Homeದಲಿತ್ ಫೈಲ್ಸ್ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯದ ವಿರುದ್ದ ಪ್ರತಿಭಟಿಸಿದ ಗ್ರಾಮ ಪಂಚಾಯತ್‌ನ ಮಹಿಳಾ ಅಧ್ಯಕ್ಷೆ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ ಪ್ರೆಸ್ ವರದಿ ಮಾಡಿದೆ.

ವಿಲ್ಲುಪುರಂ ಜಿಲ್ಲೆ ಗಿಂಗೀ ತಾಲೂಕಿನ ಅಣಂಗೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಂಗೀತಾ ಅವರು, ಅದೇ ಗ್ರಾ.ಪಂ ಉಪಾಧ್ಯಕ್ಷೆ ಚಿತ್ರಾ ಗುಣಶೇಖರನ್ ಮತ್ತು ಆಕೆಯ ಪತಿ ಸ್ಥಳೀಯ ಡಿಎಂಕೆ ಶಾಖಾ ಕಾರ್ಯದರ್ಶಿ ಗುಣಶೇಖರನ್‌ ಅವರ ವಿರುದ್ದ ಜಾತಿ ಆಧಾರಿತ ತಾರತಮ್ಯ ಮತ್ತು ಕಿರುಕುಳದ ಆರೋಪ ಮಾಡಿದ್ದಾರೆ.

ಗುಣಶೇಖರನ್ ದಂಪತಿಯ ವಿರುದ್ದ ಕ್ರಮಕ್ಕೆ ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಸಂಗೀತಾ ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಅವರ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌)ನ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಉಪಾಧ್ಯಕ್ಷೆ ಮತ್ತು ಆಕೆಯ ಪತಿಯಿಂದ ಜಾತಿ ಆಧಾರಿತ ತಾರತಮ್ಯ ಎದುರಿಸುತ್ತಿರುವುದಾಗಿ ಸಂಗೀತಾ ಕಳೆದ ಜುಲೈ ಮತ್ತು ಆಗಸ್ಟ್‌ನಲ್ಲಿ ಎರಡು ಬಾರಿ ಜಿಲ್ಲಾಧಿಕಾರಿಗಳಿಗೆ ಔಪಚಾರಿಕವಾಗಿ ದೂರು ಸಲ್ಲಿಸಿದ್ದರು. ಆದರೆ, ದಂಪತಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಮೂರು ವರ್ಷಗಳ ಹಿಂದೆ ಪಂಚಾಯತ್ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಚಿತ್ರಾ ಮತ್ತು ಅವರ ಪತಿ ಗುಣಶೇಖರನ್ ನಿರಂತರವಾಗಿ ಅಧಿಕೃತ ಕರ್ತವ್ಯಗಳಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಸಂಗೀತಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಮಹಿಳಾ ಮೀಸಲು ಕ್ಷೇತ್ರವೆಂದು ಘೋಷಿಸಿದ ನಂತರ ಸಂಗೀತಾ ಅವರು ತಮ್ಮ ಗ್ರಾಮದ ಮೊದಲ ಇರುಳರ್ ಮಹಿಳಾ ಪಂಚಾಯತ್ ಅಧ್ಯಕ್ಷೆಯಾಗಿದ್ದಾರೆ.

“ನೌಕರರ ಸಂಬಳ ಪಾವತಿಯನ್ನು ಅನುಮೋದಿಸಲು ಹಾಗೂ ನೀರಿನ ಪೈಪ್‌ಗಳ ಅಳವಡಿಕೆ ಮತ್ತು ರಸ್ತೆ ನಿರ್ಮಾಣಗಳಂತಹ ಮೂಲಭೂತ ಸೌಕರ್ಯಗಳಿಗೆ ಹಣಕಾಸನ್ನು ವಿನಿಯೋಗಿಸಲು ಅಗತ್ಯವಿರುವ ಡಿಜಿಟಲ್ ಪಾಸ್‌ವರ್ಡ್‌ನ್ನು ತನಗೆ ಒದಗಿಸಲು ಚಿತ್ರಾ ಮತ್ತು ಆಕೆಯ ಪತಿ ನಿರಾಕರಿಸಿದ್ದಾರೆ. ಅವರು ತನ್ನ ಬುಡಕಟ್ಟು ಗುರುತನ್ನು ಸಾರ್ವಜನಿಕ ಸಭೆಗಳಲ್ಲಿ ತನ್ನನ್ನು ನಿಂದಿಸಲು ಮತ್ತು ಅವಮಾನಿಸಲು ಬಳಸಿದ್ದಾರೆ” ಎಂದು ಸಂಗೀತಾ ಹೇಳಿದ್ದಾರೆ.

“ಇರುಳರ್ ಮಹಿಳೆಯಾಗಿರುವ ನೀನು ಪಂಚಾಯತ್ ಅಧ್ಯಕ್ಷರ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹಳಲ್ಲ” ಎಂದು ಚಿತ್ರಾ ತನ್ನನ್ನು ಬಹಿರಂಗವಾಗಿ ಅವಮಾನಿಸಿದ್ದು, ಆಡಳಿತಾತ್ಮಕ ವಿಷಯಗಳಲ್ಲಿ ತಲೆ ಹಾಕಿದರೆ ದೈಹಿಕ ಹಾನಿಯ ಬೆದರಿಕೆಯನ್ನೂ ಒಡ್ಡಿದ್ದಾರೆ” ಎಂದು ಸಂಗೀತಾ ಆರೋಪಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಹಾಗೂ ಸ್ಥಳೀಯ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂಗೀತಾ ದೂರಿದ್ದು, ತನಗೆ ಜೀವ ಬೆದರಿಕೆ ಇದೆ, ತೀವ್ರ ಮಾನಸಿಕ ಸಂಕಷ್ಟಕ್ಕೆ ಸಿಲುಕಿದ್ದೇನೆ ಎಂದಿದ್ದಾರೆ ಎಂದು ವರದಿ ವಿವರಿಸಿದೆ.

ಆಗಸ್ಟ್‌ನಲ್ಲಿ ಸಂಗೀತಾ ಅವರ ದೂರಿಗೆ ಸ್ಪಂದಿಸಿದ್ದ ಜಿಲ್ಲಾಧಿಕಾರಿ ಸಿ ಪಳನಿ ಅವರು, ತನಿಖೆಗೆ ಆದೇಶಿಸಿದ್ದರು ಮತ್ತು ಸಂಗೀತಾ ಅವರಿಗೆ ಡಿಜಿಟಲ್ ಕೀಗೆ ಪಾಸ್‌ವರ್ಡ್‌ ಒದಗಿಸುವಂತೆ ಉಪಾಧ್ಯಕ್ಷೆಗೆ ಸೂಚಿಸಿದ್ದರು. ಆದರೆ, ಜಿಲ್ಲಾಧಿಕಾರಿ ಇದುವರೆಗೂ ಸಂಗೀತಾರನ್ನು ನೇರವಾಗಿ ಸಂಪರ್ಕಿಸಿಲ್ಲ ಮತ್ತು ಪರಿಸ್ಥಿತಿಯನ್ನು ಪರಿಶೀಲಿಸಿಲ್ಲ ಎಂದು ವರದಿ ತಿಳಿಸಿದೆ.

ಇದಾದ ಒಂದು ತಿಂಗಳ ನಂತರ, ಸಂಗೀತಾ ಮತ್ತೆ ಇಬ್ಬರಿಂದ ಮೌಖಿಕ ಜಾತಿ ನಿಂದನೆ ಎದುರಿಸಿದ್ದಾರೆ. “ಅವರು ತನ್ನ ಜಾತಿಯ ಹೆಸರನ್ನು ಬಳಸಿಕೊಂಡು ಕರೆ ಮಾಡುವುದನ್ನು ಮುಂದುವರೆಸಿದ್ದಾರೆ ಮತ್ತು ನರೇಗಾ ಕಾಮಗಾರಿಗಳ ತಪಾಸಣೆ ಸ್ಥಳಗಳಿಂದ ಹೊರ ಹೋಗುವಂತೆ ಒತ್ತಾಯಿಸಿದ್ದಾರೆ” ಎಂದು ಸಂಗೀತಾ ಹೇಳಿಕೊಂಡಿದ್ದಾರೆ.

ತನಗಾದ ಅನ್ಯಾಯದ ವಿರುದ್ದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದ ಸಂಗೀತಾ ಮೇಲೆಯೇ ಪೊಲೀಸರು ಬಿಎನ್‌ಎಸ್‌ ಕಾಯ್ದೆಯೆ ಸೆಕ್ಷನ್ 223,292 ಮತ್ತು 126(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರಿಂದ ಸೂಕ್ತ ಅನುಮತಿ ಪಡೆಯದೆ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಸಬಾರದು ಎಂಬ ಜಿಲ್ಲಾಧಿಕಾರಿಗಳ ಇತ್ತೀಚಿನ ಆದೇಶದನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

“ನಾವು ಸಮಸ್ಯೆಯನ್ನು ಪರಿಶೀಲಿಸುತ್ತಿದ್ದೇವೆ. ಸತ್ಯವನ್ನು ಪರಿಶೀಲಿಸುತ್ತೇವೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಸಿವಾಚ್ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ತಿಳಿಸಿದೆ.

ಇದನ್ನೂ ಓದಿ : ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ದಾಳಿ ಹೆಚ್ಚುತ್ತಿವೆ: ಅಮೆರಿಕ ಸರ್ಕಾರದ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...