HomeUncategorizedಇಂದು 'ಬುಡಕಟ್ಟು ನಾಯಕ ಬಿರ್ಸಾ ಮುಂಡಾ' ಜನ್ಮದಿನ - #BirsaMunda ಟ್ವಿಟರ್‌ನಲ್ಲಿ ಟ್ರೆಂಡಿಂಗ್!

ಇಂದು ‘ಬುಡಕಟ್ಟು ನಾಯಕ ಬಿರ್ಸಾ ಮುಂಡಾ’ ಜನ್ಮದಿನ – #BirsaMunda ಟ್ವಿಟರ್‌ನಲ್ಲಿ ಟ್ರೆಂಡಿಂಗ್!

ಭಾರತದ ಟ್ವಿಟ್ಟರ್‌ ಟ್ರೆಂಡಿಂಗ್‌ನಲ್ಲಿ 5 ನೇ ಸ್ಥಾನದಲ್ಲಿರುವ #BirsaMunda, ಈ ಹ್ಯಾಶ್‌ಟ್ಯಾಗ್ ಬಳಸಿ ಈ ವರದಿ ಬರೆಯುವ ವೇಳೆಗೆ 5000 ಕ್ಕೂ ಹೆಚ್ಚು ಜನ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಜನ್ಮ ದಿನ ಇಂದು. ಇವರಿಗೆ ಗೌರವ ಸಲ್ಲಿಸುವ ಸಲುವಾಗಿ ಸಾವಿರಾರು ಜನ ಟ್ವಿಟ್ಟರ್‌ನಲ್ಲಿ #BirsaMunda ಎಂದು ಟ್ವೀಟ್ ಮಾಡುತ್ತಿದ್ದು, ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡಿಂಗ್ ಆಗುತ್ತಿದೆ.

ಭಾರತದ ಟ್ವಿಟ್ಟರ್‌ ಟ್ರೆಂಡಿಂಗ್‌ನಲ್ಲಿ 5 ನೇ ಸ್ಥಾನದಲ್ಲಿರುವ #BirsaMunda, ಈ ಹ್ಯಾಶ್‌ಟ್ಯಾಗ್ ಬಳಸಿ ಈ ವರದಿ ಬರೆಯುವ ವೇಳೆಗೆ 5000 ಕ್ಕೂ ಹೆಚ್ಚು ಜನ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿದೆ ‘ಪಾಕಿಸ್ತಾನ’: ಮರುನಾಮಕರಣಕ್ಕೆ ಗ್ರಾಮಸ್ಥರ ಆಗ್ರಹ..!

ದೇಶದ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವೀಟ್ ಮಾಡಿ, “ಇಂದು ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಜನ್ಮ ದಿನಾಚರಣೆ. ಇವರಿಗೆ ನನ್ನ ನಮನಗಳು. ಧರೆಯ ತಂದೆ ಎಂದೇ ಪ್ರಸಿದ್ಧಿ ಪಡೆದಿರುವ ಬಿರ್ಸಾ ಮುಂಡಾ ಬುಡಕಟ್ಟು ಸಮುದಾಯಗಳ ವಿರುದ್ಧದ ಬ್ರಿಟಿಷರ ನೀತಿಗಳ ವಿರುದ್ಧ ಹೋರಾಡಿದ್ದರು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…

ಪ್ರಿನ್ಸು ಮೀನಾ ಎಂಬುವವರು ಟ್ವೀಟ್ ಮಾಡಿ, “ಸದಾ ಪ್ರಕೃತಿಯೊಟ್ಟಿಗೆ ನಿಲ್ಲುವ ಮತ್ತು ಅದರೊಟ್ಟಿಗೆ ಸಂವಾದ ನಡೆಸುತ್ತಾ ಬದುಕುತ್ತಿರುವ ಬುಡಕಟ್ಟು ಮತ್ತು ಆದಿವಾಸಿಗಳ ದೈವ ಬಿರ್ಸಾ ಮುಂಡಾ. ಇಂದು ಇವರ ಜನ್ಮ ದಿನವನ್ನು ನಾವು ಆಚರಿಸುತ್ತಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನೆರೆ ಪರಿಹಾರ ಕೊಡದಿದ್ದರೆ ರಾಜ್ಯದಾದ್ಯಂತ ತೀವ್ರ ಹೋರಾಟ – ಕರವೇ ಟಿ.ಎ.ನಾರಾಯಣಗೌಡರು

ಹೀಗೆ ಸಾವಿರಾರು ಜನ ಸಾಮಾಜಿಕ ಮಾಧ್ಯಮ ಬಳಕೆದಾರರು ಈ ಬುಡಕಟ್ಟು ನಾಯಕನಿಗೆ ಅವರಿಗೆ ಗೌರವ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

ಅಲ್ವಿನ್ ರೊಜಾರಿಯೋ ಎಂಬುವವರು ಅಲ್ಬಂ ಹಾಡೊಂದನ್ನು ಬಿಡುಗಡೆ ಮಾಡಿ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಯುವ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬುಡಕಟ್ಟು ನಾಯಕರಾಗಿದ್ದ ಬಿರ್ಸಾ ಮುಂಡಾ, ಹತ್ತೊಂಬತ್ತನೇ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ತನ್ನ 25 ನೇ ವಯಸ್ಸಿನಲ್ಲಿಯೇ ವೀರ ಮರಣ ಹೊಂದಿದ್ದರು. ಹಾಗಾಗಿ 2000 ದಿಂದ ಇವರ ಜನ್ಮ ವಾರ್ಷಿಕೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ಬಿಹಾರ ಮತ್ತು ಜಾರ್ಖಂಡ್‌ ಸುತ್ತಮುತ್ತಲಿನ ಛೋಟಾನಾಗ್ಪುರ್ ಪ್ರಸ್ಥಭೂಮಿ ಪ್ರದೇಶದ ಮುಂಡಾ ಬುಡಕಟ್ಟು ಸಮುದಾಯದಲ್ಲಿ ನವೆಂಬರ್ 15, 1875 ರಲ್ಲಿ ಹುಟ್ಟಿ ಬೆಳೆದ ಇವರು ತನ್ನ ಬಾಲ್ಯದ ಬಹುಭಾಗವನ್ನು ಒಂದು ಹಳ್ಳಿಯಿಂದ ಮತ್ತೊಂದು ಹಳ್ಳಿಗೆ ಸ್ಥಳಾಂತರಗೊಳ್ಳುವುದರಲ್ಲಿಯೇ ಕಳೆದರು. ಅವರು ತಮ್ಮ ಶಿಕ್ಷಕ ಜೈಪಾಲ್ ನಾಗ್ ಅವರ ಮಾರ್ಗದರ್ಶನದಲ್ಲಿ ಸಲ್ಗಾದಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪಡೆದರು. ಜೈಪಾಲ್ ನಾಗ್ ಅವರ ಶಿಫಾರಸ್ಸಿನ ಮೇರೆಗೆ, ಜರ್ಮನ್ ಮಿಷನ್ ಶಾಲೆಗೆ ಸೇರಲು ಇವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡರು.

ಆರಂಭದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರೂ ನಂತರದ ದಿನಗಳಲ್ಲಿ ತಮ್ಮದೇ ಆದ ‘ಬಿರ್ಸೈಟ್‌’ ಎನ್ನುವ ಪಂಥವನ್ನು ಸ್ಥಾಪಿಸಿದರು. ಅತೀ ಶೀಘ್ರದಲ್ಲೇ ಮುಂಡಾ ಮತ್ತು ಒರಾನ್ ಸಮುದಾಯದವರು ಈ ಪಂಥಕ್ಕೆ ಸೇರಲು ಪ್ರಾರಂಭಿಸಿದರು. ಇದು ಬ್ರಿಟಿಷರ ಮತಾಂತರ ಚಟುವಟಿಕೆಗಳಿಗೆ ಸವಾಲಾಗಿ ಪರಿಣಮಿಸಿತು.

ಇದನ್ನೂ ಓದಿ: ಹೋರಾಟಗಾರ ವರವರ ರಾವ್‌‌ಗೆ ಜಾಮೀನು ನಿರಾಕರಣೆ; ’ಹಾಸಿಗೆ ಹಿಡಿದಿದ್ದಾರೆ’ ಎಂದ ಕುಟುಂಬ!

1886 ರಿಂದ 1890 ರ ಅವಧಿಯಲ್ಲಿ ಇವರು ಮಿಷನರಿ ವಿರೋಧಿ ಮತ್ತು ಸರ್ಕಾರ ವಿರೋಧಿ ಕಾರ್ಯಕ್ರಮಗಳ ಭಾಗವಾದರು. ಅವರು 1890 ರಲ್ಲಿ ಚೈಬಾಸಾವನ್ನು ತೊರೆಯುವ ಹೊತ್ತಿಗೆ, ಬಿರ್ಸಾ ಬುಡಕಟ್ಟು ಸಮುದಾಯಗಳ ಮೇಲಿನ ಬ್ರಿಟಿಷರ ದಬ್ಬಾಳಿಕೆಯ ವಿರುದ್ಧದ ಚಳವಳಿಯಲ್ಲಿ ಬಿರ್ಸಾ ಮುಂಡಾ ತೀವ್ರವಾಗಿ ತೊಡಗಿಸಿಕೊಂಡರು.

ಮಾರ್ಚ್ 3, 1900 ರಂದು, ಬಿರ್ಸಾ ಮುಂಡಾ ತನ್ನ ಬುಡಕಟ್ಟು ಗೆರಿಲ್ಲಾ ಸೈನ್ಯದೊಂದಿಗೆ ಚಕ್ರಧರಪುರದ ಜಮ್ಕೋಪೈ ಕಾಡಿನಲ್ಲಿ ವಿಶ್ರಾಂತಿಯಲ್ಲಿದ್ದಾಗ ಬ್ರಿಟಿಷ್ ಪೊಲೀಸರು ಅವರನ್ನು ಬಂಧಿಸಿದರು. ನಂತರ ಜೂನ್ 9, 1900 ರಂದು 25 ನೇ ವಯಸ್ಸಿನಲ್ಲಿ ರಾಂಚಿ ಜೈಲಿನಲ್ಲಿ ನಿಧನರಾದರು. ಹೀಗೆ ಈ ಬುಡಕಟ್ಟು ಮತ್ತು ಆದಿವಾಸಿ ಸಮುದಾಯಗಳ ದೈವವಾಗಿ, ಅಲ್ಲಿನ ಸಮುದಾಯಗಳಲ್ಲಿ ಇಂದಿಗೂ ಒಂದು ದಂತಕಥೆಯಾಗಿ ಉಳಿದಿದ್ದಾರೆ.


ಇದನ್ನೂ ಓದಿ: ಬುಡಕಟ್ಟು ನಾಯಕ ಬಿರ್ಸಾ ಮುಂಡಾಗೆ ಅಮಿತ್ ಶಾ ಅವಮಾನ: ಟಿಎಂಸಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...