Homeಮುಖಪುಟಬುಡಕಟ್ಟು ಹಕ್ಕುಗಳ ಬಗ್ಗೆ ಮಾತನಾಡಿದರೆ ದೇಶ ಒಡೆಯುತ್ತದೆ ಎಂದು ಬಿಜೆಪಿ ಹೇಳುತ್ತದೆ - ರಾಹುಲ್ ಗಾಂಧಿ

ಬುಡಕಟ್ಟು ಹಕ್ಕುಗಳ ಬಗ್ಗೆ ಮಾತನಾಡಿದರೆ ದೇಶ ಒಡೆಯುತ್ತದೆ ಎಂದು ಬಿಜೆಪಿ ಹೇಳುತ್ತದೆ – ರಾಹುಲ್ ಗಾಂಧಿ

- Advertisement -
- Advertisement -

ಬುಡಕಟ್ಟು ಹಕ್ಕುಗಳ ಬಗ್ಗೆ ನಾನು ಮಾತನಾಡಿದಾಗೆಲ್ಲಾ ನಾನು ದೇಶವನ್ನು ವಿಭಜಿಸುತ್ತಿದ್ದೇನೆ ಎಂದು ಬಿಜೆಪಿ ಆರೋಪಿಸುತ್ತದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ. ಬುಡಕಟ್ಟು ಪ್ರಾಬಲ್ಯದ ಜಾರ್ಖಂಡ್‌ನ ಗುಮ್ಲಾ ಮತ್ತು ಲೋಹರ್ಡಗಾದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್‌ಟಿ, ಎಸ್‌ಸಿ ಮತ್ತು ಒಬಿಸಿ ಮೀಸಲಾತಿಯನ್ನು ಕ್ರಮವಾಗಿ 28%, 12% ಮತ್ತು 27%ಕ್ಕೆ ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಬುಡಕಟ್ಟು ಹಕ್ಕುಗಳ

ಆದಿವಾಸಿಗಳು ಎಂದರೆ ಈ ನೆಲದ ಮೊದಲ ಮಾಲೀಕರು, ಈ ದೇಶದ ಜಲ, ಕಾಡು ಮತ್ತು ಜಮೀನಿನ ಮೇಲೆ ಮೊದಲ ಹಕ್ಕು ಹೊಂದಿರುವರು. ಆದರೆ ಬಿಜೆಪಿಯವರು ಅವರನ್ನು ವನವಾಸಿ ಎಂದು ಕರೆಯುತ್ತದೆ. ಅಂದರೆ ಕಾಡಿನಲ್ಲಿ ವಾಸಿಸುವ ಮತ್ತು ಈ ದೇಶದ ಜಲ, ಕಾಡು ಮತ್ತು ಜಮೀನಿನ ಮೇಲೆ ಯಾವುದೇ ಹಕ್ಕು ಇಲ್ಲ ಎಂದು ಪ್ರತಿಪಾದಿಸಲು ಅವರು ಹಾಗೆ ಕರೆಯುತ್ತಾರೆ ಎಂದು ಆದಿವಾಸಿಗಳು ಎಂಬ ಪದದ ಅರ್ಥವನ್ನು ವಿವರಿಸಲು ರಾಹುಲ್ ಗಾಂಧಿ ಪ್ರಯತ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಿಮ್ಮನ್ನು ವನವಾಸಿ ಎಂದು ಕರೆಯುವವರು, ನಿಮ್ಮ ಬಳಿ ಏನಿದ್ದರೂ ಕಸಿದುಕೊಳ್ಳಲು ಬಯಸುತ್ತಾರೆ. ಮೋದಿ ಅವರು ಇಲ್ಲಿಗೆ ಬಂದು ನಿಮ್ಮನ್ನು ವನವಾಸಿ ಎಂದು ಹೇಳುತ್ತಾರೆ. ಅಂದರೆ ನೀವು ಕಾಡಿನಲ್ಲಿ ವಾಸಿಸುವವರು ಮಾತ್ರ, ಈ ಕಾಡು ನಮ್ಮದು, ಭೂಮಿ ನಮ್ಮದು ಮತ್ತು ನಿಮ್ಮ ನೀರು ಕೂಡ ನಮ್ಮದು ಎಂಬುವುದು ಅದರ ಅರ್ಥವಾಗಿದೆ. ಇದು ಆದಿವಾಸಿಗಳಿಗೆ ಸೇರಿದ್ದಲ್ಲ, ಮೋದಿ ಅವರಿಗೆ, ಬಂಡವಾಳಶಾಹಿಗಳು ಮತ್ತು ಅದೇ ರೀತಿ ಅದಾನಿಗಳಿಗೂ ಸೇರಿದೆ ಎಂಬುವುದಾಗಿದೆ ಅವರ ವಾದ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆದ್ದರಿಂದ, ಅವರು ಎಲ್ಲಿಗೆ ಹೋದರೂ ಅವರು ನಿಮ್ಮ ಭೂಮಿಯನ್ನು ನಿಮ್ಮಿಂದ ಕಸಿದುಕೊಳ್ಳುತ್ತಾರೆ. ಬಿಜೆಪಿ ‘ವಿಕಾಸ’ ಎಂಬ ಹೊಸ ಪದವನ್ನು ಹುಟ್ಟುಹಾಕಿದೆ. ಅದರ ಅರ್ಥ ಆದಿವಾಸಿಗಳ ಭೂಮಿ ಎಲ್ಲಿದ್ದರೂ ಅದನ್ನು ಕಿತ್ತುಕೊಳ್ಳಿ ಎಂಬುದಗಿದ್ದು; ಇದು ಅವರ ವಿಕಾಸ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು. ಬುಡಕಟ್ಟು ಹಕ್ಕುಗಳ

“ನಿಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಾದರೆ, ಅದನ್ನು ನಿಮ್ಮ ಒಪ್ಪಿಗೆಯೊಂದಿಗೆ ತೆಗೆದುಕೊಳ್ಳಬೇಕು. ಒಂದು ವೇಳೆ ನೀವು ನಿಮ್ಮ ಭೂಮಿಯನ್ನು ನೀಡಿದ್ದರೆ ಅದಕ್ಕೆ ನೀವು ನ್ಯಾಯಯುತ ಪರಿಹಾರವನ್ನು ನೀವು ಪಡೆಯಬೇಕು. ನಿಮ್ಮ ಭೂಮಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿದರೆ ಆ ಕೈಗಾರಿಕೆಗಳು ನಿಮ್ಮ ಮಕ್ಕಳಿಗೆ ಉದ್ಯೋಗ ನೀಡಬೇಕು ಎಂದು ನಾವು ಬಯಸುತ್ತೇವೆ.” ಎಂದು ರಾಹುಲ್ ಗಾಂಧಿ ಹೇಳಿದದ್ದಾರೆ. ನಿಮ್ಮ ಮಕ್ಕಳು ಇಂಜಿನಿಯರ್, ವೈದ್ಯರು ಮತ್ತು ವಕೀಲರಾಗಬೇಕು ಮತ್ತು ಕಾರ್ಖಾನೆಯನ್ನು ನಡೆಸುವುದನ್ನು ಕಲಿಯಬೇಕೆಂದು ನಾವು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ.

8%ದಷ್ಟು ಬುಡಕಟ್ಟು, 15% ದಲಿತ ಮತ್ತು ಸುಮಾರು 50% ಇತರೆ ಹಿಂದುಳಿದ ಜಾತಿಗಳು (OBC) ಇವೆ. ಅದರಲ್ಲಿ 15%ದಷ್ಟು ಅಲ್ಪಸಂಖ್ಯಾತರನ್ನು ಸೇರಿಸಿ ಒಟ್ಟು ಮಾಡಿದರೆ ಒಟ್ಟು ಜನಸಂಖ್ಯೆಯ 90%ದಷ್ಟು ಆಗುತ್ತದೆ ಎಂದು ಅವರು ಹೇಳಿದ್ದಾರೆ. ಸರ್ಕಾರಿ ಸಂಸ್ಥೆಗಳು, ವ್ಯಾಪಾರ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳನ್ನು ನೋಡಿದರೆ, ಈ ಶೇಕಡಾ 90%ದಷ್ಟು ಜನಸಂಖ್ಯೆಗೆ ಸೇರಿದವ ಯಾರನ್ನೂ ಕಂಡುಬರುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.

“ನಾನು ಸಂಸತ್ತಿನಲ್ಲಿ ಜಾತಿ ಗಣತಿಗೆ ಒತ್ತಾಯಿಸಿದಾಗ, ಅವರು ರಾಹುಲ್ ಗಾಂಧಿ ದೇಶವನ್ನು ವಿಭಜಿಸಲು ಬಯಸುತ್ತಿದ್ದಾರೆ ಎಂದು ಹೇಳುತ್ತಾರೆ. ಆದರೆ 90% ದಷ್ಟು ಜನರಿಗೆ ದೇಶವನ್ನು ನಡೆಸುವುದರಲ್ಲಿ ಯಾವುದೇ ಪಾತ್ರವಿಲ್ಲ. ನಾನು ಅವರ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿಲ್ಲ, ಆದರೆ ದೇಶವನ್ನು ನಡೆಸುವಲ್ಲಿ ಅವರ ಸಹಭಾಗಿತ್ವವನ್ನು ಹೊಂದಿರಬೇಕು ಎಂದು ನಾನು ಹೇಳುತ್ತಿದ್ದೇನೆ. ದೇಶದಲ್ಲಿ ಹಲವಾರು ಖಾಸಗಿ ಆಸ್ಪತ್ರೆಗಳಿವೆ, ಅವುಗಳಲ್ಲಿ ಯಾವುದಾದರೂ ಬುಡಕಟ್ಟು ಜನರ ಒಡೆತನದಲ್ಲಿದ್ದರೆ ಹೆಸರಿಸಿ; ಅಂತಹ ಯಾವುದೇ ಆಸ್ಪತ್ರೆಯ ಕೂಡಾ ಕಾಣುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...