Homeಮುಖಪುಟಬುಡಕಟ್ಟು ಹಕ್ಕುಗಳ ಬಗ್ಗೆ ಮಾತನಾಡಿದರೆ ದೇಶ ಒಡೆಯುತ್ತದೆ ಎಂದು ಬಿಜೆಪಿ ಹೇಳುತ್ತದೆ - ರಾಹುಲ್ ಗಾಂಧಿ

ಬುಡಕಟ್ಟು ಹಕ್ಕುಗಳ ಬಗ್ಗೆ ಮಾತನಾಡಿದರೆ ದೇಶ ಒಡೆಯುತ್ತದೆ ಎಂದು ಬಿಜೆಪಿ ಹೇಳುತ್ತದೆ – ರಾಹುಲ್ ಗಾಂಧಿ

- Advertisement -
- Advertisement -

ಬುಡಕಟ್ಟು ಹಕ್ಕುಗಳ ಬಗ್ಗೆ ನಾನು ಮಾತನಾಡಿದಾಗೆಲ್ಲಾ ನಾನು ದೇಶವನ್ನು ವಿಭಜಿಸುತ್ತಿದ್ದೇನೆ ಎಂದು ಬಿಜೆಪಿ ಆರೋಪಿಸುತ್ತದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ. ಬುಡಕಟ್ಟು ಪ್ರಾಬಲ್ಯದ ಜಾರ್ಖಂಡ್‌ನ ಗುಮ್ಲಾ ಮತ್ತು ಲೋಹರ್ಡಗಾದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್‌ಟಿ, ಎಸ್‌ಸಿ ಮತ್ತು ಒಬಿಸಿ ಮೀಸಲಾತಿಯನ್ನು ಕ್ರಮವಾಗಿ 28%, 12% ಮತ್ತು 27%ಕ್ಕೆ ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಬುಡಕಟ್ಟು ಹಕ್ಕುಗಳ

ಆದಿವಾಸಿಗಳು ಎಂದರೆ ಈ ನೆಲದ ಮೊದಲ ಮಾಲೀಕರು, ಈ ದೇಶದ ಜಲ, ಕಾಡು ಮತ್ತು ಜಮೀನಿನ ಮೇಲೆ ಮೊದಲ ಹಕ್ಕು ಹೊಂದಿರುವರು. ಆದರೆ ಬಿಜೆಪಿಯವರು ಅವರನ್ನು ವನವಾಸಿ ಎಂದು ಕರೆಯುತ್ತದೆ. ಅಂದರೆ ಕಾಡಿನಲ್ಲಿ ವಾಸಿಸುವ ಮತ್ತು ಈ ದೇಶದ ಜಲ, ಕಾಡು ಮತ್ತು ಜಮೀನಿನ ಮೇಲೆ ಯಾವುದೇ ಹಕ್ಕು ಇಲ್ಲ ಎಂದು ಪ್ರತಿಪಾದಿಸಲು ಅವರು ಹಾಗೆ ಕರೆಯುತ್ತಾರೆ ಎಂದು ಆದಿವಾಸಿಗಳು ಎಂಬ ಪದದ ಅರ್ಥವನ್ನು ವಿವರಿಸಲು ರಾಹುಲ್ ಗಾಂಧಿ ಪ್ರಯತ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಿಮ್ಮನ್ನು ವನವಾಸಿ ಎಂದು ಕರೆಯುವವರು, ನಿಮ್ಮ ಬಳಿ ಏನಿದ್ದರೂ ಕಸಿದುಕೊಳ್ಳಲು ಬಯಸುತ್ತಾರೆ. ಮೋದಿ ಅವರು ಇಲ್ಲಿಗೆ ಬಂದು ನಿಮ್ಮನ್ನು ವನವಾಸಿ ಎಂದು ಹೇಳುತ್ತಾರೆ. ಅಂದರೆ ನೀವು ಕಾಡಿನಲ್ಲಿ ವಾಸಿಸುವವರು ಮಾತ್ರ, ಈ ಕಾಡು ನಮ್ಮದು, ಭೂಮಿ ನಮ್ಮದು ಮತ್ತು ನಿಮ್ಮ ನೀರು ಕೂಡ ನಮ್ಮದು ಎಂಬುವುದು ಅದರ ಅರ್ಥವಾಗಿದೆ. ಇದು ಆದಿವಾಸಿಗಳಿಗೆ ಸೇರಿದ್ದಲ್ಲ, ಮೋದಿ ಅವರಿಗೆ, ಬಂಡವಾಳಶಾಹಿಗಳು ಮತ್ತು ಅದೇ ರೀತಿ ಅದಾನಿಗಳಿಗೂ ಸೇರಿದೆ ಎಂಬುವುದಾಗಿದೆ ಅವರ ವಾದ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆದ್ದರಿಂದ, ಅವರು ಎಲ್ಲಿಗೆ ಹೋದರೂ ಅವರು ನಿಮ್ಮ ಭೂಮಿಯನ್ನು ನಿಮ್ಮಿಂದ ಕಸಿದುಕೊಳ್ಳುತ್ತಾರೆ. ಬಿಜೆಪಿ ‘ವಿಕಾಸ’ ಎಂಬ ಹೊಸ ಪದವನ್ನು ಹುಟ್ಟುಹಾಕಿದೆ. ಅದರ ಅರ್ಥ ಆದಿವಾಸಿಗಳ ಭೂಮಿ ಎಲ್ಲಿದ್ದರೂ ಅದನ್ನು ಕಿತ್ತುಕೊಳ್ಳಿ ಎಂಬುದಗಿದ್ದು; ಇದು ಅವರ ವಿಕಾಸ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು. ಬುಡಕಟ್ಟು ಹಕ್ಕುಗಳ

“ನಿಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಾದರೆ, ಅದನ್ನು ನಿಮ್ಮ ಒಪ್ಪಿಗೆಯೊಂದಿಗೆ ತೆಗೆದುಕೊಳ್ಳಬೇಕು. ಒಂದು ವೇಳೆ ನೀವು ನಿಮ್ಮ ಭೂಮಿಯನ್ನು ನೀಡಿದ್ದರೆ ಅದಕ್ಕೆ ನೀವು ನ್ಯಾಯಯುತ ಪರಿಹಾರವನ್ನು ನೀವು ಪಡೆಯಬೇಕು. ನಿಮ್ಮ ಭೂಮಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿದರೆ ಆ ಕೈಗಾರಿಕೆಗಳು ನಿಮ್ಮ ಮಕ್ಕಳಿಗೆ ಉದ್ಯೋಗ ನೀಡಬೇಕು ಎಂದು ನಾವು ಬಯಸುತ್ತೇವೆ.” ಎಂದು ರಾಹುಲ್ ಗಾಂಧಿ ಹೇಳಿದದ್ದಾರೆ. ನಿಮ್ಮ ಮಕ್ಕಳು ಇಂಜಿನಿಯರ್, ವೈದ್ಯರು ಮತ್ತು ವಕೀಲರಾಗಬೇಕು ಮತ್ತು ಕಾರ್ಖಾನೆಯನ್ನು ನಡೆಸುವುದನ್ನು ಕಲಿಯಬೇಕೆಂದು ನಾವು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ.

8%ದಷ್ಟು ಬುಡಕಟ್ಟು, 15% ದಲಿತ ಮತ್ತು ಸುಮಾರು 50% ಇತರೆ ಹಿಂದುಳಿದ ಜಾತಿಗಳು (OBC) ಇವೆ. ಅದರಲ್ಲಿ 15%ದಷ್ಟು ಅಲ್ಪಸಂಖ್ಯಾತರನ್ನು ಸೇರಿಸಿ ಒಟ್ಟು ಮಾಡಿದರೆ ಒಟ್ಟು ಜನಸಂಖ್ಯೆಯ 90%ದಷ್ಟು ಆಗುತ್ತದೆ ಎಂದು ಅವರು ಹೇಳಿದ್ದಾರೆ. ಸರ್ಕಾರಿ ಸಂಸ್ಥೆಗಳು, ವ್ಯಾಪಾರ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳನ್ನು ನೋಡಿದರೆ, ಈ ಶೇಕಡಾ 90%ದಷ್ಟು ಜನಸಂಖ್ಯೆಗೆ ಸೇರಿದವ ಯಾರನ್ನೂ ಕಂಡುಬರುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.

“ನಾನು ಸಂಸತ್ತಿನಲ್ಲಿ ಜಾತಿ ಗಣತಿಗೆ ಒತ್ತಾಯಿಸಿದಾಗ, ಅವರು ರಾಹುಲ್ ಗಾಂಧಿ ದೇಶವನ್ನು ವಿಭಜಿಸಲು ಬಯಸುತ್ತಿದ್ದಾರೆ ಎಂದು ಹೇಳುತ್ತಾರೆ. ಆದರೆ 90% ದಷ್ಟು ಜನರಿಗೆ ದೇಶವನ್ನು ನಡೆಸುವುದರಲ್ಲಿ ಯಾವುದೇ ಪಾತ್ರವಿಲ್ಲ. ನಾನು ಅವರ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿಲ್ಲ, ಆದರೆ ದೇಶವನ್ನು ನಡೆಸುವಲ್ಲಿ ಅವರ ಸಹಭಾಗಿತ್ವವನ್ನು ಹೊಂದಿರಬೇಕು ಎಂದು ನಾನು ಹೇಳುತ್ತಿದ್ದೇನೆ. ದೇಶದಲ್ಲಿ ಹಲವಾರು ಖಾಸಗಿ ಆಸ್ಪತ್ರೆಗಳಿವೆ, ಅವುಗಳಲ್ಲಿ ಯಾವುದಾದರೂ ಬುಡಕಟ್ಟು ಜನರ ಒಡೆತನದಲ್ಲಿದ್ದರೆ ಹೆಸರಿಸಿ; ಅಂತಹ ಯಾವುದೇ ಆಸ್ಪತ್ರೆಯ ಕೂಡಾ ಕಾಣುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...