Homeಮುಖಪುಟಬುಡಕಟ್ಟು ಹಕ್ಕುಗಳ ಬಗ್ಗೆ ಮಾತನಾಡಿದರೆ ದೇಶ ಒಡೆಯುತ್ತದೆ ಎಂದು ಬಿಜೆಪಿ ಹೇಳುತ್ತದೆ - ರಾಹುಲ್ ಗಾಂಧಿ

ಬುಡಕಟ್ಟು ಹಕ್ಕುಗಳ ಬಗ್ಗೆ ಮಾತನಾಡಿದರೆ ದೇಶ ಒಡೆಯುತ್ತದೆ ಎಂದು ಬಿಜೆಪಿ ಹೇಳುತ್ತದೆ – ರಾಹುಲ್ ಗಾಂಧಿ

- Advertisement -
- Advertisement -

ಬುಡಕಟ್ಟು ಹಕ್ಕುಗಳ ಬಗ್ಗೆ ನಾನು ಮಾತನಾಡಿದಾಗೆಲ್ಲಾ ನಾನು ದೇಶವನ್ನು ವಿಭಜಿಸುತ್ತಿದ್ದೇನೆ ಎಂದು ಬಿಜೆಪಿ ಆರೋಪಿಸುತ್ತದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ. ಬುಡಕಟ್ಟು ಪ್ರಾಬಲ್ಯದ ಜಾರ್ಖಂಡ್‌ನ ಗುಮ್ಲಾ ಮತ್ತು ಲೋಹರ್ಡಗಾದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್‌ಟಿ, ಎಸ್‌ಸಿ ಮತ್ತು ಒಬಿಸಿ ಮೀಸಲಾತಿಯನ್ನು ಕ್ರಮವಾಗಿ 28%, 12% ಮತ್ತು 27%ಕ್ಕೆ ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಬುಡಕಟ್ಟು ಹಕ್ಕುಗಳ

ಆದಿವಾಸಿಗಳು ಎಂದರೆ ಈ ನೆಲದ ಮೊದಲ ಮಾಲೀಕರು, ಈ ದೇಶದ ಜಲ, ಕಾಡು ಮತ್ತು ಜಮೀನಿನ ಮೇಲೆ ಮೊದಲ ಹಕ್ಕು ಹೊಂದಿರುವರು. ಆದರೆ ಬಿಜೆಪಿಯವರು ಅವರನ್ನು ವನವಾಸಿ ಎಂದು ಕರೆಯುತ್ತದೆ. ಅಂದರೆ ಕಾಡಿನಲ್ಲಿ ವಾಸಿಸುವ ಮತ್ತು ಈ ದೇಶದ ಜಲ, ಕಾಡು ಮತ್ತು ಜಮೀನಿನ ಮೇಲೆ ಯಾವುದೇ ಹಕ್ಕು ಇಲ್ಲ ಎಂದು ಪ್ರತಿಪಾದಿಸಲು ಅವರು ಹಾಗೆ ಕರೆಯುತ್ತಾರೆ ಎಂದು ಆದಿವಾಸಿಗಳು ಎಂಬ ಪದದ ಅರ್ಥವನ್ನು ವಿವರಿಸಲು ರಾಹುಲ್ ಗಾಂಧಿ ಪ್ರಯತ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಿಮ್ಮನ್ನು ವನವಾಸಿ ಎಂದು ಕರೆಯುವವರು, ನಿಮ್ಮ ಬಳಿ ಏನಿದ್ದರೂ ಕಸಿದುಕೊಳ್ಳಲು ಬಯಸುತ್ತಾರೆ. ಮೋದಿ ಅವರು ಇಲ್ಲಿಗೆ ಬಂದು ನಿಮ್ಮನ್ನು ವನವಾಸಿ ಎಂದು ಹೇಳುತ್ತಾರೆ. ಅಂದರೆ ನೀವು ಕಾಡಿನಲ್ಲಿ ವಾಸಿಸುವವರು ಮಾತ್ರ, ಈ ಕಾಡು ನಮ್ಮದು, ಭೂಮಿ ನಮ್ಮದು ಮತ್ತು ನಿಮ್ಮ ನೀರು ಕೂಡ ನಮ್ಮದು ಎಂಬುವುದು ಅದರ ಅರ್ಥವಾಗಿದೆ. ಇದು ಆದಿವಾಸಿಗಳಿಗೆ ಸೇರಿದ್ದಲ್ಲ, ಮೋದಿ ಅವರಿಗೆ, ಬಂಡವಾಳಶಾಹಿಗಳು ಮತ್ತು ಅದೇ ರೀತಿ ಅದಾನಿಗಳಿಗೂ ಸೇರಿದೆ ಎಂಬುವುದಾಗಿದೆ ಅವರ ವಾದ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆದ್ದರಿಂದ, ಅವರು ಎಲ್ಲಿಗೆ ಹೋದರೂ ಅವರು ನಿಮ್ಮ ಭೂಮಿಯನ್ನು ನಿಮ್ಮಿಂದ ಕಸಿದುಕೊಳ್ಳುತ್ತಾರೆ. ಬಿಜೆಪಿ ‘ವಿಕಾಸ’ ಎಂಬ ಹೊಸ ಪದವನ್ನು ಹುಟ್ಟುಹಾಕಿದೆ. ಅದರ ಅರ್ಥ ಆದಿವಾಸಿಗಳ ಭೂಮಿ ಎಲ್ಲಿದ್ದರೂ ಅದನ್ನು ಕಿತ್ತುಕೊಳ್ಳಿ ಎಂಬುದಗಿದ್ದು; ಇದು ಅವರ ವಿಕಾಸ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು. ಬುಡಕಟ್ಟು ಹಕ್ಕುಗಳ

“ನಿಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಾದರೆ, ಅದನ್ನು ನಿಮ್ಮ ಒಪ್ಪಿಗೆಯೊಂದಿಗೆ ತೆಗೆದುಕೊಳ್ಳಬೇಕು. ಒಂದು ವೇಳೆ ನೀವು ನಿಮ್ಮ ಭೂಮಿಯನ್ನು ನೀಡಿದ್ದರೆ ಅದಕ್ಕೆ ನೀವು ನ್ಯಾಯಯುತ ಪರಿಹಾರವನ್ನು ನೀವು ಪಡೆಯಬೇಕು. ನಿಮ್ಮ ಭೂಮಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿದರೆ ಆ ಕೈಗಾರಿಕೆಗಳು ನಿಮ್ಮ ಮಕ್ಕಳಿಗೆ ಉದ್ಯೋಗ ನೀಡಬೇಕು ಎಂದು ನಾವು ಬಯಸುತ್ತೇವೆ.” ಎಂದು ರಾಹುಲ್ ಗಾಂಧಿ ಹೇಳಿದದ್ದಾರೆ. ನಿಮ್ಮ ಮಕ್ಕಳು ಇಂಜಿನಿಯರ್, ವೈದ್ಯರು ಮತ್ತು ವಕೀಲರಾಗಬೇಕು ಮತ್ತು ಕಾರ್ಖಾನೆಯನ್ನು ನಡೆಸುವುದನ್ನು ಕಲಿಯಬೇಕೆಂದು ನಾವು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ.

8%ದಷ್ಟು ಬುಡಕಟ್ಟು, 15% ದಲಿತ ಮತ್ತು ಸುಮಾರು 50% ಇತರೆ ಹಿಂದುಳಿದ ಜಾತಿಗಳು (OBC) ಇವೆ. ಅದರಲ್ಲಿ 15%ದಷ್ಟು ಅಲ್ಪಸಂಖ್ಯಾತರನ್ನು ಸೇರಿಸಿ ಒಟ್ಟು ಮಾಡಿದರೆ ಒಟ್ಟು ಜನಸಂಖ್ಯೆಯ 90%ದಷ್ಟು ಆಗುತ್ತದೆ ಎಂದು ಅವರು ಹೇಳಿದ್ದಾರೆ. ಸರ್ಕಾರಿ ಸಂಸ್ಥೆಗಳು, ವ್ಯಾಪಾರ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳನ್ನು ನೋಡಿದರೆ, ಈ ಶೇಕಡಾ 90%ದಷ್ಟು ಜನಸಂಖ್ಯೆಗೆ ಸೇರಿದವ ಯಾರನ್ನೂ ಕಂಡುಬರುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.

“ನಾನು ಸಂಸತ್ತಿನಲ್ಲಿ ಜಾತಿ ಗಣತಿಗೆ ಒತ್ತಾಯಿಸಿದಾಗ, ಅವರು ರಾಹುಲ್ ಗಾಂಧಿ ದೇಶವನ್ನು ವಿಭಜಿಸಲು ಬಯಸುತ್ತಿದ್ದಾರೆ ಎಂದು ಹೇಳುತ್ತಾರೆ. ಆದರೆ 90% ದಷ್ಟು ಜನರಿಗೆ ದೇಶವನ್ನು ನಡೆಸುವುದರಲ್ಲಿ ಯಾವುದೇ ಪಾತ್ರವಿಲ್ಲ. ನಾನು ಅವರ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿಲ್ಲ, ಆದರೆ ದೇಶವನ್ನು ನಡೆಸುವಲ್ಲಿ ಅವರ ಸಹಭಾಗಿತ್ವವನ್ನು ಹೊಂದಿರಬೇಕು ಎಂದು ನಾನು ಹೇಳುತ್ತಿದ್ದೇನೆ. ದೇಶದಲ್ಲಿ ಹಲವಾರು ಖಾಸಗಿ ಆಸ್ಪತ್ರೆಗಳಿವೆ, ಅವುಗಳಲ್ಲಿ ಯಾವುದಾದರೂ ಬುಡಕಟ್ಟು ಜನರ ಒಡೆತನದಲ್ಲಿದ್ದರೆ ಹೆಸರಿಸಿ; ಅಂತಹ ಯಾವುದೇ ಆಸ್ಪತ್ರೆಯ ಕೂಡಾ ಕಾಣುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...