Homeದಲಿತ್ ಫೈಲ್ಸ್ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯದ ವಿರುದ್ದ ಪ್ರತಿಭಟಿಸಿದ ಗ್ರಾಮ ಪಂಚಾಯತ್‌ನ ಮಹಿಳಾ ಅಧ್ಯಕ್ಷೆ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ ಪ್ರೆಸ್ ವರದಿ ಮಾಡಿದೆ.

ವಿಲ್ಲುಪುರಂ ಜಿಲ್ಲೆ ಗಿಂಗೀ ತಾಲೂಕಿನ ಅಣಂಗೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಂಗೀತಾ ಅವರು, ಅದೇ ಗ್ರಾ.ಪಂ ಉಪಾಧ್ಯಕ್ಷೆ ಚಿತ್ರಾ ಗುಣಶೇಖರನ್ ಮತ್ತು ಆಕೆಯ ಪತಿ ಸ್ಥಳೀಯ ಡಿಎಂಕೆ ಶಾಖಾ ಕಾರ್ಯದರ್ಶಿ ಗುಣಶೇಖರನ್‌ ಅವರ ವಿರುದ್ದ ಜಾತಿ ಆಧಾರಿತ ತಾರತಮ್ಯ ಮತ್ತು ಕಿರುಕುಳದ ಆರೋಪ ಮಾಡಿದ್ದಾರೆ.

ಗುಣಶೇಖರನ್ ದಂಪತಿಯ ವಿರುದ್ದ ಕ್ರಮಕ್ಕೆ ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಸಂಗೀತಾ ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಅವರ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌)ನ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಉಪಾಧ್ಯಕ್ಷೆ ಮತ್ತು ಆಕೆಯ ಪತಿಯಿಂದ ಜಾತಿ ಆಧಾರಿತ ತಾರತಮ್ಯ ಎದುರಿಸುತ್ತಿರುವುದಾಗಿ ಸಂಗೀತಾ ಕಳೆದ ಜುಲೈ ಮತ್ತು ಆಗಸ್ಟ್‌ನಲ್ಲಿ ಎರಡು ಬಾರಿ ಜಿಲ್ಲಾಧಿಕಾರಿಗಳಿಗೆ ಔಪಚಾರಿಕವಾಗಿ ದೂರು ಸಲ್ಲಿಸಿದ್ದರು. ಆದರೆ, ದಂಪತಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಮೂರು ವರ್ಷಗಳ ಹಿಂದೆ ಪಂಚಾಯತ್ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಚಿತ್ರಾ ಮತ್ತು ಅವರ ಪತಿ ಗುಣಶೇಖರನ್ ನಿರಂತರವಾಗಿ ಅಧಿಕೃತ ಕರ್ತವ್ಯಗಳಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಸಂಗೀತಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಮಹಿಳಾ ಮೀಸಲು ಕ್ಷೇತ್ರವೆಂದು ಘೋಷಿಸಿದ ನಂತರ ಸಂಗೀತಾ ಅವರು ತಮ್ಮ ಗ್ರಾಮದ ಮೊದಲ ಇರುಳರ್ ಮಹಿಳಾ ಪಂಚಾಯತ್ ಅಧ್ಯಕ್ಷೆಯಾಗಿದ್ದಾರೆ.

“ನೌಕರರ ಸಂಬಳ ಪಾವತಿಯನ್ನು ಅನುಮೋದಿಸಲು ಹಾಗೂ ನೀರಿನ ಪೈಪ್‌ಗಳ ಅಳವಡಿಕೆ ಮತ್ತು ರಸ್ತೆ ನಿರ್ಮಾಣಗಳಂತಹ ಮೂಲಭೂತ ಸೌಕರ್ಯಗಳಿಗೆ ಹಣಕಾಸನ್ನು ವಿನಿಯೋಗಿಸಲು ಅಗತ್ಯವಿರುವ ಡಿಜಿಟಲ್ ಪಾಸ್‌ವರ್ಡ್‌ನ್ನು ತನಗೆ ಒದಗಿಸಲು ಚಿತ್ರಾ ಮತ್ತು ಆಕೆಯ ಪತಿ ನಿರಾಕರಿಸಿದ್ದಾರೆ. ಅವರು ತನ್ನ ಬುಡಕಟ್ಟು ಗುರುತನ್ನು ಸಾರ್ವಜನಿಕ ಸಭೆಗಳಲ್ಲಿ ತನ್ನನ್ನು ನಿಂದಿಸಲು ಮತ್ತು ಅವಮಾನಿಸಲು ಬಳಸಿದ್ದಾರೆ” ಎಂದು ಸಂಗೀತಾ ಹೇಳಿದ್ದಾರೆ.

“ಇರುಳರ್ ಮಹಿಳೆಯಾಗಿರುವ ನೀನು ಪಂಚಾಯತ್ ಅಧ್ಯಕ್ಷರ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹಳಲ್ಲ” ಎಂದು ಚಿತ್ರಾ ತನ್ನನ್ನು ಬಹಿರಂಗವಾಗಿ ಅವಮಾನಿಸಿದ್ದು, ಆಡಳಿತಾತ್ಮಕ ವಿಷಯಗಳಲ್ಲಿ ತಲೆ ಹಾಕಿದರೆ ದೈಹಿಕ ಹಾನಿಯ ಬೆದರಿಕೆಯನ್ನೂ ಒಡ್ಡಿದ್ದಾರೆ” ಎಂದು ಸಂಗೀತಾ ಆರೋಪಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಹಾಗೂ ಸ್ಥಳೀಯ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂಗೀತಾ ದೂರಿದ್ದು, ತನಗೆ ಜೀವ ಬೆದರಿಕೆ ಇದೆ, ತೀವ್ರ ಮಾನಸಿಕ ಸಂಕಷ್ಟಕ್ಕೆ ಸಿಲುಕಿದ್ದೇನೆ ಎಂದಿದ್ದಾರೆ ಎಂದು ವರದಿ ವಿವರಿಸಿದೆ.

ಆಗಸ್ಟ್‌ನಲ್ಲಿ ಸಂಗೀತಾ ಅವರ ದೂರಿಗೆ ಸ್ಪಂದಿಸಿದ್ದ ಜಿಲ್ಲಾಧಿಕಾರಿ ಸಿ ಪಳನಿ ಅವರು, ತನಿಖೆಗೆ ಆದೇಶಿಸಿದ್ದರು ಮತ್ತು ಸಂಗೀತಾ ಅವರಿಗೆ ಡಿಜಿಟಲ್ ಕೀಗೆ ಪಾಸ್‌ವರ್ಡ್‌ ಒದಗಿಸುವಂತೆ ಉಪಾಧ್ಯಕ್ಷೆಗೆ ಸೂಚಿಸಿದ್ದರು. ಆದರೆ, ಜಿಲ್ಲಾಧಿಕಾರಿ ಇದುವರೆಗೂ ಸಂಗೀತಾರನ್ನು ನೇರವಾಗಿ ಸಂಪರ್ಕಿಸಿಲ್ಲ ಮತ್ತು ಪರಿಸ್ಥಿತಿಯನ್ನು ಪರಿಶೀಲಿಸಿಲ್ಲ ಎಂದು ವರದಿ ತಿಳಿಸಿದೆ.

ಇದಾದ ಒಂದು ತಿಂಗಳ ನಂತರ, ಸಂಗೀತಾ ಮತ್ತೆ ಇಬ್ಬರಿಂದ ಮೌಖಿಕ ಜಾತಿ ನಿಂದನೆ ಎದುರಿಸಿದ್ದಾರೆ. “ಅವರು ತನ್ನ ಜಾತಿಯ ಹೆಸರನ್ನು ಬಳಸಿಕೊಂಡು ಕರೆ ಮಾಡುವುದನ್ನು ಮುಂದುವರೆಸಿದ್ದಾರೆ ಮತ್ತು ನರೇಗಾ ಕಾಮಗಾರಿಗಳ ತಪಾಸಣೆ ಸ್ಥಳಗಳಿಂದ ಹೊರ ಹೋಗುವಂತೆ ಒತ್ತಾಯಿಸಿದ್ದಾರೆ” ಎಂದು ಸಂಗೀತಾ ಹೇಳಿಕೊಂಡಿದ್ದಾರೆ.

ತನಗಾದ ಅನ್ಯಾಯದ ವಿರುದ್ದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದ ಸಂಗೀತಾ ಮೇಲೆಯೇ ಪೊಲೀಸರು ಬಿಎನ್‌ಎಸ್‌ ಕಾಯ್ದೆಯೆ ಸೆಕ್ಷನ್ 223,292 ಮತ್ತು 126(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರಿಂದ ಸೂಕ್ತ ಅನುಮತಿ ಪಡೆಯದೆ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಸಬಾರದು ಎಂಬ ಜಿಲ್ಲಾಧಿಕಾರಿಗಳ ಇತ್ತೀಚಿನ ಆದೇಶದನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

“ನಾವು ಸಮಸ್ಯೆಯನ್ನು ಪರಿಶೀಲಿಸುತ್ತಿದ್ದೇವೆ. ಸತ್ಯವನ್ನು ಪರಿಶೀಲಿಸುತ್ತೇವೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಸಿವಾಚ್ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ತಿಳಿಸಿದೆ.

ಇದನ್ನೂ ಓದಿ : ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ದಾಳಿ ಹೆಚ್ಚುತ್ತಿವೆ: ಅಮೆರಿಕ ಸರ್ಕಾರದ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...