Homeಕರ್ನಾಟಕಗೌರಿ ಹತ್ಯೆ ವಿಚಾರಣೆ: ಹತ್ಯೆಗೆ ಬಳಸಿದ್ದ ಪ್ಯಾಷನ್ ಪ್ರೊ ಬೈಕ್ ಗುರುತುಹಚ್ಚಿದ ಸಾಕ್ಷಿಗಳು

ಗೌರಿ ಹತ್ಯೆ ವಿಚಾರಣೆ: ಹತ್ಯೆಗೆ ಬಳಸಿದ್ದ ಪ್ಯಾಷನ್ ಪ್ರೊ ಬೈಕ್ ಗುರುತುಹಚ್ಚಿದ ಸಾಕ್ಷಿಗಳು

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ ಆಗಸ್ಟ್ ಎರಡನೇ ವಾರದಲ್ಲಿ ನಿಗದಿಯಾಗಿದ್ದ 5 ದಿನಗಳಲ್ಲಿ ಕಾರಣಾಂತರಗಳಿಂದ ಒಂದೂವರೆ ದಿನವಷ್ಟೇ ನಡೆಯಿತು. ಸದ್ಯಕ್ಕೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸೆಷನ್ಸ್ ನ್ಯಾಯಾಧೀಶರಾದ ಸಿ.ಎಂ. ಜೋಶಿಯವರು ಹೈಕೋರ್ಟಿಗೆ ಮುಂಬಡ್ತಿ ಪಡೆದಿದ್ದಾರೆ. ಹಾಗಾಗಿ ಮುಂಬರುವ ನ್ಯಾಯಾಧೀಶರು ಈ ಪ್ರಕರಣದ ವಿಚಾರಣೆಗೆ ಎಷ್ಟು ಸಮಯ ಕೊಡುತ್ತಾರೆ ಎಂಬುದು ಸ್ಪಷ್ಟವಾಗಿಲ್ಲ. ಸದ್ಯಕ್ಕೆ ಆಗಸ್ಟ್ ತಿಂಗಳಿನಲ್ಲಿ ನಡೆದ ವಿಚಾರಣೆಯ ಸಂಕ್ಷಿಪ್ತ ವರದಿ ಇಲ್ಲಿದೆ.

ಗೌರಿಯವರನ್ನು ನಕ್ಸಲರು ಕೊಂದಿರಬಹುದು, ಆಸ್ತಿ ವಿವಾದದಿಂದ ಕೊಲೆಯಾಗಿರಬಹುದು ಎಂಬುದು ಕೋರ್ಟ್ ವಿಚಾರಣೆಯ ಮೊದಲ ತಿಂಗಳಿನಲ್ಲಿ ಆರೋಪಿ ಪರ ವಕೀಲರ ಪಾಟಿ ಸವಾಲಿನ ವಾದ ಸರಣಿಯಾಗಿತ್ತು. ಈಗ ಎರಡನೆಯ ತಿಂಗಳಿನಲ್ಲಿ, ಸಾಕ್ಷಿಗಳು ಪೊಲೀಸರು ಹೇಳಿಕೊಟ್ಟಂತೆ ಹೇಳುತ್ತಿದ್ದಾರೆ; ತನಿಖೆಯಲ್ಲಿ ಪೊಲೀಸರು ನಿಯಮಗಳನ್ನು ಪಾಲಿಸಿಲ್ಲ ಎಂಬುದು ಅವರ ವಾದಸರಣಿಯಾಗಿದೆ. ಈ ತಿಂಗಳಿನಲ್ಲಿ ಒಟ್ಟು 8 ಸಾಕ್ಷಿಗಳನ್ನು ಕೋರ್ಟ್ ವಿಚಾರಣೆ ನಡೆಸಿತು. ಆರೋಪಿ ಪರ ವಕೀಲರು ಪಾಟಿ ಸವಾಲು ನಡೆಸಿದರು.

PWD ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಆಗಿರುವ ವಿ.ಬಿ.ಕಳಗೇರಿ ಎಂಬುವವರು ಅಪರಾಧ ನಡೆದ ಸ್ಥಳದ ಸ್ಕೆಚ್ ಮಾಡಿಕೊಟ್ಟಿರುವುದಾಗಿ ಹೇಳಿದರು ಮತ್ತು ಅದನ್ನು ಗುರುತಿಸಿದರು. ಪೊಲೀಸರ ಮನವಿ ಮತ್ತು ತಮ್ಮ ಮೇಲಧಿಕಾರಿಗಳ ಆದೇಶದ ಮೇರೆಗೆ ಸ್ಕೆಚ್ ಮಾಡಿಕೊಟ್ಟಿದ್ದೆ ಎಂದು ಸಾಕ್ಷಿ ನುಡಿದರು. ಇದನ್ನು ಆಕ್ಷೇಪಿಸಿದ ಆರೋಪಿ ಪರ ವಕೀಲರು ನೀವು ಅಪರಾಧ ನಡೆದ ಸ್ಥಳಕ್ಕೆ ಹೋಗಿಯೇ ಇಲ್ಲ, ಪೊಲೀಸರೇ ನಿಮ್ಮ ಕಚೇರಿಗೆ ಬಂದು ಸ್ಕೆಚ್ ಬರೆಸಿದ್ದಾರೆ ಎಂದು ವಾದಿಸಿದರು. ಅದನ್ನು ವಿ.ಬಿ ಕಳಗೇರಿಯವರು ನಿರಾಕರಿಸಿದರು.

’ಗೌರಿಯವರಿಗೆ ಗುಂಡು ಹಾರಿಸಿದ ಆರೋಪಿ ಪರಶುರಾಮ್ ವಾಗ್ಮೋರೆಯನ್ನು 2018ರ ಜೂನ್ ತಿಂಗಳಿನಲ್ಲಿ ಬಂಧಿಸಲಾಗಿತ್ತು. ಅದೇ ಜೂನ್ ತಿಂಗಳ 22ರಂದು ಆತನನ್ನು ಅಪರಾಧ ನಡೆದ ಸ್ಥಳಕ್ಕೆ ಕರೆದೊಯ್ದಿದ್ದೆವು. ಕೃತ್ಯ ನಡೆದಾಗ ಆತ ಯಾವ ಬಟ್ಟೆಯನ್ನು ಧರಿಸಿದ್ದನೊ (ಜಾಕೆಟ್ ಮತ್ತು ಶೂ) ಅಂತಹ ಬಟ್ಟೆಯನ್ನು ತೊಡಿಸಿ, ಗೌರಿಯವರು ಬಳಸುತ್ತಿದ್ದ ಕಾರನ್ನು ಹೋಲುವ ಮತ್ತೊಂದು ಕಾರನ್ನು ತರಿಸಿ ಒಟ್ಟು ಅಪರಾಧ ಚಿತ್ರಣವನ್ನು ಮರು ಸೃಷ್ಟಿ ಮಾಡಿ ರೆಕಾರ್ಡ್ ಮಾಡಿಕೊಂಡೆವು’ ಎಂದು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಶಿವಾರೆಡ್ಡಿಯವರು ಸಾಕ್ಷಿ ನುಡಿದರು.

ಆರೋಪಿ ಪರ ವಕೀಲರು ’ಅಪರಾಧ ಚಿತ್ರಣದ ಮರುಸೃಷ್ಟಿಗೆ ಬಳಸಿದ ಬಟ್ಟೆಗಳನ್ನು ಪೊಲೀಸರು ಎಲ್ಲಿಂದ ಖರೀದಿಸಿದ್ದೀರಿ? ಅದಕ್ಕೆ ಹಣ ಪಾವತಿಸಿದ ಬಿಲ್ ಇದೆಯೆ?’ ಎಂದು ಶಿವಾರೆಡ್ಡಿಯವರನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಶಿವಾರೆಡ್ಡಿಯವರು ’ಮೆಜೆಸ್ಟಿಕ್‌ನ ಬೀದಿ ಬದಿಯಲ್ಲಿ ಬಟ್ಟೆ ಖರೀದಿಸಿದೆವು ಮತ್ತು ಬೀದಿ ಬದಿಯಲ್ಲಿ ರಶೀದಿ ನೀಡುವುದಿಲ್ಲ’ ಎಂದು ಉತ್ತರಿಸಿದರು. ’ರಸ್ತೆ ಬದಿ ಬಿಟ್ಟು ಬೇರೆ ಅಂಗಡಿಗಳಲ್ಲಿ ಏಕೆ ಬಟ್ಟೆ ಖರೀದಿಸಲಿಲ್ಲ’ ಎಂದು ವಕೀಲರು ಮರು ಪ್ರಶ್ನಿಸಿದಾಗ, ’ಆ ರೀತಿಯ ಬಟ್ಟೆ ಬೇರೆ ಅಂಗಡಿಯಲ್ಲಿ ಸಿಗಲಿಲ್ಲ’ ಎಂದು ಶಿವಾರೆಡ್ಡಿಯವರು ಉತ್ತರಿಸಿದರು.

ಗೌರಿಯವರನ್ನು ಹತ್ಯೆ ಮಾಡಲು ಬಳಸಿದ್ದ ಹೀರೋ ಕಂಪನಿಯ ಪ್ಯಾಷನ್ ಪ್ರೊ ಬೈಕ್‌ಅನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅದನ್ನು ತುಮಕೂರಿನ ಸಾಕ್ಷಿಯೊಬ್ಬರು ಗುರುತಿಸಿದ್ದರು. ತಾನು ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದ್ದನು ಪ್ರಸ್ತಾಪಿಸಿದ್ದ ಸಾಕ್ಷಿಯು, “2017ರ ಸೆಪ್ಟಂಬರ್ 5ರಂದು ಟಿವಿ ಚಾನೆಲ್ ಒಂದರಲ್ಲಿ ಇಂಟರ್‌ವ್ಯೂ ಮುಗಿಸಿ ಗೌರಿ ಲಂಕೇಶ್ ಮನೆ ಎದುರಿನ ಖಾಲಿ ಸೈಟ್‌ನಲ್ಲಿದ್ದ ಶೆಡ್‌ನಲ್ಲಿ ಸ್ನೇಹಿತ ತಾಯಪ್ಪ ಎಂಬುವವರ ಜೊತೆ ಉಳಿದುಕೊಂಡಿದ್ದೆ. ಅಡುಗೆ ಮಾಡುತ್ತಿದ್ದಾಗ ಗುಂಡಿನ ಶಬ್ದ ಕೇಳಿ ಮನೆಯಿಂದ ಹೊರಬಂದಾಗ ಕಪ್ಪು ಬಣ್ಣದ ಪ್ಯಾಷನ್ ಪ್ರೊ ಬೈಕ್‌ನಲ್ಲಿ ಇಬ್ಬರು ಗೌರಿ ಲಂಕೇಶ್‌ರವರ ಮನೆಯ ಕಡೆಯಿಂದ ತಾವಿದ್ದ ಕಾಂಪೌಂಡ್ ದಾಟಿಕೊಂಡು ಸುಭಾಷ್ ಪಾರ್ಕಿನ ಕಡೆ ಹೋಗುವುದನ್ನು ನೋಡಿದೆ. ಅವರು ಪೂರ್ತಿ ಮುಖ ಮುಚ್ಚುವ ಹಾಗೆ ಹೆಲ್ಮೆಟ್ ಧರಿಸಿದ್ದರು. ಅದರೊಟ್ಟಿಗೆ ಕಾರು ಒಂದು ಇಂಜಿನ್ ಆನ್ ಆಗಿ ನಿಂತಿತ್ತು. ಅದಾದ ಐದಾರು ಸೆಕೆಂಡ್‌ಗಳಲ್ಲಿ ಮತ್ತೊಂದು ಬೈಕ್‌ನಲ್ಲಿ ಇಬ್ಬರು ಗೌರಿ ಲಂಕೇಶ್‌ರವರ ಮನೆ ಎದುರು ಬಂದು ನಿಂತರು (ಟಿವಿ ಕೇಬಲ್ ಸರಿಪಡಿಸುವವರು). ನಾನು ಮತ್ತು ನನ್ನ ಸ್ನೇಹಿತ ತಾಯಪ್ಪ ಇಬ್ಬರಿಗೂ ಭಯವಾಗಿ ವಾಪಸ್ ಶೆಡ್‌ನ ಒಳಗೆ ಹೋದೆವು” ಎಂದು ಕೋರ್ಟಿನಲ್ಲಿ ಸಾಕ್ಷಿ ನುಡಿದಿದ್ದಾರೆ.

(ಆಗ ಅಲ್ಲಿಗೆ ಬಂದಿದ್ದ ಎರಡನೇ ಬೈಕ್ ಕೇಬಲ್ ರಿಪೇರಿ ಮಾಡುವವರದ್ದಾಗಿತ್ತು. ತಮ್ಮ ಮನೆಯ ಕೇಬಲ್ ಕೆಲಸ ಮಾಡುತ್ತಿಲ್ಲ ಎಂದು ಗೌರಿ ಲಂಕೇಶ್‌ರವರು ರೀಪೇರಿ ಮಾಡುವವರಿಗೆ ಬರುವಂತೆ ತಿಳಿಸಿದ್ದರು.)

ಸಾಕ್ಷಿಯನ್ನು ಪಾಟಿ ಸವಾಲಿಗೆ ಒಳಪಡಿಸಿದ ಆರೋಪಿ ಪರ ವಕೀಲರು, ’ಪ್ಯಾಷನ್ ಪ್ರೊ ಮಾಡೆಲ್‌ನ ಹಲವಾರು ಬೈಕ್‌ಗಳಿವೆ. ಇದೇ ಬೈಕ್‌ಅನ್ನು ಅಪರಾಧಕ್ಕೆ ಬಳಸಿದ್ದು ಎಂದು ಹೇಗೆ ಹೇಳುತ್ತೀರಿ? ಕತ್ತಲೆಯಲ್ಲಿ ಬಣ್ಣವನ್ನು ಹೇಗೆ ಗುರುತಿಸಿದಿರಿ’ ಎಂದು ಪ್ರಶ್ನಿಸಿದರು. ಅದಕ್ಕೆ ಸಾಕ್ಷಿಯು ಘಟನೆ ನಡೆದ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ಹೆಲ್ಮೆಟ್ ಧರಿಸಿ ಪ್ಯಾಷನ್ ಪ್ರೊ ಬೈಕ್‌ನಲ್ಲಿ ದಾಟಿ ಹೋಗಿದ್ದನ್ನು ತಾನು ಪ್ರತ್ಯಕ್ಷವಾಗಿ ನೋಡಿದ್ದಾಗಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಇನ್ನು ಗೌರಿ ಹತ್ಯೆಗೆ ಸಂಚು ರೂಪಿಸಿದವರಲ್ಲಿ ಮತ್ತೊಬ್ಬ ಆರೋಪಿ ಮದ್ದೂರಿನ ಕೆ.ಟಿ.ನವೀನ್ ಕುಮಾರ್. ಬೆಂಗಳೂರಿನ ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಮಠದ ಎದುರಿನ ಪಾರ್ಕ್‌ನಲ್ಲಿ ಕುಳಿತು ಸಂಚು ರೂಪಿಸಿದ್ದಾಗಿ ಆತ ಪೊಲೀಸ್ ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದ. ಅದನ್ನು ಪಂಚನಾಮೆ ಮಾಡಲು ಆರೋಪಿಯನ್ನು ಕರೆದುಕೊಂಡು ಹೋದಾಗ ಅವರ ಜೊತೆಯಲ್ಲಿ ಸಿದ್ದೇಶ್ವರ ಎಂಬ ಸರ್ಕಾರಿ ನೌಕರರು ಸಾಕ್ಷಿಯಾಗಿ ಹೋಗಿದ್ದರು. ಆಗ ಆರೋಪಿ ನವೀನ್ ಕುಮಾರ್ ಅದೇ ಜಾಗದಲ್ಲಿ ಕುಳಿತು ಹತ್ಯೆಯ ಸಂಚು ರೂಪಿಸಿದ್ದವೆಂದು ಹೇಳಿದ್ದರು ಎಂದು ಕೋರ್ಟಿನಲ್ಲಿ ಸಿದ್ದೇಶ್ವರ ಸಾಕ್ಷಿ ನುಡಿದರು ಮತ್ತು ಫೋಟೊದಲ್ಲಿ ನವೀನ್ ಕುಮಾರ್ ಯಾರೆಂದು ಗುರುತಿಸಿದರು. ಯಥಾಪ್ರಕಾರ ಪೊಲೀಸರು ಹೇಳಿಕೊಟ್ಟಂತೆ ಹೇಳುತ್ತಿದ್ದಾರೆ ಎಂದು ಆರೋಪಿ ಪರ ವಕೀಲರು ವಾದಿಸಿದರು.

ಮಂಡ್ಯದವರಾದ ರವಿಕುಮಾರ್ ಬೆಂಗಳೂರಿಗೆ ಬಂದು ರಾಜರಾಜೇಶ್ವರಿ ನಗರ ಗೇಟಿನ ಬಳಿ ಇದ್ದಾಗ ಪೊಲೀಸರು ಅವರನ್ನು ಸಾಕ್ಷಿಯಾಗಿ ಕರೆದಿದ್ದರು. “ನಾನು ಅವರೊಡನೆ ಪೊಲೀಸ್ ಠಾಣೆಗೆ ಹೋದಾಗ ತಮ್ಮ ಸಮ್ಮುಖದಲ್ಲಿ ಸೀಲ್ ಆದ ಡಿವಿಆರ್‌ಅನ್ನು ತೆಗೆದು ವಿಡಿಯೋ ಪ್ಲೇ ಮಾಡಿದರು. ಅದರಲ್ಲಿ ಗೌರಿ ಲಂಕೇಶ್‌ರವರು ಕಾರಿನಿಂದ ಇಳಿದು ಹೊರಬರುತ್ತಿದ್ದಂತೆ ಹೆಲ್ಮೆಟ್ ಧರಿಸಿದ್ದ ವ್ಯಕ್ತಿಯೊಬ್ಬರು ಗುಂಡು ಹಾರಿಸಿದರು. ಗೌರಿಯವರು ಹಿಂದೆ ಸರಿಯುತ್ತಾ ಅವರ ಮನೆಯ ಬಾಗಿಲ ಹತ್ತಿರ ಕುಸಿದು ಬಿದ್ದ ದೃಶ್ಯಾವಳಿಗಳು ಆ ಡಿವಿಆರ್‌ನಲ್ಲಿದ್ದವು” ಎಂದು ಕೋರ್ಟ್ ವಿಚಾರಣೆ ವೇಳೆ ಅವರು ಹೇಳಿದರು. ಅದೇ ರೀತಿ ಇನ್‌ಕಾಗ್ನಿಟೊ ಫೊರೆನ್ಷಿಕ್ ಫೌಂಡೇಶನ್‌ನಲ್ಲಿ ಕೆಲಸ ಮಾಡುವ ಸ್ನೇಹ ಎಂಬ ಸೈಬರ್ ಫೊರೆನ್ಸಿಕ್ ತಜ್ಞರು 2017ರ ಸೆಪ್ಟಂಬರ್ 6ರಂದು ಪೊಲೀಸರು ತಮ್ಮ ಕಂಪನಿಗೆ ಸೀಲ್ ಆದ ಕವರ್‌ನಲ್ಲಿದ್ದ ಡಿವಿಆರ್‌ಗಳನ್ನು ವಿಶ್ಲೇಷಣೆಗೆ ತಂದುಕೊಟ್ಟರೆಂದು, ಅದನ್ನು ಪಡೆದು ನಾನು ಸಹಿ ಹಾಕಿಕೊಟ್ಟನೆಂದು ಸಾಕ್ಷಿ ನುಡಿದರು ಮತ್ತು ಕೋರ್ಟಿನಲ್ಲಿ ಅವನ್ನು ಗುರುತಿಸಿದರು.

ಆದರೆ ಈ ಡಿವಿಆರ್ ದೃಶ್ಯಾವಳಿಗಳನ್ನು ಆರೋಪಿ ಪರ ವಕೀಲರಿಗೆ ಇನ್ನೂ ಕೊಟ್ಟಿಲ್ಲವಾದ್ದರಿಂದ ಪಾಟೀ ಸವಾಲು ನಡೆಸಲಿಲ್ಲ. ಅಲ್ಲದೆ ಡಿವಿಆರ್ ಮತ್ತು ಹಾರ್ಡ್ ಡಿಸ್ಕ್‌ಗಳನ್ನು ವಶಪಡಿಸಿಕೊಳ್ಳುವಾಗ ತನಿಖಾಧಿಕಾರಿಗಳು (ಅನುಚೇತ್) ಸರಿಯಾದ ವಿಧಾನ ಅಳವಡಿಸಿಲ್ಲ ಎಂದು ನ್ಯಾಯಾಧೀಶರು ಸರ್ಕಾರ ವಕೀಲರನ್ನು ಪ್ರಶ್ನಿಸಿದರು. ತನಿಖೆ ಮುಗಿದ ನಂತರ ತಾನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದು, ಈ ಪ್ರಶ್ನೆಗೆ ತನಿಖಾಧಿಕಾರಿಗಳೆ ವಿವರಣೆ ನೀಡಬೇಕೆಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಾಲನ್ ಉತ್ತರಿಸಿದರು. ಹಾಗಾಗಿ ಈ ಸಾಕ್ಷಿಯನ್ನು ಆನಂತರ ವಿಚಾರಣೆ ನಡೆಸಲು ಕೋರ್ಟ್ ಒಪ್ಪಿಕೊಂಡಿದೆ.

ಆರೋಪಿಗಳಲ್ಲಿ ಒಬ್ಬರಾದ ಗಣೇಶ್ ಮಿಸ್ಕಿನ್ ಎಂಬುವವರಿಗೆ ವೆರಿಕೋವೆಯ್ನ್ಸ್ ಎಂಬ ಆರೋಗ್ಯದ ಸಮಸ್ಯೆಯಿರುವುದಾಗಿ ತಿಳಿಸಿ ಚಿಕಿತ್ಸೆಗೆ ಅವಕಾಶ ನೀಡಲು ಮನವಿ ಮಾಡಲಾಯಿತು. ಜೈಲು ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಿ ಅಥವಾ ಅಗತ್ಯಬಿದ್ದರೆ ಸ್ವಂತ ಖರ್ಚಿನಲ್ಲಿ ಸೂಕ್ತ ಬಂದೋಬಸ್ತ್‌ನೊಂದಿಗೆ ಖಾಸಗಿ ಆಸ್ಪತ್ರೆಗೆ ಸೇರಿಸಬಹುದೆಂದು ನ್ಯಾಯಾಧೀಶರು ಆದೇಶಿಸಿದ್ದಾರೆ.

ಮುಂದಿನ ತಿಂಗಳು ಸೆಪ್ಟಂಬರ್ 5ರಿಂದ 9ನೇ ತಾರೀಖಿನವರೆಗೆ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ. 2022 ಸೆಪ್ಟಂಬರ್ 5ಕ್ಕೆ ಗೌರಿಯವರು ಕೊಲೆಯಾಗಿ 5 ವರ್ಷಗಳ ತುಂಬುತ್ತಿವೆ. ಆ ಸಂದರ್ಭದಲ್ಲಿ ತನಿಖಾಧಿಕಾರಿಗಳಾದ ಡಿಸಿಪಿ ಅನುಚೇತ್‌ರವರು ವಿಚಾರಣೆಗೆ ಹಾಜರಾಗಲಿದ್ದಾರೆ.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ; ಆರೋಪಿಗಳನ್ನು ಗುರುತು ಹಚ್ಚಿದ ಪ್ರಮುಖ ಸಾಕ್ಷಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...