Homeಅಂಕಣಗಳುಎಲೆಮರೆಯಿಂದ: ತಳ ಮಟ್ಟದ ಆರ್ಥಿಕ ಸ್ವಾವಲಂಬನೆ ಮತ್ತು ಮಂಗಳೂರಿನ ಟಿ.ಆರ್.ಎಫ್

ಎಲೆಮರೆಯಿಂದ: ತಳ ಮಟ್ಟದ ಆರ್ಥಿಕ ಸ್ವಾವಲಂಬನೆ ಮತ್ತು ಮಂಗಳೂರಿನ ಟಿ.ಆರ್.ಎಫ್

- Advertisement -
- Advertisement -

ಕೊಣಾಜೆಯ ಮಂಗಳೂರು ವಿ.ವಿ.ಯ ಲೇಡೀಸ್ ಹಾಸ್ಟೆಲಿನ ಮುಂಭಾಗದ ಚುರುಮುರಿ ಕಾಕನ ಪುಟ್ಟ ತಳ್ಳುಗಾಡಿಯಲ್ಲಿ ಚುರುಮುರಿ ಸವಿಯದೇ ನಮ್ಮ ವಾರಾಂತ್ಯದ ತಿರುಗಾಟ ಪರಿಪೂರ್ಣವಾಗುವುದೇ ಇಲ್ಲ. ಕಾಕನ ಚುರುಮುರಿಗೆ ಅದೇನು ರುಚಿಯೋ! ಯಾರೊಂದಿಗೂ ಹೆಚ್ಚು ಮಾತನಾಡದೇ ತಮ್ಮ ಪಾಡಿಗೆ ತಿಂದು, ಕೂಡಲೇ ಜಾಗ ಖಾಲಿ ಮಾಡುವ ಟೆಕ್ಕಿಗಳು, ಯುನಿವರ್ಸಿಟಿ ಅಧ್ಯಾಪಕರು, ಪಟ್ಟಾಂಗ ಹೊಡೆಯುತ್ತಾ ತಿನ್ನುವ ಪಡ್ಡೆ ಹುಡುಗರು, ಬಯಲ ಕಲ್ಲು ಬೆಂಚಲ್ಲಿ ಕೂತು ತಿನ್ನಲು ಸಂಕೋಚಪಟ್ಟು ಕಾರೊಳಗೇ ಕೂತು ತಿನ್ನುವ ಮಹಿಳೆಯರು, ಒಂದೇ ಪ್ಲೇಟಿಗೆ ಕೈಹಾಕಿ ಹಂಚಿ ತಿನ್ನುವ ವಿದ್ಯಾರ್ಥಿನಿಯರು-ಮಕ್ಕಳು, ಅಲ್ಲಲ್ಲಿ ನಿಲ್ಲಿಸಿರುವ ಕಾರ್, ಬೈಕುಗಳು ಹೀಗೆ ಸಂಜೆಯಾಗುತ್ತಲೇ ಕಾಕನ ತಳ್ಳುಗಾಡಿಗೆ ಕಳೆ ಬಂದು ಬಿಡುತ್ತದೆ. ಸಂಜೆ ನಾಲ್ಕಕ್ಕೆ ಆರಂಭವಾಗುವ ವ್ಯಾಪಾರ ರಾತ್ರಿ ಹತ್ತಕ್ಕೆಲ್ಲಾ ಮುಗಿದು ಮನೆಯತ್ತ ಹೊರಡುವಾಗ ಒಂದೊಳ್ಳೆಯ ಮೊತ್ತ ಜೇಬಿಗಿಳಿಸುತ್ತಾರೆ. ಬ್ಯಾರಿಗಳದ್ದು ಅವರ ಹೆಸರಿನ ಅರ್ಥಕ್ಕೆ ತಕ್ಕಂತೆ ಯಾವುದೇ ವ್ಯಾಪಾರದಲ್ಲಾದರೂ ಎತ್ತಿದ ಕೈಯಾದರೂ ಆ ಕಾಕನಿಗೆ ಬದುಕು ಕಟ್ಟಿಕೊಳ್ಳಲು ಉಚಿತವಾಗಿ ತಳ್ಳುಗಾಡಿಯೊಂದನ್ನು ನೀಡಿದ್ದು ಮಂಗಳೂರಿನ ಬ್ಯಾರಿ ಮುಸ್ಲಿಮರ ಬದುಕಿನಲ್ಲಿ ಹೊಸ ಭರವಸೆ ಮೂಡಿಸಿದ ’ಟ್ಯಾಲೆಂಟ್ ರೀಸರ್ಚ್ ಫೌಂಡೇಶನ್’.

ಒಂದು ಕಾಲದಲ್ಲಿ ಅಡಿಕೆ ಮಂಡಿಯೊಂದರಲ್ಲಿ ಕೂಲಿಯಾಗಿ ದುಡಿಯುತ್ತಿದ್ದ ಕಾಕನನ್ನು ತಳ್ಳುಗಾಡಿ ಸ್ವಾವಲಂಬಿಯಾಗಿಸಿತು. ತಳ್ಳುಗಾಡಿಯ ದುಡಿಮೆಯಿಂದಲೇ ಹೆಣ್ಣುಮಕ್ಕಳಿಗೆಲ್ಲಾ ಒಳ್ಳೆಯ ಶಿಕ್ಷಣ ನೀಡಿದರು, ಮದುವೆ ಮಾಡಿ ಕೊಟ್ಟರು. ಈ ಕಾಕ ಒಂದು ಉದಾಹರಣೆಯಷ್ಟೇ. ಟಿ.ಆರ್.ಎಫ್‌ನ ಮರುಪಾವತಿ ಬಯಸದ ಮೈಕ್ರೋ ಫೈನಾನ್ಸ್‌ನಿಂದಾಗಿ ಇಂದು ನಮ್ಮ ದ.ಕ ಜಿಲ್ಲೆಯಲ್ಲಿ ಇಂತಹ ತಳ್ಳು ಗಾಡಿಗಳಿಂದಲೇ ಬದುಕು ಕಟ್ಟಿಕೊಂಡ ಹತ್ತಾರು ಬ್ಯಾರಿ ಕಾಕಗಳಿದ್ದಾರೆ.

PC: trfmanglore

ಆಯೋಗವು ದೇಶದ ಮುಸಲ್ಮಾನರ ಸ್ಥಿತಿಗತಿಯು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗಿಂತಲೂ ಶೋಚನೀಯವಾಗಿದೆ ಎಂದು ವರದಿ ಸಲ್ಲಿಸಿತು. ಯು.ಪಿ.ಎ ಸರಕಾರವು ವರದಿ ಸಿದ್ಧಪಡಿಸಿತೇ ಹೊರತು ಪರಿಸ್ಥಿತಿಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಯಾವುದೇ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲಿಲ್ಲ. ಈ ವರದಿಯೇ 2005ರಲ್ಲಿ ಮಂಗಳೂರಿನಲ್ಲಿ ಬ್ಯಾರಿ ಉದ್ಯಮಿ ಅಬ್ದುರ್ ರವೂಫ್ ಪುತ್ತಿಗೆಯವರ ನೇತೃತ್ವದಲ್ಲಿ ಟಿ.ಆರ್.ಎಫ್ ಎಂಬ ಸರಕಾರೇತರ ಸಾಮಾಜಿಕ ಸಂಸ್ಥೆಯ ಹುಟ್ಟಿಗೆ ಕಾರಣವಾಯಿತು.

ಹೆಸರೇ ಸೂಚಿಸುವಂತೆ ಟಿ.ಆರ್.ಎಫ್. ಎಲೆಮರೆಯಲ್ಲಿದ್ದ ಪ್ರತಿಭೆಗಳನ್ನು ಗುರುತಿಸಿ, ಮಾರ್ಗದರ್ಶನ ನೀಡಿ ಗುರಿ ತಲುಪಿಸುವ ಧ್ಯೇಯವಿಟ್ಟುಕೊಂಡಿದ್ದರೂ ತನ್ನ ಸೇವೆಯನ್ನು ಅಷ್ಟಕ್ಕೇ ಸೀಮಿತಗೊಳಿಸದೆ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣದತ್ತವೂ ಮುಂದಡಿಯಿಟ್ಟಿತು. ಶಿಕ್ಷಣ, ಸ್ವ ಉದ್ಯೋಗ, ಆರೋಗ್ಯ ಜಾಗೃತಿ, ಕೌನ್ಸೆಲಿಂಗ್, ಪರಿಸರ ಸಂರಕ್ಷಣೆ, ಮಹಿಳಾ ಸಬಲೀಕರಣ ಇತ್ಯಾದಿ ಕ್ಷೇತ್ರಗಳಿಗೂ ತನ್ನ ಸೇವೆಯನ್ನು ವಿಸ್ತರಿಸಿತು.

ಸ್ವಂತ ಕೈಗಳಲ್ಲಿ ದುಡಿಯುವ ಆಹಾರಕ್ಕಿಂತ ಶ್ರೇಷ್ಠ ಆಹಾರವಿಲ್ಲ ಎನ್ನುತ್ತದೆ ಇಸ್ಲಾಂ. ಒಂದಿಷ್ಟು ಹಣವಿತ್ತೋ, ಒಂದೆರಡು ಹೊತ್ತಿನ ಅನ್ನ ಕೊಟ್ಟೋ ಬಡತನ ನೀಗಿಸಲಾಗದು. ಆರ್ಥಿಕ ಸ್ವಾವಲಂಬನೆಯಿಂದ ಮಾತ್ರ ಬಡತನ ನಿರ್ಮೂಲನೆ ಸಾಧ್ಯ. ಅದಕ್ಕಿರುವ ಏಕೈಕ ಮಾರ್ಗವೆಂದರೆ ದುಡಿಮೆ. ದುಡಿಯುವ ಕೈಗಳಿಗೆ ದುಡಿಮೆಯ ಹತ್ತಾರು ದಾರಿ ತೋರಿ ಸಣ್ಣ ಮಟ್ಟದ ಬಂಡವಾಳವನ್ನು ಶ್ರಮಜೀವಿಗಳಿಗೆ ಟಿ.ಆರ್.ಎಫ್ ಒದಗಿಸಿತು.

ಹಿಂದೆ ದ.ಕ.ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಮೀನು ವ್ಯಾಪಾರಿಗಳು ಸುಡು ಬಿಸಿಲಿಗೂ, ಜಡಿಮಳೆಗೂ ಮೀನಿನ ಬುಟ್ಟಿಯನ್ನು ತಲೆ ಮೇಲೆ ಹೊತ್ತು ಹತ್ತಾರು ಮೈಲು ನಡೆದು ವ್ಯಾಪಾರ ಮಾಡುತ್ತಿದ್ದರು. ಆರ್ಥಿಕವಾಗಿ ತಕ್ಕ ಮಟ್ಟಿಗೆ ಸದೃಢರಾದವರು ಕ್ರಮೇಣ, ಮೋಟಾರು ಬೈಕ್, ಟೆಂಪೋಗಳಲ್ಲಿ ಮೀನು ವ್ಯಾಪಾರಕ್ಕಿಳಿದರು. ಅಂತವರ ಪ್ರಾಬಲ್ಯದ ಮುಂದೆ ತಲೆಹೊರೆ ವ್ಯಾಪಾರಿಗಳು ಸೊರಗಿದರು. ಅವರಷ್ಟಲ್ಲದಿದ್ದರೂ ಸ್ವಲ್ಪ ಮಟ್ಟಿಗಾದರೂ ತಲೆ ಹೊರೆ ವ್ಯಾಪಾರಿಗಳು ಸದೃಢವಾಗಬೇಕೆಂದರೆ ಆಯಾಸವಿಲ್ಲದೇ ಹೆಚ್ಚೆಚ್ಚು ಗ್ರಾಹಕರನ್ನು ತಲುಪಬೇಕು. ಅದಕ್ಕಾಗಿ ತಲೆಹೊರೆ ವ್ಯಾಪಾರಿಗಳಿಗೆ ಟಿ.ಆರ್.ಎಫ್. ಉಚಿತವಾಗಿ ಸೈಕಲ್‌ಗಳನ್ನು ನೀಡಿ ಪ್ರೋತ್ಸಾಹಿಸಿತು.

ಅಭಿವೃದ್ಧಿ ಹೊಂದಿದ ಜಿಲ್ಲೆ ಎಂದು ಕರೆಯಲ್ಪಡುವ ದಕ್ಷಿಣ ಕನ್ನಡದ ಅತಿದೊಡ್ಡ ಸಮುದಾಯವಾದ ಬ್ಯಾರಿಗಳಲ್ಲಿನ ಶ್ರೀಮಂತಿಕೆಯಷ್ಟೇ ಹೊರಜಗತ್ತಿಗೆ ಕಾಣುತ್ತದೆ. ಇಲ್ಲೂ ಹಸಿವಿದೆ, ಬಡತನವಿದೆ, ಮೂಲಸೌಕರ್ಯಗಳನ್ನು ಹೊಂದಿರದ ಅದೆಷ್ಟೋ ಕುಟುಂಬಗಳಿವೆ. ತಳ್ಳುಗಾಡಿಯಿಟ್ಟುಕೊಂಡೋ, ಬೀದಿ ಬದಿಯಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡೋ, ತಲೆ ಹೊರೆ ವ್ಯಾಪಾರ ಮಾಡಿಕೊಂಡೋ ದಿನದೂಡುವ ವರ್ಗದ್ದು ಕಾಲಿಗೆಳೆದರೆ ತಲೆಗಿಲ್ಲ, ತಲೆಗೆಳೆದರೆ ಕಾಲಿಗಿಲ್ಲದ ಪರಿಸ್ಥಿತಿ. ಬೀದಿ ವ್ಯಾಪಾರಿಗಳಿಗೇನು ಕಷ್ಟ? ಬಾಡಿಗೆಯಿಲ್ಲ, ಕರೆಂಟ್ ಬಿಲ್ ಇಲ್ಲ, ತೆರಿಗೆಯಿಲ್ಲ ಎಂದು ಹಗುರವಾಗಿ ಮಾತನಾಡುವವರಿದ್ದಾರೆ. ಬೀದಿ ವ್ಯಾಪಾರಿಗಳ ಅಭದ್ರತೆ, ಅತಂತ್ರ ಬದುಕು ಇವುಗಳನ್ನೆಲ್ಲಾ ಅರ್ಥೈಸುವವರು ಬಹಳ ಕಡಿಮೆ. ಈ ವ್ಯಾಪಾರ ಎಷ್ಟು ದಿನ ಎಂದು ಬಲ್ಲವರಿಲ್ಲ, ಇಂತಹ ಸಣ್ಣ ಪುಟ್ಟ ವ್ಯಾಪಾರಿಗಳಿಗೆ ಬ್ಯಾಂಕ್‌ಗಳೂ ಸಾಲ ನೀಡುವುದಿಲ್ಲ. ಈ ಎಲ್ಲಾ ಸೂಕ್ಷ್ಮಗಳನ್ನು ಮನಗಂಡು ಟಿ.ಆರ್.ಎಫ್. ಇಂತಹ ಭದ್ರತೆಯಿಲ್ಲದ ವ್ಯಾಪಾರಿಗಳ ಕೈ ಹಿಡಿದು ಅವರಿಗೆ ಸ್ವಾವಲಂಬನೆಯ ಹಾದಿಯನ್ನು ತೆರೆದುಕೊಟ್ಟಿತು.

ವಿಕಲಚೇತನರ ಮನದಲ್ಲಿ ಮನೆ ಮಾಡಿರುವ ’ನಾವು ಕುಟುಂಬಕ್ಕೆ ಭಾರ’ ಎಂಬ ಭಾವವನ್ನು ಇಲ್ಲವಾಗಿಸುವ ನಿಟ್ಟಿನಲ್ಲಿ ಟಿ.ಆರ್.ಎಫ್ ಕೆಲಸ ಮಾಡುತ್ತಾ ಬಂದಿದೆ. ಅವರಿಗೆ ಮೋಟಿವೇಶನ್ ಕ್ಲಾಸ್ ಗಳನು ನೀಡುವ ಮೂಲಕ ಅವರಲ್ಲಿ ಭರವಸೆಯನ್ನು ಮೂಡಿಸಿ ದುಡಿಮೆಯ ಹಾದಿ ತೋರಿಸಿಕೊಟ್ಟಿತು. ವ್ಯಾಪಾರದಲ್ಲಿ ಆಸಕ್ತಿ ಹೊಂದಿದವರಿಗೆ ಗೂಡಂಗಡಿ ಹಾಕಿ ಅದಕ್ಕೆ ಬಂಡವಾಳವನ್ನೂ ಕೊಟ್ಟಿತು. ಮೊಬೈಲ್ ಟೆಕ್ನಿಶಿಯನ್‌ನಂತಹ ವೃತ್ತಿ ತರಬೇತಿಗಳನ್ನು ಉಚಿತವಾಗಿ ನೀಡಿ ಬದುಕು ಕಟ್ಟಿಕೊಳ್ಳುವ ಕಲೆಯನ್ನು ತೋರಿಸಿತು.

ಹಿಂದೊಂದು ಕಾಲವಿತ್ತು. ಆಗ ಮೌಲ್ವಿಗಳನ್ನು ಮಸೀದಿಗಳಿಗಷ್ಟೇ ಸೀಮಿತಗೊಳಿಸಲಾಗುತ್ತಿತ್ತು. ಜಮಾಅತ್ ವ್ಯವಸ್ಥೆ ಹಾಕಿದ ಚೌಕಟ್ಟು ದಾಟಿದರೆ ಜಮಾಅತಿಗರ ಕೆಂಗಣ್ಣಿಗೆ ಗುರಿಯಾಗಬೇಕಿತ್ತು. ಇದಕ್ಕೆ ಭಯಪಟ್ಟು ಅವರು ತಮಗಾಗಿಯೇ ಸಿದ್ಧಪಡಿಸಲಾದ ಅಚ್ಚಿನೊಳಗೆ ಕೂತುಬಿಡುತ್ತಿದ್ದರು. ಅವರ ಬಿಡುವಿನ ಸಮಯ ಹಾಗೂ ಅವರೊಳಗೆ ಅಡಗಿದ ಪ್ರತಿಭೆ ಇವೆರಡನ್ನೂ ಬಳಸಿಕೊಂಡ ಟಿ.ಆರ್.ಎಫ್ ಈ ಕಾಲದಲ್ಲಿ ಅತಿಹೆಚ್ಚು ಬೇಡಿಕೆಯಿರುವ ಮೊಬೈಲ್ ಟೆಕ್ನಿಶಿಯನ್ ತರಬೇತಿ, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ಸ್, ಕಂಪ್ಯೂಟರ್, ಫೋಟೋಗ್ರಾಫಿ, ಟ್ರೈವಿಂಗ್ ಮುಂತಾದ ಹೃಸ್ವ ಅವಧಿಯ ವೃತ್ತಿಪರ ತರಬೇತಿಗಳನ್ನು ನೀಡಿ ಮಸೀದಿಯಾಚೆಗೂ ಅವರು ಬದುಕು ಕಟ್ಟಿಕೊಳ್ಳಲು ದಾರಿ ಮಾಡಿಕೊಟ್ಟಿತು. ಶಿಕ್ಷಣವನ್ನು ಅರ್ಧಕ್ಕೇ ಮೊಟಕುಗೊಳಿಸಿ ಕೂಲಿ ಕೆಲಸ, ಗಜರಿ ಹೆಕ್ಕುವ ಕೆಲಸವನ್ನು ಜೀವನೋಪಾಯಕ್ಕಾಗಿ ಆಯ್ಕೆ ಮಾಡಿಕೊಂಡಿದ್ದ ಯುವಕರನ್ನು ’ಮರಳಿ ಬಾ ಶಾಲೆಗೆ’ ಯೋಜನೆಯಡಿಯಲ್ಲಿ ಎಸ್ಸೆಸ್ಸೆಲ್ಸಿ ಪಾಸು ಮಾಡಿಸಿ ಇಂತಹದ್ದೇ ವೃತ್ತಿಪರ ತರಬೇತಿಗಳನ್ನು ನೀಡಿ ದುಡಿಮೆಗೆ ಹೊಸತೊಂದು ಹಾದಿಯನ್ನು ತೋರಿಸಿಕೊಟ್ಟಿತು. ಈ ಯೋಜನೆಯ ಸದುಪಯೋಗ ಪಡೆದುಕೊಂಡ ಹಲವಾರು ಯುವಕರು ನಗರದಲ್ಲಿ ಸ್ವಂತ ಮೊಬೈಲ್ ಅಂಗಡಿಗಳನ್ನು ತೆರೆದು ಸ್ವಾವಲಂಬಿಗಳಾಗಿದ್ದಾರೆ. ವಿದೇಶಗಳಲ್ಲೂ ದುಡಿಯುತ್ತಿದ್ದಾರೆ.

ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಮೊದಲಿಗೆ ತೆರವುಗೊಳಿಸಿದ್ದು ಬೀದಿ ವ್ಯಾಪಾರಿಗಳನ್ನು. ಇದು ಅವರನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೀಡುಮಾಡಿತು. ಇದೇ ಕಾರಣಕ್ಕಿರಬೇಕು ಮಂಗಳೂರಿನ ಬೀದಿ ಬೀದಿಗಳಲ್ಲಿ ಗಿಜಿಗುಡುತ್ತಿದ್ದ ವ್ಯಾಪಾರಿಗಳು ಹಿಂದಿನಂತೆ ಈಗ ಕಾಣಸಿಗುವುದಿಲ್ಲ. ಟಿ.ಆರ್.ಎಫ್ ಲಾಕ್‌ಡೌನ್ ಬಳಿಕ ಬೀದಿ ವ್ಯಾಪಾರಿಗಳಿಗೆ ತಲಾ 5000 ರೂಪಾಯಿಗಳನ್ನು ನೀಡಿ ವ್ಯಾಪಾರವನ್ನು ಪುನಶ್ಚೇತನಗೊಳಿಸಿತು. ಇಂತಹ ಸೇವೆಯು ದೇಶಕ್ಕೆ ಒಂದು ಅನನ್ಯ ಮಾದರಿ. ಟಿ.ಆರ್.ಎಫ್‌ನ ಈ ಕೆಲಸಗಳು ಬಾಂಗ್ಲಾದೇಶದಲ್ಲಿ ಮೈಕ್ರೋ ಫೈನಾನ್ಸ್‌ಗಾಗಿ ನೊಬೆಲ್ ಪ್ರಶಸ್ತಿ ಪಡೆದ ಡಾ.ಮುಹಮ್ಮದ್ ಯೂನುಸ್‌ರ ಹೆಜ್ಜೆ ಗುರುತುಗಳನ್ನು ನೆನಪಿಸುವಂತಿದೆ. ಅದು ಯಶಸ್ಸಿನ ಉತ್ತುಂಗಕ್ಕೇರಲಿ ಎಂದು ಹಾರೈಸೋಣ..


ಇದನ್ನೂ ಓದಿ: ಬೆಂಗಳೂರು IISc ಪ್ರಾಧ್ಯಾಪಕಿ ರೋಹಿಣಿ ಗೋಡ್ಬೋಲೆಗೆ ಫ್ರಾನ್ಸ್‌‌ನ ಅತ್ಯುನ್ನತ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...