Homeಮುಖಪುಟಮೋದಿ ಆಪ್ತ ಮುಖೇಶ್‌‌ರ ವಿಮಲ್ ಗುಟ್ಕಾ ಕಂಪನಿಯಿಂದ ಕನ್ನಡಿಗರಿಗೆ ಮಹಾದ್ರೋಹ

ಮೋದಿ ಆಪ್ತ ಮುಖೇಶ್‌‌ರ ವಿಮಲ್ ಗುಟ್ಕಾ ಕಂಪನಿಯಿಂದ ಕನ್ನಡಿಗರಿಗೆ ಮಹಾದ್ರೋಹ

ಸ್ಪೆಷಲ್ ಪ್ರೊಟಕ್ಷನ್ ಗ್ರೂಪ್ ರಾಜ್ಯದ ಘಟಾನುಘಟಿ ನಾಯಕರನ್ನೇ ಕ್ಯಾರೇ ಅನ್ನದಿದ್ದಾಗ ಮುಖೇಶ್ ಪ್ರಧಾನಿಯ ಆಪ್ತರಲ್ಲಿ ಗುರುತಿಸಿಕೊಂಡು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದರು.

- Advertisement -
- Advertisement -

ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಮಲ್ ಗುಟ್ಕಾ ತಯಾರಿಕಾ ಕಂಪನಿಯಲ್ಲಿ  ಕೆಲಸ ಮಾಡುವವರೆಲ್ಲರೂ ಹೊರ ರಾಜ್ಯದವರೇ ಆಗಿದ್ದಾರೆ. ವಿಎನ್ ಮತ್ತು VSNನ ಐದು ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು ಇದರಲ್ಲಿ ಸುಮಾರು ಬೆರಳೆಣಿಕೆಯಷ್ಟು ಜನ ಕನ್ನಡಿಗರಿಗೆ ಉದ್ಯೋಗ ಸಿಕ್ಕಿದೆ. 20 ಜನ ಮಂದಿ ಸ್ಥಳೀಯರು ಅಂದರೆ ಕರ್ನಾಟಕದವರು ಕೆಲಸ ನಿರ್ವಹಿಸುತ್ತಿದ್ದು ಇವರನ್ನು ಚರಂಡಿ ಸ್ವಚ್ಚಗೊಳಿಸಲು ಮಾತ್ರ ಬಳಿಸಕೊಳ್ಳಲಾಗುತ್ತಿದೆ. ಗುಟ್ಕಾ ತಯಾರಿಕೆ ಮತ್ತ ಪಾನ್ ಮಸಾಲಾ ತಯಾರಿಕೆ ಘಟಕಗಳು ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿಗೆ ನೂರು ಕಿಲೋಮೀಟರ್ ದೂರದಲ್ಲಿದ್ದರೂ ಕನ್ನಡಿಗರಿಗೆ ಮಾತ್ರ ಕೆಲಸ ನೀಡದೆ ದ್ರೋಹ ಎಸಗಲಾಗಿದೆ.

ವಿಎನ್ ಮತ್ತು ವಿ.ಎಸ್.ಎನ್ ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಕಾ ಘಟಕಗಳು ದೆಹಲಿಯ ಮುಖೇಶ್‌ ಎಂಬ ಮಾರ್ವಾಡಿಗೆ ಸೇರಿದವು. ತುಮಕೂರಿನಿಂದಲೇ ಇಡೀ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗೂ ವಿಎನ್, ವಿಎನ್ಎಸ್ ಗುಟ್ಕಾ ಮತ್ತು ಪಾನ್ ಮಸಾಲಾ ಪೂರೈಕೆ ಮಾಡುವ ಅತ್ಯಂತ ದೊಡ್ಡ ಕಂಪನಿ ಇದಾಗಿದೆ ಗುಟ್ಕಾ ಮತ್ತು ಪಾನ್ ಮಸಾಲವನ್ನು ದಕ್ಷಿಣದವರಿಗೆ ತಿನ್ನಿಸಿ ಕರ್ನಾಟದ ಕನ್ನಡಿಗರಿಗೆ ಕೆಲಸವನ್ನು ನೀಡದೆ ಇಲ್ಲಿಂದ ಹಣವನ್ನು ದೋಚುತ್ತಿದ್ದಾರೆ. ಪ್ರಮುಖ ಹುದ್ದೆಗಳೆಲ್ಲ ಉತ್ತರಭಾರತೀಯರ ಪಾಲಾಗಿದೆ. ಕೇವಲ ಕಸ ಗುಡಿಸುವ, ಚರಂಡಿ ಶುಚಿಗೊಳಿಸುವಂತಹ ಕೆಲಸಗಳನ್ನು ಸ್ಥಳೀಯರಿಗೆ ನೀಡಿದ್ದರೂ ಯಾರು ದನಿ ಎತ್ತುತ್ತಿಲ್ಲ.

ಯಾವುದೇ ಕಂಪನಿ ಆರಂಭಿಸಿದರೂ ಸ್ಥಳೀಯರಿಗೆ ಆದ್ಯತೆ ನೀಡಬೇಕೆಂಬ ನಿಯಮವಿದೆ. ಡಾ.ಸರೋಜಿನಿ ಮಹಿಷಿ ವರದಿ ಪ್ರಕಾರ ಸ್ಥಳೀಯರಿಗೆ ಹೆಚ್ಚಿನ ಪ್ರಾಧ್ಯಾನ್ಯತೆ ನೀಡಬೇಕು. ಆದರೆ ಈ ನಿಯಮಗಳನ್ನು ಗಾಳಿಗೆ ತೂರಿರುವ ಕಂಪನಿ ಮಾಲಿಕ ಮುಖೇಶ್‌ ರಾಜ್ಯದ ನೆಲ, ಜಲ, ವಿದ್ಯುತ್ ಎಲ್ಲವನ್ನೂ ಕರ್ನಾಟಕ ಸರ್ಕಾರದಿಂದಲೇ ಪಡೆದುಕೊಂಡಿದ್ದರೂ ಇಲ್ಲಿ ಕನ್ನಡಗರನ್ನು ಉದ್ಯೋಗಕ್ಕೆ ತೆಗೆದುಕೊಳ್ಳದೆ ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಐದು ಘಟಕಗಳಲ್ಲಿ ಸುಮಾರು 1000 ಸಾವಿರಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದಾರೆ. ಈ ಉದ್ಯೋಗಗಳೆಲ್ಲವೂ ಉತ್ತರ ಭಾರತೀಯರ ಪಾಲಾಗಿವೆ. ಬೆರಳೆಣಿಕೆಯಲ್ಲಿರುವ ಕನ್ನಡಿಗರನ್ನು ಕಡಿಮೆ ಸಂಬಳಕ್ಕೆ ದುಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಮುಖೇಶ್ ದೆಹಲಿಯ ದೊಡ್ಡ ಕುಳ. ಈತ ಪ್ರಧಾನಿ ನರೇಂದ್ರ ಮೋದಿಯ ಆಪ್ತರಲ್ಲೊಬ್ಬ. ಇದೇ ಕಾರಣಕ್ಕೆ ಇತ್ತೀಚೆಗೆ  ಪ್ರಧಾನಿ ನರೇಂದ್ರ ಮೋದಿ ತುಮಕೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸಿದ್ದಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈತ ಪ್ರಧಾನಿ ಪಕ್ಕದಲ್ಲೇ ಇದ್ದುದು ಗಮನಿಸಬೇಕಾದ ಸಂಗತಿ. ಕರ್ನಾಟಕದ  ಉಪಮುಖ್ಯಮಂತ್ರಿಗಳಿಗೆ ಪ್ರಧಾನಿ ಪಕ್ಕ ಕುಳಿತುಕೊಳ್ಳಲು ಮತ್ತು ವೇದಿಕೆ ಹಂಚಿಕೊಳ್ಳಲು ಸಾಧ್ಯವಾಗದೇ ಇರುವಾಗ ಒಬ್ಬ ಉದ್ಯಮಿ ಅದೂ ವಿಮಲ್ ಗುಟ್ಕಾ ಮತ್ತು ಪಾನ್ ಮಸಾಲಾ ಕಂಪನಿಯ ಮಾಲಿಕ ಪ್ರಧಾನಿ ಜೊತೆ ವೇದಿಕೆ ಏರುತ್ತಾನೆ ಎಂದರೆ ಆತನ ಪ್ರಭಾವ ಎಷ್ಟಿರಬೇಕೆಂಬುದನ್ನು ಊಹಿಸಿಕೊಳ್ಳಿ. ಸ್ಪೆಷಲ್ ಪ್ರೊಟಕ್ಷನ್ ಗ್ರೂಪ್ ರಾಜ್ಯದ ಘಟಾನುಘಟಿ ನಾಯಕರನ್ನೇ ಕ್ಯಾರೇ ಅನ್ನದಿದ್ದಾಗ ಮುಖೇಶ್ ಪ್ರಧಾನಿಯ ಆಪ್ತರಲ್ಲಿ ಗುರುತಿಸಿಕೊಂಡು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದರು.

ಬಲದಿಂದ ಮೂರನೇಯ ವ್ಯಕ್ತಿ ಮುಖೇಶ್‌

ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿರುವ ವಿಎನ್ ಮತ್ತು ವಿ.ಎಸ್.ಎನ್  ಕಂಪನಿ ಇಡೀ ದಕ್ಷಿಣ ಭಾರತದ ಗುಟ್ಕಾ ಮತ್ತು ಪಾನ್ ಮಸಾಲಾ ಪೂರೈಕೆದಾರ ಎಂದರೆ ಈತ ಆದಾಯ ಎಷ್ಟಿರಬೇಡ. ನೂರಾರು ಕೋಟಿಗಳ ವಹಿವಾಟು ತಿಂಗಳಲ್ಲಿ ನಡೆದುಹೋಗುತ್ತದೆ. ಇಂತಹ ದೊಡ್ಡ ಕುಳ ಪ್ರಧಾನಿ ಭಾಗವಹಿಸಿದ್ದ ವೇದಿಕೆಯಲ್ಲಿ ಮಿಂಚಿಹೋದರು. ಬಿಜೆಪಿಗೆ ಫಂಡು ನೀಡುವಲ್ಲಿ ಈತನೂ ಒಬ್ಬ ಎನ್ನುತ್ತವೆ ಮೂಲಗಳು. ಅದೇ ಕಾರಣಕ್ಕೆ ವೇದಿಕೆಯಲ್ಲಿ ಎಲ್ಲರಿಗಿಂತ ಹೆಚ್ಚು ಕಾಣಿಸಿಕೊಂಡಿದ್ದು ಮುಖೇಶ್. ಈತನ ಕಂಪನಿಯಲ್ಲಿ ಕನ್ನಡಿಗರು ಕಸ ಹೊಡೆಯುವುದಕ್ಕೆ ಮಾತ್ರ ಸೀಮಿತರಾಗಿದ್ದಾರೆ. ಅಂದರೆ ಅವರಿಗೆ ಸಂಬಳವೆಂದು ಬರುವುದು ಆರೇಳು ಸಾವಿರ. ಇಂತಹ ತಾರತಮ್ಯಕ್ಕೆ ಸ್ಥಳೀಯ ಕಾರ್ಮಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ನಿತ್ಯವೂ ಕೋಟ್ಯಂತರ ವಹಿವಾಟು ನಡೆಯುತ್ತಿದ್ದರೂ ಸೇಲ್ ಟ್ಯಾಕ್ಸ್ ಅಧಿಕಾರಿಗಳು ಮೌನ ವಹಿಸಿ ಕುಳಿತಿದ್ದಾರೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬಂದಿವೆ. ವಾರಕ್ಕೊಮ್ಮೆಯಾದರೂ ಭೇಟಿ ನೀಡಿ ಸೆಲ್ಸ್ ಟ್ಯಾಕ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಆದರೆ ಬಂದ ಅಧಿಕಾರಿಗಳಿಗೆ “ಒಳ್ಳೆಯ” ಊಟ, ಚಹ ಕೊಟ್ಟು ಮೇಲೆ ಅಧಿಕಾರಿಗಳು ಮತ್ತು ಗಮ್ಮತ್ತಿನಿಂದ ಹಿಂದಿರುಗುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ನೌಕರರು ಹೇಳುತ್ತಾರೆ.

ಮೊನ್ನೆಮೊನ್ನೆ ಚಿಕ್ಕಬಳ್ಳಾಪುರದಲ್ಲಿ ಗುಟ್ಕಾ ಚೀಲಗಳು ದೊರೆತಿದ್ದು ಆ ಗುಟ್ಕಾ ಮೌಲ್ಯ ಸುಮಾರು 50 ಸಾವಿರ ರೂಪಾಯಿಗೂ ಹೆಚ್ಚು. ಗುಟ್ಕಾದ ಮಾಲಿಕ ಅಲ್ಲಿಯೇ ಇದ್ದ. ಅವುಗಳನ್ನು ತನ್ನವು ಎಂದರೆ ಟ್ಯಾಕ್ಸ್ ಕಟ್ಟಬೇಕಾಗಿದೀತು ಎಂಬ ಕಾರಣಕ್ಕೆ ಆತ ಅಧಿಕಾರಿಗಳ ಮುಂದೆ ಬಂದಿಲ್ಲ ಎನ್ನುತ್ತಾರೆ ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಕೆಯನ್ನು ಹತ್ತಿರದಿಂದ ಬಲ್ಲವರು.

ವಿಎನ್ ಮತ್ತು ವಿ.ಎಸ್.ಎನ್ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ ಘಟಕಗಳು ತುಮಕೂರು ಬಿಟ್ಟರೆ ಅಹಮದಾಬಾದ್ ಮತ್ತು ನೋಯಿಡಾದಲ್ಲಿಯೂ ಇವೆ ಎಂದು ಹೇಳಲಾಗುತ್ತಿದೆ. ಕಂಪನಿ ಕರ್ನಾಟಕದಲ್ಲಿದ್ದರೂ ಕನ್ನಡಿಗರಿಗೆ ಕೆಲಸ ಸಿಕ್ಕಿಲ್ಲ. ಕಂಪನಿ ಸ್ಥಾಪಿಸುವಾಗ ಸ್ಥಳೀಯರಿಗ ಉದ್ಯೋಗ ಕೋಡುತ್ತೇನೆ ಎಂದು ಬೂಸಿ ಬಿಟ್ಟಿದ್ದ ಈತ ಕನ್ನಡಿಗರು ಕೆಲಸ ಕೇಳಿದರೂ ಕೊಡದೇ ವಂಚಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...