Homeಮುಖಪುಟಮೋದಿ ಆಪ್ತ ಮುಖೇಶ್‌‌ರ ವಿಮಲ್ ಗುಟ್ಕಾ ಕಂಪನಿಯಿಂದ ಕನ್ನಡಿಗರಿಗೆ ಮಹಾದ್ರೋಹ

ಮೋದಿ ಆಪ್ತ ಮುಖೇಶ್‌‌ರ ವಿಮಲ್ ಗುಟ್ಕಾ ಕಂಪನಿಯಿಂದ ಕನ್ನಡಿಗರಿಗೆ ಮಹಾದ್ರೋಹ

ಸ್ಪೆಷಲ್ ಪ್ರೊಟಕ್ಷನ್ ಗ್ರೂಪ್ ರಾಜ್ಯದ ಘಟಾನುಘಟಿ ನಾಯಕರನ್ನೇ ಕ್ಯಾರೇ ಅನ್ನದಿದ್ದಾಗ ಮುಖೇಶ್ ಪ್ರಧಾನಿಯ ಆಪ್ತರಲ್ಲಿ ಗುರುತಿಸಿಕೊಂಡು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದರು.

- Advertisement -
- Advertisement -

ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಮಲ್ ಗುಟ್ಕಾ ತಯಾರಿಕಾ ಕಂಪನಿಯಲ್ಲಿ  ಕೆಲಸ ಮಾಡುವವರೆಲ್ಲರೂ ಹೊರ ರಾಜ್ಯದವರೇ ಆಗಿದ್ದಾರೆ. ವಿಎನ್ ಮತ್ತು VSNನ ಐದು ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು ಇದರಲ್ಲಿ ಸುಮಾರು ಬೆರಳೆಣಿಕೆಯಷ್ಟು ಜನ ಕನ್ನಡಿಗರಿಗೆ ಉದ್ಯೋಗ ಸಿಕ್ಕಿದೆ. 20 ಜನ ಮಂದಿ ಸ್ಥಳೀಯರು ಅಂದರೆ ಕರ್ನಾಟಕದವರು ಕೆಲಸ ನಿರ್ವಹಿಸುತ್ತಿದ್ದು ಇವರನ್ನು ಚರಂಡಿ ಸ್ವಚ್ಚಗೊಳಿಸಲು ಮಾತ್ರ ಬಳಿಸಕೊಳ್ಳಲಾಗುತ್ತಿದೆ. ಗುಟ್ಕಾ ತಯಾರಿಕೆ ಮತ್ತ ಪಾನ್ ಮಸಾಲಾ ತಯಾರಿಕೆ ಘಟಕಗಳು ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿಗೆ ನೂರು ಕಿಲೋಮೀಟರ್ ದೂರದಲ್ಲಿದ್ದರೂ ಕನ್ನಡಿಗರಿಗೆ ಮಾತ್ರ ಕೆಲಸ ನೀಡದೆ ದ್ರೋಹ ಎಸಗಲಾಗಿದೆ.

ವಿಎನ್ ಮತ್ತು ವಿ.ಎಸ್.ಎನ್ ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಕಾ ಘಟಕಗಳು ದೆಹಲಿಯ ಮುಖೇಶ್‌ ಎಂಬ ಮಾರ್ವಾಡಿಗೆ ಸೇರಿದವು. ತುಮಕೂರಿನಿಂದಲೇ ಇಡೀ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗೂ ವಿಎನ್, ವಿಎನ್ಎಸ್ ಗುಟ್ಕಾ ಮತ್ತು ಪಾನ್ ಮಸಾಲಾ ಪೂರೈಕೆ ಮಾಡುವ ಅತ್ಯಂತ ದೊಡ್ಡ ಕಂಪನಿ ಇದಾಗಿದೆ ಗುಟ್ಕಾ ಮತ್ತು ಪಾನ್ ಮಸಾಲವನ್ನು ದಕ್ಷಿಣದವರಿಗೆ ತಿನ್ನಿಸಿ ಕರ್ನಾಟದ ಕನ್ನಡಿಗರಿಗೆ ಕೆಲಸವನ್ನು ನೀಡದೆ ಇಲ್ಲಿಂದ ಹಣವನ್ನು ದೋಚುತ್ತಿದ್ದಾರೆ. ಪ್ರಮುಖ ಹುದ್ದೆಗಳೆಲ್ಲ ಉತ್ತರಭಾರತೀಯರ ಪಾಲಾಗಿದೆ. ಕೇವಲ ಕಸ ಗುಡಿಸುವ, ಚರಂಡಿ ಶುಚಿಗೊಳಿಸುವಂತಹ ಕೆಲಸಗಳನ್ನು ಸ್ಥಳೀಯರಿಗೆ ನೀಡಿದ್ದರೂ ಯಾರು ದನಿ ಎತ್ತುತ್ತಿಲ್ಲ.

ಯಾವುದೇ ಕಂಪನಿ ಆರಂಭಿಸಿದರೂ ಸ್ಥಳೀಯರಿಗೆ ಆದ್ಯತೆ ನೀಡಬೇಕೆಂಬ ನಿಯಮವಿದೆ. ಡಾ.ಸರೋಜಿನಿ ಮಹಿಷಿ ವರದಿ ಪ್ರಕಾರ ಸ್ಥಳೀಯರಿಗೆ ಹೆಚ್ಚಿನ ಪ್ರಾಧ್ಯಾನ್ಯತೆ ನೀಡಬೇಕು. ಆದರೆ ಈ ನಿಯಮಗಳನ್ನು ಗಾಳಿಗೆ ತೂರಿರುವ ಕಂಪನಿ ಮಾಲಿಕ ಮುಖೇಶ್‌ ರಾಜ್ಯದ ನೆಲ, ಜಲ, ವಿದ್ಯುತ್ ಎಲ್ಲವನ್ನೂ ಕರ್ನಾಟಕ ಸರ್ಕಾರದಿಂದಲೇ ಪಡೆದುಕೊಂಡಿದ್ದರೂ ಇಲ್ಲಿ ಕನ್ನಡಗರನ್ನು ಉದ್ಯೋಗಕ್ಕೆ ತೆಗೆದುಕೊಳ್ಳದೆ ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಐದು ಘಟಕಗಳಲ್ಲಿ ಸುಮಾರು 1000 ಸಾವಿರಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದಾರೆ. ಈ ಉದ್ಯೋಗಗಳೆಲ್ಲವೂ ಉತ್ತರ ಭಾರತೀಯರ ಪಾಲಾಗಿವೆ. ಬೆರಳೆಣಿಕೆಯಲ್ಲಿರುವ ಕನ್ನಡಿಗರನ್ನು ಕಡಿಮೆ ಸಂಬಳಕ್ಕೆ ದುಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಮುಖೇಶ್ ದೆಹಲಿಯ ದೊಡ್ಡ ಕುಳ. ಈತ ಪ್ರಧಾನಿ ನರೇಂದ್ರ ಮೋದಿಯ ಆಪ್ತರಲ್ಲೊಬ್ಬ. ಇದೇ ಕಾರಣಕ್ಕೆ ಇತ್ತೀಚೆಗೆ  ಪ್ರಧಾನಿ ನರೇಂದ್ರ ಮೋದಿ ತುಮಕೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸಿದ್ದಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈತ ಪ್ರಧಾನಿ ಪಕ್ಕದಲ್ಲೇ ಇದ್ದುದು ಗಮನಿಸಬೇಕಾದ ಸಂಗತಿ. ಕರ್ನಾಟಕದ  ಉಪಮುಖ್ಯಮಂತ್ರಿಗಳಿಗೆ ಪ್ರಧಾನಿ ಪಕ್ಕ ಕುಳಿತುಕೊಳ್ಳಲು ಮತ್ತು ವೇದಿಕೆ ಹಂಚಿಕೊಳ್ಳಲು ಸಾಧ್ಯವಾಗದೇ ಇರುವಾಗ ಒಬ್ಬ ಉದ್ಯಮಿ ಅದೂ ವಿಮಲ್ ಗುಟ್ಕಾ ಮತ್ತು ಪಾನ್ ಮಸಾಲಾ ಕಂಪನಿಯ ಮಾಲಿಕ ಪ್ರಧಾನಿ ಜೊತೆ ವೇದಿಕೆ ಏರುತ್ತಾನೆ ಎಂದರೆ ಆತನ ಪ್ರಭಾವ ಎಷ್ಟಿರಬೇಕೆಂಬುದನ್ನು ಊಹಿಸಿಕೊಳ್ಳಿ. ಸ್ಪೆಷಲ್ ಪ್ರೊಟಕ್ಷನ್ ಗ್ರೂಪ್ ರಾಜ್ಯದ ಘಟಾನುಘಟಿ ನಾಯಕರನ್ನೇ ಕ್ಯಾರೇ ಅನ್ನದಿದ್ದಾಗ ಮುಖೇಶ್ ಪ್ರಧಾನಿಯ ಆಪ್ತರಲ್ಲಿ ಗುರುತಿಸಿಕೊಂಡು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದರು.

ಬಲದಿಂದ ಮೂರನೇಯ ವ್ಯಕ್ತಿ ಮುಖೇಶ್‌

ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿರುವ ವಿಎನ್ ಮತ್ತು ವಿ.ಎಸ್.ಎನ್  ಕಂಪನಿ ಇಡೀ ದಕ್ಷಿಣ ಭಾರತದ ಗುಟ್ಕಾ ಮತ್ತು ಪಾನ್ ಮಸಾಲಾ ಪೂರೈಕೆದಾರ ಎಂದರೆ ಈತ ಆದಾಯ ಎಷ್ಟಿರಬೇಡ. ನೂರಾರು ಕೋಟಿಗಳ ವಹಿವಾಟು ತಿಂಗಳಲ್ಲಿ ನಡೆದುಹೋಗುತ್ತದೆ. ಇಂತಹ ದೊಡ್ಡ ಕುಳ ಪ್ರಧಾನಿ ಭಾಗವಹಿಸಿದ್ದ ವೇದಿಕೆಯಲ್ಲಿ ಮಿಂಚಿಹೋದರು. ಬಿಜೆಪಿಗೆ ಫಂಡು ನೀಡುವಲ್ಲಿ ಈತನೂ ಒಬ್ಬ ಎನ್ನುತ್ತವೆ ಮೂಲಗಳು. ಅದೇ ಕಾರಣಕ್ಕೆ ವೇದಿಕೆಯಲ್ಲಿ ಎಲ್ಲರಿಗಿಂತ ಹೆಚ್ಚು ಕಾಣಿಸಿಕೊಂಡಿದ್ದು ಮುಖೇಶ್. ಈತನ ಕಂಪನಿಯಲ್ಲಿ ಕನ್ನಡಿಗರು ಕಸ ಹೊಡೆಯುವುದಕ್ಕೆ ಮಾತ್ರ ಸೀಮಿತರಾಗಿದ್ದಾರೆ. ಅಂದರೆ ಅವರಿಗೆ ಸಂಬಳವೆಂದು ಬರುವುದು ಆರೇಳು ಸಾವಿರ. ಇಂತಹ ತಾರತಮ್ಯಕ್ಕೆ ಸ್ಥಳೀಯ ಕಾರ್ಮಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ನಿತ್ಯವೂ ಕೋಟ್ಯಂತರ ವಹಿವಾಟು ನಡೆಯುತ್ತಿದ್ದರೂ ಸೇಲ್ ಟ್ಯಾಕ್ಸ್ ಅಧಿಕಾರಿಗಳು ಮೌನ ವಹಿಸಿ ಕುಳಿತಿದ್ದಾರೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬಂದಿವೆ. ವಾರಕ್ಕೊಮ್ಮೆಯಾದರೂ ಭೇಟಿ ನೀಡಿ ಸೆಲ್ಸ್ ಟ್ಯಾಕ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಆದರೆ ಬಂದ ಅಧಿಕಾರಿಗಳಿಗೆ “ಒಳ್ಳೆಯ” ಊಟ, ಚಹ ಕೊಟ್ಟು ಮೇಲೆ ಅಧಿಕಾರಿಗಳು ಮತ್ತು ಗಮ್ಮತ್ತಿನಿಂದ ಹಿಂದಿರುಗುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ನೌಕರರು ಹೇಳುತ್ತಾರೆ.

ಮೊನ್ನೆಮೊನ್ನೆ ಚಿಕ್ಕಬಳ್ಳಾಪುರದಲ್ಲಿ ಗುಟ್ಕಾ ಚೀಲಗಳು ದೊರೆತಿದ್ದು ಆ ಗುಟ್ಕಾ ಮೌಲ್ಯ ಸುಮಾರು 50 ಸಾವಿರ ರೂಪಾಯಿಗೂ ಹೆಚ್ಚು. ಗುಟ್ಕಾದ ಮಾಲಿಕ ಅಲ್ಲಿಯೇ ಇದ್ದ. ಅವುಗಳನ್ನು ತನ್ನವು ಎಂದರೆ ಟ್ಯಾಕ್ಸ್ ಕಟ್ಟಬೇಕಾಗಿದೀತು ಎಂಬ ಕಾರಣಕ್ಕೆ ಆತ ಅಧಿಕಾರಿಗಳ ಮುಂದೆ ಬಂದಿಲ್ಲ ಎನ್ನುತ್ತಾರೆ ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಕೆಯನ್ನು ಹತ್ತಿರದಿಂದ ಬಲ್ಲವರು.

ವಿಎನ್ ಮತ್ತು ವಿ.ಎಸ್.ಎನ್ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ ಘಟಕಗಳು ತುಮಕೂರು ಬಿಟ್ಟರೆ ಅಹಮದಾಬಾದ್ ಮತ್ತು ನೋಯಿಡಾದಲ್ಲಿಯೂ ಇವೆ ಎಂದು ಹೇಳಲಾಗುತ್ತಿದೆ. ಕಂಪನಿ ಕರ್ನಾಟಕದಲ್ಲಿದ್ದರೂ ಕನ್ನಡಿಗರಿಗೆ ಕೆಲಸ ಸಿಕ್ಕಿಲ್ಲ. ಕಂಪನಿ ಸ್ಥಾಪಿಸುವಾಗ ಸ್ಥಳೀಯರಿಗ ಉದ್ಯೋಗ ಕೋಡುತ್ತೇನೆ ಎಂದು ಬೂಸಿ ಬಿಟ್ಟಿದ್ದ ಈತ ಕನ್ನಡಿಗರು ಕೆಲಸ ಕೇಳಿದರೂ ಕೊಡದೇ ವಂಚಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...