HomeUncategorizedಇಂದು 'ಬುಡಕಟ್ಟು ನಾಯಕ ಬಿರ್ಸಾ ಮುಂಡಾ' ಜನ್ಮದಿನ - #BirsaMunda ಟ್ವಿಟರ್‌ನಲ್ಲಿ ಟ್ರೆಂಡಿಂಗ್!

ಇಂದು ‘ಬುಡಕಟ್ಟು ನಾಯಕ ಬಿರ್ಸಾ ಮುಂಡಾ’ ಜನ್ಮದಿನ – #BirsaMunda ಟ್ವಿಟರ್‌ನಲ್ಲಿ ಟ್ರೆಂಡಿಂಗ್!

ಭಾರತದ ಟ್ವಿಟ್ಟರ್‌ ಟ್ರೆಂಡಿಂಗ್‌ನಲ್ಲಿ 5 ನೇ ಸ್ಥಾನದಲ್ಲಿರುವ #BirsaMunda, ಈ ಹ್ಯಾಶ್‌ಟ್ಯಾಗ್ ಬಳಸಿ ಈ ವರದಿ ಬರೆಯುವ ವೇಳೆಗೆ 5000 ಕ್ಕೂ ಹೆಚ್ಚು ಜನ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಜನ್ಮ ದಿನ ಇಂದು. ಇವರಿಗೆ ಗೌರವ ಸಲ್ಲಿಸುವ ಸಲುವಾಗಿ ಸಾವಿರಾರು ಜನ ಟ್ವಿಟ್ಟರ್‌ನಲ್ಲಿ #BirsaMunda ಎಂದು ಟ್ವೀಟ್ ಮಾಡುತ್ತಿದ್ದು, ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡಿಂಗ್ ಆಗುತ್ತಿದೆ.

ಭಾರತದ ಟ್ವಿಟ್ಟರ್‌ ಟ್ರೆಂಡಿಂಗ್‌ನಲ್ಲಿ 5 ನೇ ಸ್ಥಾನದಲ್ಲಿರುವ #BirsaMunda, ಈ ಹ್ಯಾಶ್‌ಟ್ಯಾಗ್ ಬಳಸಿ ಈ ವರದಿ ಬರೆಯುವ ವೇಳೆಗೆ 5000 ಕ್ಕೂ ಹೆಚ್ಚು ಜನ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿದೆ ‘ಪಾಕಿಸ್ತಾನ’: ಮರುನಾಮಕರಣಕ್ಕೆ ಗ್ರಾಮಸ್ಥರ ಆಗ್ರಹ..!

ದೇಶದ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವೀಟ್ ಮಾಡಿ, “ಇಂದು ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಜನ್ಮ ದಿನಾಚರಣೆ. ಇವರಿಗೆ ನನ್ನ ನಮನಗಳು. ಧರೆಯ ತಂದೆ ಎಂದೇ ಪ್ರಸಿದ್ಧಿ ಪಡೆದಿರುವ ಬಿರ್ಸಾ ಮುಂಡಾ ಬುಡಕಟ್ಟು ಸಮುದಾಯಗಳ ವಿರುದ್ಧದ ಬ್ರಿಟಿಷರ ನೀತಿಗಳ ವಿರುದ್ಧ ಹೋರಾಡಿದ್ದರು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…

ಪ್ರಿನ್ಸು ಮೀನಾ ಎಂಬುವವರು ಟ್ವೀಟ್ ಮಾಡಿ, “ಸದಾ ಪ್ರಕೃತಿಯೊಟ್ಟಿಗೆ ನಿಲ್ಲುವ ಮತ್ತು ಅದರೊಟ್ಟಿಗೆ ಸಂವಾದ ನಡೆಸುತ್ತಾ ಬದುಕುತ್ತಿರುವ ಬುಡಕಟ್ಟು ಮತ್ತು ಆದಿವಾಸಿಗಳ ದೈವ ಬಿರ್ಸಾ ಮುಂಡಾ. ಇಂದು ಇವರ ಜನ್ಮ ದಿನವನ್ನು ನಾವು ಆಚರಿಸುತ್ತಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನೆರೆ ಪರಿಹಾರ ಕೊಡದಿದ್ದರೆ ರಾಜ್ಯದಾದ್ಯಂತ ತೀವ್ರ ಹೋರಾಟ – ಕರವೇ ಟಿ.ಎ.ನಾರಾಯಣಗೌಡರು

ಹೀಗೆ ಸಾವಿರಾರು ಜನ ಸಾಮಾಜಿಕ ಮಾಧ್ಯಮ ಬಳಕೆದಾರರು ಈ ಬುಡಕಟ್ಟು ನಾಯಕನಿಗೆ ಅವರಿಗೆ ಗೌರವ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

ಅಲ್ವಿನ್ ರೊಜಾರಿಯೋ ಎಂಬುವವರು ಅಲ್ಬಂ ಹಾಡೊಂದನ್ನು ಬಿಡುಗಡೆ ಮಾಡಿ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಯುವ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬುಡಕಟ್ಟು ನಾಯಕರಾಗಿದ್ದ ಬಿರ್ಸಾ ಮುಂಡಾ, ಹತ್ತೊಂಬತ್ತನೇ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ತನ್ನ 25 ನೇ ವಯಸ್ಸಿನಲ್ಲಿಯೇ ವೀರ ಮರಣ ಹೊಂದಿದ್ದರು. ಹಾಗಾಗಿ 2000 ದಿಂದ ಇವರ ಜನ್ಮ ವಾರ್ಷಿಕೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ಬಿಹಾರ ಮತ್ತು ಜಾರ್ಖಂಡ್‌ ಸುತ್ತಮುತ್ತಲಿನ ಛೋಟಾನಾಗ್ಪುರ್ ಪ್ರಸ್ಥಭೂಮಿ ಪ್ರದೇಶದ ಮುಂಡಾ ಬುಡಕಟ್ಟು ಸಮುದಾಯದಲ್ಲಿ ನವೆಂಬರ್ 15, 1875 ರಲ್ಲಿ ಹುಟ್ಟಿ ಬೆಳೆದ ಇವರು ತನ್ನ ಬಾಲ್ಯದ ಬಹುಭಾಗವನ್ನು ಒಂದು ಹಳ್ಳಿಯಿಂದ ಮತ್ತೊಂದು ಹಳ್ಳಿಗೆ ಸ್ಥಳಾಂತರಗೊಳ್ಳುವುದರಲ್ಲಿಯೇ ಕಳೆದರು. ಅವರು ತಮ್ಮ ಶಿಕ್ಷಕ ಜೈಪಾಲ್ ನಾಗ್ ಅವರ ಮಾರ್ಗದರ್ಶನದಲ್ಲಿ ಸಲ್ಗಾದಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪಡೆದರು. ಜೈಪಾಲ್ ನಾಗ್ ಅವರ ಶಿಫಾರಸ್ಸಿನ ಮೇರೆಗೆ, ಜರ್ಮನ್ ಮಿಷನ್ ಶಾಲೆಗೆ ಸೇರಲು ಇವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡರು.

ಆರಂಭದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರೂ ನಂತರದ ದಿನಗಳಲ್ಲಿ ತಮ್ಮದೇ ಆದ ‘ಬಿರ್ಸೈಟ್‌’ ಎನ್ನುವ ಪಂಥವನ್ನು ಸ್ಥಾಪಿಸಿದರು. ಅತೀ ಶೀಘ್ರದಲ್ಲೇ ಮುಂಡಾ ಮತ್ತು ಒರಾನ್ ಸಮುದಾಯದವರು ಈ ಪಂಥಕ್ಕೆ ಸೇರಲು ಪ್ರಾರಂಭಿಸಿದರು. ಇದು ಬ್ರಿಟಿಷರ ಮತಾಂತರ ಚಟುವಟಿಕೆಗಳಿಗೆ ಸವಾಲಾಗಿ ಪರಿಣಮಿಸಿತು.

ಇದನ್ನೂ ಓದಿ: ಹೋರಾಟಗಾರ ವರವರ ರಾವ್‌‌ಗೆ ಜಾಮೀನು ನಿರಾಕರಣೆ; ’ಹಾಸಿಗೆ ಹಿಡಿದಿದ್ದಾರೆ’ ಎಂದ ಕುಟುಂಬ!

1886 ರಿಂದ 1890 ರ ಅವಧಿಯಲ್ಲಿ ಇವರು ಮಿಷನರಿ ವಿರೋಧಿ ಮತ್ತು ಸರ್ಕಾರ ವಿರೋಧಿ ಕಾರ್ಯಕ್ರಮಗಳ ಭಾಗವಾದರು. ಅವರು 1890 ರಲ್ಲಿ ಚೈಬಾಸಾವನ್ನು ತೊರೆಯುವ ಹೊತ್ತಿಗೆ, ಬಿರ್ಸಾ ಬುಡಕಟ್ಟು ಸಮುದಾಯಗಳ ಮೇಲಿನ ಬ್ರಿಟಿಷರ ದಬ್ಬಾಳಿಕೆಯ ವಿರುದ್ಧದ ಚಳವಳಿಯಲ್ಲಿ ಬಿರ್ಸಾ ಮುಂಡಾ ತೀವ್ರವಾಗಿ ತೊಡಗಿಸಿಕೊಂಡರು.

ಮಾರ್ಚ್ 3, 1900 ರಂದು, ಬಿರ್ಸಾ ಮುಂಡಾ ತನ್ನ ಬುಡಕಟ್ಟು ಗೆರಿಲ್ಲಾ ಸೈನ್ಯದೊಂದಿಗೆ ಚಕ್ರಧರಪುರದ ಜಮ್ಕೋಪೈ ಕಾಡಿನಲ್ಲಿ ವಿಶ್ರಾಂತಿಯಲ್ಲಿದ್ದಾಗ ಬ್ರಿಟಿಷ್ ಪೊಲೀಸರು ಅವರನ್ನು ಬಂಧಿಸಿದರು. ನಂತರ ಜೂನ್ 9, 1900 ರಂದು 25 ನೇ ವಯಸ್ಸಿನಲ್ಲಿ ರಾಂಚಿ ಜೈಲಿನಲ್ಲಿ ನಿಧನರಾದರು. ಹೀಗೆ ಈ ಬುಡಕಟ್ಟು ಮತ್ತು ಆದಿವಾಸಿ ಸಮುದಾಯಗಳ ದೈವವಾಗಿ, ಅಲ್ಲಿನ ಸಮುದಾಯಗಳಲ್ಲಿ ಇಂದಿಗೂ ಒಂದು ದಂತಕಥೆಯಾಗಿ ಉಳಿದಿದ್ದಾರೆ.


ಇದನ್ನೂ ಓದಿ: ಬುಡಕಟ್ಟು ನಾಯಕ ಬಿರ್ಸಾ ಮುಂಡಾಗೆ ಅಮಿತ್ ಶಾ ಅವಮಾನ: ಟಿಎಂಸಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...