನ್ನು ಮಂಗಳವಾರ ಸಂಜೆ (ಆ.5) ವಾಪಸ್ ಪಡೆದಿದ್ದಾರೆ.

ಹಿಂಬಾಕಿ ಪಾವತಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಘೋಷಣೆ ಮಾಡಿದ್ದ ಅನಿರ್ಧಾಷ್ಟವಧಿ ಮುಷ್ಕರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬೆಂಗಳೂರಿನ ಜೆ ಸುನೀಲ್‌ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ಮಂಗಳವಾರ ನಡೆಸಿತು.

ರಾಜ್ಯ ಸರ್ಕಾರ ಜುಲೈ 17ರಂದು ಎಸ್ಮಾ ಜಾರಿ ಮಾಡಿದ್ದು, ಕಾಯ್ದೆಯ ನಿಬಂಧನೆಯ ಪ್ರಕಾರ ಯೂನಿಯನ್‌ ಕರೆ ನೀಡಿರುವ ಮುಷ್ಕರವು ಅಕ್ರಮವಾಗಿದೆ. ಹೀಗಾಗಿ, ದಂಡನೀಯ ಕ್ರಮಕೈಗೊಳ್ಳಬಹುದಾಗಿದೆ. ನಿನ್ನೆ (ಸೋಮವಾರ) ಮುಷ್ಕರಕ್ಕೆ ತಡೆ ನೀಡಿರುವ ಮಧ್ಯಂತರ ಆದೇಶವನ್ನು ಮುಂದಿನ ವಿಚಾರಣೆವರೆಗೆ ವಿಸ್ತರಿಸಲಾಗಿದೆ” ಎಂದು ನ್ಯಾಯಾಲಯವು ಆದೇಶಿಸಿದೆ.

ಸಂಧಾನಕ್ಕೆ ಒಳಪಟ್ಟು ಮುಷ್ಕರವನ್ನು ವಾಪಸ್ ಪಡೆಯಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಸಿಬ್ಬಂದಿ, ಕೆಲಸಗಾರರ ಒಕ್ಕೂಟ (ಐಐಟಿಯುಸಿ) ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಅಖಿಲ ಕರ್ನಾಟಕ ರಾಜ್ಯ ರಸ್ತೆ ನೌಕರರ ಮಹಾಮಂಡಳಿ; ಉಳಿದ ಯೂನಿಯನ್‌ಗಳನ್ನು ಪ್ರತ್ಯೇಕವಾಗಿ ಪಕ್ಷಕಾರರನ್ನಾಗಿಸಲು ಅರ್ಜಿದಾರರಿಗೆ ಆದೇಶಿಸಿರುವ ನ್ಯಾಯಾಲಯವು, ಇಂದಿನ (ಮಂಗಳವಾರ) ಆದೇಶವನ್ನು ಅವರಿಗೆ ತಲುಪಿಸುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಆಗಸ್ಟ್‌ 7ಕ್ಕೆ ಮುಂದೂಡಿದೆ.

ಇದಕ್ಕೂ ಮುನ್ನ ಪೀಠವು, ಮುಷ್ಕರಕ್ಕೆ ಕರೆ ನೀಡಿರುವ ಯೂನಿಯನ್‌ಗಳ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಹೇಳಿದೆ. ಎಸ್ಮಾ ಜಾರಿಯಾಗಿರುವಾಗ ಮುಷ್ಕರ ನಡೆಸಿರುವುದು ಕಾನೂನುಬಾಹಿರವಾಗಿದೆ. ಎಸ್ಮಾ ಅಡಿ ಮುಷ್ಕರಕ್ಕೆ ಬೆಂಬಲ ನೀಡುವ ಯಾರನ್ನು ಬೇಕಾದರೂ ಪೊಲೀಸರು ಬಂಧಿಸುವ ಅಧಿಕಾರ ಹೊಂದಲಿದ್ದಾರೆ ಎಂದಿದೆ.

ಈಗಾಗಲೇ ನಡೆಸಿರುವ ಮುಷ್ಕರವು ಕಾನೂನಿನ ಪ್ರಕಾರ ಅಕ್ರಮವಾಗಿದೆ. ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿರುವುದಕ್ಕೆ ಯೂನಿಯನ್‌ಗಳ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕೈಗೊಳ್ಳಬೇಕಾಗುತ್ತದೆ. ನಾಳೆ (ಬುಧವಾರ) ಮುಷ್ಕರ ನಿಲ್ಲಬೇಕು. ಎಸ್ಮಾ ಕಾಯ್ದೆಯ ಸೆಕ್ಷನ್‌ 8ರ ಅಡಿ ಪೊಲೀಸರು ಬಂಧಿಸುವ ಅಧಿಕಾರ ಹೊಂದಲಿದ್ದು, ಪದಾಧಿಕಾರಿಗಳನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸಲಾಗುವುದು” ಎಂದು ಮೌಖಿಕವಾಗಿ ನ್ಯಾಯಾಲಯ ಹೇಳಿದೆ.

ನಿಮ್ಮ ಬೇಡಿಕೆಗಳನ್ನು ಸರ್ಕಾರದ ಜೊತೆ ಚರ್ಚಿಸಿ ಬಗೆ ಹರಿಸಿಕೊಳ್ಳಿ. ಜನರಿಗೆ ತೊಂದೆರೆ ಉಂಟು ಮಾಡಲು ಸಾಧ್ಯವಿಲ್ಲ. ಯೂನಿಯನ್ ಅದನ್ನೇ ಮಾಡುತ್ತಿದೆ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಒಟ್ಟು ನಾಲ್ಕು ನಿಗಮಗಳಿದ್ದು, ನ್ಯಾಯಾಲಯದ ಮಧ್ಯಂತರ ಆದೇಶದ ಹೊರತಾಗಿಯೂ ಮೂರು ನಿಗಮಗಳ ಸಿಬ್ಬಂದಿ ಮುಷ್ಕರ ಮುಂದುವರಿಸಿದ್ದಾರೆ. ಸಿಬ್ಬಂದಿ ಕೊರತೆಯಿಂದ ಶೇ.30-40 ಬಸ್‌ಗಳು ಮಾತ್ರ ಓಡಾಡುತ್ತಿವೆ. ಮುಖ್ಯಮಂತ್ರಿ ಸಾರಿಗೆ ಸಿಬ್ಬಂದಿಯ ಜಂಟಿ ಕ್ರಿಯಾ ಸಮಿತಿಯೊಂದಿಗೆ ಸಭೆ ನಡೆಸಿದ್ದಾರೆ. ಕೈಗಾರಿಕಾ ವಿವಾದ ಇತ್ಯರ್ಥ ಕಾಯ್ದೆ ಅಡಿ ಸಾರಿಗೆ ಆಯುಕ್ತರ ಜೊತೆ ಸಂಬಂಧಿತ ಸಂಧಾನ ಸಭೆ ನಡೆಸಲಾಗಿದೆ. ಇದರ ಮುಂದಿನ ಸಭೆಯು ಆಗಸ್ಟ್‌ 7ಕ್ಕೆ ನಿಗದಿಯಾಗಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಸಿಬ್ಬಂದಿ, ಕೆಲಸಗಾರರ ಒಕ್ಕೂಟದ ಪರ ವಕೀಲರು, “ಸೋಮವಾರ ಸಂಜೆ ಮುಷ್ಕರಕ್ಕೆ ತಡೆ ಕೋರಿರುವ ಅರ್ಜಿ ಕೊಟ್ಟಿದ್ದಾರೆ. ಇದಕ್ಕೆ ವಕಾಲತ್ತು ಹಾಕಲಾಗಿದೆ. ಬೆಂಗಳೂರಿನಲ್ಲಿ ಶೇ. 90ರಷ್ಟು ಬಿಎಂಟಿಸಿ ಬಸ್‌ಗಳು ಕಾರ್ಯನಿರ್ವಹಿಸುತ್ತಿವೆ. ಸಂಧಾನ ನಡೆಯುತ್ತಿದೆ. ಮುಷ್ಕರವನ್ನು ನಿಲ್ಲಿಸುತ್ತಿದ್ದೇವೆ” ಎಂದು ಪೀಠಕ್ಕೆ ವಾಗ್ದಾನ ನೀಡಿದ್ದಾರೆ ಎಂದು barandbench.com ವರದಿ ಮಾಡಿದೆ.

ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...