Homeದಲಿತ್ ಫೈಲ್ಸ್ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯದ ವಿರುದ್ದ ಪ್ರತಿಭಟಿಸಿದ ಗ್ರಾಮ ಪಂಚಾಯತ್‌ನ ಮಹಿಳಾ ಅಧ್ಯಕ್ಷೆ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ ಪ್ರೆಸ್ ವರದಿ ಮಾಡಿದೆ.

ವಿಲ್ಲುಪುರಂ ಜಿಲ್ಲೆ ಗಿಂಗೀ ತಾಲೂಕಿನ ಅಣಂಗೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಂಗೀತಾ ಅವರು, ಅದೇ ಗ್ರಾ.ಪಂ ಉಪಾಧ್ಯಕ್ಷೆ ಚಿತ್ರಾ ಗುಣಶೇಖರನ್ ಮತ್ತು ಆಕೆಯ ಪತಿ ಸ್ಥಳೀಯ ಡಿಎಂಕೆ ಶಾಖಾ ಕಾರ್ಯದರ್ಶಿ ಗುಣಶೇಖರನ್‌ ಅವರ ವಿರುದ್ದ ಜಾತಿ ಆಧಾರಿತ ತಾರತಮ್ಯ ಮತ್ತು ಕಿರುಕುಳದ ಆರೋಪ ಮಾಡಿದ್ದಾರೆ.

ಗುಣಶೇಖರನ್ ದಂಪತಿಯ ವಿರುದ್ದ ಕ್ರಮಕ್ಕೆ ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಸಂಗೀತಾ ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಅವರ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌)ನ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಉಪಾಧ್ಯಕ್ಷೆ ಮತ್ತು ಆಕೆಯ ಪತಿಯಿಂದ ಜಾತಿ ಆಧಾರಿತ ತಾರತಮ್ಯ ಎದುರಿಸುತ್ತಿರುವುದಾಗಿ ಸಂಗೀತಾ ಕಳೆದ ಜುಲೈ ಮತ್ತು ಆಗಸ್ಟ್‌ನಲ್ಲಿ ಎರಡು ಬಾರಿ ಜಿಲ್ಲಾಧಿಕಾರಿಗಳಿಗೆ ಔಪಚಾರಿಕವಾಗಿ ದೂರು ಸಲ್ಲಿಸಿದ್ದರು. ಆದರೆ, ದಂಪತಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಮೂರು ವರ್ಷಗಳ ಹಿಂದೆ ಪಂಚಾಯತ್ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಚಿತ್ರಾ ಮತ್ತು ಅವರ ಪತಿ ಗುಣಶೇಖರನ್ ನಿರಂತರವಾಗಿ ಅಧಿಕೃತ ಕರ್ತವ್ಯಗಳಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಸಂಗೀತಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಮಹಿಳಾ ಮೀಸಲು ಕ್ಷೇತ್ರವೆಂದು ಘೋಷಿಸಿದ ನಂತರ ಸಂಗೀತಾ ಅವರು ತಮ್ಮ ಗ್ರಾಮದ ಮೊದಲ ಇರುಳರ್ ಮಹಿಳಾ ಪಂಚಾಯತ್ ಅಧ್ಯಕ್ಷೆಯಾಗಿದ್ದಾರೆ.

“ನೌಕರರ ಸಂಬಳ ಪಾವತಿಯನ್ನು ಅನುಮೋದಿಸಲು ಹಾಗೂ ನೀರಿನ ಪೈಪ್‌ಗಳ ಅಳವಡಿಕೆ ಮತ್ತು ರಸ್ತೆ ನಿರ್ಮಾಣಗಳಂತಹ ಮೂಲಭೂತ ಸೌಕರ್ಯಗಳಿಗೆ ಹಣಕಾಸನ್ನು ವಿನಿಯೋಗಿಸಲು ಅಗತ್ಯವಿರುವ ಡಿಜಿಟಲ್ ಪಾಸ್‌ವರ್ಡ್‌ನ್ನು ತನಗೆ ಒದಗಿಸಲು ಚಿತ್ರಾ ಮತ್ತು ಆಕೆಯ ಪತಿ ನಿರಾಕರಿಸಿದ್ದಾರೆ. ಅವರು ತನ್ನ ಬುಡಕಟ್ಟು ಗುರುತನ್ನು ಸಾರ್ವಜನಿಕ ಸಭೆಗಳಲ್ಲಿ ತನ್ನನ್ನು ನಿಂದಿಸಲು ಮತ್ತು ಅವಮಾನಿಸಲು ಬಳಸಿದ್ದಾರೆ” ಎಂದು ಸಂಗೀತಾ ಹೇಳಿದ್ದಾರೆ.

“ಇರುಳರ್ ಮಹಿಳೆಯಾಗಿರುವ ನೀನು ಪಂಚಾಯತ್ ಅಧ್ಯಕ್ಷರ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹಳಲ್ಲ” ಎಂದು ಚಿತ್ರಾ ತನ್ನನ್ನು ಬಹಿರಂಗವಾಗಿ ಅವಮಾನಿಸಿದ್ದು, ಆಡಳಿತಾತ್ಮಕ ವಿಷಯಗಳಲ್ಲಿ ತಲೆ ಹಾಕಿದರೆ ದೈಹಿಕ ಹಾನಿಯ ಬೆದರಿಕೆಯನ್ನೂ ಒಡ್ಡಿದ್ದಾರೆ” ಎಂದು ಸಂಗೀತಾ ಆರೋಪಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಹಾಗೂ ಸ್ಥಳೀಯ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂಗೀತಾ ದೂರಿದ್ದು, ತನಗೆ ಜೀವ ಬೆದರಿಕೆ ಇದೆ, ತೀವ್ರ ಮಾನಸಿಕ ಸಂಕಷ್ಟಕ್ಕೆ ಸಿಲುಕಿದ್ದೇನೆ ಎಂದಿದ್ದಾರೆ ಎಂದು ವರದಿ ವಿವರಿಸಿದೆ.

ಆಗಸ್ಟ್‌ನಲ್ಲಿ ಸಂಗೀತಾ ಅವರ ದೂರಿಗೆ ಸ್ಪಂದಿಸಿದ್ದ ಜಿಲ್ಲಾಧಿಕಾರಿ ಸಿ ಪಳನಿ ಅವರು, ತನಿಖೆಗೆ ಆದೇಶಿಸಿದ್ದರು ಮತ್ತು ಸಂಗೀತಾ ಅವರಿಗೆ ಡಿಜಿಟಲ್ ಕೀಗೆ ಪಾಸ್‌ವರ್ಡ್‌ ಒದಗಿಸುವಂತೆ ಉಪಾಧ್ಯಕ್ಷೆಗೆ ಸೂಚಿಸಿದ್ದರು. ಆದರೆ, ಜಿಲ್ಲಾಧಿಕಾರಿ ಇದುವರೆಗೂ ಸಂಗೀತಾರನ್ನು ನೇರವಾಗಿ ಸಂಪರ್ಕಿಸಿಲ್ಲ ಮತ್ತು ಪರಿಸ್ಥಿತಿಯನ್ನು ಪರಿಶೀಲಿಸಿಲ್ಲ ಎಂದು ವರದಿ ತಿಳಿಸಿದೆ.

ಇದಾದ ಒಂದು ತಿಂಗಳ ನಂತರ, ಸಂಗೀತಾ ಮತ್ತೆ ಇಬ್ಬರಿಂದ ಮೌಖಿಕ ಜಾತಿ ನಿಂದನೆ ಎದುರಿಸಿದ್ದಾರೆ. “ಅವರು ತನ್ನ ಜಾತಿಯ ಹೆಸರನ್ನು ಬಳಸಿಕೊಂಡು ಕರೆ ಮಾಡುವುದನ್ನು ಮುಂದುವರೆಸಿದ್ದಾರೆ ಮತ್ತು ನರೇಗಾ ಕಾಮಗಾರಿಗಳ ತಪಾಸಣೆ ಸ್ಥಳಗಳಿಂದ ಹೊರ ಹೋಗುವಂತೆ ಒತ್ತಾಯಿಸಿದ್ದಾರೆ” ಎಂದು ಸಂಗೀತಾ ಹೇಳಿಕೊಂಡಿದ್ದಾರೆ.

ತನಗಾದ ಅನ್ಯಾಯದ ವಿರುದ್ದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದ ಸಂಗೀತಾ ಮೇಲೆಯೇ ಪೊಲೀಸರು ಬಿಎನ್‌ಎಸ್‌ ಕಾಯ್ದೆಯೆ ಸೆಕ್ಷನ್ 223,292 ಮತ್ತು 126(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರಿಂದ ಸೂಕ್ತ ಅನುಮತಿ ಪಡೆಯದೆ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಸಬಾರದು ಎಂಬ ಜಿಲ್ಲಾಧಿಕಾರಿಗಳ ಇತ್ತೀಚಿನ ಆದೇಶದನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

“ನಾವು ಸಮಸ್ಯೆಯನ್ನು ಪರಿಶೀಲಿಸುತ್ತಿದ್ದೇವೆ. ಸತ್ಯವನ್ನು ಪರಿಶೀಲಿಸುತ್ತೇವೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಸಿವಾಚ್ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ತಿಳಿಸಿದೆ.

ಇದನ್ನೂ ಓದಿ : ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ದಾಳಿ ಹೆಚ್ಚುತ್ತಿವೆ: ಅಮೆರಿಕ ಸರ್ಕಾರದ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...