Homeಮುಖಪುಟಖಾಸಗೀ ವಾಹನಗಳಲ್ಲಿ ಪ್ರಯಾಣ : ಹೆಚ್ಚು ಹಣ ವಸೂಲಿಗೆ ಸಾರಿಗೆ ಸಚಿವರ ಖಡಕ್ ವಾರ್ನಿಂಗ್

ಖಾಸಗೀ ವಾಹನಗಳಲ್ಲಿ ಪ್ರಯಾಣ : ಹೆಚ್ಚು ಹಣ ವಸೂಲಿಗೆ ಸಾರಿಗೆ ಸಚಿವರ ಖಡಕ್ ವಾರ್ನಿಂಗ್

- Advertisement -
- Advertisement -

ಕೊರೊನಾ ಭೀತಿಯಿಂದ 9 ಜಿಲ್ಲೆಗಳನ್ನು ಲಾಕ್ ಡೌನ್ ಮಾಡಿದರೂ ಜನ ನಿರ್ಲಕ್ಷ್ಯ ತೋರುತ್ತಿರುವುದು ಸಾಕಷ್ಟು ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ಜನ ಗುಂಪುಗುಂಪಾಗಿ ಓಡಾಡುತ್ತಿರುವುದಕ್ಕೆ ವೈರಸ್ ಹರಡುವ ಆತಂಕ ಅಧಿಕವಾಗುತ್ತಿದೆ. ಈ ಸಂದರ್ಭವನ್ನೇ ಬಂಡವಾಳವನ್ನಾಗಿಸಿಕೊಂಡ ಖಾಸಗೀ ವಾಹನ ಮಾಲೀಕರು ದುಪ್ಪಟ್ಟು ಹಣ ವಸೂಲಿ ಮಾಡಿಕೊಳ್ಳುತ್ತಿದ್ದಾರೆ.

ಹೌದು.. ಕೊರೊನಾ ಹರಡುವ ಹಿನ್ನೆಲೆಯಲ್ಲಿ ಸರ್ಕಾರ ಸರ್ಕಾರಿ ಸಾರಿಗೆ ಹಾಗೂ ರೈಲು ಸಂಚಾರ ಬಂದ್ ಮಾಡಿದೆ. ಆದರೆ ಖಾಸಗಿ ಬಸ್ ಮಾಲೀಕರು ಇದೇ ಸಂದರ್ಭವನ್ನು ಬಳಸಿಕೊಂಡು ವಸೂಲಿಗಿಳಿದ್ದಿದ್ದಾರೆ. ಖಾಸಗೀ ಬಸ್ ಗಳಲ್ಲಿ ಜನ ಎಗ್ಗಿಲ್ಲದೇ ಪ್ರಯಾಣ ಬೆಳೆಸಿದ್ದಾರೆ. ಯಾವುದೇ ಹ್ಯಾಂಡ್ ಸ್ಯಾನಿಟೈಸರ್ ಇಲ್ಲ, ಮಾಸ್ಕ್ ಇಲ್ಲ. ಮುಂಜಾಗೃತ ಕ್ರಮವಾಗಿ ಖಾಸಗೀ ಬಸ್ ಗಳನ್ನೂ ವಾಶ್ ಮಾಡಲಾಗಿದಿಯೋ ಇಲ್ವೋ ಗೊತ್ತಿಲ್ಲ… ಬಸ್ ಟಾಪ್ ಮೇಲೆ ಹತ್ತಿ ಕುಳಿತು ಜನ ಪ್ರಯಾಣ ಮಾಡುತ್ತಿದ್ದಾರೆ. ಗುಂಪಾಗಿ ಜನ ಸೇರುವಂತಿಲ್ಲ ಎಂದು ಸರ್ಕಾರದ ಆದೇಶವಿದ್ದರೂ, ದೂರದ ಜಿಲ್ಲೆಗಳಿಗೆ ಜನ ಖಾಸಗೀ ಬಸ್ ಗಳಲ್ಲಿ ಹಿಂಡು ಹಿಂಡಾಗಿ ಪ್ರಯಾಣ ಮಾಡುತ್ತಿದ್ದಾರೆ.

ಈ ಬಗ್ಗೆ ಮಾದ್ಯಮದೊಂದಿಗೆ ಮಾತನಾಡಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಖಾಸಗೀ ವಾಹನಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. “ಒಂದು ವೇಳೆ ಖಾಸಗೀ ವಾಹನಗಳು ಹೆಚ್ಚು ಹಣ ವಸೂಲಿ ಮಾಡುವುದು ಕಂಡು ಬಂದರೆ, ವಾಹನ ಮಾಲೀಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಜನ ಹೀಗೆ ತುಂಬಾ ನಿರ್ಲಕ್ಷ್ಯದಿಂದಿದ್ದಾಗ ಒಂದು ವೇಳೆ ಜನರಲ್ಲಿ ಓರ್ವ ವ್ಯಕ್ತಿ ಸೋಂಕಿತನಿದ್ದರೆ ಸಾಕು ಅಷ್ಟೂ ಜನಕ್ಕೂ ಸೋಂಕು ಹರಡುವ ಸಾಧ್ಯತೆ ಇದೆ.

ಇನ್ನೂ ಬೇರೆ ದೇಶಗಳಲ್ಲಿ ಯಾವ ಮಟ್ಟಿಗೆ ಜನ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎಂದರೆ ಆಸ್ಪತ್ರೆಯಲ್ಲಿ ದಾಖಲಾಗುವುದಕ್ಕೂ ಕ್ಯೂ ನಲ್ಲಿ ನಿಲ್ಲಬೇಕಾದ ಸ್ಥತಿ ಇದೆ. ಹೀಗಿರಬೇಕಾದ್ರೆ ಭಾರತದಲ್ಲಿ ಇಂತಹ ಸ್ಥಿತಿ ಬಂದರೆ ಚಿಕಿತ್ಸೆ ಇಲ್ಲದೇ ಸಾಯುವಂತಹ ಪರಿಸ್ಥಿತಿ ಇದೆ. ಈ ಮೊದಲೇ ಕೊರೊನಾ ವೈರಸ್ ಗೆ ಚಿಕಿತ್ಸೆ ಇಲ್ಲ. ಹೀಗಿದ್ದರೂ ರಾಜ್ಯದಲ್ಲಿ ಜನ ಇಷ್ಟೊಂದು ನಿರ್ಲಕ್ಷ್ಯ ಮಾಡುತ್ತಿರುವುದು ಆತಂಕ ಸೃಷ್ಟಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...