Homeಅಂತರಾಷ್ಟ್ರೀಯಟ್ರಾವೆಲ್ ಏಜೆನ್ಸಿ ವಂಚನೆ - ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

- Advertisement -
- Advertisement -

‘ಉಮ್ರಾ ಯಾತ್ರೆ’ಗೆಂದು ಜನರನ್ನು ಕರೆದೊಯ್ದ ಮಂಗಳೂರು ಮೂಲದ ಟ್ರಾವೆಲ್ಸ್‌ ಏಜೆನ್ಸಿಯೊಂದು, ಸೂಕ್ತ ವ್ಯವಸ್ಥೆಗಳನ್ನು ಮಾಡಿಕೊಡದೆ ಅರ್ಧ ದಾರಿಯಲ್ಲೆ ಕೈಬಿಟ್ಟ ಪರಿಣಾಮ ಸುಮಾರು 160ಕ್ಕೂ ಹೆಚ್ಚು ಜನರು ಸೌದಿ ಅರೇಬಿಯಾದ ಮದೀನದಲ್ಲೆ ಸಂಕಷ್ಟಕ್ಕೀಡಾಗಿದ್ದಾರೆ ಎಂದು ವರದಿಯಾಗಿದೆ. ಟ್ರಾವೆಲ್ ಏಜೆನ್ಸಿಯ ಮುಖ್ಯಸ್ಥ ತಮ್ಮೊಂದಿಗೆ ತೆರಳಿದ್ದ ಜನರನ್ನು ಅಲ್ಲಿಯೆ ಬಿಟ್ಟು ಪರಾರಿಯಾಗಿದ್ದು, ಸಂತ್ರಸ್ತ ಜನರು ಭಾರತಕ್ಕೆ ಹಿಂತಿರುಗಲು ಪರದಾಡುವಂತಾಗಿದೆ. ಟ್ರಾವೆಲ್ ಏಜೆನ್ಸಿ ವಂಚನೆ

‘ಉಮ್ರಾ ಯಾತ್ರೆ’ ಎನ್ನುವುದು ‘ಹಜ್‌ ಯಾತ್ರೆ’ ಮಾದರಿಯ ಪವಿತ್ರ ಯಾತ್ರೆಯಾಗಿದ್ದು, ಈ ಯಾತ್ರೆಯಲ್ಲಿ ಮುಸ್ಲಿಮರು ಸೌದಿ ಅರೇಬಿಯಾದ ಮಕ್ಕಾ ಮತ್ತು ಮದೀನಾ ನಗರಕ್ಕೆ ಭೇಟಿ ನೀಡಿ ವಿವಿಧ ಆರಾಧನಾ ಕರ್ಮಗಳನ್ನು ನಿರ್ವಹಿಸುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಬಕದಲ್ಲಿ ಇರುವ ಮೊಹಮ್ಮದೀಯ ಹಜ್ ಆಂಡ್ ಉಮ್ರಾ ಟ್ರಾವೆಲ್ಸ್‌ ಅಡಿಯಲ್ಲಿ ಡಿಸೆಂಬರ್ 13 ಮತ್ತು 15 ನಡುವೆ ಸುಮಾರು 160 ಜನರನ್ನು ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಈ ವೇಳೆ ಯಾತ್ರಾರ್ಥಿಗಳು ಕೇರಳದ ಕಣ್ಣೂರು, ಕ್ಯಾಲಿಕಟ್‌ ವಿಮಾನ ನಿಲ್ದಾಣಗಳ ಮೂಲಕ ಸೌದಿ ಅರೇಬಿಯಾಕ್ಕೆ ಪ್ರಯಾಣ ಮಾಡಿದ್ದರು. ಯಾತ್ರಾರ್ಥಿಗಳಲ್ಲಿ ಮಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವಾರು ಜಿಲ್ಲೆಗಳ ಜನರು ಇದ್ದರು ಎಂದು ತಿಳಿದು ಬಂದಿದೆ. ಟ್ರಾವೆಲ್ ಏಜೆನ್ಸಿ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ಯಾತ್ರಾರ್ಥಿಗಳು ಮಕ್ಕಾ ಮತ್ತು ಮದೀನಾದಲ್ಲಿ ‘ಉಮ್ರಾ’ ಆರಾಧನೆಯನ್ನು ಮುಗಿಸಿ ಡಿಸೆಂಬರ್ 28ರ ನಂತರ ಭಾರತಕ್ಕೆ ವಾಪಾಸಾಗಬೇಕಾಗಿತ್ತು. ಆದರೆ ಈ ನಡುವೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗಿರುವ ಟ್ರಾವೆಲ್ಸ್‌ ಏಜೆನ್ಸಿಯ ಮುಖ್ಯಸ್ಥ ಅಶ್ರಫ್ ಸಖಾಫಿ ಪರ್ಪುಂಜ ನಾಪತ್ತೆಯಾಗಿದ್ದಾರೆ ಎಂದು ನಾನುಗೌರಿ.ಕಾಮ್‌ಗೆ ಸಂತ್ರಸ್ತ ಯಾತ್ರಾರ್ಥಿಯೊಬ್ಬರು ದೂರಿದರು. ಟ್ರಾವೆಲ್ ಏಜೆನ್ಸಿಯು ಪ್ರತಿ ಯಾತ್ರಾರ್ಥಿಯಿಂದ 65 ಸಾವಿರದಿಂದ 70 ಸಾವಿರದ ವರೆಗೆ ಪೂರ್ಣ ಹಣವನ್ನು ಪಡೆದಿದೆ ಎಂದು ಯಾತ್ರಾರ್ಥಿಗಳು ತಿಳಿಸಿದರು.

ಡಿಸೆಂಬರ್ 28ರಂದು ಟ್ರಾವೆಲ್ಸ್ ಏಜನ್ಸಿಯ ಮುಖ್ಯಸ್ಥ ನಾಪತ್ತೆಯಾದ ನಂತರ, ಅವರ ಅವರ ಇಬ್ಬರು ಸಹಾಯಕರು, ವಿಮಾನದ ಟಿಕೆಟ್ ಬೆಲೆ ಏರಿಕೆಯಾಗಿದೆ ಎಂದು ಸಬೂಬು ನೀಡಿ ಭಾರತಕ್ಕೆ ಹಿಂತಿರುಗುವ ದಿನವನ್ನು ಮುಂದೂಡುತ್ತಲೆ ಬಂದಿದ್ದರು. ಕೊನೆಗೆ ಅವರು ಯಾತ್ರಾರ್ಥಿಗಳಿಗೆ ವಿಷಯವನ್ನು ತಿಳಿಸಿದ್ದು, ತಮ್ಮ ಕೈಯ್ಯಿಂದಲೆ ಹಣವನ್ನು ಹಾಕಿ ಟಿಕೆಟ್ ಖರೀದಿಸುವಂತೆ ಕೇಳಿಕೊಂಡಿದ್ದಾರೆ ಎಂದು ನಾನುಗೌರಿ.ಕಾಮ್‌ಗೆ ಯಾತ್ರಾರ್ಥಿಯೊಬ್ಬರು ತಿಳಿಸಿದರು.

ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಯಾತ್ರಾರ್ಥಿ ಖಾದರ್ ರಂತಡ್ಕ ಅವರು, “ನಮ್ಮ ತಂಡದಲ್ಲಿ ಸುಮಾರು 160 ಜನರು ಇದ್ದಾರೆ. ನಮ್ಮ ತಂಡದಲ್ಲಿ ವೃದ್ಧರೇ ಹೆಚ್ಚಾಗಿದ್ದು, ಅವರಿಗೆ ಬಿಪಿ, ಡಯಬಿಟೀಸ್, ಹೃದ್ರೋಗ ಇರುವವರು ಇದ್ದಾರೆ. ಭಾನುವಾರ ರಾತ್ರಿಯಿಂದ ಯಾರೂ ಕೂಡಾ ಊಟ ಮಾಡಿಲ್ಲ. ಸೋಮವಾರ ಬೆಳಿಗ್ಗೆ ಚಹಾ ಮತ್ತು ಉಪ್ಪಿಟ್ಟುಕೊಟ್ಟಿದ್ದಾರೆ. ಮಧ್ಯಾಹ್ನದ ಊಟ ಇನ್ನೂ ಸಿಕ್ಕಿಲ್ಲ. ಇಂದು ಮಧ್ಯಾಹ್ನದ ವರೆಗೆ ನಾವು ಇರುವ ವಸತಿಯಲ್ಲಿ ಇರಬಹುದು. ನಂತರ ಅದನ್ನು ಕೂಡಾ ತೆರವು ಮಾಡಬೇಕಾಗುತ್ತದೆ. ಎಲ್ಲರೂ ದುಃಖದಲ್ಲಿದ್ದು, ಮುಂದಕ್ಕೇನು ಮಾಡಬೇಕು ಎಂದು ತಿಳಿಯುತ್ತಿಲ್ಲ” ಎಂದು ಹೇಳಿದರು.

”ಪವಿತ್ರ ಯಾತ್ರೆಗೆಂದು ಹೊರಟು ಬಂದಿರುವ ನಾವು ಯಾತ್ರೆ ಮುಗಿಸಿ ಸಂತೋಷದಿಂದ ಭಾರತಕ್ಕೆ ಹಿಂತಿರುಗಬೇಕಿತ್ತು. ನಾವೇನೂ ತುಂಬಾ ಶ್ರೀಮಂತರಲ್ಲ, ಪವಿತ್ರ ಯಾತ್ರೆಗಾಗಿ ಅಲ್ಪ ಸ್ವಲ್ಪ ಕೂಡಿಟ್ಟ ಹಣವನ್ನು ಟ್ರಾವೆಲ್ಸ್ ಏಜೆನ್ಸಿಗೆ ಕೊಟ್ಟು ನಾವು ಯಾತ್ರೆಗೆ ಬಂದಿದ್ದೇವೆ. ಇರುವ ಹಣ ಎಲ್ಲವೂ ಖಾಲಿಯಾಗಿದೆ. ಟ್ರಾವೆಲ್ಸ್ ಏಜೆನ್ಸಿ ಅವರು, ನಾವೇ ಟಿಕೆಟ್ ಮಾಡಿ ಭಾರತಕ್ಕೆ ಹಿಂತಿರುಗುವಂತೆ ಹೇಳುತ್ತಿದ್ದಾರೆ. ಅಷ್ಟೊಂದು ಹಣವನ್ನು ನಾವು ಈಗ ಎಲ್ಲಿಂದ ತರಲಿ” ಎಂದು ಮತ್ತೊಬ್ಬ ಯಾತ್ರಾರ್ಥಿ ನಾನುಗೌರಿ.ಕಾಮ್‌ಗೆ ಹೇಳಿದರು.

ಈ ನಡುವೆ ಟ್ರಾವೆಲ್ಸ್ ಏಜೆನ್ಸಿಯ ಪುತ್ತೂರಿನ ಕಬಕದಲ್ಲಿ ಮತ್ತು ಉಳ್ಳಾಲದ ಮುಡಿಪುವಿನ ಕಚೇರಿಗಳಲ್ಲಿ ಯಾತ್ರಾರ್ಥಿಗಳ ಸಂಬಂಧಿಕರು ತೆರಳಿ ಗಲಾಟೆ ಮಾಡಿದ್ದಾರೆ ಎಂದು ವರದಿಯಾಗಿವೆ. ಅದಾಗ್ಯೂ, ಟ್ರಾವೆಲ್ಸ್ ಏಜೆನ್ಸಿಯ ಮುಖ್ಯಸ್ಥ ಅಶ್ರಫ್ ಸಖಾಫಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಅವರು ಮೂರು ದಿನಗಳ ಹಿಂದೆಯೆ ಭಾರತಕ್ಕೆ ಹಿಂತಿರುಗಿದ್ದಾರೆ ಎಂದು ತಿಳಿದುಬಂದಿದೆ. ಪರಾರಿಯಾಗಿರುವ ಏಜೆನ್ಸಿ ಮುಖ್ಯಸ್ಥ ಈ ಹಿಂದೆ ಕೂಡಾ ಇದೇ ರೀತಿ ಜನರಿಗೆ ವಂಚನೆ ಮಾಡಿದ್ದರು ಎಂದು ಮೂಲವೊಂದು ನಾನುಗೌರಿ.ಕಾಮ್‌ಗೆ ಹೇಳಿದೆ.

ಈ ನಡುವೆ ಸೌದಿ ಅರೇಬಿಯಾದಲ್ಲಿ ಇರುವ ಅನಿವಾಸಿ ಭಾರತೀಯರ ಸಂಘಟನೆಯಾದ ಕೆಸಿಎಫ್‌ ಸಂತ್ರಸ್ತ ಯಾತ್ರಾರ್ಥಿಗಳಿಗೆ ಊಟದ ವ್ಯವಸ್ಥೆ ಮಾಡಿದೆ ಎಂದು ಅದರ ಪದಾದಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಕೆಸಿಎಫ್‌ ಪದಾಧಿಕಾರಿಯೊಬ್ಬರು ಅವರು,”ನಮಗೆ ವಿಷಯ ತಿಳಿದ ನಂತರ 160 ಜನರಿಗೆ ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆ ಮಾಡಿದ್ದೇವೆ. ಈ ನಡುವೆ ಸೌದಿ ಸರ್ಕಾರಕ್ಕೆ ಯಾತ್ರಾರ್ಥಿಗಳು ದೂರು ನೀಡಿದ್ದಾರೆ. ಅವರಿಗೆ ವಂಚನೆ ಮಾಡಿರುವ ಟ್ರಾವೆಲ್ ಏಜೆನ್ಸಿ ಮುಖ್ಯಸ್ಥ ಅಶ್ರಫ್ ಸಖಾಫಿ ವಿರುದ್ಧ ಇಲ್ಲಿನ ಸರ್ಕಾರ ಕ್ರಮಕೈಗೊಳ್ಳುತ್ತದೆ. ಒಂದು ವೇಳೆ ಅವರು ಸೌದಿಯಲ್ಲಿ ಇರದೆ ಇದ್ದರೆ, ಅವರ ಸಂಸ್ಥೆಯ ಮೇಲೆ ಸರ್ಕಾರ ಕ್ರಮಕೈಗೊಳ್ಳಲಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಈಶ್ವರ ಅಲ್ಲಾ ತೇರೋ ನಾಮ್ ವಿವಾದ: ಈ ಭಜನೆ ಹಾಡುವುದನ್ನು ಮುಂದುವರಿಸುತ್ತೇನೆ; ಜನಪದ ಗಾಯಕಿ ದೇವಿ

ಈಶ್ವರ ಅಲ್ಲಾ ತೇರೋ ನಾಮ್ ವಿವಾದ: ಈ ಭಜನೆ ಹಾಡುವುದನ್ನು ಮುಂದುವರಿಸುತ್ತೇನೆ; ಜನಪದ ಗಾಯಕಿ ದೇವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...