Homeದಲಿತ್ ಫೈಲ್ಸ್ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯದ ವಿರುದ್ದ ಪ್ರತಿಭಟಿಸಿದ ಗ್ರಾಮ ಪಂಚಾಯತ್‌ನ ಮಹಿಳಾ ಅಧ್ಯಕ್ಷೆ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ ಪ್ರೆಸ್ ವರದಿ ಮಾಡಿದೆ.

ವಿಲ್ಲುಪುರಂ ಜಿಲ್ಲೆ ಗಿಂಗೀ ತಾಲೂಕಿನ ಅಣಂಗೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಂಗೀತಾ ಅವರು, ಅದೇ ಗ್ರಾ.ಪಂ ಉಪಾಧ್ಯಕ್ಷೆ ಚಿತ್ರಾ ಗುಣಶೇಖರನ್ ಮತ್ತು ಆಕೆಯ ಪತಿ ಸ್ಥಳೀಯ ಡಿಎಂಕೆ ಶಾಖಾ ಕಾರ್ಯದರ್ಶಿ ಗುಣಶೇಖರನ್‌ ಅವರ ವಿರುದ್ದ ಜಾತಿ ಆಧಾರಿತ ತಾರತಮ್ಯ ಮತ್ತು ಕಿರುಕುಳದ ಆರೋಪ ಮಾಡಿದ್ದಾರೆ.

ಗುಣಶೇಖರನ್ ದಂಪತಿಯ ವಿರುದ್ದ ಕ್ರಮಕ್ಕೆ ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಸಂಗೀತಾ ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಅವರ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌)ನ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಉಪಾಧ್ಯಕ್ಷೆ ಮತ್ತು ಆಕೆಯ ಪತಿಯಿಂದ ಜಾತಿ ಆಧಾರಿತ ತಾರತಮ್ಯ ಎದುರಿಸುತ್ತಿರುವುದಾಗಿ ಸಂಗೀತಾ ಕಳೆದ ಜುಲೈ ಮತ್ತು ಆಗಸ್ಟ್‌ನಲ್ಲಿ ಎರಡು ಬಾರಿ ಜಿಲ್ಲಾಧಿಕಾರಿಗಳಿಗೆ ಔಪಚಾರಿಕವಾಗಿ ದೂರು ಸಲ್ಲಿಸಿದ್ದರು. ಆದರೆ, ದಂಪತಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಮೂರು ವರ್ಷಗಳ ಹಿಂದೆ ಪಂಚಾಯತ್ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಚಿತ್ರಾ ಮತ್ತು ಅವರ ಪತಿ ಗುಣಶೇಖರನ್ ನಿರಂತರವಾಗಿ ಅಧಿಕೃತ ಕರ್ತವ್ಯಗಳಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಸಂಗೀತಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಮಹಿಳಾ ಮೀಸಲು ಕ್ಷೇತ್ರವೆಂದು ಘೋಷಿಸಿದ ನಂತರ ಸಂಗೀತಾ ಅವರು ತಮ್ಮ ಗ್ರಾಮದ ಮೊದಲ ಇರುಳರ್ ಮಹಿಳಾ ಪಂಚಾಯತ್ ಅಧ್ಯಕ್ಷೆಯಾಗಿದ್ದಾರೆ.

“ನೌಕರರ ಸಂಬಳ ಪಾವತಿಯನ್ನು ಅನುಮೋದಿಸಲು ಹಾಗೂ ನೀರಿನ ಪೈಪ್‌ಗಳ ಅಳವಡಿಕೆ ಮತ್ತು ರಸ್ತೆ ನಿರ್ಮಾಣಗಳಂತಹ ಮೂಲಭೂತ ಸೌಕರ್ಯಗಳಿಗೆ ಹಣಕಾಸನ್ನು ವಿನಿಯೋಗಿಸಲು ಅಗತ್ಯವಿರುವ ಡಿಜಿಟಲ್ ಪಾಸ್‌ವರ್ಡ್‌ನ್ನು ತನಗೆ ಒದಗಿಸಲು ಚಿತ್ರಾ ಮತ್ತು ಆಕೆಯ ಪತಿ ನಿರಾಕರಿಸಿದ್ದಾರೆ. ಅವರು ತನ್ನ ಬುಡಕಟ್ಟು ಗುರುತನ್ನು ಸಾರ್ವಜನಿಕ ಸಭೆಗಳಲ್ಲಿ ತನ್ನನ್ನು ನಿಂದಿಸಲು ಮತ್ತು ಅವಮಾನಿಸಲು ಬಳಸಿದ್ದಾರೆ” ಎಂದು ಸಂಗೀತಾ ಹೇಳಿದ್ದಾರೆ.

“ಇರುಳರ್ ಮಹಿಳೆಯಾಗಿರುವ ನೀನು ಪಂಚಾಯತ್ ಅಧ್ಯಕ್ಷರ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹಳಲ್ಲ” ಎಂದು ಚಿತ್ರಾ ತನ್ನನ್ನು ಬಹಿರಂಗವಾಗಿ ಅವಮಾನಿಸಿದ್ದು, ಆಡಳಿತಾತ್ಮಕ ವಿಷಯಗಳಲ್ಲಿ ತಲೆ ಹಾಕಿದರೆ ದೈಹಿಕ ಹಾನಿಯ ಬೆದರಿಕೆಯನ್ನೂ ಒಡ್ಡಿದ್ದಾರೆ” ಎಂದು ಸಂಗೀತಾ ಆರೋಪಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಹಾಗೂ ಸ್ಥಳೀಯ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂಗೀತಾ ದೂರಿದ್ದು, ತನಗೆ ಜೀವ ಬೆದರಿಕೆ ಇದೆ, ತೀವ್ರ ಮಾನಸಿಕ ಸಂಕಷ್ಟಕ್ಕೆ ಸಿಲುಕಿದ್ದೇನೆ ಎಂದಿದ್ದಾರೆ ಎಂದು ವರದಿ ವಿವರಿಸಿದೆ.

ಆಗಸ್ಟ್‌ನಲ್ಲಿ ಸಂಗೀತಾ ಅವರ ದೂರಿಗೆ ಸ್ಪಂದಿಸಿದ್ದ ಜಿಲ್ಲಾಧಿಕಾರಿ ಸಿ ಪಳನಿ ಅವರು, ತನಿಖೆಗೆ ಆದೇಶಿಸಿದ್ದರು ಮತ್ತು ಸಂಗೀತಾ ಅವರಿಗೆ ಡಿಜಿಟಲ್ ಕೀಗೆ ಪಾಸ್‌ವರ್ಡ್‌ ಒದಗಿಸುವಂತೆ ಉಪಾಧ್ಯಕ್ಷೆಗೆ ಸೂಚಿಸಿದ್ದರು. ಆದರೆ, ಜಿಲ್ಲಾಧಿಕಾರಿ ಇದುವರೆಗೂ ಸಂಗೀತಾರನ್ನು ನೇರವಾಗಿ ಸಂಪರ್ಕಿಸಿಲ್ಲ ಮತ್ತು ಪರಿಸ್ಥಿತಿಯನ್ನು ಪರಿಶೀಲಿಸಿಲ್ಲ ಎಂದು ವರದಿ ತಿಳಿಸಿದೆ.

ಇದಾದ ಒಂದು ತಿಂಗಳ ನಂತರ, ಸಂಗೀತಾ ಮತ್ತೆ ಇಬ್ಬರಿಂದ ಮೌಖಿಕ ಜಾತಿ ನಿಂದನೆ ಎದುರಿಸಿದ್ದಾರೆ. “ಅವರು ತನ್ನ ಜಾತಿಯ ಹೆಸರನ್ನು ಬಳಸಿಕೊಂಡು ಕರೆ ಮಾಡುವುದನ್ನು ಮುಂದುವರೆಸಿದ್ದಾರೆ ಮತ್ತು ನರೇಗಾ ಕಾಮಗಾರಿಗಳ ತಪಾಸಣೆ ಸ್ಥಳಗಳಿಂದ ಹೊರ ಹೋಗುವಂತೆ ಒತ್ತಾಯಿಸಿದ್ದಾರೆ” ಎಂದು ಸಂಗೀತಾ ಹೇಳಿಕೊಂಡಿದ್ದಾರೆ.

ತನಗಾದ ಅನ್ಯಾಯದ ವಿರುದ್ದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದ ಸಂಗೀತಾ ಮೇಲೆಯೇ ಪೊಲೀಸರು ಬಿಎನ್‌ಎಸ್‌ ಕಾಯ್ದೆಯೆ ಸೆಕ್ಷನ್ 223,292 ಮತ್ತು 126(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರಿಂದ ಸೂಕ್ತ ಅನುಮತಿ ಪಡೆಯದೆ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಸಬಾರದು ಎಂಬ ಜಿಲ್ಲಾಧಿಕಾರಿಗಳ ಇತ್ತೀಚಿನ ಆದೇಶದನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

“ನಾವು ಸಮಸ್ಯೆಯನ್ನು ಪರಿಶೀಲಿಸುತ್ತಿದ್ದೇವೆ. ಸತ್ಯವನ್ನು ಪರಿಶೀಲಿಸುತ್ತೇವೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಸಿವಾಚ್ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ತಿಳಿಸಿದೆ.

ಇದನ್ನೂ ಓದಿ : ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ದಾಳಿ ಹೆಚ್ಚುತ್ತಿವೆ: ಅಮೆರಿಕ ಸರ್ಕಾರದ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...