Homeಅಂಕಣಗಳುಎಲೆಮರೆಯಿಂದ: ತಳ ಮಟ್ಟದ ಆರ್ಥಿಕ ಸ್ವಾವಲಂಬನೆ ಮತ್ತು ಮಂಗಳೂರಿನ ಟಿ.ಆರ್.ಎಫ್

ಎಲೆಮರೆಯಿಂದ: ತಳ ಮಟ್ಟದ ಆರ್ಥಿಕ ಸ್ವಾವಲಂಬನೆ ಮತ್ತು ಮಂಗಳೂರಿನ ಟಿ.ಆರ್.ಎಫ್

- Advertisement -
- Advertisement -

ಕೊಣಾಜೆಯ ಮಂಗಳೂರು ವಿ.ವಿ.ಯ ಲೇಡೀಸ್ ಹಾಸ್ಟೆಲಿನ ಮುಂಭಾಗದ ಚುರುಮುರಿ ಕಾಕನ ಪುಟ್ಟ ತಳ್ಳುಗಾಡಿಯಲ್ಲಿ ಚುರುಮುರಿ ಸವಿಯದೇ ನಮ್ಮ ವಾರಾಂತ್ಯದ ತಿರುಗಾಟ ಪರಿಪೂರ್ಣವಾಗುವುದೇ ಇಲ್ಲ. ಕಾಕನ ಚುರುಮುರಿಗೆ ಅದೇನು ರುಚಿಯೋ! ಯಾರೊಂದಿಗೂ ಹೆಚ್ಚು ಮಾತನಾಡದೇ ತಮ್ಮ ಪಾಡಿಗೆ ತಿಂದು, ಕೂಡಲೇ ಜಾಗ ಖಾಲಿ ಮಾಡುವ ಟೆಕ್ಕಿಗಳು, ಯುನಿವರ್ಸಿಟಿ ಅಧ್ಯಾಪಕರು, ಪಟ್ಟಾಂಗ ಹೊಡೆಯುತ್ತಾ ತಿನ್ನುವ ಪಡ್ಡೆ ಹುಡುಗರು, ಬಯಲ ಕಲ್ಲು ಬೆಂಚಲ್ಲಿ ಕೂತು ತಿನ್ನಲು ಸಂಕೋಚಪಟ್ಟು ಕಾರೊಳಗೇ ಕೂತು ತಿನ್ನುವ ಮಹಿಳೆಯರು, ಒಂದೇ ಪ್ಲೇಟಿಗೆ ಕೈಹಾಕಿ ಹಂಚಿ ತಿನ್ನುವ ವಿದ್ಯಾರ್ಥಿನಿಯರು-ಮಕ್ಕಳು, ಅಲ್ಲಲ್ಲಿ ನಿಲ್ಲಿಸಿರುವ ಕಾರ್, ಬೈಕುಗಳು ಹೀಗೆ ಸಂಜೆಯಾಗುತ್ತಲೇ ಕಾಕನ ತಳ್ಳುಗಾಡಿಗೆ ಕಳೆ ಬಂದು ಬಿಡುತ್ತದೆ. ಸಂಜೆ ನಾಲ್ಕಕ್ಕೆ ಆರಂಭವಾಗುವ ವ್ಯಾಪಾರ ರಾತ್ರಿ ಹತ್ತಕ್ಕೆಲ್ಲಾ ಮುಗಿದು ಮನೆಯತ್ತ ಹೊರಡುವಾಗ ಒಂದೊಳ್ಳೆಯ ಮೊತ್ತ ಜೇಬಿಗಿಳಿಸುತ್ತಾರೆ. ಬ್ಯಾರಿಗಳದ್ದು ಅವರ ಹೆಸರಿನ ಅರ್ಥಕ್ಕೆ ತಕ್ಕಂತೆ ಯಾವುದೇ ವ್ಯಾಪಾರದಲ್ಲಾದರೂ ಎತ್ತಿದ ಕೈಯಾದರೂ ಆ ಕಾಕನಿಗೆ ಬದುಕು ಕಟ್ಟಿಕೊಳ್ಳಲು ಉಚಿತವಾಗಿ ತಳ್ಳುಗಾಡಿಯೊಂದನ್ನು ನೀಡಿದ್ದು ಮಂಗಳೂರಿನ ಬ್ಯಾರಿ ಮುಸ್ಲಿಮರ ಬದುಕಿನಲ್ಲಿ ಹೊಸ ಭರವಸೆ ಮೂಡಿಸಿದ ’ಟ್ಯಾಲೆಂಟ್ ರೀಸರ್ಚ್ ಫೌಂಡೇಶನ್’.

ಒಂದು ಕಾಲದಲ್ಲಿ ಅಡಿಕೆ ಮಂಡಿಯೊಂದರಲ್ಲಿ ಕೂಲಿಯಾಗಿ ದುಡಿಯುತ್ತಿದ್ದ ಕಾಕನನ್ನು ತಳ್ಳುಗಾಡಿ ಸ್ವಾವಲಂಬಿಯಾಗಿಸಿತು. ತಳ್ಳುಗಾಡಿಯ ದುಡಿಮೆಯಿಂದಲೇ ಹೆಣ್ಣುಮಕ್ಕಳಿಗೆಲ್ಲಾ ಒಳ್ಳೆಯ ಶಿಕ್ಷಣ ನೀಡಿದರು, ಮದುವೆ ಮಾಡಿ ಕೊಟ್ಟರು. ಈ ಕಾಕ ಒಂದು ಉದಾಹರಣೆಯಷ್ಟೇ. ಟಿ.ಆರ್.ಎಫ್‌ನ ಮರುಪಾವತಿ ಬಯಸದ ಮೈಕ್ರೋ ಫೈನಾನ್ಸ್‌ನಿಂದಾಗಿ ಇಂದು ನಮ್ಮ ದ.ಕ ಜಿಲ್ಲೆಯಲ್ಲಿ ಇಂತಹ ತಳ್ಳು ಗಾಡಿಗಳಿಂದಲೇ ಬದುಕು ಕಟ್ಟಿಕೊಂಡ ಹತ್ತಾರು ಬ್ಯಾರಿ ಕಾಕಗಳಿದ್ದಾರೆ.

PC: trfmanglore

ಆಯೋಗವು ದೇಶದ ಮುಸಲ್ಮಾನರ ಸ್ಥಿತಿಗತಿಯು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗಿಂತಲೂ ಶೋಚನೀಯವಾಗಿದೆ ಎಂದು ವರದಿ ಸಲ್ಲಿಸಿತು. ಯು.ಪಿ.ಎ ಸರಕಾರವು ವರದಿ ಸಿದ್ಧಪಡಿಸಿತೇ ಹೊರತು ಪರಿಸ್ಥಿತಿಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಯಾವುದೇ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲಿಲ್ಲ. ಈ ವರದಿಯೇ 2005ರಲ್ಲಿ ಮಂಗಳೂರಿನಲ್ಲಿ ಬ್ಯಾರಿ ಉದ್ಯಮಿ ಅಬ್ದುರ್ ರವೂಫ್ ಪುತ್ತಿಗೆಯವರ ನೇತೃತ್ವದಲ್ಲಿ ಟಿ.ಆರ್.ಎಫ್ ಎಂಬ ಸರಕಾರೇತರ ಸಾಮಾಜಿಕ ಸಂಸ್ಥೆಯ ಹುಟ್ಟಿಗೆ ಕಾರಣವಾಯಿತು.

ಹೆಸರೇ ಸೂಚಿಸುವಂತೆ ಟಿ.ಆರ್.ಎಫ್. ಎಲೆಮರೆಯಲ್ಲಿದ್ದ ಪ್ರತಿಭೆಗಳನ್ನು ಗುರುತಿಸಿ, ಮಾರ್ಗದರ್ಶನ ನೀಡಿ ಗುರಿ ತಲುಪಿಸುವ ಧ್ಯೇಯವಿಟ್ಟುಕೊಂಡಿದ್ದರೂ ತನ್ನ ಸೇವೆಯನ್ನು ಅಷ್ಟಕ್ಕೇ ಸೀಮಿತಗೊಳಿಸದೆ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣದತ್ತವೂ ಮುಂದಡಿಯಿಟ್ಟಿತು. ಶಿಕ್ಷಣ, ಸ್ವ ಉದ್ಯೋಗ, ಆರೋಗ್ಯ ಜಾಗೃತಿ, ಕೌನ್ಸೆಲಿಂಗ್, ಪರಿಸರ ಸಂರಕ್ಷಣೆ, ಮಹಿಳಾ ಸಬಲೀಕರಣ ಇತ್ಯಾದಿ ಕ್ಷೇತ್ರಗಳಿಗೂ ತನ್ನ ಸೇವೆಯನ್ನು ವಿಸ್ತರಿಸಿತು.

ಸ್ವಂತ ಕೈಗಳಲ್ಲಿ ದುಡಿಯುವ ಆಹಾರಕ್ಕಿಂತ ಶ್ರೇಷ್ಠ ಆಹಾರವಿಲ್ಲ ಎನ್ನುತ್ತದೆ ಇಸ್ಲಾಂ. ಒಂದಿಷ್ಟು ಹಣವಿತ್ತೋ, ಒಂದೆರಡು ಹೊತ್ತಿನ ಅನ್ನ ಕೊಟ್ಟೋ ಬಡತನ ನೀಗಿಸಲಾಗದು. ಆರ್ಥಿಕ ಸ್ವಾವಲಂಬನೆಯಿಂದ ಮಾತ್ರ ಬಡತನ ನಿರ್ಮೂಲನೆ ಸಾಧ್ಯ. ಅದಕ್ಕಿರುವ ಏಕೈಕ ಮಾರ್ಗವೆಂದರೆ ದುಡಿಮೆ. ದುಡಿಯುವ ಕೈಗಳಿಗೆ ದುಡಿಮೆಯ ಹತ್ತಾರು ದಾರಿ ತೋರಿ ಸಣ್ಣ ಮಟ್ಟದ ಬಂಡವಾಳವನ್ನು ಶ್ರಮಜೀವಿಗಳಿಗೆ ಟಿ.ಆರ್.ಎಫ್ ಒದಗಿಸಿತು.

ಹಿಂದೆ ದ.ಕ.ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಮೀನು ವ್ಯಾಪಾರಿಗಳು ಸುಡು ಬಿಸಿಲಿಗೂ, ಜಡಿಮಳೆಗೂ ಮೀನಿನ ಬುಟ್ಟಿಯನ್ನು ತಲೆ ಮೇಲೆ ಹೊತ್ತು ಹತ್ತಾರು ಮೈಲು ನಡೆದು ವ್ಯಾಪಾರ ಮಾಡುತ್ತಿದ್ದರು. ಆರ್ಥಿಕವಾಗಿ ತಕ್ಕ ಮಟ್ಟಿಗೆ ಸದೃಢರಾದವರು ಕ್ರಮೇಣ, ಮೋಟಾರು ಬೈಕ್, ಟೆಂಪೋಗಳಲ್ಲಿ ಮೀನು ವ್ಯಾಪಾರಕ್ಕಿಳಿದರು. ಅಂತವರ ಪ್ರಾಬಲ್ಯದ ಮುಂದೆ ತಲೆಹೊರೆ ವ್ಯಾಪಾರಿಗಳು ಸೊರಗಿದರು. ಅವರಷ್ಟಲ್ಲದಿದ್ದರೂ ಸ್ವಲ್ಪ ಮಟ್ಟಿಗಾದರೂ ತಲೆ ಹೊರೆ ವ್ಯಾಪಾರಿಗಳು ಸದೃಢವಾಗಬೇಕೆಂದರೆ ಆಯಾಸವಿಲ್ಲದೇ ಹೆಚ್ಚೆಚ್ಚು ಗ್ರಾಹಕರನ್ನು ತಲುಪಬೇಕು. ಅದಕ್ಕಾಗಿ ತಲೆಹೊರೆ ವ್ಯಾಪಾರಿಗಳಿಗೆ ಟಿ.ಆರ್.ಎಫ್. ಉಚಿತವಾಗಿ ಸೈಕಲ್‌ಗಳನ್ನು ನೀಡಿ ಪ್ರೋತ್ಸಾಹಿಸಿತು.

ಅಭಿವೃದ್ಧಿ ಹೊಂದಿದ ಜಿಲ್ಲೆ ಎಂದು ಕರೆಯಲ್ಪಡುವ ದಕ್ಷಿಣ ಕನ್ನಡದ ಅತಿದೊಡ್ಡ ಸಮುದಾಯವಾದ ಬ್ಯಾರಿಗಳಲ್ಲಿನ ಶ್ರೀಮಂತಿಕೆಯಷ್ಟೇ ಹೊರಜಗತ್ತಿಗೆ ಕಾಣುತ್ತದೆ. ಇಲ್ಲೂ ಹಸಿವಿದೆ, ಬಡತನವಿದೆ, ಮೂಲಸೌಕರ್ಯಗಳನ್ನು ಹೊಂದಿರದ ಅದೆಷ್ಟೋ ಕುಟುಂಬಗಳಿವೆ. ತಳ್ಳುಗಾಡಿಯಿಟ್ಟುಕೊಂಡೋ, ಬೀದಿ ಬದಿಯಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡೋ, ತಲೆ ಹೊರೆ ವ್ಯಾಪಾರ ಮಾಡಿಕೊಂಡೋ ದಿನದೂಡುವ ವರ್ಗದ್ದು ಕಾಲಿಗೆಳೆದರೆ ತಲೆಗಿಲ್ಲ, ತಲೆಗೆಳೆದರೆ ಕಾಲಿಗಿಲ್ಲದ ಪರಿಸ್ಥಿತಿ. ಬೀದಿ ವ್ಯಾಪಾರಿಗಳಿಗೇನು ಕಷ್ಟ? ಬಾಡಿಗೆಯಿಲ್ಲ, ಕರೆಂಟ್ ಬಿಲ್ ಇಲ್ಲ, ತೆರಿಗೆಯಿಲ್ಲ ಎಂದು ಹಗುರವಾಗಿ ಮಾತನಾಡುವವರಿದ್ದಾರೆ. ಬೀದಿ ವ್ಯಾಪಾರಿಗಳ ಅಭದ್ರತೆ, ಅತಂತ್ರ ಬದುಕು ಇವುಗಳನ್ನೆಲ್ಲಾ ಅರ್ಥೈಸುವವರು ಬಹಳ ಕಡಿಮೆ. ಈ ವ್ಯಾಪಾರ ಎಷ್ಟು ದಿನ ಎಂದು ಬಲ್ಲವರಿಲ್ಲ, ಇಂತಹ ಸಣ್ಣ ಪುಟ್ಟ ವ್ಯಾಪಾರಿಗಳಿಗೆ ಬ್ಯಾಂಕ್‌ಗಳೂ ಸಾಲ ನೀಡುವುದಿಲ್ಲ. ಈ ಎಲ್ಲಾ ಸೂಕ್ಷ್ಮಗಳನ್ನು ಮನಗಂಡು ಟಿ.ಆರ್.ಎಫ್. ಇಂತಹ ಭದ್ರತೆಯಿಲ್ಲದ ವ್ಯಾಪಾರಿಗಳ ಕೈ ಹಿಡಿದು ಅವರಿಗೆ ಸ್ವಾವಲಂಬನೆಯ ಹಾದಿಯನ್ನು ತೆರೆದುಕೊಟ್ಟಿತು.

ವಿಕಲಚೇತನರ ಮನದಲ್ಲಿ ಮನೆ ಮಾಡಿರುವ ’ನಾವು ಕುಟುಂಬಕ್ಕೆ ಭಾರ’ ಎಂಬ ಭಾವವನ್ನು ಇಲ್ಲವಾಗಿಸುವ ನಿಟ್ಟಿನಲ್ಲಿ ಟಿ.ಆರ್.ಎಫ್ ಕೆಲಸ ಮಾಡುತ್ತಾ ಬಂದಿದೆ. ಅವರಿಗೆ ಮೋಟಿವೇಶನ್ ಕ್ಲಾಸ್ ಗಳನು ನೀಡುವ ಮೂಲಕ ಅವರಲ್ಲಿ ಭರವಸೆಯನ್ನು ಮೂಡಿಸಿ ದುಡಿಮೆಯ ಹಾದಿ ತೋರಿಸಿಕೊಟ್ಟಿತು. ವ್ಯಾಪಾರದಲ್ಲಿ ಆಸಕ್ತಿ ಹೊಂದಿದವರಿಗೆ ಗೂಡಂಗಡಿ ಹಾಕಿ ಅದಕ್ಕೆ ಬಂಡವಾಳವನ್ನೂ ಕೊಟ್ಟಿತು. ಮೊಬೈಲ್ ಟೆಕ್ನಿಶಿಯನ್‌ನಂತಹ ವೃತ್ತಿ ತರಬೇತಿಗಳನ್ನು ಉಚಿತವಾಗಿ ನೀಡಿ ಬದುಕು ಕಟ್ಟಿಕೊಳ್ಳುವ ಕಲೆಯನ್ನು ತೋರಿಸಿತು.

ಹಿಂದೊಂದು ಕಾಲವಿತ್ತು. ಆಗ ಮೌಲ್ವಿಗಳನ್ನು ಮಸೀದಿಗಳಿಗಷ್ಟೇ ಸೀಮಿತಗೊಳಿಸಲಾಗುತ್ತಿತ್ತು. ಜಮಾಅತ್ ವ್ಯವಸ್ಥೆ ಹಾಕಿದ ಚೌಕಟ್ಟು ದಾಟಿದರೆ ಜಮಾಅತಿಗರ ಕೆಂಗಣ್ಣಿಗೆ ಗುರಿಯಾಗಬೇಕಿತ್ತು. ಇದಕ್ಕೆ ಭಯಪಟ್ಟು ಅವರು ತಮಗಾಗಿಯೇ ಸಿದ್ಧಪಡಿಸಲಾದ ಅಚ್ಚಿನೊಳಗೆ ಕೂತುಬಿಡುತ್ತಿದ್ದರು. ಅವರ ಬಿಡುವಿನ ಸಮಯ ಹಾಗೂ ಅವರೊಳಗೆ ಅಡಗಿದ ಪ್ರತಿಭೆ ಇವೆರಡನ್ನೂ ಬಳಸಿಕೊಂಡ ಟಿ.ಆರ್.ಎಫ್ ಈ ಕಾಲದಲ್ಲಿ ಅತಿಹೆಚ್ಚು ಬೇಡಿಕೆಯಿರುವ ಮೊಬೈಲ್ ಟೆಕ್ನಿಶಿಯನ್ ತರಬೇತಿ, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ಸ್, ಕಂಪ್ಯೂಟರ್, ಫೋಟೋಗ್ರಾಫಿ, ಟ್ರೈವಿಂಗ್ ಮುಂತಾದ ಹೃಸ್ವ ಅವಧಿಯ ವೃತ್ತಿಪರ ತರಬೇತಿಗಳನ್ನು ನೀಡಿ ಮಸೀದಿಯಾಚೆಗೂ ಅವರು ಬದುಕು ಕಟ್ಟಿಕೊಳ್ಳಲು ದಾರಿ ಮಾಡಿಕೊಟ್ಟಿತು. ಶಿಕ್ಷಣವನ್ನು ಅರ್ಧಕ್ಕೇ ಮೊಟಕುಗೊಳಿಸಿ ಕೂಲಿ ಕೆಲಸ, ಗಜರಿ ಹೆಕ್ಕುವ ಕೆಲಸವನ್ನು ಜೀವನೋಪಾಯಕ್ಕಾಗಿ ಆಯ್ಕೆ ಮಾಡಿಕೊಂಡಿದ್ದ ಯುವಕರನ್ನು ’ಮರಳಿ ಬಾ ಶಾಲೆಗೆ’ ಯೋಜನೆಯಡಿಯಲ್ಲಿ ಎಸ್ಸೆಸ್ಸೆಲ್ಸಿ ಪಾಸು ಮಾಡಿಸಿ ಇಂತಹದ್ದೇ ವೃತ್ತಿಪರ ತರಬೇತಿಗಳನ್ನು ನೀಡಿ ದುಡಿಮೆಗೆ ಹೊಸತೊಂದು ಹಾದಿಯನ್ನು ತೋರಿಸಿಕೊಟ್ಟಿತು. ಈ ಯೋಜನೆಯ ಸದುಪಯೋಗ ಪಡೆದುಕೊಂಡ ಹಲವಾರು ಯುವಕರು ನಗರದಲ್ಲಿ ಸ್ವಂತ ಮೊಬೈಲ್ ಅಂಗಡಿಗಳನ್ನು ತೆರೆದು ಸ್ವಾವಲಂಬಿಗಳಾಗಿದ್ದಾರೆ. ವಿದೇಶಗಳಲ್ಲೂ ದುಡಿಯುತ್ತಿದ್ದಾರೆ.

ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಮೊದಲಿಗೆ ತೆರವುಗೊಳಿಸಿದ್ದು ಬೀದಿ ವ್ಯಾಪಾರಿಗಳನ್ನು. ಇದು ಅವರನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೀಡುಮಾಡಿತು. ಇದೇ ಕಾರಣಕ್ಕಿರಬೇಕು ಮಂಗಳೂರಿನ ಬೀದಿ ಬೀದಿಗಳಲ್ಲಿ ಗಿಜಿಗುಡುತ್ತಿದ್ದ ವ್ಯಾಪಾರಿಗಳು ಹಿಂದಿನಂತೆ ಈಗ ಕಾಣಸಿಗುವುದಿಲ್ಲ. ಟಿ.ಆರ್.ಎಫ್ ಲಾಕ್‌ಡೌನ್ ಬಳಿಕ ಬೀದಿ ವ್ಯಾಪಾರಿಗಳಿಗೆ ತಲಾ 5000 ರೂಪಾಯಿಗಳನ್ನು ನೀಡಿ ವ್ಯಾಪಾರವನ್ನು ಪುನಶ್ಚೇತನಗೊಳಿಸಿತು. ಇಂತಹ ಸೇವೆಯು ದೇಶಕ್ಕೆ ಒಂದು ಅನನ್ಯ ಮಾದರಿ. ಟಿ.ಆರ್.ಎಫ್‌ನ ಈ ಕೆಲಸಗಳು ಬಾಂಗ್ಲಾದೇಶದಲ್ಲಿ ಮೈಕ್ರೋ ಫೈನಾನ್ಸ್‌ಗಾಗಿ ನೊಬೆಲ್ ಪ್ರಶಸ್ತಿ ಪಡೆದ ಡಾ.ಮುಹಮ್ಮದ್ ಯೂನುಸ್‌ರ ಹೆಜ್ಜೆ ಗುರುತುಗಳನ್ನು ನೆನಪಿಸುವಂತಿದೆ. ಅದು ಯಶಸ್ಸಿನ ಉತ್ತುಂಗಕ್ಕೇರಲಿ ಎಂದು ಹಾರೈಸೋಣ..


ಇದನ್ನೂ ಓದಿ: ಬೆಂಗಳೂರು IISc ಪ್ರಾಧ್ಯಾಪಕಿ ರೋಹಿಣಿ ಗೋಡ್ಬೋಲೆಗೆ ಫ್ರಾನ್ಸ್‌‌ನ ಅತ್ಯುನ್ನತ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...