Homeಮುಖಪುಟಮೋದಿ ಆಪ್ತ ಮುಖೇಶ್‌‌ರ ವಿಮಲ್ ಗುಟ್ಕಾ ಕಂಪನಿಯಿಂದ ಕನ್ನಡಿಗರಿಗೆ ಮಹಾದ್ರೋಹ

ಮೋದಿ ಆಪ್ತ ಮುಖೇಶ್‌‌ರ ವಿಮಲ್ ಗುಟ್ಕಾ ಕಂಪನಿಯಿಂದ ಕನ್ನಡಿಗರಿಗೆ ಮಹಾದ್ರೋಹ

ಸ್ಪೆಷಲ್ ಪ್ರೊಟಕ್ಷನ್ ಗ್ರೂಪ್ ರಾಜ್ಯದ ಘಟಾನುಘಟಿ ನಾಯಕರನ್ನೇ ಕ್ಯಾರೇ ಅನ್ನದಿದ್ದಾಗ ಮುಖೇಶ್ ಪ್ರಧಾನಿಯ ಆಪ್ತರಲ್ಲಿ ಗುರುತಿಸಿಕೊಂಡು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದರು.

- Advertisement -
- Advertisement -

ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಮಲ್ ಗುಟ್ಕಾ ತಯಾರಿಕಾ ಕಂಪನಿಯಲ್ಲಿ  ಕೆಲಸ ಮಾಡುವವರೆಲ್ಲರೂ ಹೊರ ರಾಜ್ಯದವರೇ ಆಗಿದ್ದಾರೆ. ವಿಎನ್ ಮತ್ತು VSNನ ಐದು ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು ಇದರಲ್ಲಿ ಸುಮಾರು ಬೆರಳೆಣಿಕೆಯಷ್ಟು ಜನ ಕನ್ನಡಿಗರಿಗೆ ಉದ್ಯೋಗ ಸಿಕ್ಕಿದೆ. 20 ಜನ ಮಂದಿ ಸ್ಥಳೀಯರು ಅಂದರೆ ಕರ್ನಾಟಕದವರು ಕೆಲಸ ನಿರ್ವಹಿಸುತ್ತಿದ್ದು ಇವರನ್ನು ಚರಂಡಿ ಸ್ವಚ್ಚಗೊಳಿಸಲು ಮಾತ್ರ ಬಳಿಸಕೊಳ್ಳಲಾಗುತ್ತಿದೆ. ಗುಟ್ಕಾ ತಯಾರಿಕೆ ಮತ್ತ ಪಾನ್ ಮಸಾಲಾ ತಯಾರಿಕೆ ಘಟಕಗಳು ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿಗೆ ನೂರು ಕಿಲೋಮೀಟರ್ ದೂರದಲ್ಲಿದ್ದರೂ ಕನ್ನಡಿಗರಿಗೆ ಮಾತ್ರ ಕೆಲಸ ನೀಡದೆ ದ್ರೋಹ ಎಸಗಲಾಗಿದೆ.

ವಿಎನ್ ಮತ್ತು ವಿ.ಎಸ್.ಎನ್ ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಕಾ ಘಟಕಗಳು ದೆಹಲಿಯ ಮುಖೇಶ್‌ ಎಂಬ ಮಾರ್ವಾಡಿಗೆ ಸೇರಿದವು. ತುಮಕೂರಿನಿಂದಲೇ ಇಡೀ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗೂ ವಿಎನ್, ವಿಎನ್ಎಸ್ ಗುಟ್ಕಾ ಮತ್ತು ಪಾನ್ ಮಸಾಲಾ ಪೂರೈಕೆ ಮಾಡುವ ಅತ್ಯಂತ ದೊಡ್ಡ ಕಂಪನಿ ಇದಾಗಿದೆ ಗುಟ್ಕಾ ಮತ್ತು ಪಾನ್ ಮಸಾಲವನ್ನು ದಕ್ಷಿಣದವರಿಗೆ ತಿನ್ನಿಸಿ ಕರ್ನಾಟದ ಕನ್ನಡಿಗರಿಗೆ ಕೆಲಸವನ್ನು ನೀಡದೆ ಇಲ್ಲಿಂದ ಹಣವನ್ನು ದೋಚುತ್ತಿದ್ದಾರೆ. ಪ್ರಮುಖ ಹುದ್ದೆಗಳೆಲ್ಲ ಉತ್ತರಭಾರತೀಯರ ಪಾಲಾಗಿದೆ. ಕೇವಲ ಕಸ ಗುಡಿಸುವ, ಚರಂಡಿ ಶುಚಿಗೊಳಿಸುವಂತಹ ಕೆಲಸಗಳನ್ನು ಸ್ಥಳೀಯರಿಗೆ ನೀಡಿದ್ದರೂ ಯಾರು ದನಿ ಎತ್ತುತ್ತಿಲ್ಲ.

ಯಾವುದೇ ಕಂಪನಿ ಆರಂಭಿಸಿದರೂ ಸ್ಥಳೀಯರಿಗೆ ಆದ್ಯತೆ ನೀಡಬೇಕೆಂಬ ನಿಯಮವಿದೆ. ಡಾ.ಸರೋಜಿನಿ ಮಹಿಷಿ ವರದಿ ಪ್ರಕಾರ ಸ್ಥಳೀಯರಿಗೆ ಹೆಚ್ಚಿನ ಪ್ರಾಧ್ಯಾನ್ಯತೆ ನೀಡಬೇಕು. ಆದರೆ ಈ ನಿಯಮಗಳನ್ನು ಗಾಳಿಗೆ ತೂರಿರುವ ಕಂಪನಿ ಮಾಲಿಕ ಮುಖೇಶ್‌ ರಾಜ್ಯದ ನೆಲ, ಜಲ, ವಿದ್ಯುತ್ ಎಲ್ಲವನ್ನೂ ಕರ್ನಾಟಕ ಸರ್ಕಾರದಿಂದಲೇ ಪಡೆದುಕೊಂಡಿದ್ದರೂ ಇಲ್ಲಿ ಕನ್ನಡಗರನ್ನು ಉದ್ಯೋಗಕ್ಕೆ ತೆಗೆದುಕೊಳ್ಳದೆ ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಐದು ಘಟಕಗಳಲ್ಲಿ ಸುಮಾರು 1000 ಸಾವಿರಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದಾರೆ. ಈ ಉದ್ಯೋಗಗಳೆಲ್ಲವೂ ಉತ್ತರ ಭಾರತೀಯರ ಪಾಲಾಗಿವೆ. ಬೆರಳೆಣಿಕೆಯಲ್ಲಿರುವ ಕನ್ನಡಿಗರನ್ನು ಕಡಿಮೆ ಸಂಬಳಕ್ಕೆ ದುಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಮುಖೇಶ್ ದೆಹಲಿಯ ದೊಡ್ಡ ಕುಳ. ಈತ ಪ್ರಧಾನಿ ನರೇಂದ್ರ ಮೋದಿಯ ಆಪ್ತರಲ್ಲೊಬ್ಬ. ಇದೇ ಕಾರಣಕ್ಕೆ ಇತ್ತೀಚೆಗೆ  ಪ್ರಧಾನಿ ನರೇಂದ್ರ ಮೋದಿ ತುಮಕೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸಿದ್ದಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈತ ಪ್ರಧಾನಿ ಪಕ್ಕದಲ್ಲೇ ಇದ್ದುದು ಗಮನಿಸಬೇಕಾದ ಸಂಗತಿ. ಕರ್ನಾಟಕದ  ಉಪಮುಖ್ಯಮಂತ್ರಿಗಳಿಗೆ ಪ್ರಧಾನಿ ಪಕ್ಕ ಕುಳಿತುಕೊಳ್ಳಲು ಮತ್ತು ವೇದಿಕೆ ಹಂಚಿಕೊಳ್ಳಲು ಸಾಧ್ಯವಾಗದೇ ಇರುವಾಗ ಒಬ್ಬ ಉದ್ಯಮಿ ಅದೂ ವಿಮಲ್ ಗುಟ್ಕಾ ಮತ್ತು ಪಾನ್ ಮಸಾಲಾ ಕಂಪನಿಯ ಮಾಲಿಕ ಪ್ರಧಾನಿ ಜೊತೆ ವೇದಿಕೆ ಏರುತ್ತಾನೆ ಎಂದರೆ ಆತನ ಪ್ರಭಾವ ಎಷ್ಟಿರಬೇಕೆಂಬುದನ್ನು ಊಹಿಸಿಕೊಳ್ಳಿ. ಸ್ಪೆಷಲ್ ಪ್ರೊಟಕ್ಷನ್ ಗ್ರೂಪ್ ರಾಜ್ಯದ ಘಟಾನುಘಟಿ ನಾಯಕರನ್ನೇ ಕ್ಯಾರೇ ಅನ್ನದಿದ್ದಾಗ ಮುಖೇಶ್ ಪ್ರಧಾನಿಯ ಆಪ್ತರಲ್ಲಿ ಗುರುತಿಸಿಕೊಂಡು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದರು.

ಬಲದಿಂದ ಮೂರನೇಯ ವ್ಯಕ್ತಿ ಮುಖೇಶ್‌

ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿರುವ ವಿಎನ್ ಮತ್ತು ವಿ.ಎಸ್.ಎನ್  ಕಂಪನಿ ಇಡೀ ದಕ್ಷಿಣ ಭಾರತದ ಗುಟ್ಕಾ ಮತ್ತು ಪಾನ್ ಮಸಾಲಾ ಪೂರೈಕೆದಾರ ಎಂದರೆ ಈತ ಆದಾಯ ಎಷ್ಟಿರಬೇಡ. ನೂರಾರು ಕೋಟಿಗಳ ವಹಿವಾಟು ತಿಂಗಳಲ್ಲಿ ನಡೆದುಹೋಗುತ್ತದೆ. ಇಂತಹ ದೊಡ್ಡ ಕುಳ ಪ್ರಧಾನಿ ಭಾಗವಹಿಸಿದ್ದ ವೇದಿಕೆಯಲ್ಲಿ ಮಿಂಚಿಹೋದರು. ಬಿಜೆಪಿಗೆ ಫಂಡು ನೀಡುವಲ್ಲಿ ಈತನೂ ಒಬ್ಬ ಎನ್ನುತ್ತವೆ ಮೂಲಗಳು. ಅದೇ ಕಾರಣಕ್ಕೆ ವೇದಿಕೆಯಲ್ಲಿ ಎಲ್ಲರಿಗಿಂತ ಹೆಚ್ಚು ಕಾಣಿಸಿಕೊಂಡಿದ್ದು ಮುಖೇಶ್. ಈತನ ಕಂಪನಿಯಲ್ಲಿ ಕನ್ನಡಿಗರು ಕಸ ಹೊಡೆಯುವುದಕ್ಕೆ ಮಾತ್ರ ಸೀಮಿತರಾಗಿದ್ದಾರೆ. ಅಂದರೆ ಅವರಿಗೆ ಸಂಬಳವೆಂದು ಬರುವುದು ಆರೇಳು ಸಾವಿರ. ಇಂತಹ ತಾರತಮ್ಯಕ್ಕೆ ಸ್ಥಳೀಯ ಕಾರ್ಮಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ನಿತ್ಯವೂ ಕೋಟ್ಯಂತರ ವಹಿವಾಟು ನಡೆಯುತ್ತಿದ್ದರೂ ಸೇಲ್ ಟ್ಯಾಕ್ಸ್ ಅಧಿಕಾರಿಗಳು ಮೌನ ವಹಿಸಿ ಕುಳಿತಿದ್ದಾರೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬಂದಿವೆ. ವಾರಕ್ಕೊಮ್ಮೆಯಾದರೂ ಭೇಟಿ ನೀಡಿ ಸೆಲ್ಸ್ ಟ್ಯಾಕ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಆದರೆ ಬಂದ ಅಧಿಕಾರಿಗಳಿಗೆ “ಒಳ್ಳೆಯ” ಊಟ, ಚಹ ಕೊಟ್ಟು ಮೇಲೆ ಅಧಿಕಾರಿಗಳು ಮತ್ತು ಗಮ್ಮತ್ತಿನಿಂದ ಹಿಂದಿರುಗುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ನೌಕರರು ಹೇಳುತ್ತಾರೆ.

ಮೊನ್ನೆಮೊನ್ನೆ ಚಿಕ್ಕಬಳ್ಳಾಪುರದಲ್ಲಿ ಗುಟ್ಕಾ ಚೀಲಗಳು ದೊರೆತಿದ್ದು ಆ ಗುಟ್ಕಾ ಮೌಲ್ಯ ಸುಮಾರು 50 ಸಾವಿರ ರೂಪಾಯಿಗೂ ಹೆಚ್ಚು. ಗುಟ್ಕಾದ ಮಾಲಿಕ ಅಲ್ಲಿಯೇ ಇದ್ದ. ಅವುಗಳನ್ನು ತನ್ನವು ಎಂದರೆ ಟ್ಯಾಕ್ಸ್ ಕಟ್ಟಬೇಕಾಗಿದೀತು ಎಂಬ ಕಾರಣಕ್ಕೆ ಆತ ಅಧಿಕಾರಿಗಳ ಮುಂದೆ ಬಂದಿಲ್ಲ ಎನ್ನುತ್ತಾರೆ ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಕೆಯನ್ನು ಹತ್ತಿರದಿಂದ ಬಲ್ಲವರು.

ವಿಎನ್ ಮತ್ತು ವಿ.ಎಸ್.ಎನ್ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ ಘಟಕಗಳು ತುಮಕೂರು ಬಿಟ್ಟರೆ ಅಹಮದಾಬಾದ್ ಮತ್ತು ನೋಯಿಡಾದಲ್ಲಿಯೂ ಇವೆ ಎಂದು ಹೇಳಲಾಗುತ್ತಿದೆ. ಕಂಪನಿ ಕರ್ನಾಟಕದಲ್ಲಿದ್ದರೂ ಕನ್ನಡಿಗರಿಗೆ ಕೆಲಸ ಸಿಕ್ಕಿಲ್ಲ. ಕಂಪನಿ ಸ್ಥಾಪಿಸುವಾಗ ಸ್ಥಳೀಯರಿಗ ಉದ್ಯೋಗ ಕೋಡುತ್ತೇನೆ ಎಂದು ಬೂಸಿ ಬಿಟ್ಟಿದ್ದ ಈತ ಕನ್ನಡಿಗರು ಕೆಲಸ ಕೇಳಿದರೂ ಕೊಡದೇ ವಂಚಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...