Homeಮುಖಪುಟಹೈಕೋರ್ಟ್ ತರಾಟೆ: ಸಾರಿಗೆ ನೌಕರರ ಮುಷ್ಕರ ವಾಪಸ್

ಹೈಕೋರ್ಟ್ ತರಾಟೆ: ಸಾರಿಗೆ ನೌಕರರ ಮುಷ್ಕರ ವಾಪಸ್

- Advertisement -
- Advertisement -

ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಅಡಿ ಬಂಧಿಸಲು ಪೊಲೀಸರಿಗೆ ನಿರ್ದೇಶಿಸಲಾಗುವುದು, ನ್ಯಾಯಾಂಗ ನಿಂದನೆ ಅಡಿ ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್‌ ಎಚ್ಚರಿಸಿದ ಬಳಿಕ, ಸಾರಿಗೆ ನೌಕಕರು ತಮ್ಮ ಮುಷ್ಕರವನ್ನು ಮಂಗಳವಾರ ಸಂಜೆ (ಆ.5) ವಾಪಸ್ ಪಡೆದಿದ್ದಾರೆ.

ಹಿಂಬಾಕಿ ಪಾವತಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಘೋಷಣೆ ಮಾಡಿದ್ದ ಅನಿರ್ಧಾಷ್ಟವಧಿ ಮುಷ್ಕರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬೆಂಗಳೂರಿನ ಜೆ ಸುನೀಲ್‌ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ಮಂಗಳವಾರ ನಡೆಸಿತು.

ರಾಜ್ಯ ಸರ್ಕಾರ ಜುಲೈ 17ರಂದು ಎಸ್ಮಾ ಜಾರಿ ಮಾಡಿದ್ದು, ಕಾಯ್ದೆಯ ನಿಬಂಧನೆಯ ಪ್ರಕಾರ ಯೂನಿಯನ್‌ ಕರೆ ನೀಡಿರುವ ಮುಷ್ಕರವು ಅಕ್ರಮವಾಗಿದೆ. ಹೀಗಾಗಿ, ದಂಡನೀಯ ಕ್ರಮಕೈಗೊಳ್ಳಬಹುದಾಗಿದೆ. ನಿನ್ನೆ (ಸೋಮವಾರ) ಮುಷ್ಕರಕ್ಕೆ ತಡೆ ನೀಡಿರುವ ಮಧ್ಯಂತರ ಆದೇಶವನ್ನು ಮುಂದಿನ ವಿಚಾರಣೆವರೆಗೆ ವಿಸ್ತರಿಸಲಾಗಿದೆ” ಎಂದು ನ್ಯಾಯಾಲಯವು ಆದೇಶಿಸಿದೆ.

ಸಂಧಾನಕ್ಕೆ ಒಳಪಟ್ಟು ಮುಷ್ಕರವನ್ನು ವಾಪಸ್ ಪಡೆಯಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಸಿಬ್ಬಂದಿ, ಕೆಲಸಗಾರರ ಒಕ್ಕೂಟ (ಐಐಟಿಯುಸಿ) ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಅಖಿಲ ಕರ್ನಾಟಕ ರಾಜ್ಯ ರಸ್ತೆ ನೌಕರರ ಮಹಾಮಂಡಳಿ; ಉಳಿದ ಯೂನಿಯನ್‌ಗಳನ್ನು ಪ್ರತ್ಯೇಕವಾಗಿ ಪಕ್ಷಕಾರರನ್ನಾಗಿಸಲು ಅರ್ಜಿದಾರರಿಗೆ ಆದೇಶಿಸಿರುವ ನ್ಯಾಯಾಲಯವು, ಇಂದಿನ (ಮಂಗಳವಾರ) ಆದೇಶವನ್ನು ಅವರಿಗೆ ತಲುಪಿಸುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಆಗಸ್ಟ್‌ 7ಕ್ಕೆ ಮುಂದೂಡಿದೆ.

ಇದಕ್ಕೂ ಮುನ್ನ ಪೀಠವು, ಮುಷ್ಕರಕ್ಕೆ ಕರೆ ನೀಡಿರುವ ಯೂನಿಯನ್‌ಗಳ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಹೇಳಿದೆ. ಎಸ್ಮಾ ಜಾರಿಯಾಗಿರುವಾಗ ಮುಷ್ಕರ ನಡೆಸಿರುವುದು ಕಾನೂನುಬಾಹಿರವಾಗಿದೆ. ಎಸ್ಮಾ ಅಡಿ ಮುಷ್ಕರಕ್ಕೆ ಬೆಂಬಲ ನೀಡುವ ಯಾರನ್ನು ಬೇಕಾದರೂ ಪೊಲೀಸರು ಬಂಧಿಸುವ ಅಧಿಕಾರ ಹೊಂದಲಿದ್ದಾರೆ ಎಂದಿದೆ.

ಈಗಾಗಲೇ ನಡೆಸಿರುವ ಮುಷ್ಕರವು ಕಾನೂನಿನ ಪ್ರಕಾರ ಅಕ್ರಮವಾಗಿದೆ. ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿರುವುದಕ್ಕೆ ಯೂನಿಯನ್‌ಗಳ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕೈಗೊಳ್ಳಬೇಕಾಗುತ್ತದೆ. ನಾಳೆ (ಬುಧವಾರ) ಮುಷ್ಕರ ನಿಲ್ಲಬೇಕು. ಎಸ್ಮಾ ಕಾಯ್ದೆಯ ಸೆಕ್ಷನ್‌ 8ರ ಅಡಿ ಪೊಲೀಸರು ಬಂಧಿಸುವ ಅಧಿಕಾರ ಹೊಂದಲಿದ್ದು, ಪದಾಧಿಕಾರಿಗಳನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸಲಾಗುವುದು” ಎಂದು ಮೌಖಿಕವಾಗಿ ನ್ಯಾಯಾಲಯ ಹೇಳಿದೆ.

ನಿಮ್ಮ ಬೇಡಿಕೆಗಳನ್ನು ಸರ್ಕಾರದ ಜೊತೆ ಚರ್ಚಿಸಿ ಬಗೆ ಹರಿಸಿಕೊಳ್ಳಿ. ಜನರಿಗೆ ತೊಂದೆರೆ ಉಂಟು ಮಾಡಲು ಸಾಧ್ಯವಿಲ್ಲ. ಯೂನಿಯನ್ ಅದನ್ನೇ ಮಾಡುತ್ತಿದೆ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಒಟ್ಟು ನಾಲ್ಕು ನಿಗಮಗಳಿದ್ದು, ನ್ಯಾಯಾಲಯದ ಮಧ್ಯಂತರ ಆದೇಶದ ಹೊರತಾಗಿಯೂ ಮೂರು ನಿಗಮಗಳ ಸಿಬ್ಬಂದಿ ಮುಷ್ಕರ ಮುಂದುವರಿಸಿದ್ದಾರೆ. ಸಿಬ್ಬಂದಿ ಕೊರತೆಯಿಂದ ಶೇ.30-40 ಬಸ್‌ಗಳು ಮಾತ್ರ ಓಡಾಡುತ್ತಿವೆ. ಮುಖ್ಯಮಂತ್ರಿ ಸಾರಿಗೆ ಸಿಬ್ಬಂದಿಯ ಜಂಟಿ ಕ್ರಿಯಾ ಸಮಿತಿಯೊಂದಿಗೆ ಸಭೆ ನಡೆಸಿದ್ದಾರೆ. ಕೈಗಾರಿಕಾ ವಿವಾದ ಇತ್ಯರ್ಥ ಕಾಯ್ದೆ ಅಡಿ ಸಾರಿಗೆ ಆಯುಕ್ತರ ಜೊತೆ ಸಂಬಂಧಿತ ಸಂಧಾನ ಸಭೆ ನಡೆಸಲಾಗಿದೆ. ಇದರ ಮುಂದಿನ ಸಭೆಯು ಆಗಸ್ಟ್‌ 7ಕ್ಕೆ ನಿಗದಿಯಾಗಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಸಿಬ್ಬಂದಿ, ಕೆಲಸಗಾರರ ಒಕ್ಕೂಟದ ಪರ ವಕೀಲರು, “ಸೋಮವಾರ ಸಂಜೆ ಮುಷ್ಕರಕ್ಕೆ ತಡೆ ಕೋರಿರುವ ಅರ್ಜಿ ಕೊಟ್ಟಿದ್ದಾರೆ. ಇದಕ್ಕೆ ವಕಾಲತ್ತು ಹಾಕಲಾಗಿದೆ. ಬೆಂಗಳೂರಿನಲ್ಲಿ ಶೇ. 90ರಷ್ಟು ಬಿಎಂಟಿಸಿ ಬಸ್‌ಗಳು ಕಾರ್ಯನಿರ್ವಹಿಸುತ್ತಿವೆ. ಸಂಧಾನ ನಡೆಯುತ್ತಿದೆ. ಮುಷ್ಕರವನ್ನು ನಿಲ್ಲಿಸುತ್ತಿದ್ದೇವೆ” ಎಂದು ಪೀಠಕ್ಕೆ ವಾಗ್ದಾನ ನೀಡಿದ್ದಾರೆ ಎಂದು barandbench.com ವರದಿ ಮಾಡಿದೆ.

ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ ಬುಡಕಟ್ಟು ಶಾಲೆಯಲ್ಲಿ ಊಟ ಸೇವಿಸಿ 5ನೇ ತರಗತಿ ವಿದ್ಯಾರ್ಥಿನಿ ಸಾವು, 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಸರ್ಕಾರಿ ಬುಡಕಟ್ಟು ವಸತಿ ಶಾಲೆಯಲ್ಲಿ ಊಟ ಸೇವಿಸಿದ ನಂತರ 5 ನೇ ತರಗತಿಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಕಾಕಬಂಧ ​​ಆಶ್ರಮ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ...

ಡೆಹ್ರಾಡೂನ್‌| ಮುಸ್ಲಿಂ ಯುವಕನ ಮೇಲೆ ಕಾಳಿ ಸೇನಾ ನಾಯಕನಿಂದ ಹಲ್ಲೆ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಆರೋಪಿ

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮುಸ್ಲಿಂ ಯುವಕನ ಮೇಲೆ ಹಿಂದುತ್ವ ನಾಯಕನೊಬ್ಬ ಹಲ್ಲೆ ನಡೆಸಿದ್ದಾನೆ ಎಂಬ ಆತಂಕಕಾರಿ ಘಟನೆ ವರದಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ಮಾಹಿತಿಯ ಪ್ರಕಾರ, ಕಾಳಿ...

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ...

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...