Homeಅಂತರಾಷ್ಟ್ರೀಯಟ್ರಾವೆಲ್ ಏಜೆನ್ಸಿ ವಂಚನೆ - ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

- Advertisement -
- Advertisement -

‘ಉಮ್ರಾ ಯಾತ್ರೆ’ಗೆಂದು ಜನರನ್ನು ಕರೆದೊಯ್ದ ಮಂಗಳೂರು ಮೂಲದ ಟ್ರಾವೆಲ್ಸ್‌ ಏಜೆನ್ಸಿಯೊಂದು, ಸೂಕ್ತ ವ್ಯವಸ್ಥೆಗಳನ್ನು ಮಾಡಿಕೊಡದೆ ಅರ್ಧ ದಾರಿಯಲ್ಲೆ ಕೈಬಿಟ್ಟ ಪರಿಣಾಮ ಸುಮಾರು 160ಕ್ಕೂ ಹೆಚ್ಚು ಜನರು ಸೌದಿ ಅರೇಬಿಯಾದ ಮದೀನದಲ್ಲೆ ಸಂಕಷ್ಟಕ್ಕೀಡಾಗಿದ್ದಾರೆ ಎಂದು ವರದಿಯಾಗಿದೆ. ಟ್ರಾವೆಲ್ ಏಜೆನ್ಸಿಯ ಮುಖ್ಯಸ್ಥ ತಮ್ಮೊಂದಿಗೆ ತೆರಳಿದ್ದ ಜನರನ್ನು ಅಲ್ಲಿಯೆ ಬಿಟ್ಟು ಪರಾರಿಯಾಗಿದ್ದು, ಸಂತ್ರಸ್ತ ಜನರು ಭಾರತಕ್ಕೆ ಹಿಂತಿರುಗಲು ಪರದಾಡುವಂತಾಗಿದೆ. ಟ್ರಾವೆಲ್ ಏಜೆನ್ಸಿ ವಂಚನೆ

‘ಉಮ್ರಾ ಯಾತ್ರೆ’ ಎನ್ನುವುದು ‘ಹಜ್‌ ಯಾತ್ರೆ’ ಮಾದರಿಯ ಪವಿತ್ರ ಯಾತ್ರೆಯಾಗಿದ್ದು, ಈ ಯಾತ್ರೆಯಲ್ಲಿ ಮುಸ್ಲಿಮರು ಸೌದಿ ಅರೇಬಿಯಾದ ಮಕ್ಕಾ ಮತ್ತು ಮದೀನಾ ನಗರಕ್ಕೆ ಭೇಟಿ ನೀಡಿ ವಿವಿಧ ಆರಾಧನಾ ಕರ್ಮಗಳನ್ನು ನಿರ್ವಹಿಸುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಬಕದಲ್ಲಿ ಇರುವ ಮೊಹಮ್ಮದೀಯ ಹಜ್ ಆಂಡ್ ಉಮ್ರಾ ಟ್ರಾವೆಲ್ಸ್‌ ಅಡಿಯಲ್ಲಿ ಡಿಸೆಂಬರ್ 13 ಮತ್ತು 15 ನಡುವೆ ಸುಮಾರು 160 ಜನರನ್ನು ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಈ ವೇಳೆ ಯಾತ್ರಾರ್ಥಿಗಳು ಕೇರಳದ ಕಣ್ಣೂರು, ಕ್ಯಾಲಿಕಟ್‌ ವಿಮಾನ ನಿಲ್ದಾಣಗಳ ಮೂಲಕ ಸೌದಿ ಅರೇಬಿಯಾಕ್ಕೆ ಪ್ರಯಾಣ ಮಾಡಿದ್ದರು. ಯಾತ್ರಾರ್ಥಿಗಳಲ್ಲಿ ಮಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವಾರು ಜಿಲ್ಲೆಗಳ ಜನರು ಇದ್ದರು ಎಂದು ತಿಳಿದು ಬಂದಿದೆ. ಟ್ರಾವೆಲ್ ಏಜೆನ್ಸಿ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ಯಾತ್ರಾರ್ಥಿಗಳು ಮಕ್ಕಾ ಮತ್ತು ಮದೀನಾದಲ್ಲಿ ‘ಉಮ್ರಾ’ ಆರಾಧನೆಯನ್ನು ಮುಗಿಸಿ ಡಿಸೆಂಬರ್ 28ರ ನಂತರ ಭಾರತಕ್ಕೆ ವಾಪಾಸಾಗಬೇಕಾಗಿತ್ತು. ಆದರೆ ಈ ನಡುವೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗಿರುವ ಟ್ರಾವೆಲ್ಸ್‌ ಏಜೆನ್ಸಿಯ ಮುಖ್ಯಸ್ಥ ಅಶ್ರಫ್ ಸಖಾಫಿ ಪರ್ಪುಂಜ ನಾಪತ್ತೆಯಾಗಿದ್ದಾರೆ ಎಂದು ನಾನುಗೌರಿ.ಕಾಮ್‌ಗೆ ಸಂತ್ರಸ್ತ ಯಾತ್ರಾರ್ಥಿಯೊಬ್ಬರು ದೂರಿದರು. ಟ್ರಾವೆಲ್ ಏಜೆನ್ಸಿಯು ಪ್ರತಿ ಯಾತ್ರಾರ್ಥಿಯಿಂದ 65 ಸಾವಿರದಿಂದ 70 ಸಾವಿರದ ವರೆಗೆ ಪೂರ್ಣ ಹಣವನ್ನು ಪಡೆದಿದೆ ಎಂದು ಯಾತ್ರಾರ್ಥಿಗಳು ತಿಳಿಸಿದರು.

ಡಿಸೆಂಬರ್ 28ರಂದು ಟ್ರಾವೆಲ್ಸ್ ಏಜನ್ಸಿಯ ಮುಖ್ಯಸ್ಥ ನಾಪತ್ತೆಯಾದ ನಂತರ, ಅವರ ಅವರ ಇಬ್ಬರು ಸಹಾಯಕರು, ವಿಮಾನದ ಟಿಕೆಟ್ ಬೆಲೆ ಏರಿಕೆಯಾಗಿದೆ ಎಂದು ಸಬೂಬು ನೀಡಿ ಭಾರತಕ್ಕೆ ಹಿಂತಿರುಗುವ ದಿನವನ್ನು ಮುಂದೂಡುತ್ತಲೆ ಬಂದಿದ್ದರು. ಕೊನೆಗೆ ಅವರು ಯಾತ್ರಾರ್ಥಿಗಳಿಗೆ ವಿಷಯವನ್ನು ತಿಳಿಸಿದ್ದು, ತಮ್ಮ ಕೈಯ್ಯಿಂದಲೆ ಹಣವನ್ನು ಹಾಕಿ ಟಿಕೆಟ್ ಖರೀದಿಸುವಂತೆ ಕೇಳಿಕೊಂಡಿದ್ದಾರೆ ಎಂದು ನಾನುಗೌರಿ.ಕಾಮ್‌ಗೆ ಯಾತ್ರಾರ್ಥಿಯೊಬ್ಬರು ತಿಳಿಸಿದರು.

ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಯಾತ್ರಾರ್ಥಿ ಖಾದರ್ ರಂತಡ್ಕ ಅವರು, “ನಮ್ಮ ತಂಡದಲ್ಲಿ ಸುಮಾರು 160 ಜನರು ಇದ್ದಾರೆ. ನಮ್ಮ ತಂಡದಲ್ಲಿ ವೃದ್ಧರೇ ಹೆಚ್ಚಾಗಿದ್ದು, ಅವರಿಗೆ ಬಿಪಿ, ಡಯಬಿಟೀಸ್, ಹೃದ್ರೋಗ ಇರುವವರು ಇದ್ದಾರೆ. ಭಾನುವಾರ ರಾತ್ರಿಯಿಂದ ಯಾರೂ ಕೂಡಾ ಊಟ ಮಾಡಿಲ್ಲ. ಸೋಮವಾರ ಬೆಳಿಗ್ಗೆ ಚಹಾ ಮತ್ತು ಉಪ್ಪಿಟ್ಟುಕೊಟ್ಟಿದ್ದಾರೆ. ಮಧ್ಯಾಹ್ನದ ಊಟ ಇನ್ನೂ ಸಿಕ್ಕಿಲ್ಲ. ಇಂದು ಮಧ್ಯಾಹ್ನದ ವರೆಗೆ ನಾವು ಇರುವ ವಸತಿಯಲ್ಲಿ ಇರಬಹುದು. ನಂತರ ಅದನ್ನು ಕೂಡಾ ತೆರವು ಮಾಡಬೇಕಾಗುತ್ತದೆ. ಎಲ್ಲರೂ ದುಃಖದಲ್ಲಿದ್ದು, ಮುಂದಕ್ಕೇನು ಮಾಡಬೇಕು ಎಂದು ತಿಳಿಯುತ್ತಿಲ್ಲ” ಎಂದು ಹೇಳಿದರು.

”ಪವಿತ್ರ ಯಾತ್ರೆಗೆಂದು ಹೊರಟು ಬಂದಿರುವ ನಾವು ಯಾತ್ರೆ ಮುಗಿಸಿ ಸಂತೋಷದಿಂದ ಭಾರತಕ್ಕೆ ಹಿಂತಿರುಗಬೇಕಿತ್ತು. ನಾವೇನೂ ತುಂಬಾ ಶ್ರೀಮಂತರಲ್ಲ, ಪವಿತ್ರ ಯಾತ್ರೆಗಾಗಿ ಅಲ್ಪ ಸ್ವಲ್ಪ ಕೂಡಿಟ್ಟ ಹಣವನ್ನು ಟ್ರಾವೆಲ್ಸ್ ಏಜೆನ್ಸಿಗೆ ಕೊಟ್ಟು ನಾವು ಯಾತ್ರೆಗೆ ಬಂದಿದ್ದೇವೆ. ಇರುವ ಹಣ ಎಲ್ಲವೂ ಖಾಲಿಯಾಗಿದೆ. ಟ್ರಾವೆಲ್ಸ್ ಏಜೆನ್ಸಿ ಅವರು, ನಾವೇ ಟಿಕೆಟ್ ಮಾಡಿ ಭಾರತಕ್ಕೆ ಹಿಂತಿರುಗುವಂತೆ ಹೇಳುತ್ತಿದ್ದಾರೆ. ಅಷ್ಟೊಂದು ಹಣವನ್ನು ನಾವು ಈಗ ಎಲ್ಲಿಂದ ತರಲಿ” ಎಂದು ಮತ್ತೊಬ್ಬ ಯಾತ್ರಾರ್ಥಿ ನಾನುಗೌರಿ.ಕಾಮ್‌ಗೆ ಹೇಳಿದರು.

ಈ ನಡುವೆ ಟ್ರಾವೆಲ್ಸ್ ಏಜೆನ್ಸಿಯ ಪುತ್ತೂರಿನ ಕಬಕದಲ್ಲಿ ಮತ್ತು ಉಳ್ಳಾಲದ ಮುಡಿಪುವಿನ ಕಚೇರಿಗಳಲ್ಲಿ ಯಾತ್ರಾರ್ಥಿಗಳ ಸಂಬಂಧಿಕರು ತೆರಳಿ ಗಲಾಟೆ ಮಾಡಿದ್ದಾರೆ ಎಂದು ವರದಿಯಾಗಿವೆ. ಅದಾಗ್ಯೂ, ಟ್ರಾವೆಲ್ಸ್ ಏಜೆನ್ಸಿಯ ಮುಖ್ಯಸ್ಥ ಅಶ್ರಫ್ ಸಖಾಫಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಅವರು ಮೂರು ದಿನಗಳ ಹಿಂದೆಯೆ ಭಾರತಕ್ಕೆ ಹಿಂತಿರುಗಿದ್ದಾರೆ ಎಂದು ತಿಳಿದುಬಂದಿದೆ. ಪರಾರಿಯಾಗಿರುವ ಏಜೆನ್ಸಿ ಮುಖ್ಯಸ್ಥ ಈ ಹಿಂದೆ ಕೂಡಾ ಇದೇ ರೀತಿ ಜನರಿಗೆ ವಂಚನೆ ಮಾಡಿದ್ದರು ಎಂದು ಮೂಲವೊಂದು ನಾನುಗೌರಿ.ಕಾಮ್‌ಗೆ ಹೇಳಿದೆ.

ಈ ನಡುವೆ ಸೌದಿ ಅರೇಬಿಯಾದಲ್ಲಿ ಇರುವ ಅನಿವಾಸಿ ಭಾರತೀಯರ ಸಂಘಟನೆಯಾದ ಕೆಸಿಎಫ್‌ ಸಂತ್ರಸ್ತ ಯಾತ್ರಾರ್ಥಿಗಳಿಗೆ ಊಟದ ವ್ಯವಸ್ಥೆ ಮಾಡಿದೆ ಎಂದು ಅದರ ಪದಾದಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಕೆಸಿಎಫ್‌ ಪದಾಧಿಕಾರಿಯೊಬ್ಬರು ಅವರು,”ನಮಗೆ ವಿಷಯ ತಿಳಿದ ನಂತರ 160 ಜನರಿಗೆ ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆ ಮಾಡಿದ್ದೇವೆ. ಈ ನಡುವೆ ಸೌದಿ ಸರ್ಕಾರಕ್ಕೆ ಯಾತ್ರಾರ್ಥಿಗಳು ದೂರು ನೀಡಿದ್ದಾರೆ. ಅವರಿಗೆ ವಂಚನೆ ಮಾಡಿರುವ ಟ್ರಾವೆಲ್ ಏಜೆನ್ಸಿ ಮುಖ್ಯಸ್ಥ ಅಶ್ರಫ್ ಸಖಾಫಿ ವಿರುದ್ಧ ಇಲ್ಲಿನ ಸರ್ಕಾರ ಕ್ರಮಕೈಗೊಳ್ಳುತ್ತದೆ. ಒಂದು ವೇಳೆ ಅವರು ಸೌದಿಯಲ್ಲಿ ಇರದೆ ಇದ್ದರೆ, ಅವರ ಸಂಸ್ಥೆಯ ಮೇಲೆ ಸರ್ಕಾರ ಕ್ರಮಕೈಗೊಳ್ಳಲಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಈಶ್ವರ ಅಲ್ಲಾ ತೇರೋ ನಾಮ್ ವಿವಾದ: ಈ ಭಜನೆ ಹಾಡುವುದನ್ನು ಮುಂದುವರಿಸುತ್ತೇನೆ; ಜನಪದ ಗಾಯಕಿ ದೇವಿ

ಈಶ್ವರ ಅಲ್ಲಾ ತೇರೋ ನಾಮ್ ವಿವಾದ: ಈ ಭಜನೆ ಹಾಡುವುದನ್ನು ಮುಂದುವರಿಸುತ್ತೇನೆ; ಜನಪದ ಗಾಯಕಿ ದೇವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...