HomeUncategorizedಇಂದು 'ಬುಡಕಟ್ಟು ನಾಯಕ ಬಿರ್ಸಾ ಮುಂಡಾ' ಜನ್ಮದಿನ - #BirsaMunda ಟ್ವಿಟರ್‌ನಲ್ಲಿ ಟ್ರೆಂಡಿಂಗ್!

ಇಂದು ‘ಬುಡಕಟ್ಟು ನಾಯಕ ಬಿರ್ಸಾ ಮುಂಡಾ’ ಜನ್ಮದಿನ – #BirsaMunda ಟ್ವಿಟರ್‌ನಲ್ಲಿ ಟ್ರೆಂಡಿಂಗ್!

ಭಾರತದ ಟ್ವಿಟ್ಟರ್‌ ಟ್ರೆಂಡಿಂಗ್‌ನಲ್ಲಿ 5 ನೇ ಸ್ಥಾನದಲ್ಲಿರುವ #BirsaMunda, ಈ ಹ್ಯಾಶ್‌ಟ್ಯಾಗ್ ಬಳಸಿ ಈ ವರದಿ ಬರೆಯುವ ವೇಳೆಗೆ 5000 ಕ್ಕೂ ಹೆಚ್ಚು ಜನ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಜನ್ಮ ದಿನ ಇಂದು. ಇವರಿಗೆ ಗೌರವ ಸಲ್ಲಿಸುವ ಸಲುವಾಗಿ ಸಾವಿರಾರು ಜನ ಟ್ವಿಟ್ಟರ್‌ನಲ್ಲಿ #BirsaMunda ಎಂದು ಟ್ವೀಟ್ ಮಾಡುತ್ತಿದ್ದು, ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡಿಂಗ್ ಆಗುತ್ತಿದೆ.

ಭಾರತದ ಟ್ವಿಟ್ಟರ್‌ ಟ್ರೆಂಡಿಂಗ್‌ನಲ್ಲಿ 5 ನೇ ಸ್ಥಾನದಲ್ಲಿರುವ #BirsaMunda, ಈ ಹ್ಯಾಶ್‌ಟ್ಯಾಗ್ ಬಳಸಿ ಈ ವರದಿ ಬರೆಯುವ ವೇಳೆಗೆ 5000 ಕ್ಕೂ ಹೆಚ್ಚು ಜನ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿದೆ ‘ಪಾಕಿಸ್ತಾನ’: ಮರುನಾಮಕರಣಕ್ಕೆ ಗ್ರಾಮಸ್ಥರ ಆಗ್ರಹ..!

ದೇಶದ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವೀಟ್ ಮಾಡಿ, “ಇಂದು ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಜನ್ಮ ದಿನಾಚರಣೆ. ಇವರಿಗೆ ನನ್ನ ನಮನಗಳು. ಧರೆಯ ತಂದೆ ಎಂದೇ ಪ್ರಸಿದ್ಧಿ ಪಡೆದಿರುವ ಬಿರ್ಸಾ ಮುಂಡಾ ಬುಡಕಟ್ಟು ಸಮುದಾಯಗಳ ವಿರುದ್ಧದ ಬ್ರಿಟಿಷರ ನೀತಿಗಳ ವಿರುದ್ಧ ಹೋರಾಡಿದ್ದರು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…

ಪ್ರಿನ್ಸು ಮೀನಾ ಎಂಬುವವರು ಟ್ವೀಟ್ ಮಾಡಿ, “ಸದಾ ಪ್ರಕೃತಿಯೊಟ್ಟಿಗೆ ನಿಲ್ಲುವ ಮತ್ತು ಅದರೊಟ್ಟಿಗೆ ಸಂವಾದ ನಡೆಸುತ್ತಾ ಬದುಕುತ್ತಿರುವ ಬುಡಕಟ್ಟು ಮತ್ತು ಆದಿವಾಸಿಗಳ ದೈವ ಬಿರ್ಸಾ ಮುಂಡಾ. ಇಂದು ಇವರ ಜನ್ಮ ದಿನವನ್ನು ನಾವು ಆಚರಿಸುತ್ತಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನೆರೆ ಪರಿಹಾರ ಕೊಡದಿದ್ದರೆ ರಾಜ್ಯದಾದ್ಯಂತ ತೀವ್ರ ಹೋರಾಟ – ಕರವೇ ಟಿ.ಎ.ನಾರಾಯಣಗೌಡರು

ಹೀಗೆ ಸಾವಿರಾರು ಜನ ಸಾಮಾಜಿಕ ಮಾಧ್ಯಮ ಬಳಕೆದಾರರು ಈ ಬುಡಕಟ್ಟು ನಾಯಕನಿಗೆ ಅವರಿಗೆ ಗೌರವ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

ಅಲ್ವಿನ್ ರೊಜಾರಿಯೋ ಎಂಬುವವರು ಅಲ್ಬಂ ಹಾಡೊಂದನ್ನು ಬಿಡುಗಡೆ ಮಾಡಿ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಯುವ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬುಡಕಟ್ಟು ನಾಯಕರಾಗಿದ್ದ ಬಿರ್ಸಾ ಮುಂಡಾ, ಹತ್ತೊಂಬತ್ತನೇ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ತನ್ನ 25 ನೇ ವಯಸ್ಸಿನಲ್ಲಿಯೇ ವೀರ ಮರಣ ಹೊಂದಿದ್ದರು. ಹಾಗಾಗಿ 2000 ದಿಂದ ಇವರ ಜನ್ಮ ವಾರ್ಷಿಕೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ಬಿಹಾರ ಮತ್ತು ಜಾರ್ಖಂಡ್‌ ಸುತ್ತಮುತ್ತಲಿನ ಛೋಟಾನಾಗ್ಪುರ್ ಪ್ರಸ್ಥಭೂಮಿ ಪ್ರದೇಶದ ಮುಂಡಾ ಬುಡಕಟ್ಟು ಸಮುದಾಯದಲ್ಲಿ ನವೆಂಬರ್ 15, 1875 ರಲ್ಲಿ ಹುಟ್ಟಿ ಬೆಳೆದ ಇವರು ತನ್ನ ಬಾಲ್ಯದ ಬಹುಭಾಗವನ್ನು ಒಂದು ಹಳ್ಳಿಯಿಂದ ಮತ್ತೊಂದು ಹಳ್ಳಿಗೆ ಸ್ಥಳಾಂತರಗೊಳ್ಳುವುದರಲ್ಲಿಯೇ ಕಳೆದರು. ಅವರು ತಮ್ಮ ಶಿಕ್ಷಕ ಜೈಪಾಲ್ ನಾಗ್ ಅವರ ಮಾರ್ಗದರ್ಶನದಲ್ಲಿ ಸಲ್ಗಾದಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪಡೆದರು. ಜೈಪಾಲ್ ನಾಗ್ ಅವರ ಶಿಫಾರಸ್ಸಿನ ಮೇರೆಗೆ, ಜರ್ಮನ್ ಮಿಷನ್ ಶಾಲೆಗೆ ಸೇರಲು ಇವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡರು.

ಆರಂಭದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರೂ ನಂತರದ ದಿನಗಳಲ್ಲಿ ತಮ್ಮದೇ ಆದ ‘ಬಿರ್ಸೈಟ್‌’ ಎನ್ನುವ ಪಂಥವನ್ನು ಸ್ಥಾಪಿಸಿದರು. ಅತೀ ಶೀಘ್ರದಲ್ಲೇ ಮುಂಡಾ ಮತ್ತು ಒರಾನ್ ಸಮುದಾಯದವರು ಈ ಪಂಥಕ್ಕೆ ಸೇರಲು ಪ್ರಾರಂಭಿಸಿದರು. ಇದು ಬ್ರಿಟಿಷರ ಮತಾಂತರ ಚಟುವಟಿಕೆಗಳಿಗೆ ಸವಾಲಾಗಿ ಪರಿಣಮಿಸಿತು.

ಇದನ್ನೂ ಓದಿ: ಹೋರಾಟಗಾರ ವರವರ ರಾವ್‌‌ಗೆ ಜಾಮೀನು ನಿರಾಕರಣೆ; ’ಹಾಸಿಗೆ ಹಿಡಿದಿದ್ದಾರೆ’ ಎಂದ ಕುಟುಂಬ!

1886 ರಿಂದ 1890 ರ ಅವಧಿಯಲ್ಲಿ ಇವರು ಮಿಷನರಿ ವಿರೋಧಿ ಮತ್ತು ಸರ್ಕಾರ ವಿರೋಧಿ ಕಾರ್ಯಕ್ರಮಗಳ ಭಾಗವಾದರು. ಅವರು 1890 ರಲ್ಲಿ ಚೈಬಾಸಾವನ್ನು ತೊರೆಯುವ ಹೊತ್ತಿಗೆ, ಬಿರ್ಸಾ ಬುಡಕಟ್ಟು ಸಮುದಾಯಗಳ ಮೇಲಿನ ಬ್ರಿಟಿಷರ ದಬ್ಬಾಳಿಕೆಯ ವಿರುದ್ಧದ ಚಳವಳಿಯಲ್ಲಿ ಬಿರ್ಸಾ ಮುಂಡಾ ತೀವ್ರವಾಗಿ ತೊಡಗಿಸಿಕೊಂಡರು.

ಮಾರ್ಚ್ 3, 1900 ರಂದು, ಬಿರ್ಸಾ ಮುಂಡಾ ತನ್ನ ಬುಡಕಟ್ಟು ಗೆರಿಲ್ಲಾ ಸೈನ್ಯದೊಂದಿಗೆ ಚಕ್ರಧರಪುರದ ಜಮ್ಕೋಪೈ ಕಾಡಿನಲ್ಲಿ ವಿಶ್ರಾಂತಿಯಲ್ಲಿದ್ದಾಗ ಬ್ರಿಟಿಷ್ ಪೊಲೀಸರು ಅವರನ್ನು ಬಂಧಿಸಿದರು. ನಂತರ ಜೂನ್ 9, 1900 ರಂದು 25 ನೇ ವಯಸ್ಸಿನಲ್ಲಿ ರಾಂಚಿ ಜೈಲಿನಲ್ಲಿ ನಿಧನರಾದರು. ಹೀಗೆ ಈ ಬುಡಕಟ್ಟು ಮತ್ತು ಆದಿವಾಸಿ ಸಮುದಾಯಗಳ ದೈವವಾಗಿ, ಅಲ್ಲಿನ ಸಮುದಾಯಗಳಲ್ಲಿ ಇಂದಿಗೂ ಒಂದು ದಂತಕಥೆಯಾಗಿ ಉಳಿದಿದ್ದಾರೆ.


ಇದನ್ನೂ ಓದಿ: ಬುಡಕಟ್ಟು ನಾಯಕ ಬಿರ್ಸಾ ಮುಂಡಾಗೆ ಅಮಿತ್ ಶಾ ಅವಮಾನ: ಟಿಎಂಸಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...