Homeದಲಿತ್ ಫೈಲ್ಸ್ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯದ ವಿರುದ್ದ ಪ್ರತಿಭಟಿಸಿದ ಗ್ರಾಮ ಪಂಚಾಯತ್‌ನ ಮಹಿಳಾ ಅಧ್ಯಕ್ಷೆ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ ಪ್ರೆಸ್ ವರದಿ ಮಾಡಿದೆ.

ವಿಲ್ಲುಪುರಂ ಜಿಲ್ಲೆ ಗಿಂಗೀ ತಾಲೂಕಿನ ಅಣಂಗೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಂಗೀತಾ ಅವರು, ಅದೇ ಗ್ರಾ.ಪಂ ಉಪಾಧ್ಯಕ್ಷೆ ಚಿತ್ರಾ ಗುಣಶೇಖರನ್ ಮತ್ತು ಆಕೆಯ ಪತಿ ಸ್ಥಳೀಯ ಡಿಎಂಕೆ ಶಾಖಾ ಕಾರ್ಯದರ್ಶಿ ಗುಣಶೇಖರನ್‌ ಅವರ ವಿರುದ್ದ ಜಾತಿ ಆಧಾರಿತ ತಾರತಮ್ಯ ಮತ್ತು ಕಿರುಕುಳದ ಆರೋಪ ಮಾಡಿದ್ದಾರೆ.

ಗುಣಶೇಖರನ್ ದಂಪತಿಯ ವಿರುದ್ದ ಕ್ರಮಕ್ಕೆ ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಸಂಗೀತಾ ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಅವರ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌)ನ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಉಪಾಧ್ಯಕ್ಷೆ ಮತ್ತು ಆಕೆಯ ಪತಿಯಿಂದ ಜಾತಿ ಆಧಾರಿತ ತಾರತಮ್ಯ ಎದುರಿಸುತ್ತಿರುವುದಾಗಿ ಸಂಗೀತಾ ಕಳೆದ ಜುಲೈ ಮತ್ತು ಆಗಸ್ಟ್‌ನಲ್ಲಿ ಎರಡು ಬಾರಿ ಜಿಲ್ಲಾಧಿಕಾರಿಗಳಿಗೆ ಔಪಚಾರಿಕವಾಗಿ ದೂರು ಸಲ್ಲಿಸಿದ್ದರು. ಆದರೆ, ದಂಪತಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಮೂರು ವರ್ಷಗಳ ಹಿಂದೆ ಪಂಚಾಯತ್ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಚಿತ್ರಾ ಮತ್ತು ಅವರ ಪತಿ ಗುಣಶೇಖರನ್ ನಿರಂತರವಾಗಿ ಅಧಿಕೃತ ಕರ್ತವ್ಯಗಳಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಸಂಗೀತಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಮಹಿಳಾ ಮೀಸಲು ಕ್ಷೇತ್ರವೆಂದು ಘೋಷಿಸಿದ ನಂತರ ಸಂಗೀತಾ ಅವರು ತಮ್ಮ ಗ್ರಾಮದ ಮೊದಲ ಇರುಳರ್ ಮಹಿಳಾ ಪಂಚಾಯತ್ ಅಧ್ಯಕ್ಷೆಯಾಗಿದ್ದಾರೆ.

“ನೌಕರರ ಸಂಬಳ ಪಾವತಿಯನ್ನು ಅನುಮೋದಿಸಲು ಹಾಗೂ ನೀರಿನ ಪೈಪ್‌ಗಳ ಅಳವಡಿಕೆ ಮತ್ತು ರಸ್ತೆ ನಿರ್ಮಾಣಗಳಂತಹ ಮೂಲಭೂತ ಸೌಕರ್ಯಗಳಿಗೆ ಹಣಕಾಸನ್ನು ವಿನಿಯೋಗಿಸಲು ಅಗತ್ಯವಿರುವ ಡಿಜಿಟಲ್ ಪಾಸ್‌ವರ್ಡ್‌ನ್ನು ತನಗೆ ಒದಗಿಸಲು ಚಿತ್ರಾ ಮತ್ತು ಆಕೆಯ ಪತಿ ನಿರಾಕರಿಸಿದ್ದಾರೆ. ಅವರು ತನ್ನ ಬುಡಕಟ್ಟು ಗುರುತನ್ನು ಸಾರ್ವಜನಿಕ ಸಭೆಗಳಲ್ಲಿ ತನ್ನನ್ನು ನಿಂದಿಸಲು ಮತ್ತು ಅವಮಾನಿಸಲು ಬಳಸಿದ್ದಾರೆ” ಎಂದು ಸಂಗೀತಾ ಹೇಳಿದ್ದಾರೆ.

“ಇರುಳರ್ ಮಹಿಳೆಯಾಗಿರುವ ನೀನು ಪಂಚಾಯತ್ ಅಧ್ಯಕ್ಷರ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹಳಲ್ಲ” ಎಂದು ಚಿತ್ರಾ ತನ್ನನ್ನು ಬಹಿರಂಗವಾಗಿ ಅವಮಾನಿಸಿದ್ದು, ಆಡಳಿತಾತ್ಮಕ ವಿಷಯಗಳಲ್ಲಿ ತಲೆ ಹಾಕಿದರೆ ದೈಹಿಕ ಹಾನಿಯ ಬೆದರಿಕೆಯನ್ನೂ ಒಡ್ಡಿದ್ದಾರೆ” ಎಂದು ಸಂಗೀತಾ ಆರೋಪಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಹಾಗೂ ಸ್ಥಳೀಯ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂಗೀತಾ ದೂರಿದ್ದು, ತನಗೆ ಜೀವ ಬೆದರಿಕೆ ಇದೆ, ತೀವ್ರ ಮಾನಸಿಕ ಸಂಕಷ್ಟಕ್ಕೆ ಸಿಲುಕಿದ್ದೇನೆ ಎಂದಿದ್ದಾರೆ ಎಂದು ವರದಿ ವಿವರಿಸಿದೆ.

ಆಗಸ್ಟ್‌ನಲ್ಲಿ ಸಂಗೀತಾ ಅವರ ದೂರಿಗೆ ಸ್ಪಂದಿಸಿದ್ದ ಜಿಲ್ಲಾಧಿಕಾರಿ ಸಿ ಪಳನಿ ಅವರು, ತನಿಖೆಗೆ ಆದೇಶಿಸಿದ್ದರು ಮತ್ತು ಸಂಗೀತಾ ಅವರಿಗೆ ಡಿಜಿಟಲ್ ಕೀಗೆ ಪಾಸ್‌ವರ್ಡ್‌ ಒದಗಿಸುವಂತೆ ಉಪಾಧ್ಯಕ್ಷೆಗೆ ಸೂಚಿಸಿದ್ದರು. ಆದರೆ, ಜಿಲ್ಲಾಧಿಕಾರಿ ಇದುವರೆಗೂ ಸಂಗೀತಾರನ್ನು ನೇರವಾಗಿ ಸಂಪರ್ಕಿಸಿಲ್ಲ ಮತ್ತು ಪರಿಸ್ಥಿತಿಯನ್ನು ಪರಿಶೀಲಿಸಿಲ್ಲ ಎಂದು ವರದಿ ತಿಳಿಸಿದೆ.

ಇದಾದ ಒಂದು ತಿಂಗಳ ನಂತರ, ಸಂಗೀತಾ ಮತ್ತೆ ಇಬ್ಬರಿಂದ ಮೌಖಿಕ ಜಾತಿ ನಿಂದನೆ ಎದುರಿಸಿದ್ದಾರೆ. “ಅವರು ತನ್ನ ಜಾತಿಯ ಹೆಸರನ್ನು ಬಳಸಿಕೊಂಡು ಕರೆ ಮಾಡುವುದನ್ನು ಮುಂದುವರೆಸಿದ್ದಾರೆ ಮತ್ತು ನರೇಗಾ ಕಾಮಗಾರಿಗಳ ತಪಾಸಣೆ ಸ್ಥಳಗಳಿಂದ ಹೊರ ಹೋಗುವಂತೆ ಒತ್ತಾಯಿಸಿದ್ದಾರೆ” ಎಂದು ಸಂಗೀತಾ ಹೇಳಿಕೊಂಡಿದ್ದಾರೆ.

ತನಗಾದ ಅನ್ಯಾಯದ ವಿರುದ್ದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದ ಸಂಗೀತಾ ಮೇಲೆಯೇ ಪೊಲೀಸರು ಬಿಎನ್‌ಎಸ್‌ ಕಾಯ್ದೆಯೆ ಸೆಕ್ಷನ್ 223,292 ಮತ್ತು 126(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರಿಂದ ಸೂಕ್ತ ಅನುಮತಿ ಪಡೆಯದೆ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಸಬಾರದು ಎಂಬ ಜಿಲ್ಲಾಧಿಕಾರಿಗಳ ಇತ್ತೀಚಿನ ಆದೇಶದನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

“ನಾವು ಸಮಸ್ಯೆಯನ್ನು ಪರಿಶೀಲಿಸುತ್ತಿದ್ದೇವೆ. ಸತ್ಯವನ್ನು ಪರಿಶೀಲಿಸುತ್ತೇವೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಸಿವಾಚ್ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ತಿಳಿಸಿದೆ.

ಇದನ್ನೂ ಓದಿ : ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ದಾಳಿ ಹೆಚ್ಚುತ್ತಿವೆ: ಅಮೆರಿಕ ಸರ್ಕಾರದ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...