Homeಮುಖಪುಟಬುಡಕಟ್ಟು ಹಕ್ಕುಗಳ ಬಗ್ಗೆ ಮಾತನಾಡಿದರೆ ದೇಶ ಒಡೆಯುತ್ತದೆ ಎಂದು ಬಿಜೆಪಿ ಹೇಳುತ್ತದೆ - ರಾಹುಲ್ ಗಾಂಧಿ

ಬುಡಕಟ್ಟು ಹಕ್ಕುಗಳ ಬಗ್ಗೆ ಮಾತನಾಡಿದರೆ ದೇಶ ಒಡೆಯುತ್ತದೆ ಎಂದು ಬಿಜೆಪಿ ಹೇಳುತ್ತದೆ – ರಾಹುಲ್ ಗಾಂಧಿ

- Advertisement -
- Advertisement -

ಬುಡಕಟ್ಟು ಹಕ್ಕುಗಳ ಬಗ್ಗೆ ನಾನು ಮಾತನಾಡಿದಾಗೆಲ್ಲಾ ನಾನು ದೇಶವನ್ನು ವಿಭಜಿಸುತ್ತಿದ್ದೇನೆ ಎಂದು ಬಿಜೆಪಿ ಆರೋಪಿಸುತ್ತದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ. ಬುಡಕಟ್ಟು ಪ್ರಾಬಲ್ಯದ ಜಾರ್ಖಂಡ್‌ನ ಗುಮ್ಲಾ ಮತ್ತು ಲೋಹರ್ಡಗಾದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್‌ಟಿ, ಎಸ್‌ಸಿ ಮತ್ತು ಒಬಿಸಿ ಮೀಸಲಾತಿಯನ್ನು ಕ್ರಮವಾಗಿ 28%, 12% ಮತ್ತು 27%ಕ್ಕೆ ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಬುಡಕಟ್ಟು ಹಕ್ಕುಗಳ

ಆದಿವಾಸಿಗಳು ಎಂದರೆ ಈ ನೆಲದ ಮೊದಲ ಮಾಲೀಕರು, ಈ ದೇಶದ ಜಲ, ಕಾಡು ಮತ್ತು ಜಮೀನಿನ ಮೇಲೆ ಮೊದಲ ಹಕ್ಕು ಹೊಂದಿರುವರು. ಆದರೆ ಬಿಜೆಪಿಯವರು ಅವರನ್ನು ವನವಾಸಿ ಎಂದು ಕರೆಯುತ್ತದೆ. ಅಂದರೆ ಕಾಡಿನಲ್ಲಿ ವಾಸಿಸುವ ಮತ್ತು ಈ ದೇಶದ ಜಲ, ಕಾಡು ಮತ್ತು ಜಮೀನಿನ ಮೇಲೆ ಯಾವುದೇ ಹಕ್ಕು ಇಲ್ಲ ಎಂದು ಪ್ರತಿಪಾದಿಸಲು ಅವರು ಹಾಗೆ ಕರೆಯುತ್ತಾರೆ ಎಂದು ಆದಿವಾಸಿಗಳು ಎಂಬ ಪದದ ಅರ್ಥವನ್ನು ವಿವರಿಸಲು ರಾಹುಲ್ ಗಾಂಧಿ ಪ್ರಯತ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಿಮ್ಮನ್ನು ವನವಾಸಿ ಎಂದು ಕರೆಯುವವರು, ನಿಮ್ಮ ಬಳಿ ಏನಿದ್ದರೂ ಕಸಿದುಕೊಳ್ಳಲು ಬಯಸುತ್ತಾರೆ. ಮೋದಿ ಅವರು ಇಲ್ಲಿಗೆ ಬಂದು ನಿಮ್ಮನ್ನು ವನವಾಸಿ ಎಂದು ಹೇಳುತ್ತಾರೆ. ಅಂದರೆ ನೀವು ಕಾಡಿನಲ್ಲಿ ವಾಸಿಸುವವರು ಮಾತ್ರ, ಈ ಕಾಡು ನಮ್ಮದು, ಭೂಮಿ ನಮ್ಮದು ಮತ್ತು ನಿಮ್ಮ ನೀರು ಕೂಡ ನಮ್ಮದು ಎಂಬುವುದು ಅದರ ಅರ್ಥವಾಗಿದೆ. ಇದು ಆದಿವಾಸಿಗಳಿಗೆ ಸೇರಿದ್ದಲ್ಲ, ಮೋದಿ ಅವರಿಗೆ, ಬಂಡವಾಳಶಾಹಿಗಳು ಮತ್ತು ಅದೇ ರೀತಿ ಅದಾನಿಗಳಿಗೂ ಸೇರಿದೆ ಎಂಬುವುದಾಗಿದೆ ಅವರ ವಾದ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆದ್ದರಿಂದ, ಅವರು ಎಲ್ಲಿಗೆ ಹೋದರೂ ಅವರು ನಿಮ್ಮ ಭೂಮಿಯನ್ನು ನಿಮ್ಮಿಂದ ಕಸಿದುಕೊಳ್ಳುತ್ತಾರೆ. ಬಿಜೆಪಿ ‘ವಿಕಾಸ’ ಎಂಬ ಹೊಸ ಪದವನ್ನು ಹುಟ್ಟುಹಾಕಿದೆ. ಅದರ ಅರ್ಥ ಆದಿವಾಸಿಗಳ ಭೂಮಿ ಎಲ್ಲಿದ್ದರೂ ಅದನ್ನು ಕಿತ್ತುಕೊಳ್ಳಿ ಎಂಬುದಗಿದ್ದು; ಇದು ಅವರ ವಿಕಾಸ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು. ಬುಡಕಟ್ಟು ಹಕ್ಕುಗಳ

“ನಿಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಾದರೆ, ಅದನ್ನು ನಿಮ್ಮ ಒಪ್ಪಿಗೆಯೊಂದಿಗೆ ತೆಗೆದುಕೊಳ್ಳಬೇಕು. ಒಂದು ವೇಳೆ ನೀವು ನಿಮ್ಮ ಭೂಮಿಯನ್ನು ನೀಡಿದ್ದರೆ ಅದಕ್ಕೆ ನೀವು ನ್ಯಾಯಯುತ ಪರಿಹಾರವನ್ನು ನೀವು ಪಡೆಯಬೇಕು. ನಿಮ್ಮ ಭೂಮಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿದರೆ ಆ ಕೈಗಾರಿಕೆಗಳು ನಿಮ್ಮ ಮಕ್ಕಳಿಗೆ ಉದ್ಯೋಗ ನೀಡಬೇಕು ಎಂದು ನಾವು ಬಯಸುತ್ತೇವೆ.” ಎಂದು ರಾಹುಲ್ ಗಾಂಧಿ ಹೇಳಿದದ್ದಾರೆ. ನಿಮ್ಮ ಮಕ್ಕಳು ಇಂಜಿನಿಯರ್, ವೈದ್ಯರು ಮತ್ತು ವಕೀಲರಾಗಬೇಕು ಮತ್ತು ಕಾರ್ಖಾನೆಯನ್ನು ನಡೆಸುವುದನ್ನು ಕಲಿಯಬೇಕೆಂದು ನಾವು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ.

8%ದಷ್ಟು ಬುಡಕಟ್ಟು, 15% ದಲಿತ ಮತ್ತು ಸುಮಾರು 50% ಇತರೆ ಹಿಂದುಳಿದ ಜಾತಿಗಳು (OBC) ಇವೆ. ಅದರಲ್ಲಿ 15%ದಷ್ಟು ಅಲ್ಪಸಂಖ್ಯಾತರನ್ನು ಸೇರಿಸಿ ಒಟ್ಟು ಮಾಡಿದರೆ ಒಟ್ಟು ಜನಸಂಖ್ಯೆಯ 90%ದಷ್ಟು ಆಗುತ್ತದೆ ಎಂದು ಅವರು ಹೇಳಿದ್ದಾರೆ. ಸರ್ಕಾರಿ ಸಂಸ್ಥೆಗಳು, ವ್ಯಾಪಾರ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳನ್ನು ನೋಡಿದರೆ, ಈ ಶೇಕಡಾ 90%ದಷ್ಟು ಜನಸಂಖ್ಯೆಗೆ ಸೇರಿದವ ಯಾರನ್ನೂ ಕಂಡುಬರುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.

“ನಾನು ಸಂಸತ್ತಿನಲ್ಲಿ ಜಾತಿ ಗಣತಿಗೆ ಒತ್ತಾಯಿಸಿದಾಗ, ಅವರು ರಾಹುಲ್ ಗಾಂಧಿ ದೇಶವನ್ನು ವಿಭಜಿಸಲು ಬಯಸುತ್ತಿದ್ದಾರೆ ಎಂದು ಹೇಳುತ್ತಾರೆ. ಆದರೆ 90% ದಷ್ಟು ಜನರಿಗೆ ದೇಶವನ್ನು ನಡೆಸುವುದರಲ್ಲಿ ಯಾವುದೇ ಪಾತ್ರವಿಲ್ಲ. ನಾನು ಅವರ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿಲ್ಲ, ಆದರೆ ದೇಶವನ್ನು ನಡೆಸುವಲ್ಲಿ ಅವರ ಸಹಭಾಗಿತ್ವವನ್ನು ಹೊಂದಿರಬೇಕು ಎಂದು ನಾನು ಹೇಳುತ್ತಿದ್ದೇನೆ. ದೇಶದಲ್ಲಿ ಹಲವಾರು ಖಾಸಗಿ ಆಸ್ಪತ್ರೆಗಳಿವೆ, ಅವುಗಳಲ್ಲಿ ಯಾವುದಾದರೂ ಬುಡಕಟ್ಟು ಜನರ ಒಡೆತನದಲ್ಲಿದ್ದರೆ ಹೆಸರಿಸಿ; ಅಂತಹ ಯಾವುದೇ ಆಸ್ಪತ್ರೆಯ ಕೂಡಾ ಕಾಣುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...