Homeಮುಖಪುಟಮೋದಿ ಆಪ್ತ ಮುಖೇಶ್‌‌ರ ವಿಮಲ್ ಗುಟ್ಕಾ ಕಂಪನಿಯಿಂದ ಕನ್ನಡಿಗರಿಗೆ ಮಹಾದ್ರೋಹ

ಮೋದಿ ಆಪ್ತ ಮುಖೇಶ್‌‌ರ ವಿಮಲ್ ಗುಟ್ಕಾ ಕಂಪನಿಯಿಂದ ಕನ್ನಡಿಗರಿಗೆ ಮಹಾದ್ರೋಹ

ಸ್ಪೆಷಲ್ ಪ್ರೊಟಕ್ಷನ್ ಗ್ರೂಪ್ ರಾಜ್ಯದ ಘಟಾನುಘಟಿ ನಾಯಕರನ್ನೇ ಕ್ಯಾರೇ ಅನ್ನದಿದ್ದಾಗ ಮುಖೇಶ್ ಪ್ರಧಾನಿಯ ಆಪ್ತರಲ್ಲಿ ಗುರುತಿಸಿಕೊಂಡು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದರು.

- Advertisement -
- Advertisement -

ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಮಲ್ ಗುಟ್ಕಾ ತಯಾರಿಕಾ ಕಂಪನಿಯಲ್ಲಿ  ಕೆಲಸ ಮಾಡುವವರೆಲ್ಲರೂ ಹೊರ ರಾಜ್ಯದವರೇ ಆಗಿದ್ದಾರೆ. ವಿಎನ್ ಮತ್ತು VSNನ ಐದು ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು ಇದರಲ್ಲಿ ಸುಮಾರು ಬೆರಳೆಣಿಕೆಯಷ್ಟು ಜನ ಕನ್ನಡಿಗರಿಗೆ ಉದ್ಯೋಗ ಸಿಕ್ಕಿದೆ. 20 ಜನ ಮಂದಿ ಸ್ಥಳೀಯರು ಅಂದರೆ ಕರ್ನಾಟಕದವರು ಕೆಲಸ ನಿರ್ವಹಿಸುತ್ತಿದ್ದು ಇವರನ್ನು ಚರಂಡಿ ಸ್ವಚ್ಚಗೊಳಿಸಲು ಮಾತ್ರ ಬಳಿಸಕೊಳ್ಳಲಾಗುತ್ತಿದೆ. ಗುಟ್ಕಾ ತಯಾರಿಕೆ ಮತ್ತ ಪಾನ್ ಮಸಾಲಾ ತಯಾರಿಕೆ ಘಟಕಗಳು ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿಗೆ ನೂರು ಕಿಲೋಮೀಟರ್ ದೂರದಲ್ಲಿದ್ದರೂ ಕನ್ನಡಿಗರಿಗೆ ಮಾತ್ರ ಕೆಲಸ ನೀಡದೆ ದ್ರೋಹ ಎಸಗಲಾಗಿದೆ.

ವಿಎನ್ ಮತ್ತು ವಿ.ಎಸ್.ಎನ್ ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಕಾ ಘಟಕಗಳು ದೆಹಲಿಯ ಮುಖೇಶ್‌ ಎಂಬ ಮಾರ್ವಾಡಿಗೆ ಸೇರಿದವು. ತುಮಕೂರಿನಿಂದಲೇ ಇಡೀ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗೂ ವಿಎನ್, ವಿಎನ್ಎಸ್ ಗುಟ್ಕಾ ಮತ್ತು ಪಾನ್ ಮಸಾಲಾ ಪೂರೈಕೆ ಮಾಡುವ ಅತ್ಯಂತ ದೊಡ್ಡ ಕಂಪನಿ ಇದಾಗಿದೆ ಗುಟ್ಕಾ ಮತ್ತು ಪಾನ್ ಮಸಾಲವನ್ನು ದಕ್ಷಿಣದವರಿಗೆ ತಿನ್ನಿಸಿ ಕರ್ನಾಟದ ಕನ್ನಡಿಗರಿಗೆ ಕೆಲಸವನ್ನು ನೀಡದೆ ಇಲ್ಲಿಂದ ಹಣವನ್ನು ದೋಚುತ್ತಿದ್ದಾರೆ. ಪ್ರಮುಖ ಹುದ್ದೆಗಳೆಲ್ಲ ಉತ್ತರಭಾರತೀಯರ ಪಾಲಾಗಿದೆ. ಕೇವಲ ಕಸ ಗುಡಿಸುವ, ಚರಂಡಿ ಶುಚಿಗೊಳಿಸುವಂತಹ ಕೆಲಸಗಳನ್ನು ಸ್ಥಳೀಯರಿಗೆ ನೀಡಿದ್ದರೂ ಯಾರು ದನಿ ಎತ್ತುತ್ತಿಲ್ಲ.

ಯಾವುದೇ ಕಂಪನಿ ಆರಂಭಿಸಿದರೂ ಸ್ಥಳೀಯರಿಗೆ ಆದ್ಯತೆ ನೀಡಬೇಕೆಂಬ ನಿಯಮವಿದೆ. ಡಾ.ಸರೋಜಿನಿ ಮಹಿಷಿ ವರದಿ ಪ್ರಕಾರ ಸ್ಥಳೀಯರಿಗೆ ಹೆಚ್ಚಿನ ಪ್ರಾಧ್ಯಾನ್ಯತೆ ನೀಡಬೇಕು. ಆದರೆ ಈ ನಿಯಮಗಳನ್ನು ಗಾಳಿಗೆ ತೂರಿರುವ ಕಂಪನಿ ಮಾಲಿಕ ಮುಖೇಶ್‌ ರಾಜ್ಯದ ನೆಲ, ಜಲ, ವಿದ್ಯುತ್ ಎಲ್ಲವನ್ನೂ ಕರ್ನಾಟಕ ಸರ್ಕಾರದಿಂದಲೇ ಪಡೆದುಕೊಂಡಿದ್ದರೂ ಇಲ್ಲಿ ಕನ್ನಡಗರನ್ನು ಉದ್ಯೋಗಕ್ಕೆ ತೆಗೆದುಕೊಳ್ಳದೆ ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಐದು ಘಟಕಗಳಲ್ಲಿ ಸುಮಾರು 1000 ಸಾವಿರಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದಾರೆ. ಈ ಉದ್ಯೋಗಗಳೆಲ್ಲವೂ ಉತ್ತರ ಭಾರತೀಯರ ಪಾಲಾಗಿವೆ. ಬೆರಳೆಣಿಕೆಯಲ್ಲಿರುವ ಕನ್ನಡಿಗರನ್ನು ಕಡಿಮೆ ಸಂಬಳಕ್ಕೆ ದುಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಮುಖೇಶ್ ದೆಹಲಿಯ ದೊಡ್ಡ ಕುಳ. ಈತ ಪ್ರಧಾನಿ ನರೇಂದ್ರ ಮೋದಿಯ ಆಪ್ತರಲ್ಲೊಬ್ಬ. ಇದೇ ಕಾರಣಕ್ಕೆ ಇತ್ತೀಚೆಗೆ  ಪ್ರಧಾನಿ ನರೇಂದ್ರ ಮೋದಿ ತುಮಕೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸಿದ್ದಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈತ ಪ್ರಧಾನಿ ಪಕ್ಕದಲ್ಲೇ ಇದ್ದುದು ಗಮನಿಸಬೇಕಾದ ಸಂಗತಿ. ಕರ್ನಾಟಕದ  ಉಪಮುಖ್ಯಮಂತ್ರಿಗಳಿಗೆ ಪ್ರಧಾನಿ ಪಕ್ಕ ಕುಳಿತುಕೊಳ್ಳಲು ಮತ್ತು ವೇದಿಕೆ ಹಂಚಿಕೊಳ್ಳಲು ಸಾಧ್ಯವಾಗದೇ ಇರುವಾಗ ಒಬ್ಬ ಉದ್ಯಮಿ ಅದೂ ವಿಮಲ್ ಗುಟ್ಕಾ ಮತ್ತು ಪಾನ್ ಮಸಾಲಾ ಕಂಪನಿಯ ಮಾಲಿಕ ಪ್ರಧಾನಿ ಜೊತೆ ವೇದಿಕೆ ಏರುತ್ತಾನೆ ಎಂದರೆ ಆತನ ಪ್ರಭಾವ ಎಷ್ಟಿರಬೇಕೆಂಬುದನ್ನು ಊಹಿಸಿಕೊಳ್ಳಿ. ಸ್ಪೆಷಲ್ ಪ್ರೊಟಕ್ಷನ್ ಗ್ರೂಪ್ ರಾಜ್ಯದ ಘಟಾನುಘಟಿ ನಾಯಕರನ್ನೇ ಕ್ಯಾರೇ ಅನ್ನದಿದ್ದಾಗ ಮುಖೇಶ್ ಪ್ರಧಾನಿಯ ಆಪ್ತರಲ್ಲಿ ಗುರುತಿಸಿಕೊಂಡು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದರು.

ಬಲದಿಂದ ಮೂರನೇಯ ವ್ಯಕ್ತಿ ಮುಖೇಶ್‌

ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿರುವ ವಿಎನ್ ಮತ್ತು ವಿ.ಎಸ್.ಎನ್  ಕಂಪನಿ ಇಡೀ ದಕ್ಷಿಣ ಭಾರತದ ಗುಟ್ಕಾ ಮತ್ತು ಪಾನ್ ಮಸಾಲಾ ಪೂರೈಕೆದಾರ ಎಂದರೆ ಈತ ಆದಾಯ ಎಷ್ಟಿರಬೇಡ. ನೂರಾರು ಕೋಟಿಗಳ ವಹಿವಾಟು ತಿಂಗಳಲ್ಲಿ ನಡೆದುಹೋಗುತ್ತದೆ. ಇಂತಹ ದೊಡ್ಡ ಕುಳ ಪ್ರಧಾನಿ ಭಾಗವಹಿಸಿದ್ದ ವೇದಿಕೆಯಲ್ಲಿ ಮಿಂಚಿಹೋದರು. ಬಿಜೆಪಿಗೆ ಫಂಡು ನೀಡುವಲ್ಲಿ ಈತನೂ ಒಬ್ಬ ಎನ್ನುತ್ತವೆ ಮೂಲಗಳು. ಅದೇ ಕಾರಣಕ್ಕೆ ವೇದಿಕೆಯಲ್ಲಿ ಎಲ್ಲರಿಗಿಂತ ಹೆಚ್ಚು ಕಾಣಿಸಿಕೊಂಡಿದ್ದು ಮುಖೇಶ್. ಈತನ ಕಂಪನಿಯಲ್ಲಿ ಕನ್ನಡಿಗರು ಕಸ ಹೊಡೆಯುವುದಕ್ಕೆ ಮಾತ್ರ ಸೀಮಿತರಾಗಿದ್ದಾರೆ. ಅಂದರೆ ಅವರಿಗೆ ಸಂಬಳವೆಂದು ಬರುವುದು ಆರೇಳು ಸಾವಿರ. ಇಂತಹ ತಾರತಮ್ಯಕ್ಕೆ ಸ್ಥಳೀಯ ಕಾರ್ಮಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ನಿತ್ಯವೂ ಕೋಟ್ಯಂತರ ವಹಿವಾಟು ನಡೆಯುತ್ತಿದ್ದರೂ ಸೇಲ್ ಟ್ಯಾಕ್ಸ್ ಅಧಿಕಾರಿಗಳು ಮೌನ ವಹಿಸಿ ಕುಳಿತಿದ್ದಾರೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬಂದಿವೆ. ವಾರಕ್ಕೊಮ್ಮೆಯಾದರೂ ಭೇಟಿ ನೀಡಿ ಸೆಲ್ಸ್ ಟ್ಯಾಕ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಆದರೆ ಬಂದ ಅಧಿಕಾರಿಗಳಿಗೆ “ಒಳ್ಳೆಯ” ಊಟ, ಚಹ ಕೊಟ್ಟು ಮೇಲೆ ಅಧಿಕಾರಿಗಳು ಮತ್ತು ಗಮ್ಮತ್ತಿನಿಂದ ಹಿಂದಿರುಗುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ನೌಕರರು ಹೇಳುತ್ತಾರೆ.

ಮೊನ್ನೆಮೊನ್ನೆ ಚಿಕ್ಕಬಳ್ಳಾಪುರದಲ್ಲಿ ಗುಟ್ಕಾ ಚೀಲಗಳು ದೊರೆತಿದ್ದು ಆ ಗುಟ್ಕಾ ಮೌಲ್ಯ ಸುಮಾರು 50 ಸಾವಿರ ರೂಪಾಯಿಗೂ ಹೆಚ್ಚು. ಗುಟ್ಕಾದ ಮಾಲಿಕ ಅಲ್ಲಿಯೇ ಇದ್ದ. ಅವುಗಳನ್ನು ತನ್ನವು ಎಂದರೆ ಟ್ಯಾಕ್ಸ್ ಕಟ್ಟಬೇಕಾಗಿದೀತು ಎಂಬ ಕಾರಣಕ್ಕೆ ಆತ ಅಧಿಕಾರಿಗಳ ಮುಂದೆ ಬಂದಿಲ್ಲ ಎನ್ನುತ್ತಾರೆ ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಕೆಯನ್ನು ಹತ್ತಿರದಿಂದ ಬಲ್ಲವರು.

ವಿಎನ್ ಮತ್ತು ವಿ.ಎಸ್.ಎನ್ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ ಘಟಕಗಳು ತುಮಕೂರು ಬಿಟ್ಟರೆ ಅಹಮದಾಬಾದ್ ಮತ್ತು ನೋಯಿಡಾದಲ್ಲಿಯೂ ಇವೆ ಎಂದು ಹೇಳಲಾಗುತ್ತಿದೆ. ಕಂಪನಿ ಕರ್ನಾಟಕದಲ್ಲಿದ್ದರೂ ಕನ್ನಡಿಗರಿಗೆ ಕೆಲಸ ಸಿಕ್ಕಿಲ್ಲ. ಕಂಪನಿ ಸ್ಥಾಪಿಸುವಾಗ ಸ್ಥಳೀಯರಿಗ ಉದ್ಯೋಗ ಕೋಡುತ್ತೇನೆ ಎಂದು ಬೂಸಿ ಬಿಟ್ಟಿದ್ದ ಈತ ಕನ್ನಡಿಗರು ಕೆಲಸ ಕೇಳಿದರೂ ಕೊಡದೇ ವಂಚಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...