Homeಮುಖಪುಟಹಿಮಾಲಯ ಪ್ರವಾಸ; ದುಡಿಮೆ ಮತ್ತು ಸ್ತ್ರೀಸೌಂದರ್ಯ

ಹಿಮಾಲಯ ಪ್ರವಾಸ; ದುಡಿಮೆ ಮತ್ತು ಸ್ತ್ರೀಸೌಂದರ್ಯ

- Advertisement -
- Advertisement -

ಭಾರತದ ಬಯಲು ಪ್ರದೇಶಗಳಿಂದ ಹಿಮಾಲಯ ಚಾರಣಕ್ಕೆ ಜನ ನೆರೆಯುತ್ತಾರೆ. ಪರ್ವತ ಪ್ರದೇಶಗಳಲ್ಲಿ ತಿರುಗಾಟಕ್ಕೆ ಹೊರಡುವ ಮುನ್ನ ದೇಹವು ಹೊಸ ಹವಾಮಾನಕ್ಕೆ ಒಗ್ಗಿಕೊಳ್ಳಲೆಂದು ಬೇಸ್‌ಕ್ಯಾಂಪಿನಲ್ಲಿ ಒಂದು ದಿನ ಇರಬೇಕಾಗುವುದು. ಆಗ ಹೊಳೆಯನ್ನು ಕಟ್ಟಿದ ಹಗ್ಗದ ಮೂಲಕ ದಾಟುವ, ಬಂಡೆ ಏರಿಳಿಯುವ, ಓಡುವ ಇತ್ಯಾದಿ ಲಘು ತರಬೇತಿ-ವ್ಯಾಯಾಮ ಇರುತ್ತದೆ. ಸಂಜೆಗೆ, ಹಿಮಾಲಯದ ಹವಾಮಾನ, ಜೀವನಕ್ರಮ, ಸಂಸ್ಕೃತಿ, ಕಾಡಿನ ವಿಶಿಷ್ಟತೆ ಪರಿಚಯಿಸುವ ತಜ್ಞ ಉಪನ್ಯಾಸಗಳು. ಕುಲು ಬೇಸ್‌ಕ್ಯಾಂಪಿನಲ್ಲಿ ಅಂತಹದೊಂದು ಉಪನ್ಯಾಸ ಮಾಡುತ್ತ ಕ್ಯಾಂಪ್ ಆಫೀಸರ್-ಮಾಜಿ ಸೇನಾಧಿಕಾರಿ- ಹೇಳಿದ: “ನೋಡಿ, ಹಿಮಾಲಯದ ಹವಾಮಾನ ಮಹಿಳೆಯಂತೆ ಚಂಚಲ. ನಂಬಲನರ್ಹ. ಯಾವಾಗಲಾದರೂ ಮಳೆ-ಹಿಮಪಾತ ಆಗಬಹುದು. ನೀವು ಸಿದ್ಧತೆ ಮಾಡಿಕೊಂಡಿರಬೇಕು”. ತಂಡದಲ್ಲಿದ್ದ ಹುಡುಗರು ಹುಡುಗಿಯರತ್ತ ನೋಡುತ್ತ ರಣೋತ್ಸಾಹದಲ್ಲಿ ಹೋ ಎಂದು ಕೇಕೆ ಹಾಕಿದರು. ಈ ಮಾತನ್ನು ಸದರಿ ಆಫೀಸರ್ ಹಲವಾರು ಸಲ ಹೇಳಿರಬೇಕು. ಕೇಕೆಯ ಪ್ರತಿಕ್ರಿಯೆ ಪಡೆದಿರಬೇಕು. ಇದು ಪರೋಕ್ಷವಾಗಿ ಹೆಣ್ಣು ಗಂಡಿಗೆ ನಿಷ್ಠಳಾಗಿರಬೇಕು, ಈ ನಿಯಮ ಗಂಡಸರಿಗೆ ಅನ್ವಯವಾಗದು ಎಂಬ ದನಿಯನ್ನೊಳಗೊಂಡಿತ್ತು.

ನಮ್ಮ ಗುಂಪಲ್ಲಿದ್ದ ಮಹಿಳೆಯರು ಈ ಸಮೀಕರಣವನ್ನು ಪ್ರತಿಭಟಿಸಿದರು. ನಾವೂ ಅವರ ಜತೆಗೂಡಿದೆವು. ಅಧಿಕಾರಿಯು ನಮ್ಮ ಪ್ರತಿಭಟನೆಯನ್ನು ತಮಾಷೆಯಲ್ಲಿ ತೇಲಿಸಿದ. ನಿವೃತ್ತ ಮೇಜರುಗಳು ಸಾಮಾಜಿಕವಾಗಿ ಅಸೂಕ್ಷ್ಮವಾಗಿರುತ್ತಾರೆ ಎನ್ನುವುದನ್ನು ಅನೇಕ ಕ್ಯಾಂಪುಗಳಲ್ಲಿ ಕಂಡಿರುವೆ. ಯುದ್ಧಸಂಸ್ಕೃತಿಯ ಒಳಗೆ ಹೆಣ್ಣನ್ನು ಹೇಡಿತನದ ಚಂಚಲತೆಯ ಪ್ರತೀಕವಾಗಿಸುವ ಮನೋಭಾವವಿದೆ. ಪುರುಷವಾದವು ಆಳವಾಗಿ ಬೇರೂರಿರುವ ಎಲ್ಲ ಸೈನಿಕ ಸಂಸ್ಕೃತಿಗಳು ನೂರಾರು ಸೆಕ್ಸಿಸ್ಟ್ ಜೋಕುಗಳನ್ನು ಸೃಷ್ಟಿಮಾಡಿವೆ.

ಈ ಲಿಂಗಸಂವೇದನೆಯಿಲ್ಲದ ಅಪನಂಬಿಕೆ ಮತ್ತು ಜೋಕುಗಳಿಗೆ ಚಾರಿತ್ರಿಕ ಹಿನ್ನೆಲೆಯಿದೆ. ಎಲ್ಲ ಸಮಾಜಗಳಲ್ಲೂ ಪಶುಪಾಲಕ, ಬೇಟೆಗಾರ, ವ್ಯಾಪಾರಿ ಮತ್ತು ಸೈನಿಕ ಸಂಸ್ಕೃತಿಗಳು ಸ್ತ್ರೀಶಂಕಿತ. ಮಾದೇಶ್ವರ ಕಾವ್ಯದಲ್ಲಿ ಬೇಟೆಗೆ ಹೋಗುವ ಮುನ್ನ ಸಂಕಮ್ಮನಿಂದ ವಚನ ಪಡೆಯುವನು. ದುಡಿಮೆಗಾಗಿ ಕುಟುಂಬ ಬಿಟ್ಟು ದೂರ ಮತ್ತು ಬಹುಕಾಲ ಹೋಗುವ ಕಸುಬುಗಳ ಮನೋವೈಜ್ಞಾನಿಕ ಸಮಸ್ಯೆಯಿದು. ಇವಕ್ಕೆ ಹೋಲಿಸಿದರೆ ಗಂಡುಹೆಣ್ಣು ಕೂಡಿ ದುಡಿವ ನೇಕಾರಿಕೆ, ಕೃಷಿ, ಕುಲಕಸುಬುಗಳ ಸಮುದಾಯಗಳಲ್ಲಿ ಸ್ತ್ರೀಶಂಕೆಯ ಅಂಶ ಕಡಿಮೆ. ಸೈನಿಕಸಂಸ್ಕೃತಿಯು ಹೆಣ್ಣನ್ನು ರಕ್ಷಿಸುವ ಇಲ್ಲವೇ ಭೋಗಿಸುವ ದೃಷ್ಟಿಕೋನದಲ್ಲೇ ನೋಡುತ್ತದೆ. ವೀರಗಲ್ಲು-ಶಾಸನಗಳು ಕೂಡ ಹೆಣ್ಣನ್ನು ರಕ್ಷಿಸುತ್ತ ಮರಣಪ್ಪುವವರನ್ನು ವೀರ ಎನ್ನುತ್ತವೆ; ಯುದ್ಧದಲ್ಲಿ ಮಡಿದವರಿಗೆ ‘ಜಿತೇನ ಲಭ್ಯತೇ ಲಕ್ಷ್ಮೀ ಮೃತೇನಾಪಿ ಸುರಾಂಗನಾ’ ಎಂದು ಘೋಷಿಸುತ್ತವೆ. ಸೈನ್ಯವು ನಾಗರಿಕ ಸಮಾಜದೊಳಗೆ ಪ್ರವೇಶಿಸಿದಾಗೆಲ್ಲ ಹೆಣ್ಣನ್ನು ಬಲಾತ್ಕರಿಸುವ, ಭೋಗಕ್ಕೆ ಒಳಪಡಿಸುವ ಘಟನೆಗಳು ಘಟಿಸಿವೆ. ಯಾವುದೇ ರಾಜ್ಯವನ್ನು ಗೆದ್ದಾಗ ವಿಜೇತ ಸೈನ್ಯ ಮಾಡುತ್ತಿದ್ದ ಮೊದಲ ಕೆಲಸ, ಸೆರೆಸಿಕ್ಕ ಹೆಣ್ಣುಗಳನ್ನು ಹಂಚಿಕೊಳ್ಳುವುದು. ಸ್ತ್ರೀಯರನ್ನು ಕುರಿತ ಧೋರಣೆಯು ಕ್ಯಾಂಪ್ ಆಫಿಸರನ ವೈಯಕ್ತಿಕ ಸಮಸ್ಯೆಯಾಗಿರಲಿಲ್ಲ.

ಇದನ್ನೂ ಓದಿ: ರಾಜೀವ ತಾರಾನಾಥ: ಜಾತ್ಯತೀತ ಪರಂಪರೆಯ ಮಾತು

ಈ ಪ್ರಕರಣವು ಹಿಮಾಲಯದಲ್ಲಿ ಮಹಿಳೆಯರನ್ನು ಕಾಣುವ ನನ್ನ ನೋಟಕ್ರಮವನ್ನು ರೂಪಿಸಿತು. ವಾಸ್ತವವಾಗಿ ಆಫೀಸರನ ಗ್ರಹಿಕೆಗೆ ವಿರುದ್ಧವಾಗಿ ಸ್ತ್ರೀಲೋಕವಿತ್ತು. ಹಿಮಾಲಯವನ್ನು ಭೇಟಿಮಾಡುವ ಹೊರಗಿನವರಿಗೆ ಮಹಿಳೆಯರ ಶ್ರಮಸಂಸ್ಕೃತಿ ಹೆಜ್ಜೆಹೆಜ್ಜೆಗೆ ಕಾಣತೊಡಗಿತು. ಬೆನ್ನಮೇಲೆ ಹೊರೆಯಿಲ್ಲದ ಹೆಣ್ಣೇ ಇಲ್ಲವೆನ್ನಬಹುದು. ಗೊಬ್ಬರ ಹೊರುವ, ಗೋಧಿ ಸಿವುಡನ್ನು ಕಣಕ್ಕೆ ಅಡಕುವ, ಬಟಾಣಿ, ಗೋಧಿ, ಅಲೂಗೆಡ್ಡೆ, ಭತ್ತದ ಹೊಲಗಳಲ್ಲಿ ಕಳೆಕೀಳುತ್ತ ಕೈಗುದ್ದಲಿಯಿಂದ ಅಗೆಯುತ್ತ ಸೊಪ್ಪು ತರಕಾರಿ ಬಿಡಿಸುತ್ತ, ಇರುವುದನ್ನು ಕಾಣಬಹುದು. ಅವರು ಪರ್ವತಗಳಿಂದ ಸೇಬು, ಸೌದೆ, ಹುಲ್ಲುಹೊರೆ ಹೊತ್ತು ಲಯಬದ್ಧವಾಗಿ ಜೀಕುತ್ತ ಸಾಲುಗಟ್ಟಿ ಬರುತ್ತಿದ್ದರು. ಇದು ಇರುವೆಗಳು ಅಕ್ಕಿಕಾಳು ಹೊತ್ತು ಗೂಡಿಗೆ ಹೋಗುವುದನ್ನು ನೆನಪಿಸುತ್ತಿತ್ತು. ಕೆಲವೊಂದೆಡೆ ತಮ್ಮ ಅಂಗಡಿಗಳಿಗೆ ದೂರದ ಪಟ್ಟಣದಿಂದ ಜಿನಸುಗಳನ್ನು ಅವರು ಹೊತ್ತು ತರುತ್ತಿದ್ದರು. ಎಮ್ಮೆ ದನ ಕುರಿ ಕುದುರೆ ಮೇಯಿಸುವಾಗಲೇ, ಉಣ್ಣೆನೂಲಿನ ಚೆಂಡನ್ನು ಸಿಕ್ಕಿಸಿಕೊಂಡು ಹೆಣಿಗೆ ಮಾಡುತ್ತಿದ್ದರು. ಅವರು ತೇನಸಿಂಗರಂತೆ ಹಿಮಶಿಖರಗಳನ್ನು ಹತ್ತಿ ದಾಖಲೆ ನಿರ್ಮಿಸದೆ ಇರಬಹುದು. ಆದರೆ ದುಡಿಮೆ ತೇನಸಿಂಗ್-ಬಚೇಂದ್ರಿಪಾಲರಿಗೆ ಕಡಿಮೆಯಲ್ಲ. ಹಿಮಾಲಯದ ಏರಿಳಿತದ ಭೌಗೋಳಿಕತೆ, ನಾಟಕೀಯ ಹವಾಮಾನಗಳೇ ಅವರ ದೇಹ ಮತ್ತು ಮನಸ್ಸುಗಳನ್ನು ಸಮರಧೀರಗೊಳಿಸಿರಬಹುದು. ಬೆಟ್ಟಪ್ರದೇಶದಲ್ಲಿ ಮಹಿಳೆಯೇ ಕುಟುಂಬದ ಕೇಂದ್ರ. ಎಂತಲೇ ಅಲ್ಲಿ ಬಹುಪತಿತ್ವವೂ ಇದೆ. ತನ್ನ ಇಚ್ಛೆಯನರಿತ ಗಂಡನ್ನು ವರಿಸುವ ಸ್ವಾತಂತ್ರ್ಯವಿದೆ. ಭಾರತದಲ್ಲಿ ಬಹುಪತಿತ್ವ ಇರುವ ಕೆಲವೇ ಪ್ರದೇಶಗಳಲ್ಲಿ ಹಿಮಾಲಯವೂ ಒಂದು. ಅನೇಕ ಸಮುದಾಯಗಳಲ್ಲಿ ಹೆಣ್ಣು ಸಂತತಿ ಕಡಿಮೆ. ಆಗ ಹಲವಾರು ಅಣ್ಣತಮ್ಮಂದಿರು ಒಬ್ಬಳನ್ನೇ ಮದುವೆಯಾಗುತ್ತಾರೆ. ಈ ಅರ್ಥದಲ್ಲಿ ಅಲ್ಲಿನ ಹೆಂಗಸರು ದ್ರೌಪದಿಯರು. ಇದೂ ಪುರುಷರ ಅಸೂಯೆಗೆ ಒಂದು ಕಾರಣವಿದ್ದೀತು.

ಹಿಮಾಲಯದ ಹೊಲಗಳಲ್ಲಿ ನಾವು ಗಂಡಸರನ್ನು ಕಂಡಿದ್ದು ಕಡಿಮೆ. ಹಂಪಿ ಸೀಮೆಯ ಹಳ್ಳಿಗಳಲ್ಲಿ ಇರುವಂತೆ, ಇಲ್ಲಿಯೂ ಕಟ್ಟೆಗಳ ಮೇಲೆ ಕುಳಿತ ಗಂಡಸರುಂಟು. ಹಿಮಾಲಯದ ಹಿಡುವಳಿಗಳು ಸಣ್ಣವು. ಅಲ್ಲಿ ಬಹಳ ಜನರಿಗೆ ಕೆಲಸವಿರುವುದಿಲ್ಲ. ಕಡಿದಾದ ಜಾಗದಲ್ಲಿ ದನಕೋಣ ಹೂಡಿ ನೇಗಿಲು ಹೊಡೆಯುವುದು ಕಷ್ಟ. ಕುರುಪಿ ಕೈಗುದ್ದಲಿಗಳಲ್ಲೇ ನೆಲ ಅಗೆಯಬೇಕು. ಬೀಜ ಬಿತ್ತಬೇಕು. ಕಳೆತೆಗೆಯಬೇಕು. ಜಮೀನು ಮನೆಯಂಗಳ ಇಲ್ಲವೇ ಹಿತ್ತಿಲುಗಳೇ ಚಾಚಿಕೊಂಡಂತೆ ಲಗತ್ತಾಗಿರುತ್ತದೆ. ಹೀಗಾಗಿ ಮಹಿಳೆಯರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು, ಮರದಡಿ ಕೂರಿಸಿಯೊ ಹೊಲಗೆಲಸ ಮಾಡುತ್ತಾರೆ. ಗಂಡಸರು ಕುರಿಕಾವಲಿಗೆ ಹೋಗುವರು. ಹಿಮಾಲಯದ ಬೇಸಾಯ ಹೆಂಗಸರ ಶ್ರಮದಿಂದಲೇ ನಿಂತಿದೆ. ಉಂಕಿಮಠದ ಸಮೀಪ ಗದ್ದೆಯ ಕೆಲಸ ಮಾಡಿ ವಿಶ್ರಾಂತಿಗಾಗಿ ಬಾಳೆ ಗಿಡದಡಿ ಸುಧಾರಿಸಿಕೊಳ್ಳುತ್ತಿದ್ದ ಮಹಿಳೆಯರ ಚಿತ್ರವನ್ನು ಸೆರೆಹಿಡಿಯಲು ಯತ್ನಿಸಿದೆ. ನಾಚಿಕೆಯಿಂದ ಗಿಡದ ಮೆರೆಗೆ ಸರಿದರು. ಒಮ್ಮೆ ಪಾರ್ವತಿ ನದಿಕಣಿವೆಯಲ್ಲಿ ಬರುವ ಫುಲಾನ್ ಎಂಬ ಹಳ್ಳಿಯಲ್ಲಿ ನಮ್ಮ ರಾತ್ರಿ ವಸತಿಯಿತ್ತು. ಹಗಲು ಹದಿನೈದು ಕಿಮೀ ನಡಿಗೆಯಾಗಿದ್ದರಿಂದ, ‘ಮೈಯೆ ಭಾರ ಮನವೆ ಭಾರ’ವಾಗಿತ್ತು. ಹೆಣಗಳಂತೆ ಬಿದ್ದುಕೊಂಡೆವು. ಗಾಜಿನ ಕಿಟಕಿಯಿಂದ ಮಂದವಾದ ಬೆಳಕು ನುಗ್ಗುವಾಗಲೇ ತಿಳಿಯಿತು ಇರುಳು ಮುಗಿಯಿತೆಂದು. ಬೆಳಿಗ್ಗೆಯೆ ಎದ್ದು ಪಾರ್ವತಿ ಕಣಿವೆಯ ಸೂರ್ಯೋದಯ ನೋಡಲು ಮನಸ್ಸಾಯಿತು. ದೇಹ ಏಳಲು ನಿರಾಕರಿಸುತ್ತಿತ್ತು. ಸೇಬುತೋಟದಲ್ಲಿದ್ದ ಬುಲ್‌ಬುಲ್‌ಗಳ ಚೀಚೀಕ್ ಆಲಿಸುತ್ತ, ಸೂರನ್ನು ನೋಡುತ್ತ ಬಿದ್ದುಕೊಂಡಿದ್ದೆ. ತೋಟದಲ್ಲಿ ಗುದ್ದಲಿ ಸದ್ದು ಲಯಬದ್ಧವಾಗಿ ಕೇಳಿಸಿತು. ಕಿಟಕಿಯಲ್ಲಿ ಇಣುಕಿದೆ. ಮಹಿಳೆಯೊಬ್ಬಳು ಸೇಬುತೋಟದ ಬದುವಿನ ಅಂಚನ್ನು ಸವರುತ್ತಿದ್ದಳು. ತಿನ್ನುವವರ ಹೆಸರು ಕಾಳಮೇಲೆ ಬರೆದಿರುತ್ತದೆಯಂತೆ. ಬೆಳೆದವರ ಹೆಸರೇನಾದರೂ ಹಣ್ಣುಕಾಯಿಗಳ ಮೇಲೆ ಬರೆದಿರುತ್ತಿದ್ದರೆ ಅವುಗಳಲ್ಲಿ ಹಿಮಾಲಯದ ಮಹಿಳೆಯರ ಹೆಸರಲ್ಲಿರುತ್ತಿದ್ದವು. ನಮಗೆ ಬರುವ ಕೇಸರಿಯಲ್ಲಿ, ಸೇಬಿನ ರುಚಿಯಲ್ಲಿ ಹಿಮಾಲಯದ ಮಹಿಳೆಯರ ಶ್ರಮವಿದೆ.

ನಗರಗಳಲ್ಲಿ ರಾತ್ರಿ ಎಂಟರ ಮೇಲೆ ಮಹಿಳೆಯರು ತಿರುಗುವುದು ಅಪಾಯಕರ ಎಂದು ನೈತಿಕವಾದಿಗಳು ಅಪ್ಪಣೆ ಕೊಡಿಸುತ್ತಾರೆ. ಆದರೆ ಹಿಮಾಲಯದಲ್ಲಿ ನಿರ್ಜನ ಕಾಡಿನಲ್ಲೂ ಮಹಿಳೆಯರು ಏಕಾಂಗಿಯಾಗಿ ಸುತ್ತುತ್ತಾರೆ. ಅದು ಅನಿವಾರ್ಯ ಕೂಡ. ನಾವೊಮ್ಮೆ ಪಿನ್ನಿ ಎಂಬ ಹಳ್ಳಿಯ ಹೊರಗೆ, ದುರ್ಗಮ ಪರ್ವತದ ಕಿಬ್ಬದಿಯಲ್ಲಿ ಹೊಳೆ ಹುಟ್ಟುವ ಜಾಗದಲ್ಲಿ ಬೀಡುಬಿಟ್ಟಿದ್ದೆವು. ಸೂರ್ಯ ಹುಟ್ಟುವುದನ್ನು ನೋಡಲೆಂದು ಎದ್ದರೆ, ಗೋಡೆಯಂತೆ ನಮ್ಮೆದುರಿಗೆ ನಿಂತಿರುವ ಕಲ್ಲಿನ ಪಾರ್ಶ್ವ ಮಾತ್ರ ಕಂಡಿತು. ಅದರ ಮೇಲೆ ಗಿಡಮರ ಬೆಳೆದಿದ್ದವು. ಅವಕ್ಕೆ ನೀರು ಹೇಗೆ ಸಿಗುತ್ತದೆ, ಬೇರು ಹೇಗೆ ಬಿಡುತ್ತವೆ ಎಂದು ಸೋಜಿಗದಿಂದ ನೋಡುತ್ತಿದ್ದೆ. ಒಬ್ಬಾಕೆ ಮೇಕೆ ಅಟ್ಟಿಕೊಂಡು ಹಳ್ಳಿಯ ಕಡೆಯಿಂದ ಬಂದಳು. ದುರ್ಗಮವಾದ ಪರ್ವತದ ಸಂದಿಗೊಂದಿಗಳಲ್ಲಿ ಹತ್ತಿ ಹಾದಿ ಹಿಡಿದು ಮೇಕೆಗಳ ಸಮೇತ ನೋಡುತ್ತಲೇ ಮರೆಯಾದಳು. ಒಮ್ಮೆ ಢಿನಾಳಿ ಎಂಬಲ್ಲಿ ಊರಹೊರಗಿದ್ದ ಬೃಹತ್ ಮರದಡಿ ಕುಳಿತು ಕಟ್ಟಿಕೊಂಡು ತಂದ ಬುತ್ತಿ ಉಣ್ಣಬೇಕಾಯಿತು. ಊರಿನ ಹೆಂಗಸರು ನಮ್ಮನ್ನು ನೋಡಲೆಂದು ಸೇರಿದರು. ಕೈಯಲ್ಲಿ ಕೈಗೂಸುಗಳಿದ್ದವು. ಉಣ್ಣೆಯ ಹೆಣಿಗೆ ಮಾಡುತ್ತಲೇ ಇದ್ದರು. ಭಾರತದ ಕೊನೆಯ ಹಳ್ಳಿ ಮಲಾನದಲ್ಲಿ, ಮನೆಯ ಜಗುಲಿಯಲ್ಲಿ ಟೆರೇಸಿನ ಮೇಲೆ ನೂಲುತ್ತ ಹೆಣಿಗೆ ಮಾಡುತ್ತ ಕುಲಾವಿ ಮಾರುತ್ತ ಕುಳಿತ, ಮನೆಯಂಗಳದಲ್ಲಿ ತರಕಾರಿ ಬೆಳೆಯುತ್ತ ಅಜ್ಜಿಯರು ವಿಶೇಷವಾಗಿರುವರು. ಕೆಲವರು ಒನಕೆಯಲ್ಲಿ ಏನನ್ನೊ ಒರಳಿಗೆ ಹಾಕಿ ಕುಟ್ಟುತ್ತಿರುವ ಸದ್ದು ಕೇಳುತ್ತದೆ. ಕುರಿಗಾಹಿಗಳಾಗಿ ಗಂಡಸರು, ತರುಣಿಯರು ಕಾಡಿಗೆ ಹೋದರೆ, ಊರುಮನೆಯನ್ನು ಇವರು ಸಂಭಾಳಿಸುವವರು. ಇವರು ತಮ್ಮ ಕ್ರಿಯಾಶೀಲತೆಯನ್ನು ದುಡಿಮೆಯಲ್ಲೇ ಕಂಡುಕೊಂಡಂತೆ ಭಾಸವಾಗುತ್ತದೆ.

ಇದನ್ನೂ ಓದಿ: ಗಾಂಧಿ ಸ್ಮರಣೆಯ ಕೆಲವು ವೈರುಧ್ಯಗಳು

ನಗರೋಣಿಯಲ್ಲಿ ಕಂಡ ಒಂದು ರೈತ ದಂಪತಿ ಸಿನಿಮಾ ತಾರೆಯರಂತಿದ್ದರು. ಅವರ ಹೊಲ ಹನ್ನೆರಡು ಸಾವಿರ ಅಡಿ ಎತ್ತರದಲಿತ್ತು. ಸುತ್ತಮುತ್ತ ಹಿಮಪರ್ವತ. ನಡುವೆ ಹೊಲ-ಮನೆ. ಬೇಸಿಗೆಯ ನಡುಹಗಲಲ್ಲೇ ಐದು ಡಿಗ್ರಿ ಚಳಿ. ಚಳಿಗಾಲ ಹೇಗಿದ್ದೀತು? ಪಾರ್ವತಿ ನದಿಯ ದಡದಲ್ಲಿ ಮಣಿಕರ್ಣಿಕಾಗೆ ಹೋಗುತ್ತಿರುವಾಗ ಒಂದು ಮನೆಯಂಗಳದಲ್ಲಿ ಗೋಧಿಹುಲ್ಲನ್ನು ಕೋಲುಗಳಿಂದ ಬಡಿಯುತ್ತ ಧಾನ್ಯವನ್ನು ಬೇರ್ಪಡಿಸುತ್ತಿದ್ದ ಮಹಿಳೆ ಅಪ್ರತಿಮ ಚೆಲುವೆಯಾಗಿದ್ದಳು. ಬಾನು ಕೂಡ ಆಕೆಯನ್ನು ಕಣ್ಮಿಸುಕದೆ ನೋಡಿದಳು. ಹಾದಿಹೋಕರಾದ ನಮ್ಮತ್ತ ಆಕೆ ತಿರುಗಿಯೂ ನೋಡಲಿಲ್ಲ. ಹಿಮಾಲಯದ ಮಹಿಳೆಯರು ಕಾಡುಹೂಗಳಂತೆ. ತಮ್ಮ ಸಹಜ ಸೌಂದರ್ಯದ ಅರಿವೇ ಇಲ್ಲದಂತೆ ದುಡಿಯುತ್ತಿರುತ್ತಾರೆ. ಅವರನ್ನು ದುಡಿಮೆಯೇ ಸುಂದರವಾಗಿಸಿದೆ.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುಷ್ಯ ಸ್ವಾರ್ಥಿ, ಗಂಡು, ಬಸಿರು ಬಾಣಂತನ, ಮಗುವಿನ ಆರೈಕೆ ಇತ್ಯಾದಿ ಕೋಟಿ ಕೆಲಸಗಳ ಹೊರೆ ಇಲ್ಲದೆ ಬದುಕುವ ಅಪರಿಮಿತ ಸ್ವತಂತ್ರ ಜೀವಿ, ತಾನು ತನ್ನ ಕೆಲಸ ಸಾಧನೆ ಆಕಾಂಕ್ಷೆ ಗುರಿಗಳಲ್ಲಿ ಮೈಮರೆತು ತನ್ನ ಸಹಜೀವಿ ಹೆಣ್ಣನ್ನ ಕಾಲುಕಸ ಮಾಡಿಕೊಂಡು ಅವಳ ಮೇಲೆ ಪಾವಿತ್ರ್ಯ ಶೀಲ ಮರ್ಯಾದೆಗಳನ್ನ ಹೊರಿಸಿ ರೂಡಿ ಸಂಪ್ರದಾಯ ಹಾಡು ಹಸೆಗಳ ಮೂಲಕ ಅದನ್ನ ಶಾಶ್ವತೀಕರಿಸಿದ್ದಾನೆ. ಶತಮಾನಗಳೆ ಉರುಳಿದರೂ ಹೆಣ್ಣಿನ ಶ್ರಮ ನೈಪುಣ್ಯತೆ ಜಾಣತನಗಳು ಪ್ರತಿಭೆ ಕಲಾವಂತಿಕೆ ಯಾವುದಕ್ಕೂ ಬೆಲೆ ಇಲ್ಲ.
    ಸರೋಜ m s
    ಸಾಗರ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...