Homeಮುಖಪುಟಬಿರ್ಸಾ ಮುಂಡಾ ಜನ್ಮದಿನ: ದಶಕಗಳ ಕಾಲ ಆಡಳಿತ ನಡೆಸಿದವರಿಂದ ಬುಡಕಟ್ಟು ಸಮುದಾಯದ ನಿರ್ಲಕ್ಷ್ಯ- ಪ್ರಧಾನಿ ಮೋದಿ

ಬಿರ್ಸಾ ಮುಂಡಾ ಜನ್ಮದಿನ: ದಶಕಗಳ ಕಾಲ ಆಡಳಿತ ನಡೆಸಿದವರಿಂದ ಬುಡಕಟ್ಟು ಸಮುದಾಯದ ನಿರ್ಲಕ್ಷ್ಯ- ಪ್ರಧಾನಿ ಮೋದಿ

- Advertisement -
- Advertisement -

“ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ಸಂಸ್ಕೃತಿ, ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಕೊಡುಗೆಯನ್ನು ಹೆಮ್ಮೆಯಿಂದ ಗೌರವಿಸಿ, ಸ್ಮರಿಸಲಾಗುತ್ತಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರ ದಶಕಗಳ ಕಾಲ ದೇಶವನ್ನು ಆಳಿದವರು ತಮ್ಮ ಸ್ವಾರ್ಥ ರಾಜಕಾರಣಕ್ಕೆ ಆದ್ಯತೆ ನೀಡಿದ್ದರಿಂದ ಬುಡಕಟ್ಟು ಸಮುದಾಯದ ಬಗ್ಗೆ ಬಹಳ ಕಡಿಮೆ ತಿಳಿದಿದೆ ಎಂದು ವಿಪಕ್ಷ ಕಾಂಗ್ರೆಸ್‌ ಅನ್ನು ಟೀಕಿಸಿದ್ದಾರೆ.

“ಭಾರತದ ಜನಸಂಖ್ಯೆಯ ಸುಮಾರು 10 ಪ್ರತಿಶತದಷ್ಟು ಜನಸಂಖ್ಯೆಯನ್ನು ಒಳಗೊಂಡಿದ್ದರೂ ಸಹ, ದಶಕಗಳಿಂದ ಬುಡಕಟ್ಟು ಜನಾಂಗದವರ ಸಂಸ್ಕೃತಿ ಮತ್ತು ಸಾಮರ್ಥ್ಯವನ್ನು ಕಡೆಗಣಿಸಲಾಗಿದೆ. ಅವರ ಸಮಸ್ಯೆಗಳು, ಶಿಕ್ಷಣ ಮತ್ತು ಆರೋಗ್ಯದ ಬಗ್ಗೆ ಯಾರು ಗಮನಹರಿಸಲಿಲ್ಲ” ಎಂದು ಆರೋಪಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ANI ಉಲ್ಲೇಖಿಸಿದೆ.

ಭೋಪಾಲ್‌ನ ಜಂಜಾಟಿಯಲ್ಲಿ ನಡೆದ ಗೌರವ್ ದಿವಸ್ ಮಹಾಸಮ್ಮೇಳನದಲ್ಲಿ ಬುಡಕಟ್ಟು ಸಮುದಾಯದ ಐತಿಹಾಸಿಕ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.

ಇದನ್ನೂ ಓದಿ: ಬ್ರಿಟೀಷರ ಎದೆ ನಡುಗಿಸಿದ್ದ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ

“ರಾಷ್ಟ್ರ ನಿರ್ಮಾಣಕ್ಕೆ ಬುಡಕಟ್ಟು ಸಮುದಾಯದ ಕೊಡುಗೆಯ ಕುರಿತು ಚರ್ಚೆ ಬಂದಾಗ ಕೆಲವರು ಆಶ್ಚರ್ಯಚಕಿತರಾಗುತ್ತಾರೆ. ಏಕೆಂದರೆ ಅವರಿಗೆ ಅದರ ಬಗ್ಗೆ ಮಾಹಿತಿಯಿಲ್ಲ” ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಬುಡಕಟ್ಟು ಸಮುದಾಯದ ನಾಯಕ ಬಿರ್ಸಾ ಮುಂಡಾ ಅವರು ಬಿಹಾರ ಮತ್ತು ಜಾರ್ಖಂಡ್‌ ಸುತ್ತಮುತ್ತಲಿನ ಛೋಟಾನಾಗ್ಪುರ್ ಪ್ರಸ್ಥಭೂಮಿ ಪ್ರದೇಶದ ಮುಂಡಾ ಬುಡಕಟ್ಟು ಸಮುದಾಯದಲ್ಲಿ ನವೆಂಬರ್ 15, 1875 ರಲ್ಲಿ ಹುಟ್ಟಿದ್ದರು. ಇವರು ತಮ್ಮ ಬಾಲ್ಯದ ಬಹುಭಾಗವನ್ನು ಒಂದು ಹಳ್ಳಿಯಿಂದ ಮತ್ತೊಂದು ಹಳ್ಳಿಗೆ ಸ್ಥಳಾಂತರಗೊಳ್ಳುವುದರಲ್ಲಿಯೇ ಕಳೆದರು. ಅವರು ತಮ್ಮ ಶಿಕ್ಷಕ ಜೈಪಾಲ್ ನಾಗ್ ಅವರ ಮಾರ್ಗದರ್ಶನದಲ್ಲಿ ಸಲ್ಗಾದಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪಡೆದರು. ಜೈಪಾಲ್ ನಾಗ್ ಅವರ ಶಿಫಾರಸ್ಸಿನ ಮೇರೆಗೆ, ಜರ್ಮನ್ ಮಿಷನ್ ಶಾಲೆಗೆ ಸೇರಲು ಇವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡರು.

ಆರಂಭದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರೂ ನಂತರದ ದಿನಗಳಲ್ಲಿ ತಮ್ಮದೇ ಆದ ‘ಬಿರ್ಸೈಟ್‌’ ಎನ್ನುವ ಪಂಥವನ್ನು ಸ್ಥಾಪಿಸಿದರು. ಅತೀ ಶೀಘ್ರದಲ್ಲೇ ಮುಂಡಾ ಮತ್ತು ಒರಾನ್ ಸಮುದಾಯದವರು ಈ ಪಂಥಕ್ಕೆ ಸೇರಲು ಪ್ರಾರಂಭಿಸಿದರು. ಇದು ಬ್ರಿಟಿಷರ ಮತಾಂತರ ಚಟುವಟಿಕೆಗಳಿಗೆ ಸವಾಲಾಗಿ ಪರಿಣಮಿಸಿತು.

1886 ರಿಂದ 1890 ರ ಅವಧಿಯಲ್ಲಿ ಇವರು ಮಿಷನರಿ ವಿರೋಧಿ ಮತ್ತು ಸರ್ಕಾರ ವಿರೋಧಿ ಕಾರ್ಯಕ್ರಮಗಳ ಭಾಗವಾದರು. ಅವರು 1890 ರಲ್ಲಿ ಚೈಬಾಸಾವನ್ನು ತೊರೆಯುವ ಹೊತ್ತಿಗೆ, ಬಿರ್ಸಾ ಬುಡಕಟ್ಟು ಸಮುದಾಯಗಳ ಮೇಲಿನ ಬ್ರಿಟಿಷರ ದಬ್ಬಾಳಿಕೆಯ ವಿರುದ್ಧದ ಚಳವಳಿಯಲ್ಲಿ ಬಿರ್ಸಾ ಮುಂಡಾ ತೀವ್ರವಾಗಿ ತೊಡಗಿಸಿಕೊಂಡರು.

ಮಾರ್ಚ್ 3, 1900 ರಂದು, ಬಿರ್ಸಾ ಮುಂಡಾ ತನ್ನ ಬುಡಕಟ್ಟು ಗೆರಿಲ್ಲಾ ಸೈನ್ಯದೊಂದಿಗೆ ಚಕ್ರಧರಪುರದ ಜಮ್ಕೋಪೈ ಕಾಡಿನಲ್ಲಿ ವಿಶ್ರಾಂತಿಯಲ್ಲಿದ್ದಾಗ ಬ್ರಿಟಿಷ್ ಪೊಲೀಸರು ಅವರನ್ನು ಬಂಧಿಸಿದರು. ನಂತರ ಜೂನ್ 9, 1900 ರಂದು 25 ನೇ ವಯಸ್ಸಿನಲ್ಲಿ ರಾಂಚಿ ಜೈಲಿನಲ್ಲಿ ನಿಧನರಾದರು. ಹೀಗೆ ಈ ಬುಡಕಟ್ಟು ಮತ್ತು ಆದಿವಾಸಿ ಸಮುದಾಯಗಳ ದೈವವಾಗಿ, ಅಲ್ಲಿನ ಸಮುದಾಯಗಳಲ್ಲಿ ಇಂದಿಗೂ ಒಂದು ದಂತಕಥೆಯಾಗಿ ಉಳಿದಿದ್ದಾರೆ.


ಇದನ್ನೂ ಓದಿ: ಇಂದು ‘ಬುಡಕಟ್ಟು ನಾಯಕ ಬಿರ್ಸಾ ಮುಂಡಾ’ ಜನ್ಮದಿನ – #BirsaMunda ಟ್ವಿಟರ್‌ನಲ್ಲಿ ಟ್ರೆಂಡಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...