Homeಮುಖಪುಟಬಿರ್ಸಾ ಮುಂಡಾ ಜನ್ಮದಿನ: ದಶಕಗಳ ಕಾಲ ಆಡಳಿತ ನಡೆಸಿದವರಿಂದ ಬುಡಕಟ್ಟು ಸಮುದಾಯದ ನಿರ್ಲಕ್ಷ್ಯ- ಪ್ರಧಾನಿ ಮೋದಿ

ಬಿರ್ಸಾ ಮುಂಡಾ ಜನ್ಮದಿನ: ದಶಕಗಳ ಕಾಲ ಆಡಳಿತ ನಡೆಸಿದವರಿಂದ ಬುಡಕಟ್ಟು ಸಮುದಾಯದ ನಿರ್ಲಕ್ಷ್ಯ- ಪ್ರಧಾನಿ ಮೋದಿ

- Advertisement -
- Advertisement -

“ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ಸಂಸ್ಕೃತಿ, ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಕೊಡುಗೆಯನ್ನು ಹೆಮ್ಮೆಯಿಂದ ಗೌರವಿಸಿ, ಸ್ಮರಿಸಲಾಗುತ್ತಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರ ದಶಕಗಳ ಕಾಲ ದೇಶವನ್ನು ಆಳಿದವರು ತಮ್ಮ ಸ್ವಾರ್ಥ ರಾಜಕಾರಣಕ್ಕೆ ಆದ್ಯತೆ ನೀಡಿದ್ದರಿಂದ ಬುಡಕಟ್ಟು ಸಮುದಾಯದ ಬಗ್ಗೆ ಬಹಳ ಕಡಿಮೆ ತಿಳಿದಿದೆ ಎಂದು ವಿಪಕ್ಷ ಕಾಂಗ್ರೆಸ್‌ ಅನ್ನು ಟೀಕಿಸಿದ್ದಾರೆ.

“ಭಾರತದ ಜನಸಂಖ್ಯೆಯ ಸುಮಾರು 10 ಪ್ರತಿಶತದಷ್ಟು ಜನಸಂಖ್ಯೆಯನ್ನು ಒಳಗೊಂಡಿದ್ದರೂ ಸಹ, ದಶಕಗಳಿಂದ ಬುಡಕಟ್ಟು ಜನಾಂಗದವರ ಸಂಸ್ಕೃತಿ ಮತ್ತು ಸಾಮರ್ಥ್ಯವನ್ನು ಕಡೆಗಣಿಸಲಾಗಿದೆ. ಅವರ ಸಮಸ್ಯೆಗಳು, ಶಿಕ್ಷಣ ಮತ್ತು ಆರೋಗ್ಯದ ಬಗ್ಗೆ ಯಾರು ಗಮನಹರಿಸಲಿಲ್ಲ” ಎಂದು ಆರೋಪಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ANI ಉಲ್ಲೇಖಿಸಿದೆ.

ಭೋಪಾಲ್‌ನ ಜಂಜಾಟಿಯಲ್ಲಿ ನಡೆದ ಗೌರವ್ ದಿವಸ್ ಮಹಾಸಮ್ಮೇಳನದಲ್ಲಿ ಬುಡಕಟ್ಟು ಸಮುದಾಯದ ಐತಿಹಾಸಿಕ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.

ಇದನ್ನೂ ಓದಿ: ಬ್ರಿಟೀಷರ ಎದೆ ನಡುಗಿಸಿದ್ದ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ

“ರಾಷ್ಟ್ರ ನಿರ್ಮಾಣಕ್ಕೆ ಬುಡಕಟ್ಟು ಸಮುದಾಯದ ಕೊಡುಗೆಯ ಕುರಿತು ಚರ್ಚೆ ಬಂದಾಗ ಕೆಲವರು ಆಶ್ಚರ್ಯಚಕಿತರಾಗುತ್ತಾರೆ. ಏಕೆಂದರೆ ಅವರಿಗೆ ಅದರ ಬಗ್ಗೆ ಮಾಹಿತಿಯಿಲ್ಲ” ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಬುಡಕಟ್ಟು ಸಮುದಾಯದ ನಾಯಕ ಬಿರ್ಸಾ ಮುಂಡಾ ಅವರು ಬಿಹಾರ ಮತ್ತು ಜಾರ್ಖಂಡ್‌ ಸುತ್ತಮುತ್ತಲಿನ ಛೋಟಾನಾಗ್ಪುರ್ ಪ್ರಸ್ಥಭೂಮಿ ಪ್ರದೇಶದ ಮುಂಡಾ ಬುಡಕಟ್ಟು ಸಮುದಾಯದಲ್ಲಿ ನವೆಂಬರ್ 15, 1875 ರಲ್ಲಿ ಹುಟ್ಟಿದ್ದರು. ಇವರು ತಮ್ಮ ಬಾಲ್ಯದ ಬಹುಭಾಗವನ್ನು ಒಂದು ಹಳ್ಳಿಯಿಂದ ಮತ್ತೊಂದು ಹಳ್ಳಿಗೆ ಸ್ಥಳಾಂತರಗೊಳ್ಳುವುದರಲ್ಲಿಯೇ ಕಳೆದರು. ಅವರು ತಮ್ಮ ಶಿಕ್ಷಕ ಜೈಪಾಲ್ ನಾಗ್ ಅವರ ಮಾರ್ಗದರ್ಶನದಲ್ಲಿ ಸಲ್ಗಾದಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪಡೆದರು. ಜೈಪಾಲ್ ನಾಗ್ ಅವರ ಶಿಫಾರಸ್ಸಿನ ಮೇರೆಗೆ, ಜರ್ಮನ್ ಮಿಷನ್ ಶಾಲೆಗೆ ಸೇರಲು ಇವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡರು.

ಆರಂಭದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರೂ ನಂತರದ ದಿನಗಳಲ್ಲಿ ತಮ್ಮದೇ ಆದ ‘ಬಿರ್ಸೈಟ್‌’ ಎನ್ನುವ ಪಂಥವನ್ನು ಸ್ಥಾಪಿಸಿದರು. ಅತೀ ಶೀಘ್ರದಲ್ಲೇ ಮುಂಡಾ ಮತ್ತು ಒರಾನ್ ಸಮುದಾಯದವರು ಈ ಪಂಥಕ್ಕೆ ಸೇರಲು ಪ್ರಾರಂಭಿಸಿದರು. ಇದು ಬ್ರಿಟಿಷರ ಮತಾಂತರ ಚಟುವಟಿಕೆಗಳಿಗೆ ಸವಾಲಾಗಿ ಪರಿಣಮಿಸಿತು.

1886 ರಿಂದ 1890 ರ ಅವಧಿಯಲ್ಲಿ ಇವರು ಮಿಷನರಿ ವಿರೋಧಿ ಮತ್ತು ಸರ್ಕಾರ ವಿರೋಧಿ ಕಾರ್ಯಕ್ರಮಗಳ ಭಾಗವಾದರು. ಅವರು 1890 ರಲ್ಲಿ ಚೈಬಾಸಾವನ್ನು ತೊರೆಯುವ ಹೊತ್ತಿಗೆ, ಬಿರ್ಸಾ ಬುಡಕಟ್ಟು ಸಮುದಾಯಗಳ ಮೇಲಿನ ಬ್ರಿಟಿಷರ ದಬ್ಬಾಳಿಕೆಯ ವಿರುದ್ಧದ ಚಳವಳಿಯಲ್ಲಿ ಬಿರ್ಸಾ ಮುಂಡಾ ತೀವ್ರವಾಗಿ ತೊಡಗಿಸಿಕೊಂಡರು.

ಮಾರ್ಚ್ 3, 1900 ರಂದು, ಬಿರ್ಸಾ ಮುಂಡಾ ತನ್ನ ಬುಡಕಟ್ಟು ಗೆರಿಲ್ಲಾ ಸೈನ್ಯದೊಂದಿಗೆ ಚಕ್ರಧರಪುರದ ಜಮ್ಕೋಪೈ ಕಾಡಿನಲ್ಲಿ ವಿಶ್ರಾಂತಿಯಲ್ಲಿದ್ದಾಗ ಬ್ರಿಟಿಷ್ ಪೊಲೀಸರು ಅವರನ್ನು ಬಂಧಿಸಿದರು. ನಂತರ ಜೂನ್ 9, 1900 ರಂದು 25 ನೇ ವಯಸ್ಸಿನಲ್ಲಿ ರಾಂಚಿ ಜೈಲಿನಲ್ಲಿ ನಿಧನರಾದರು. ಹೀಗೆ ಈ ಬುಡಕಟ್ಟು ಮತ್ತು ಆದಿವಾಸಿ ಸಮುದಾಯಗಳ ದೈವವಾಗಿ, ಅಲ್ಲಿನ ಸಮುದಾಯಗಳಲ್ಲಿ ಇಂದಿಗೂ ಒಂದು ದಂತಕಥೆಯಾಗಿ ಉಳಿದಿದ್ದಾರೆ.


ಇದನ್ನೂ ಓದಿ: ಇಂದು ‘ಬುಡಕಟ್ಟು ನಾಯಕ ಬಿರ್ಸಾ ಮುಂಡಾ’ ಜನ್ಮದಿನ – #BirsaMunda ಟ್ವಿಟರ್‌ನಲ್ಲಿ ಟ್ರೆಂಡಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...

ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ; ವೀಡಿಯೊ ವೈರಲ್ ಬಳಿಕ ಆರೋಪಿ ಬಂಧನ

ಏಳು ತಿಂಗಳ ಹಿಂದಿನ ಘಟನೆಯ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ 20 ವರ್ಷದ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮತ್ತು ಅವಮಾನ ಮಾಡಿದ ಆರೋಪದ...

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...