Homeಮುಖಪುಟಮೋದಿ ಆಪ್ತ ಮುಖೇಶ್‌‌ರ ವಿಮಲ್ ಗುಟ್ಕಾ ಕಂಪನಿಯಿಂದ ಕನ್ನಡಿಗರಿಗೆ ಮಹಾದ್ರೋಹ

ಮೋದಿ ಆಪ್ತ ಮುಖೇಶ್‌‌ರ ವಿಮಲ್ ಗುಟ್ಕಾ ಕಂಪನಿಯಿಂದ ಕನ್ನಡಿಗರಿಗೆ ಮಹಾದ್ರೋಹ

ಸ್ಪೆಷಲ್ ಪ್ರೊಟಕ್ಷನ್ ಗ್ರೂಪ್ ರಾಜ್ಯದ ಘಟಾನುಘಟಿ ನಾಯಕರನ್ನೇ ಕ್ಯಾರೇ ಅನ್ನದಿದ್ದಾಗ ಮುಖೇಶ್ ಪ್ರಧಾನಿಯ ಆಪ್ತರಲ್ಲಿ ಗುರುತಿಸಿಕೊಂಡು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದರು.

- Advertisement -
- Advertisement -

ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಮಲ್ ಗುಟ್ಕಾ ತಯಾರಿಕಾ ಕಂಪನಿಯಲ್ಲಿ  ಕೆಲಸ ಮಾಡುವವರೆಲ್ಲರೂ ಹೊರ ರಾಜ್ಯದವರೇ ಆಗಿದ್ದಾರೆ. ವಿಎನ್ ಮತ್ತು VSNನ ಐದು ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು ಇದರಲ್ಲಿ ಸುಮಾರು ಬೆರಳೆಣಿಕೆಯಷ್ಟು ಜನ ಕನ್ನಡಿಗರಿಗೆ ಉದ್ಯೋಗ ಸಿಕ್ಕಿದೆ. 20 ಜನ ಮಂದಿ ಸ್ಥಳೀಯರು ಅಂದರೆ ಕರ್ನಾಟಕದವರು ಕೆಲಸ ನಿರ್ವಹಿಸುತ್ತಿದ್ದು ಇವರನ್ನು ಚರಂಡಿ ಸ್ವಚ್ಚಗೊಳಿಸಲು ಮಾತ್ರ ಬಳಿಸಕೊಳ್ಳಲಾಗುತ್ತಿದೆ. ಗುಟ್ಕಾ ತಯಾರಿಕೆ ಮತ್ತ ಪಾನ್ ಮಸಾಲಾ ತಯಾರಿಕೆ ಘಟಕಗಳು ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿಗೆ ನೂರು ಕಿಲೋಮೀಟರ್ ದೂರದಲ್ಲಿದ್ದರೂ ಕನ್ನಡಿಗರಿಗೆ ಮಾತ್ರ ಕೆಲಸ ನೀಡದೆ ದ್ರೋಹ ಎಸಗಲಾಗಿದೆ.

ವಿಎನ್ ಮತ್ತು ವಿ.ಎಸ್.ಎನ್ ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಕಾ ಘಟಕಗಳು ದೆಹಲಿಯ ಮುಖೇಶ್‌ ಎಂಬ ಮಾರ್ವಾಡಿಗೆ ಸೇರಿದವು. ತುಮಕೂರಿನಿಂದಲೇ ಇಡೀ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗೂ ವಿಎನ್, ವಿಎನ್ಎಸ್ ಗುಟ್ಕಾ ಮತ್ತು ಪಾನ್ ಮಸಾಲಾ ಪೂರೈಕೆ ಮಾಡುವ ಅತ್ಯಂತ ದೊಡ್ಡ ಕಂಪನಿ ಇದಾಗಿದೆ ಗುಟ್ಕಾ ಮತ್ತು ಪಾನ್ ಮಸಾಲವನ್ನು ದಕ್ಷಿಣದವರಿಗೆ ತಿನ್ನಿಸಿ ಕರ್ನಾಟದ ಕನ್ನಡಿಗರಿಗೆ ಕೆಲಸವನ್ನು ನೀಡದೆ ಇಲ್ಲಿಂದ ಹಣವನ್ನು ದೋಚುತ್ತಿದ್ದಾರೆ. ಪ್ರಮುಖ ಹುದ್ದೆಗಳೆಲ್ಲ ಉತ್ತರಭಾರತೀಯರ ಪಾಲಾಗಿದೆ. ಕೇವಲ ಕಸ ಗುಡಿಸುವ, ಚರಂಡಿ ಶುಚಿಗೊಳಿಸುವಂತಹ ಕೆಲಸಗಳನ್ನು ಸ್ಥಳೀಯರಿಗೆ ನೀಡಿದ್ದರೂ ಯಾರು ದನಿ ಎತ್ತುತ್ತಿಲ್ಲ.

ಯಾವುದೇ ಕಂಪನಿ ಆರಂಭಿಸಿದರೂ ಸ್ಥಳೀಯರಿಗೆ ಆದ್ಯತೆ ನೀಡಬೇಕೆಂಬ ನಿಯಮವಿದೆ. ಡಾ.ಸರೋಜಿನಿ ಮಹಿಷಿ ವರದಿ ಪ್ರಕಾರ ಸ್ಥಳೀಯರಿಗೆ ಹೆಚ್ಚಿನ ಪ್ರಾಧ್ಯಾನ್ಯತೆ ನೀಡಬೇಕು. ಆದರೆ ಈ ನಿಯಮಗಳನ್ನು ಗಾಳಿಗೆ ತೂರಿರುವ ಕಂಪನಿ ಮಾಲಿಕ ಮುಖೇಶ್‌ ರಾಜ್ಯದ ನೆಲ, ಜಲ, ವಿದ್ಯುತ್ ಎಲ್ಲವನ್ನೂ ಕರ್ನಾಟಕ ಸರ್ಕಾರದಿಂದಲೇ ಪಡೆದುಕೊಂಡಿದ್ದರೂ ಇಲ್ಲಿ ಕನ್ನಡಗರನ್ನು ಉದ್ಯೋಗಕ್ಕೆ ತೆಗೆದುಕೊಳ್ಳದೆ ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಐದು ಘಟಕಗಳಲ್ಲಿ ಸುಮಾರು 1000 ಸಾವಿರಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದಾರೆ. ಈ ಉದ್ಯೋಗಗಳೆಲ್ಲವೂ ಉತ್ತರ ಭಾರತೀಯರ ಪಾಲಾಗಿವೆ. ಬೆರಳೆಣಿಕೆಯಲ್ಲಿರುವ ಕನ್ನಡಿಗರನ್ನು ಕಡಿಮೆ ಸಂಬಳಕ್ಕೆ ದುಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಮುಖೇಶ್ ದೆಹಲಿಯ ದೊಡ್ಡ ಕುಳ. ಈತ ಪ್ರಧಾನಿ ನರೇಂದ್ರ ಮೋದಿಯ ಆಪ್ತರಲ್ಲೊಬ್ಬ. ಇದೇ ಕಾರಣಕ್ಕೆ ಇತ್ತೀಚೆಗೆ  ಪ್ರಧಾನಿ ನರೇಂದ್ರ ಮೋದಿ ತುಮಕೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸಿದ್ದಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈತ ಪ್ರಧಾನಿ ಪಕ್ಕದಲ್ಲೇ ಇದ್ದುದು ಗಮನಿಸಬೇಕಾದ ಸಂಗತಿ. ಕರ್ನಾಟಕದ  ಉಪಮುಖ್ಯಮಂತ್ರಿಗಳಿಗೆ ಪ್ರಧಾನಿ ಪಕ್ಕ ಕುಳಿತುಕೊಳ್ಳಲು ಮತ್ತು ವೇದಿಕೆ ಹಂಚಿಕೊಳ್ಳಲು ಸಾಧ್ಯವಾಗದೇ ಇರುವಾಗ ಒಬ್ಬ ಉದ್ಯಮಿ ಅದೂ ವಿಮಲ್ ಗುಟ್ಕಾ ಮತ್ತು ಪಾನ್ ಮಸಾಲಾ ಕಂಪನಿಯ ಮಾಲಿಕ ಪ್ರಧಾನಿ ಜೊತೆ ವೇದಿಕೆ ಏರುತ್ತಾನೆ ಎಂದರೆ ಆತನ ಪ್ರಭಾವ ಎಷ್ಟಿರಬೇಕೆಂಬುದನ್ನು ಊಹಿಸಿಕೊಳ್ಳಿ. ಸ್ಪೆಷಲ್ ಪ್ರೊಟಕ್ಷನ್ ಗ್ರೂಪ್ ರಾಜ್ಯದ ಘಟಾನುಘಟಿ ನಾಯಕರನ್ನೇ ಕ್ಯಾರೇ ಅನ್ನದಿದ್ದಾಗ ಮುಖೇಶ್ ಪ್ರಧಾನಿಯ ಆಪ್ತರಲ್ಲಿ ಗುರುತಿಸಿಕೊಂಡು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದರು.

ಬಲದಿಂದ ಮೂರನೇಯ ವ್ಯಕ್ತಿ ಮುಖೇಶ್‌

ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿರುವ ವಿಎನ್ ಮತ್ತು ವಿ.ಎಸ್.ಎನ್  ಕಂಪನಿ ಇಡೀ ದಕ್ಷಿಣ ಭಾರತದ ಗುಟ್ಕಾ ಮತ್ತು ಪಾನ್ ಮಸಾಲಾ ಪೂರೈಕೆದಾರ ಎಂದರೆ ಈತ ಆದಾಯ ಎಷ್ಟಿರಬೇಡ. ನೂರಾರು ಕೋಟಿಗಳ ವಹಿವಾಟು ತಿಂಗಳಲ್ಲಿ ನಡೆದುಹೋಗುತ್ತದೆ. ಇಂತಹ ದೊಡ್ಡ ಕುಳ ಪ್ರಧಾನಿ ಭಾಗವಹಿಸಿದ್ದ ವೇದಿಕೆಯಲ್ಲಿ ಮಿಂಚಿಹೋದರು. ಬಿಜೆಪಿಗೆ ಫಂಡು ನೀಡುವಲ್ಲಿ ಈತನೂ ಒಬ್ಬ ಎನ್ನುತ್ತವೆ ಮೂಲಗಳು. ಅದೇ ಕಾರಣಕ್ಕೆ ವೇದಿಕೆಯಲ್ಲಿ ಎಲ್ಲರಿಗಿಂತ ಹೆಚ್ಚು ಕಾಣಿಸಿಕೊಂಡಿದ್ದು ಮುಖೇಶ್. ಈತನ ಕಂಪನಿಯಲ್ಲಿ ಕನ್ನಡಿಗರು ಕಸ ಹೊಡೆಯುವುದಕ್ಕೆ ಮಾತ್ರ ಸೀಮಿತರಾಗಿದ್ದಾರೆ. ಅಂದರೆ ಅವರಿಗೆ ಸಂಬಳವೆಂದು ಬರುವುದು ಆರೇಳು ಸಾವಿರ. ಇಂತಹ ತಾರತಮ್ಯಕ್ಕೆ ಸ್ಥಳೀಯ ಕಾರ್ಮಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ನಿತ್ಯವೂ ಕೋಟ್ಯಂತರ ವಹಿವಾಟು ನಡೆಯುತ್ತಿದ್ದರೂ ಸೇಲ್ ಟ್ಯಾಕ್ಸ್ ಅಧಿಕಾರಿಗಳು ಮೌನ ವಹಿಸಿ ಕುಳಿತಿದ್ದಾರೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬಂದಿವೆ. ವಾರಕ್ಕೊಮ್ಮೆಯಾದರೂ ಭೇಟಿ ನೀಡಿ ಸೆಲ್ಸ್ ಟ್ಯಾಕ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಆದರೆ ಬಂದ ಅಧಿಕಾರಿಗಳಿಗೆ “ಒಳ್ಳೆಯ” ಊಟ, ಚಹ ಕೊಟ್ಟು ಮೇಲೆ ಅಧಿಕಾರಿಗಳು ಮತ್ತು ಗಮ್ಮತ್ತಿನಿಂದ ಹಿಂದಿರುಗುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ನೌಕರರು ಹೇಳುತ್ತಾರೆ.

ಮೊನ್ನೆಮೊನ್ನೆ ಚಿಕ್ಕಬಳ್ಳಾಪುರದಲ್ಲಿ ಗುಟ್ಕಾ ಚೀಲಗಳು ದೊರೆತಿದ್ದು ಆ ಗುಟ್ಕಾ ಮೌಲ್ಯ ಸುಮಾರು 50 ಸಾವಿರ ರೂಪಾಯಿಗೂ ಹೆಚ್ಚು. ಗುಟ್ಕಾದ ಮಾಲಿಕ ಅಲ್ಲಿಯೇ ಇದ್ದ. ಅವುಗಳನ್ನು ತನ್ನವು ಎಂದರೆ ಟ್ಯಾಕ್ಸ್ ಕಟ್ಟಬೇಕಾಗಿದೀತು ಎಂಬ ಕಾರಣಕ್ಕೆ ಆತ ಅಧಿಕಾರಿಗಳ ಮುಂದೆ ಬಂದಿಲ್ಲ ಎನ್ನುತ್ತಾರೆ ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಕೆಯನ್ನು ಹತ್ತಿರದಿಂದ ಬಲ್ಲವರು.

ವಿಎನ್ ಮತ್ತು ವಿ.ಎಸ್.ಎನ್ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ ಘಟಕಗಳು ತುಮಕೂರು ಬಿಟ್ಟರೆ ಅಹಮದಾಬಾದ್ ಮತ್ತು ನೋಯಿಡಾದಲ್ಲಿಯೂ ಇವೆ ಎಂದು ಹೇಳಲಾಗುತ್ತಿದೆ. ಕಂಪನಿ ಕರ್ನಾಟಕದಲ್ಲಿದ್ದರೂ ಕನ್ನಡಿಗರಿಗೆ ಕೆಲಸ ಸಿಕ್ಕಿಲ್ಲ. ಕಂಪನಿ ಸ್ಥಾಪಿಸುವಾಗ ಸ್ಥಳೀಯರಿಗ ಉದ್ಯೋಗ ಕೋಡುತ್ತೇನೆ ಎಂದು ಬೂಸಿ ಬಿಟ್ಟಿದ್ದ ಈತ ಕನ್ನಡಿಗರು ಕೆಲಸ ಕೇಳಿದರೂ ಕೊಡದೇ ವಂಚಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...