Homeಅಂತರಾಷ್ಟ್ರೀಯಟ್ರಾವೆಲ್ ಏಜೆನ್ಸಿ ವಂಚನೆ - ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

- Advertisement -
- Advertisement -

‘ಉಮ್ರಾ ಯಾತ್ರೆ’ಗೆಂದು ಜನರನ್ನು ಕರೆದೊಯ್ದ ಮಂಗಳೂರು ಮೂಲದ ಟ್ರಾವೆಲ್ಸ್‌ ಏಜೆನ್ಸಿಯೊಂದು, ಸೂಕ್ತ ವ್ಯವಸ್ಥೆಗಳನ್ನು ಮಾಡಿಕೊಡದೆ ಅರ್ಧ ದಾರಿಯಲ್ಲೆ ಕೈಬಿಟ್ಟ ಪರಿಣಾಮ ಸುಮಾರು 160ಕ್ಕೂ ಹೆಚ್ಚು ಜನರು ಸೌದಿ ಅರೇಬಿಯಾದ ಮದೀನದಲ್ಲೆ ಸಂಕಷ್ಟಕ್ಕೀಡಾಗಿದ್ದಾರೆ ಎಂದು ವರದಿಯಾಗಿದೆ. ಟ್ರಾವೆಲ್ ಏಜೆನ್ಸಿಯ ಮುಖ್ಯಸ್ಥ ತಮ್ಮೊಂದಿಗೆ ತೆರಳಿದ್ದ ಜನರನ್ನು ಅಲ್ಲಿಯೆ ಬಿಟ್ಟು ಪರಾರಿಯಾಗಿದ್ದು, ಸಂತ್ರಸ್ತ ಜನರು ಭಾರತಕ್ಕೆ ಹಿಂತಿರುಗಲು ಪರದಾಡುವಂತಾಗಿದೆ. ಟ್ರಾವೆಲ್ ಏಜೆನ್ಸಿ ವಂಚನೆ

‘ಉಮ್ರಾ ಯಾತ್ರೆ’ ಎನ್ನುವುದು ‘ಹಜ್‌ ಯಾತ್ರೆ’ ಮಾದರಿಯ ಪವಿತ್ರ ಯಾತ್ರೆಯಾಗಿದ್ದು, ಈ ಯಾತ್ರೆಯಲ್ಲಿ ಮುಸ್ಲಿಮರು ಸೌದಿ ಅರೇಬಿಯಾದ ಮಕ್ಕಾ ಮತ್ತು ಮದೀನಾ ನಗರಕ್ಕೆ ಭೇಟಿ ನೀಡಿ ವಿವಿಧ ಆರಾಧನಾ ಕರ್ಮಗಳನ್ನು ನಿರ್ವಹಿಸುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಬಕದಲ್ಲಿ ಇರುವ ಮೊಹಮ್ಮದೀಯ ಹಜ್ ಆಂಡ್ ಉಮ್ರಾ ಟ್ರಾವೆಲ್ಸ್‌ ಅಡಿಯಲ್ಲಿ ಡಿಸೆಂಬರ್ 13 ಮತ್ತು 15 ನಡುವೆ ಸುಮಾರು 160 ಜನರನ್ನು ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಈ ವೇಳೆ ಯಾತ್ರಾರ್ಥಿಗಳು ಕೇರಳದ ಕಣ್ಣೂರು, ಕ್ಯಾಲಿಕಟ್‌ ವಿಮಾನ ನಿಲ್ದಾಣಗಳ ಮೂಲಕ ಸೌದಿ ಅರೇಬಿಯಾಕ್ಕೆ ಪ್ರಯಾಣ ಮಾಡಿದ್ದರು. ಯಾತ್ರಾರ್ಥಿಗಳಲ್ಲಿ ಮಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವಾರು ಜಿಲ್ಲೆಗಳ ಜನರು ಇದ್ದರು ಎಂದು ತಿಳಿದು ಬಂದಿದೆ. ಟ್ರಾವೆಲ್ ಏಜೆನ್ಸಿ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ಯಾತ್ರಾರ್ಥಿಗಳು ಮಕ್ಕಾ ಮತ್ತು ಮದೀನಾದಲ್ಲಿ ‘ಉಮ್ರಾ’ ಆರಾಧನೆಯನ್ನು ಮುಗಿಸಿ ಡಿಸೆಂಬರ್ 28ರ ನಂತರ ಭಾರತಕ್ಕೆ ವಾಪಾಸಾಗಬೇಕಾಗಿತ್ತು. ಆದರೆ ಈ ನಡುವೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗಿರುವ ಟ್ರಾವೆಲ್ಸ್‌ ಏಜೆನ್ಸಿಯ ಮುಖ್ಯಸ್ಥ ಅಶ್ರಫ್ ಸಖಾಫಿ ಪರ್ಪುಂಜ ನಾಪತ್ತೆಯಾಗಿದ್ದಾರೆ ಎಂದು ನಾನುಗೌರಿ.ಕಾಮ್‌ಗೆ ಸಂತ್ರಸ್ತ ಯಾತ್ರಾರ್ಥಿಯೊಬ್ಬರು ದೂರಿದರು. ಟ್ರಾವೆಲ್ ಏಜೆನ್ಸಿಯು ಪ್ರತಿ ಯಾತ್ರಾರ್ಥಿಯಿಂದ 65 ಸಾವಿರದಿಂದ 70 ಸಾವಿರದ ವರೆಗೆ ಪೂರ್ಣ ಹಣವನ್ನು ಪಡೆದಿದೆ ಎಂದು ಯಾತ್ರಾರ್ಥಿಗಳು ತಿಳಿಸಿದರು.

ಡಿಸೆಂಬರ್ 28ರಂದು ಟ್ರಾವೆಲ್ಸ್ ಏಜನ್ಸಿಯ ಮುಖ್ಯಸ್ಥ ನಾಪತ್ತೆಯಾದ ನಂತರ, ಅವರ ಅವರ ಇಬ್ಬರು ಸಹಾಯಕರು, ವಿಮಾನದ ಟಿಕೆಟ್ ಬೆಲೆ ಏರಿಕೆಯಾಗಿದೆ ಎಂದು ಸಬೂಬು ನೀಡಿ ಭಾರತಕ್ಕೆ ಹಿಂತಿರುಗುವ ದಿನವನ್ನು ಮುಂದೂಡುತ್ತಲೆ ಬಂದಿದ್ದರು. ಕೊನೆಗೆ ಅವರು ಯಾತ್ರಾರ್ಥಿಗಳಿಗೆ ವಿಷಯವನ್ನು ತಿಳಿಸಿದ್ದು, ತಮ್ಮ ಕೈಯ್ಯಿಂದಲೆ ಹಣವನ್ನು ಹಾಕಿ ಟಿಕೆಟ್ ಖರೀದಿಸುವಂತೆ ಕೇಳಿಕೊಂಡಿದ್ದಾರೆ ಎಂದು ನಾನುಗೌರಿ.ಕಾಮ್‌ಗೆ ಯಾತ್ರಾರ್ಥಿಯೊಬ್ಬರು ತಿಳಿಸಿದರು.

ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಯಾತ್ರಾರ್ಥಿ ಖಾದರ್ ರಂತಡ್ಕ ಅವರು, “ನಮ್ಮ ತಂಡದಲ್ಲಿ ಸುಮಾರು 160 ಜನರು ಇದ್ದಾರೆ. ನಮ್ಮ ತಂಡದಲ್ಲಿ ವೃದ್ಧರೇ ಹೆಚ್ಚಾಗಿದ್ದು, ಅವರಿಗೆ ಬಿಪಿ, ಡಯಬಿಟೀಸ್, ಹೃದ್ರೋಗ ಇರುವವರು ಇದ್ದಾರೆ. ಭಾನುವಾರ ರಾತ್ರಿಯಿಂದ ಯಾರೂ ಕೂಡಾ ಊಟ ಮಾಡಿಲ್ಲ. ಸೋಮವಾರ ಬೆಳಿಗ್ಗೆ ಚಹಾ ಮತ್ತು ಉಪ್ಪಿಟ್ಟುಕೊಟ್ಟಿದ್ದಾರೆ. ಮಧ್ಯಾಹ್ನದ ಊಟ ಇನ್ನೂ ಸಿಕ್ಕಿಲ್ಲ. ಇಂದು ಮಧ್ಯಾಹ್ನದ ವರೆಗೆ ನಾವು ಇರುವ ವಸತಿಯಲ್ಲಿ ಇರಬಹುದು. ನಂತರ ಅದನ್ನು ಕೂಡಾ ತೆರವು ಮಾಡಬೇಕಾಗುತ್ತದೆ. ಎಲ್ಲರೂ ದುಃಖದಲ್ಲಿದ್ದು, ಮುಂದಕ್ಕೇನು ಮಾಡಬೇಕು ಎಂದು ತಿಳಿಯುತ್ತಿಲ್ಲ” ಎಂದು ಹೇಳಿದರು.

”ಪವಿತ್ರ ಯಾತ್ರೆಗೆಂದು ಹೊರಟು ಬಂದಿರುವ ನಾವು ಯಾತ್ರೆ ಮುಗಿಸಿ ಸಂತೋಷದಿಂದ ಭಾರತಕ್ಕೆ ಹಿಂತಿರುಗಬೇಕಿತ್ತು. ನಾವೇನೂ ತುಂಬಾ ಶ್ರೀಮಂತರಲ್ಲ, ಪವಿತ್ರ ಯಾತ್ರೆಗಾಗಿ ಅಲ್ಪ ಸ್ವಲ್ಪ ಕೂಡಿಟ್ಟ ಹಣವನ್ನು ಟ್ರಾವೆಲ್ಸ್ ಏಜೆನ್ಸಿಗೆ ಕೊಟ್ಟು ನಾವು ಯಾತ್ರೆಗೆ ಬಂದಿದ್ದೇವೆ. ಇರುವ ಹಣ ಎಲ್ಲವೂ ಖಾಲಿಯಾಗಿದೆ. ಟ್ರಾವೆಲ್ಸ್ ಏಜೆನ್ಸಿ ಅವರು, ನಾವೇ ಟಿಕೆಟ್ ಮಾಡಿ ಭಾರತಕ್ಕೆ ಹಿಂತಿರುಗುವಂತೆ ಹೇಳುತ್ತಿದ್ದಾರೆ. ಅಷ್ಟೊಂದು ಹಣವನ್ನು ನಾವು ಈಗ ಎಲ್ಲಿಂದ ತರಲಿ” ಎಂದು ಮತ್ತೊಬ್ಬ ಯಾತ್ರಾರ್ಥಿ ನಾನುಗೌರಿ.ಕಾಮ್‌ಗೆ ಹೇಳಿದರು.

ಈ ನಡುವೆ ಟ್ರಾವೆಲ್ಸ್ ಏಜೆನ್ಸಿಯ ಪುತ್ತೂರಿನ ಕಬಕದಲ್ಲಿ ಮತ್ತು ಉಳ್ಳಾಲದ ಮುಡಿಪುವಿನ ಕಚೇರಿಗಳಲ್ಲಿ ಯಾತ್ರಾರ್ಥಿಗಳ ಸಂಬಂಧಿಕರು ತೆರಳಿ ಗಲಾಟೆ ಮಾಡಿದ್ದಾರೆ ಎಂದು ವರದಿಯಾಗಿವೆ. ಅದಾಗ್ಯೂ, ಟ್ರಾವೆಲ್ಸ್ ಏಜೆನ್ಸಿಯ ಮುಖ್ಯಸ್ಥ ಅಶ್ರಫ್ ಸಖಾಫಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಅವರು ಮೂರು ದಿನಗಳ ಹಿಂದೆಯೆ ಭಾರತಕ್ಕೆ ಹಿಂತಿರುಗಿದ್ದಾರೆ ಎಂದು ತಿಳಿದುಬಂದಿದೆ. ಪರಾರಿಯಾಗಿರುವ ಏಜೆನ್ಸಿ ಮುಖ್ಯಸ್ಥ ಈ ಹಿಂದೆ ಕೂಡಾ ಇದೇ ರೀತಿ ಜನರಿಗೆ ವಂಚನೆ ಮಾಡಿದ್ದರು ಎಂದು ಮೂಲವೊಂದು ನಾನುಗೌರಿ.ಕಾಮ್‌ಗೆ ಹೇಳಿದೆ.

ಈ ನಡುವೆ ಸೌದಿ ಅರೇಬಿಯಾದಲ್ಲಿ ಇರುವ ಅನಿವಾಸಿ ಭಾರತೀಯರ ಸಂಘಟನೆಯಾದ ಕೆಸಿಎಫ್‌ ಸಂತ್ರಸ್ತ ಯಾತ್ರಾರ್ಥಿಗಳಿಗೆ ಊಟದ ವ್ಯವಸ್ಥೆ ಮಾಡಿದೆ ಎಂದು ಅದರ ಪದಾದಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಕೆಸಿಎಫ್‌ ಪದಾಧಿಕಾರಿಯೊಬ್ಬರು ಅವರು,”ನಮಗೆ ವಿಷಯ ತಿಳಿದ ನಂತರ 160 ಜನರಿಗೆ ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆ ಮಾಡಿದ್ದೇವೆ. ಈ ನಡುವೆ ಸೌದಿ ಸರ್ಕಾರಕ್ಕೆ ಯಾತ್ರಾರ್ಥಿಗಳು ದೂರು ನೀಡಿದ್ದಾರೆ. ಅವರಿಗೆ ವಂಚನೆ ಮಾಡಿರುವ ಟ್ರಾವೆಲ್ ಏಜೆನ್ಸಿ ಮುಖ್ಯಸ್ಥ ಅಶ್ರಫ್ ಸಖಾಫಿ ವಿರುದ್ಧ ಇಲ್ಲಿನ ಸರ್ಕಾರ ಕ್ರಮಕೈಗೊಳ್ಳುತ್ತದೆ. ಒಂದು ವೇಳೆ ಅವರು ಸೌದಿಯಲ್ಲಿ ಇರದೆ ಇದ್ದರೆ, ಅವರ ಸಂಸ್ಥೆಯ ಮೇಲೆ ಸರ್ಕಾರ ಕ್ರಮಕೈಗೊಳ್ಳಲಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಈಶ್ವರ ಅಲ್ಲಾ ತೇರೋ ನಾಮ್ ವಿವಾದ: ಈ ಭಜನೆ ಹಾಡುವುದನ್ನು ಮುಂದುವರಿಸುತ್ತೇನೆ; ಜನಪದ ಗಾಯಕಿ ದೇವಿ

ಈಶ್ವರ ಅಲ್ಲಾ ತೇರೋ ನಾಮ್ ವಿವಾದ: ಈ ಭಜನೆ ಹಾಡುವುದನ್ನು ಮುಂದುವರಿಸುತ್ತೇನೆ; ಜನಪದ ಗಾಯಕಿ ದೇವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...