Homeಮುಖಪುಟಬುಡಕಟ್ಟು ಹಕ್ಕುಗಳ ಬಗ್ಗೆ ಮಾತನಾಡಿದರೆ ದೇಶ ಒಡೆಯುತ್ತದೆ ಎಂದು ಬಿಜೆಪಿ ಹೇಳುತ್ತದೆ - ರಾಹುಲ್ ಗಾಂಧಿ

ಬುಡಕಟ್ಟು ಹಕ್ಕುಗಳ ಬಗ್ಗೆ ಮಾತನಾಡಿದರೆ ದೇಶ ಒಡೆಯುತ್ತದೆ ಎಂದು ಬಿಜೆಪಿ ಹೇಳುತ್ತದೆ – ರಾಹುಲ್ ಗಾಂಧಿ

- Advertisement -
- Advertisement -

ಬುಡಕಟ್ಟು ಹಕ್ಕುಗಳ ಬಗ್ಗೆ ನಾನು ಮಾತನಾಡಿದಾಗೆಲ್ಲಾ ನಾನು ದೇಶವನ್ನು ವಿಭಜಿಸುತ್ತಿದ್ದೇನೆ ಎಂದು ಬಿಜೆಪಿ ಆರೋಪಿಸುತ್ತದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ. ಬುಡಕಟ್ಟು ಪ್ರಾಬಲ್ಯದ ಜಾರ್ಖಂಡ್‌ನ ಗುಮ್ಲಾ ಮತ್ತು ಲೋಹರ್ಡಗಾದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್‌ಟಿ, ಎಸ್‌ಸಿ ಮತ್ತು ಒಬಿಸಿ ಮೀಸಲಾತಿಯನ್ನು ಕ್ರಮವಾಗಿ 28%, 12% ಮತ್ತು 27%ಕ್ಕೆ ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಬುಡಕಟ್ಟು ಹಕ್ಕುಗಳ

ಆದಿವಾಸಿಗಳು ಎಂದರೆ ಈ ನೆಲದ ಮೊದಲ ಮಾಲೀಕರು, ಈ ದೇಶದ ಜಲ, ಕಾಡು ಮತ್ತು ಜಮೀನಿನ ಮೇಲೆ ಮೊದಲ ಹಕ್ಕು ಹೊಂದಿರುವರು. ಆದರೆ ಬಿಜೆಪಿಯವರು ಅವರನ್ನು ವನವಾಸಿ ಎಂದು ಕರೆಯುತ್ತದೆ. ಅಂದರೆ ಕಾಡಿನಲ್ಲಿ ವಾಸಿಸುವ ಮತ್ತು ಈ ದೇಶದ ಜಲ, ಕಾಡು ಮತ್ತು ಜಮೀನಿನ ಮೇಲೆ ಯಾವುದೇ ಹಕ್ಕು ಇಲ್ಲ ಎಂದು ಪ್ರತಿಪಾದಿಸಲು ಅವರು ಹಾಗೆ ಕರೆಯುತ್ತಾರೆ ಎಂದು ಆದಿವಾಸಿಗಳು ಎಂಬ ಪದದ ಅರ್ಥವನ್ನು ವಿವರಿಸಲು ರಾಹುಲ್ ಗಾಂಧಿ ಪ್ರಯತ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಿಮ್ಮನ್ನು ವನವಾಸಿ ಎಂದು ಕರೆಯುವವರು, ನಿಮ್ಮ ಬಳಿ ಏನಿದ್ದರೂ ಕಸಿದುಕೊಳ್ಳಲು ಬಯಸುತ್ತಾರೆ. ಮೋದಿ ಅವರು ಇಲ್ಲಿಗೆ ಬಂದು ನಿಮ್ಮನ್ನು ವನವಾಸಿ ಎಂದು ಹೇಳುತ್ತಾರೆ. ಅಂದರೆ ನೀವು ಕಾಡಿನಲ್ಲಿ ವಾಸಿಸುವವರು ಮಾತ್ರ, ಈ ಕಾಡು ನಮ್ಮದು, ಭೂಮಿ ನಮ್ಮದು ಮತ್ತು ನಿಮ್ಮ ನೀರು ಕೂಡ ನಮ್ಮದು ಎಂಬುವುದು ಅದರ ಅರ್ಥವಾಗಿದೆ. ಇದು ಆದಿವಾಸಿಗಳಿಗೆ ಸೇರಿದ್ದಲ್ಲ, ಮೋದಿ ಅವರಿಗೆ, ಬಂಡವಾಳಶಾಹಿಗಳು ಮತ್ತು ಅದೇ ರೀತಿ ಅದಾನಿಗಳಿಗೂ ಸೇರಿದೆ ಎಂಬುವುದಾಗಿದೆ ಅವರ ವಾದ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆದ್ದರಿಂದ, ಅವರು ಎಲ್ಲಿಗೆ ಹೋದರೂ ಅವರು ನಿಮ್ಮ ಭೂಮಿಯನ್ನು ನಿಮ್ಮಿಂದ ಕಸಿದುಕೊಳ್ಳುತ್ತಾರೆ. ಬಿಜೆಪಿ ‘ವಿಕಾಸ’ ಎಂಬ ಹೊಸ ಪದವನ್ನು ಹುಟ್ಟುಹಾಕಿದೆ. ಅದರ ಅರ್ಥ ಆದಿವಾಸಿಗಳ ಭೂಮಿ ಎಲ್ಲಿದ್ದರೂ ಅದನ್ನು ಕಿತ್ತುಕೊಳ್ಳಿ ಎಂಬುದಗಿದ್ದು; ಇದು ಅವರ ವಿಕಾಸ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು. ಬುಡಕಟ್ಟು ಹಕ್ಕುಗಳ

“ನಿಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಾದರೆ, ಅದನ್ನು ನಿಮ್ಮ ಒಪ್ಪಿಗೆಯೊಂದಿಗೆ ತೆಗೆದುಕೊಳ್ಳಬೇಕು. ಒಂದು ವೇಳೆ ನೀವು ನಿಮ್ಮ ಭೂಮಿಯನ್ನು ನೀಡಿದ್ದರೆ ಅದಕ್ಕೆ ನೀವು ನ್ಯಾಯಯುತ ಪರಿಹಾರವನ್ನು ನೀವು ಪಡೆಯಬೇಕು. ನಿಮ್ಮ ಭೂಮಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿದರೆ ಆ ಕೈಗಾರಿಕೆಗಳು ನಿಮ್ಮ ಮಕ್ಕಳಿಗೆ ಉದ್ಯೋಗ ನೀಡಬೇಕು ಎಂದು ನಾವು ಬಯಸುತ್ತೇವೆ.” ಎಂದು ರಾಹುಲ್ ಗಾಂಧಿ ಹೇಳಿದದ್ದಾರೆ. ನಿಮ್ಮ ಮಕ್ಕಳು ಇಂಜಿನಿಯರ್, ವೈದ್ಯರು ಮತ್ತು ವಕೀಲರಾಗಬೇಕು ಮತ್ತು ಕಾರ್ಖಾನೆಯನ್ನು ನಡೆಸುವುದನ್ನು ಕಲಿಯಬೇಕೆಂದು ನಾವು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ.

8%ದಷ್ಟು ಬುಡಕಟ್ಟು, 15% ದಲಿತ ಮತ್ತು ಸುಮಾರು 50% ಇತರೆ ಹಿಂದುಳಿದ ಜಾತಿಗಳು (OBC) ಇವೆ. ಅದರಲ್ಲಿ 15%ದಷ್ಟು ಅಲ್ಪಸಂಖ್ಯಾತರನ್ನು ಸೇರಿಸಿ ಒಟ್ಟು ಮಾಡಿದರೆ ಒಟ್ಟು ಜನಸಂಖ್ಯೆಯ 90%ದಷ್ಟು ಆಗುತ್ತದೆ ಎಂದು ಅವರು ಹೇಳಿದ್ದಾರೆ. ಸರ್ಕಾರಿ ಸಂಸ್ಥೆಗಳು, ವ್ಯಾಪಾರ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳನ್ನು ನೋಡಿದರೆ, ಈ ಶೇಕಡಾ 90%ದಷ್ಟು ಜನಸಂಖ್ಯೆಗೆ ಸೇರಿದವ ಯಾರನ್ನೂ ಕಂಡುಬರುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.

“ನಾನು ಸಂಸತ್ತಿನಲ್ಲಿ ಜಾತಿ ಗಣತಿಗೆ ಒತ್ತಾಯಿಸಿದಾಗ, ಅವರು ರಾಹುಲ್ ಗಾಂಧಿ ದೇಶವನ್ನು ವಿಭಜಿಸಲು ಬಯಸುತ್ತಿದ್ದಾರೆ ಎಂದು ಹೇಳುತ್ತಾರೆ. ಆದರೆ 90% ದಷ್ಟು ಜನರಿಗೆ ದೇಶವನ್ನು ನಡೆಸುವುದರಲ್ಲಿ ಯಾವುದೇ ಪಾತ್ರವಿಲ್ಲ. ನಾನು ಅವರ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿಲ್ಲ, ಆದರೆ ದೇಶವನ್ನು ನಡೆಸುವಲ್ಲಿ ಅವರ ಸಹಭಾಗಿತ್ವವನ್ನು ಹೊಂದಿರಬೇಕು ಎಂದು ನಾನು ಹೇಳುತ್ತಿದ್ದೇನೆ. ದೇಶದಲ್ಲಿ ಹಲವಾರು ಖಾಸಗಿ ಆಸ್ಪತ್ರೆಗಳಿವೆ, ಅವುಗಳಲ್ಲಿ ಯಾವುದಾದರೂ ಬುಡಕಟ್ಟು ಜನರ ಒಡೆತನದಲ್ಲಿದ್ದರೆ ಹೆಸರಿಸಿ; ಅಂತಹ ಯಾವುದೇ ಆಸ್ಪತ್ರೆಯ ಕೂಡಾ ಕಾಣುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...