Homeಮುಖಪುಟಮೋದಿ ಆಪ್ತ ಮುಖೇಶ್‌‌ರ ವಿಮಲ್ ಗುಟ್ಕಾ ಕಂಪನಿಯಿಂದ ಕನ್ನಡಿಗರಿಗೆ ಮಹಾದ್ರೋಹ

ಮೋದಿ ಆಪ್ತ ಮುಖೇಶ್‌‌ರ ವಿಮಲ್ ಗುಟ್ಕಾ ಕಂಪನಿಯಿಂದ ಕನ್ನಡಿಗರಿಗೆ ಮಹಾದ್ರೋಹ

ಸ್ಪೆಷಲ್ ಪ್ರೊಟಕ್ಷನ್ ಗ್ರೂಪ್ ರಾಜ್ಯದ ಘಟಾನುಘಟಿ ನಾಯಕರನ್ನೇ ಕ್ಯಾರೇ ಅನ್ನದಿದ್ದಾಗ ಮುಖೇಶ್ ಪ್ರಧಾನಿಯ ಆಪ್ತರಲ್ಲಿ ಗುರುತಿಸಿಕೊಂಡು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದರು.

- Advertisement -
- Advertisement -

ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಮಲ್ ಗುಟ್ಕಾ ತಯಾರಿಕಾ ಕಂಪನಿಯಲ್ಲಿ  ಕೆಲಸ ಮಾಡುವವರೆಲ್ಲರೂ ಹೊರ ರಾಜ್ಯದವರೇ ಆಗಿದ್ದಾರೆ. ವಿಎನ್ ಮತ್ತು VSNನ ಐದು ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು ಇದರಲ್ಲಿ ಸುಮಾರು ಬೆರಳೆಣಿಕೆಯಷ್ಟು ಜನ ಕನ್ನಡಿಗರಿಗೆ ಉದ್ಯೋಗ ಸಿಕ್ಕಿದೆ. 20 ಜನ ಮಂದಿ ಸ್ಥಳೀಯರು ಅಂದರೆ ಕರ್ನಾಟಕದವರು ಕೆಲಸ ನಿರ್ವಹಿಸುತ್ತಿದ್ದು ಇವರನ್ನು ಚರಂಡಿ ಸ್ವಚ್ಚಗೊಳಿಸಲು ಮಾತ್ರ ಬಳಿಸಕೊಳ್ಳಲಾಗುತ್ತಿದೆ. ಗುಟ್ಕಾ ತಯಾರಿಕೆ ಮತ್ತ ಪಾನ್ ಮಸಾಲಾ ತಯಾರಿಕೆ ಘಟಕಗಳು ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿಗೆ ನೂರು ಕಿಲೋಮೀಟರ್ ದೂರದಲ್ಲಿದ್ದರೂ ಕನ್ನಡಿಗರಿಗೆ ಮಾತ್ರ ಕೆಲಸ ನೀಡದೆ ದ್ರೋಹ ಎಸಗಲಾಗಿದೆ.

ವಿಎನ್ ಮತ್ತು ವಿ.ಎಸ್.ಎನ್ ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಕಾ ಘಟಕಗಳು ದೆಹಲಿಯ ಮುಖೇಶ್‌ ಎಂಬ ಮಾರ್ವಾಡಿಗೆ ಸೇರಿದವು. ತುಮಕೂರಿನಿಂದಲೇ ಇಡೀ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗೂ ವಿಎನ್, ವಿಎನ್ಎಸ್ ಗುಟ್ಕಾ ಮತ್ತು ಪಾನ್ ಮಸಾಲಾ ಪೂರೈಕೆ ಮಾಡುವ ಅತ್ಯಂತ ದೊಡ್ಡ ಕಂಪನಿ ಇದಾಗಿದೆ ಗುಟ್ಕಾ ಮತ್ತು ಪಾನ್ ಮಸಾಲವನ್ನು ದಕ್ಷಿಣದವರಿಗೆ ತಿನ್ನಿಸಿ ಕರ್ನಾಟದ ಕನ್ನಡಿಗರಿಗೆ ಕೆಲಸವನ್ನು ನೀಡದೆ ಇಲ್ಲಿಂದ ಹಣವನ್ನು ದೋಚುತ್ತಿದ್ದಾರೆ. ಪ್ರಮುಖ ಹುದ್ದೆಗಳೆಲ್ಲ ಉತ್ತರಭಾರತೀಯರ ಪಾಲಾಗಿದೆ. ಕೇವಲ ಕಸ ಗುಡಿಸುವ, ಚರಂಡಿ ಶುಚಿಗೊಳಿಸುವಂತಹ ಕೆಲಸಗಳನ್ನು ಸ್ಥಳೀಯರಿಗೆ ನೀಡಿದ್ದರೂ ಯಾರು ದನಿ ಎತ್ತುತ್ತಿಲ್ಲ.

ಯಾವುದೇ ಕಂಪನಿ ಆರಂಭಿಸಿದರೂ ಸ್ಥಳೀಯರಿಗೆ ಆದ್ಯತೆ ನೀಡಬೇಕೆಂಬ ನಿಯಮವಿದೆ. ಡಾ.ಸರೋಜಿನಿ ಮಹಿಷಿ ವರದಿ ಪ್ರಕಾರ ಸ್ಥಳೀಯರಿಗೆ ಹೆಚ್ಚಿನ ಪ್ರಾಧ್ಯಾನ್ಯತೆ ನೀಡಬೇಕು. ಆದರೆ ಈ ನಿಯಮಗಳನ್ನು ಗಾಳಿಗೆ ತೂರಿರುವ ಕಂಪನಿ ಮಾಲಿಕ ಮುಖೇಶ್‌ ರಾಜ್ಯದ ನೆಲ, ಜಲ, ವಿದ್ಯುತ್ ಎಲ್ಲವನ್ನೂ ಕರ್ನಾಟಕ ಸರ್ಕಾರದಿಂದಲೇ ಪಡೆದುಕೊಂಡಿದ್ದರೂ ಇಲ್ಲಿ ಕನ್ನಡಗರನ್ನು ಉದ್ಯೋಗಕ್ಕೆ ತೆಗೆದುಕೊಳ್ಳದೆ ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಐದು ಘಟಕಗಳಲ್ಲಿ ಸುಮಾರು 1000 ಸಾವಿರಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದಾರೆ. ಈ ಉದ್ಯೋಗಗಳೆಲ್ಲವೂ ಉತ್ತರ ಭಾರತೀಯರ ಪಾಲಾಗಿವೆ. ಬೆರಳೆಣಿಕೆಯಲ್ಲಿರುವ ಕನ್ನಡಿಗರನ್ನು ಕಡಿಮೆ ಸಂಬಳಕ್ಕೆ ದುಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಮುಖೇಶ್ ದೆಹಲಿಯ ದೊಡ್ಡ ಕುಳ. ಈತ ಪ್ರಧಾನಿ ನರೇಂದ್ರ ಮೋದಿಯ ಆಪ್ತರಲ್ಲೊಬ್ಬ. ಇದೇ ಕಾರಣಕ್ಕೆ ಇತ್ತೀಚೆಗೆ  ಪ್ರಧಾನಿ ನರೇಂದ್ರ ಮೋದಿ ತುಮಕೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸಿದ್ದಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈತ ಪ್ರಧಾನಿ ಪಕ್ಕದಲ್ಲೇ ಇದ್ದುದು ಗಮನಿಸಬೇಕಾದ ಸಂಗತಿ. ಕರ್ನಾಟಕದ  ಉಪಮುಖ್ಯಮಂತ್ರಿಗಳಿಗೆ ಪ್ರಧಾನಿ ಪಕ್ಕ ಕುಳಿತುಕೊಳ್ಳಲು ಮತ್ತು ವೇದಿಕೆ ಹಂಚಿಕೊಳ್ಳಲು ಸಾಧ್ಯವಾಗದೇ ಇರುವಾಗ ಒಬ್ಬ ಉದ್ಯಮಿ ಅದೂ ವಿಮಲ್ ಗುಟ್ಕಾ ಮತ್ತು ಪಾನ್ ಮಸಾಲಾ ಕಂಪನಿಯ ಮಾಲಿಕ ಪ್ರಧಾನಿ ಜೊತೆ ವೇದಿಕೆ ಏರುತ್ತಾನೆ ಎಂದರೆ ಆತನ ಪ್ರಭಾವ ಎಷ್ಟಿರಬೇಕೆಂಬುದನ್ನು ಊಹಿಸಿಕೊಳ್ಳಿ. ಸ್ಪೆಷಲ್ ಪ್ರೊಟಕ್ಷನ್ ಗ್ರೂಪ್ ರಾಜ್ಯದ ಘಟಾನುಘಟಿ ನಾಯಕರನ್ನೇ ಕ್ಯಾರೇ ಅನ್ನದಿದ್ದಾಗ ಮುಖೇಶ್ ಪ್ರಧಾನಿಯ ಆಪ್ತರಲ್ಲಿ ಗುರುತಿಸಿಕೊಂಡು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದರು.

ಬಲದಿಂದ ಮೂರನೇಯ ವ್ಯಕ್ತಿ ಮುಖೇಶ್‌

ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿರುವ ವಿಎನ್ ಮತ್ತು ವಿ.ಎಸ್.ಎನ್  ಕಂಪನಿ ಇಡೀ ದಕ್ಷಿಣ ಭಾರತದ ಗುಟ್ಕಾ ಮತ್ತು ಪಾನ್ ಮಸಾಲಾ ಪೂರೈಕೆದಾರ ಎಂದರೆ ಈತ ಆದಾಯ ಎಷ್ಟಿರಬೇಡ. ನೂರಾರು ಕೋಟಿಗಳ ವಹಿವಾಟು ತಿಂಗಳಲ್ಲಿ ನಡೆದುಹೋಗುತ್ತದೆ. ಇಂತಹ ದೊಡ್ಡ ಕುಳ ಪ್ರಧಾನಿ ಭಾಗವಹಿಸಿದ್ದ ವೇದಿಕೆಯಲ್ಲಿ ಮಿಂಚಿಹೋದರು. ಬಿಜೆಪಿಗೆ ಫಂಡು ನೀಡುವಲ್ಲಿ ಈತನೂ ಒಬ್ಬ ಎನ್ನುತ್ತವೆ ಮೂಲಗಳು. ಅದೇ ಕಾರಣಕ್ಕೆ ವೇದಿಕೆಯಲ್ಲಿ ಎಲ್ಲರಿಗಿಂತ ಹೆಚ್ಚು ಕಾಣಿಸಿಕೊಂಡಿದ್ದು ಮುಖೇಶ್. ಈತನ ಕಂಪನಿಯಲ್ಲಿ ಕನ್ನಡಿಗರು ಕಸ ಹೊಡೆಯುವುದಕ್ಕೆ ಮಾತ್ರ ಸೀಮಿತರಾಗಿದ್ದಾರೆ. ಅಂದರೆ ಅವರಿಗೆ ಸಂಬಳವೆಂದು ಬರುವುದು ಆರೇಳು ಸಾವಿರ. ಇಂತಹ ತಾರತಮ್ಯಕ್ಕೆ ಸ್ಥಳೀಯ ಕಾರ್ಮಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ನಿತ್ಯವೂ ಕೋಟ್ಯಂತರ ವಹಿವಾಟು ನಡೆಯುತ್ತಿದ್ದರೂ ಸೇಲ್ ಟ್ಯಾಕ್ಸ್ ಅಧಿಕಾರಿಗಳು ಮೌನ ವಹಿಸಿ ಕುಳಿತಿದ್ದಾರೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬಂದಿವೆ. ವಾರಕ್ಕೊಮ್ಮೆಯಾದರೂ ಭೇಟಿ ನೀಡಿ ಸೆಲ್ಸ್ ಟ್ಯಾಕ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಆದರೆ ಬಂದ ಅಧಿಕಾರಿಗಳಿಗೆ “ಒಳ್ಳೆಯ” ಊಟ, ಚಹ ಕೊಟ್ಟು ಮೇಲೆ ಅಧಿಕಾರಿಗಳು ಮತ್ತು ಗಮ್ಮತ್ತಿನಿಂದ ಹಿಂದಿರುಗುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ನೌಕರರು ಹೇಳುತ್ತಾರೆ.

ಮೊನ್ನೆಮೊನ್ನೆ ಚಿಕ್ಕಬಳ್ಳಾಪುರದಲ್ಲಿ ಗುಟ್ಕಾ ಚೀಲಗಳು ದೊರೆತಿದ್ದು ಆ ಗುಟ್ಕಾ ಮೌಲ್ಯ ಸುಮಾರು 50 ಸಾವಿರ ರೂಪಾಯಿಗೂ ಹೆಚ್ಚು. ಗುಟ್ಕಾದ ಮಾಲಿಕ ಅಲ್ಲಿಯೇ ಇದ್ದ. ಅವುಗಳನ್ನು ತನ್ನವು ಎಂದರೆ ಟ್ಯಾಕ್ಸ್ ಕಟ್ಟಬೇಕಾಗಿದೀತು ಎಂಬ ಕಾರಣಕ್ಕೆ ಆತ ಅಧಿಕಾರಿಗಳ ಮುಂದೆ ಬಂದಿಲ್ಲ ಎನ್ನುತ್ತಾರೆ ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಕೆಯನ್ನು ಹತ್ತಿರದಿಂದ ಬಲ್ಲವರು.

ವಿಎನ್ ಮತ್ತು ವಿ.ಎಸ್.ಎನ್ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ ಘಟಕಗಳು ತುಮಕೂರು ಬಿಟ್ಟರೆ ಅಹಮದಾಬಾದ್ ಮತ್ತು ನೋಯಿಡಾದಲ್ಲಿಯೂ ಇವೆ ಎಂದು ಹೇಳಲಾಗುತ್ತಿದೆ. ಕಂಪನಿ ಕರ್ನಾಟಕದಲ್ಲಿದ್ದರೂ ಕನ್ನಡಿಗರಿಗೆ ಕೆಲಸ ಸಿಕ್ಕಿಲ್ಲ. ಕಂಪನಿ ಸ್ಥಾಪಿಸುವಾಗ ಸ್ಥಳೀಯರಿಗ ಉದ್ಯೋಗ ಕೋಡುತ್ತೇನೆ ಎಂದು ಬೂಸಿ ಬಿಟ್ಟಿದ್ದ ಈತ ಕನ್ನಡಿಗರು ಕೆಲಸ ಕೇಳಿದರೂ ಕೊಡದೇ ವಂಚಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...