Homeದಲಿತ್ ಫೈಲ್ಸ್ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯದ ವಿರುದ್ದ ಪ್ರತಿಭಟಿಸಿದ ಗ್ರಾಮ ಪಂಚಾಯತ್‌ನ ಮಹಿಳಾ ಅಧ್ಯಕ್ಷೆ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ ಪ್ರೆಸ್ ವರದಿ ಮಾಡಿದೆ.

ವಿಲ್ಲುಪುರಂ ಜಿಲ್ಲೆ ಗಿಂಗೀ ತಾಲೂಕಿನ ಅಣಂಗೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಂಗೀತಾ ಅವರು, ಅದೇ ಗ್ರಾ.ಪಂ ಉಪಾಧ್ಯಕ್ಷೆ ಚಿತ್ರಾ ಗುಣಶೇಖರನ್ ಮತ್ತು ಆಕೆಯ ಪತಿ ಸ್ಥಳೀಯ ಡಿಎಂಕೆ ಶಾಖಾ ಕಾರ್ಯದರ್ಶಿ ಗುಣಶೇಖರನ್‌ ಅವರ ವಿರುದ್ದ ಜಾತಿ ಆಧಾರಿತ ತಾರತಮ್ಯ ಮತ್ತು ಕಿರುಕುಳದ ಆರೋಪ ಮಾಡಿದ್ದಾರೆ.

ಗುಣಶೇಖರನ್ ದಂಪತಿಯ ವಿರುದ್ದ ಕ್ರಮಕ್ಕೆ ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಸಂಗೀತಾ ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಅವರ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌)ನ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಉಪಾಧ್ಯಕ್ಷೆ ಮತ್ತು ಆಕೆಯ ಪತಿಯಿಂದ ಜಾತಿ ಆಧಾರಿತ ತಾರತಮ್ಯ ಎದುರಿಸುತ್ತಿರುವುದಾಗಿ ಸಂಗೀತಾ ಕಳೆದ ಜುಲೈ ಮತ್ತು ಆಗಸ್ಟ್‌ನಲ್ಲಿ ಎರಡು ಬಾರಿ ಜಿಲ್ಲಾಧಿಕಾರಿಗಳಿಗೆ ಔಪಚಾರಿಕವಾಗಿ ದೂರು ಸಲ್ಲಿಸಿದ್ದರು. ಆದರೆ, ದಂಪತಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಮೂರು ವರ್ಷಗಳ ಹಿಂದೆ ಪಂಚಾಯತ್ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಚಿತ್ರಾ ಮತ್ತು ಅವರ ಪತಿ ಗುಣಶೇಖರನ್ ನಿರಂತರವಾಗಿ ಅಧಿಕೃತ ಕರ್ತವ್ಯಗಳಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಸಂಗೀತಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಮಹಿಳಾ ಮೀಸಲು ಕ್ಷೇತ್ರವೆಂದು ಘೋಷಿಸಿದ ನಂತರ ಸಂಗೀತಾ ಅವರು ತಮ್ಮ ಗ್ರಾಮದ ಮೊದಲ ಇರುಳರ್ ಮಹಿಳಾ ಪಂಚಾಯತ್ ಅಧ್ಯಕ್ಷೆಯಾಗಿದ್ದಾರೆ.

“ನೌಕರರ ಸಂಬಳ ಪಾವತಿಯನ್ನು ಅನುಮೋದಿಸಲು ಹಾಗೂ ನೀರಿನ ಪೈಪ್‌ಗಳ ಅಳವಡಿಕೆ ಮತ್ತು ರಸ್ತೆ ನಿರ್ಮಾಣಗಳಂತಹ ಮೂಲಭೂತ ಸೌಕರ್ಯಗಳಿಗೆ ಹಣಕಾಸನ್ನು ವಿನಿಯೋಗಿಸಲು ಅಗತ್ಯವಿರುವ ಡಿಜಿಟಲ್ ಪಾಸ್‌ವರ್ಡ್‌ನ್ನು ತನಗೆ ಒದಗಿಸಲು ಚಿತ್ರಾ ಮತ್ತು ಆಕೆಯ ಪತಿ ನಿರಾಕರಿಸಿದ್ದಾರೆ. ಅವರು ತನ್ನ ಬುಡಕಟ್ಟು ಗುರುತನ್ನು ಸಾರ್ವಜನಿಕ ಸಭೆಗಳಲ್ಲಿ ತನ್ನನ್ನು ನಿಂದಿಸಲು ಮತ್ತು ಅವಮಾನಿಸಲು ಬಳಸಿದ್ದಾರೆ” ಎಂದು ಸಂಗೀತಾ ಹೇಳಿದ್ದಾರೆ.

“ಇರುಳರ್ ಮಹಿಳೆಯಾಗಿರುವ ನೀನು ಪಂಚಾಯತ್ ಅಧ್ಯಕ್ಷರ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹಳಲ್ಲ” ಎಂದು ಚಿತ್ರಾ ತನ್ನನ್ನು ಬಹಿರಂಗವಾಗಿ ಅವಮಾನಿಸಿದ್ದು, ಆಡಳಿತಾತ್ಮಕ ವಿಷಯಗಳಲ್ಲಿ ತಲೆ ಹಾಕಿದರೆ ದೈಹಿಕ ಹಾನಿಯ ಬೆದರಿಕೆಯನ್ನೂ ಒಡ್ಡಿದ್ದಾರೆ” ಎಂದು ಸಂಗೀತಾ ಆರೋಪಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಹಾಗೂ ಸ್ಥಳೀಯ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂಗೀತಾ ದೂರಿದ್ದು, ತನಗೆ ಜೀವ ಬೆದರಿಕೆ ಇದೆ, ತೀವ್ರ ಮಾನಸಿಕ ಸಂಕಷ್ಟಕ್ಕೆ ಸಿಲುಕಿದ್ದೇನೆ ಎಂದಿದ್ದಾರೆ ಎಂದು ವರದಿ ವಿವರಿಸಿದೆ.

ಆಗಸ್ಟ್‌ನಲ್ಲಿ ಸಂಗೀತಾ ಅವರ ದೂರಿಗೆ ಸ್ಪಂದಿಸಿದ್ದ ಜಿಲ್ಲಾಧಿಕಾರಿ ಸಿ ಪಳನಿ ಅವರು, ತನಿಖೆಗೆ ಆದೇಶಿಸಿದ್ದರು ಮತ್ತು ಸಂಗೀತಾ ಅವರಿಗೆ ಡಿಜಿಟಲ್ ಕೀಗೆ ಪಾಸ್‌ವರ್ಡ್‌ ಒದಗಿಸುವಂತೆ ಉಪಾಧ್ಯಕ್ಷೆಗೆ ಸೂಚಿಸಿದ್ದರು. ಆದರೆ, ಜಿಲ್ಲಾಧಿಕಾರಿ ಇದುವರೆಗೂ ಸಂಗೀತಾರನ್ನು ನೇರವಾಗಿ ಸಂಪರ್ಕಿಸಿಲ್ಲ ಮತ್ತು ಪರಿಸ್ಥಿತಿಯನ್ನು ಪರಿಶೀಲಿಸಿಲ್ಲ ಎಂದು ವರದಿ ತಿಳಿಸಿದೆ.

ಇದಾದ ಒಂದು ತಿಂಗಳ ನಂತರ, ಸಂಗೀತಾ ಮತ್ತೆ ಇಬ್ಬರಿಂದ ಮೌಖಿಕ ಜಾತಿ ನಿಂದನೆ ಎದುರಿಸಿದ್ದಾರೆ. “ಅವರು ತನ್ನ ಜಾತಿಯ ಹೆಸರನ್ನು ಬಳಸಿಕೊಂಡು ಕರೆ ಮಾಡುವುದನ್ನು ಮುಂದುವರೆಸಿದ್ದಾರೆ ಮತ್ತು ನರೇಗಾ ಕಾಮಗಾರಿಗಳ ತಪಾಸಣೆ ಸ್ಥಳಗಳಿಂದ ಹೊರ ಹೋಗುವಂತೆ ಒತ್ತಾಯಿಸಿದ್ದಾರೆ” ಎಂದು ಸಂಗೀತಾ ಹೇಳಿಕೊಂಡಿದ್ದಾರೆ.

ತನಗಾದ ಅನ್ಯಾಯದ ವಿರುದ್ದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದ ಸಂಗೀತಾ ಮೇಲೆಯೇ ಪೊಲೀಸರು ಬಿಎನ್‌ಎಸ್‌ ಕಾಯ್ದೆಯೆ ಸೆಕ್ಷನ್ 223,292 ಮತ್ತು 126(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರಿಂದ ಸೂಕ್ತ ಅನುಮತಿ ಪಡೆಯದೆ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಸಬಾರದು ಎಂಬ ಜಿಲ್ಲಾಧಿಕಾರಿಗಳ ಇತ್ತೀಚಿನ ಆದೇಶದನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

“ನಾವು ಸಮಸ್ಯೆಯನ್ನು ಪರಿಶೀಲಿಸುತ್ತಿದ್ದೇವೆ. ಸತ್ಯವನ್ನು ಪರಿಶೀಲಿಸುತ್ತೇವೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಸಿವಾಚ್ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ತಿಳಿಸಿದೆ.

ಇದನ್ನೂ ಓದಿ : ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ದಾಳಿ ಹೆಚ್ಚುತ್ತಿವೆ: ಅಮೆರಿಕ ಸರ್ಕಾರದ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...