Homeಮುಖಪುಟಬಿರ್ಸಾ ಮುಂಡಾ ಜನ್ಮದಿನ: ದಶಕಗಳ ಕಾಲ ಆಡಳಿತ ನಡೆಸಿದವರಿಂದ ಬುಡಕಟ್ಟು ಸಮುದಾಯದ ನಿರ್ಲಕ್ಷ್ಯ- ಪ್ರಧಾನಿ ಮೋದಿ

ಬಿರ್ಸಾ ಮುಂಡಾ ಜನ್ಮದಿನ: ದಶಕಗಳ ಕಾಲ ಆಡಳಿತ ನಡೆಸಿದವರಿಂದ ಬುಡಕಟ್ಟು ಸಮುದಾಯದ ನಿರ್ಲಕ್ಷ್ಯ- ಪ್ರಧಾನಿ ಮೋದಿ

- Advertisement -
- Advertisement -

“ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ಸಂಸ್ಕೃತಿ, ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಕೊಡುಗೆಯನ್ನು ಹೆಮ್ಮೆಯಿಂದ ಗೌರವಿಸಿ, ಸ್ಮರಿಸಲಾಗುತ್ತಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರ ದಶಕಗಳ ಕಾಲ ದೇಶವನ್ನು ಆಳಿದವರು ತಮ್ಮ ಸ್ವಾರ್ಥ ರಾಜಕಾರಣಕ್ಕೆ ಆದ್ಯತೆ ನೀಡಿದ್ದರಿಂದ ಬುಡಕಟ್ಟು ಸಮುದಾಯದ ಬಗ್ಗೆ ಬಹಳ ಕಡಿಮೆ ತಿಳಿದಿದೆ ಎಂದು ವಿಪಕ್ಷ ಕಾಂಗ್ರೆಸ್‌ ಅನ್ನು ಟೀಕಿಸಿದ್ದಾರೆ.

“ಭಾರತದ ಜನಸಂಖ್ಯೆಯ ಸುಮಾರು 10 ಪ್ರತಿಶತದಷ್ಟು ಜನಸಂಖ್ಯೆಯನ್ನು ಒಳಗೊಂಡಿದ್ದರೂ ಸಹ, ದಶಕಗಳಿಂದ ಬುಡಕಟ್ಟು ಜನಾಂಗದವರ ಸಂಸ್ಕೃತಿ ಮತ್ತು ಸಾಮರ್ಥ್ಯವನ್ನು ಕಡೆಗಣಿಸಲಾಗಿದೆ. ಅವರ ಸಮಸ್ಯೆಗಳು, ಶಿಕ್ಷಣ ಮತ್ತು ಆರೋಗ್ಯದ ಬಗ್ಗೆ ಯಾರು ಗಮನಹರಿಸಲಿಲ್ಲ” ಎಂದು ಆರೋಪಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ANI ಉಲ್ಲೇಖಿಸಿದೆ.

ಭೋಪಾಲ್‌ನ ಜಂಜಾಟಿಯಲ್ಲಿ ನಡೆದ ಗೌರವ್ ದಿವಸ್ ಮಹಾಸಮ್ಮೇಳನದಲ್ಲಿ ಬುಡಕಟ್ಟು ಸಮುದಾಯದ ಐತಿಹಾಸಿಕ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.

ಇದನ್ನೂ ಓದಿ: ಬ್ರಿಟೀಷರ ಎದೆ ನಡುಗಿಸಿದ್ದ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ

“ರಾಷ್ಟ್ರ ನಿರ್ಮಾಣಕ್ಕೆ ಬುಡಕಟ್ಟು ಸಮುದಾಯದ ಕೊಡುಗೆಯ ಕುರಿತು ಚರ್ಚೆ ಬಂದಾಗ ಕೆಲವರು ಆಶ್ಚರ್ಯಚಕಿತರಾಗುತ್ತಾರೆ. ಏಕೆಂದರೆ ಅವರಿಗೆ ಅದರ ಬಗ್ಗೆ ಮಾಹಿತಿಯಿಲ್ಲ” ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಬುಡಕಟ್ಟು ಸಮುದಾಯದ ನಾಯಕ ಬಿರ್ಸಾ ಮುಂಡಾ ಅವರು ಬಿಹಾರ ಮತ್ತು ಜಾರ್ಖಂಡ್‌ ಸುತ್ತಮುತ್ತಲಿನ ಛೋಟಾನಾಗ್ಪುರ್ ಪ್ರಸ್ಥಭೂಮಿ ಪ್ರದೇಶದ ಮುಂಡಾ ಬುಡಕಟ್ಟು ಸಮುದಾಯದಲ್ಲಿ ನವೆಂಬರ್ 15, 1875 ರಲ್ಲಿ ಹುಟ್ಟಿದ್ದರು. ಇವರು ತಮ್ಮ ಬಾಲ್ಯದ ಬಹುಭಾಗವನ್ನು ಒಂದು ಹಳ್ಳಿಯಿಂದ ಮತ್ತೊಂದು ಹಳ್ಳಿಗೆ ಸ್ಥಳಾಂತರಗೊಳ್ಳುವುದರಲ್ಲಿಯೇ ಕಳೆದರು. ಅವರು ತಮ್ಮ ಶಿಕ್ಷಕ ಜೈಪಾಲ್ ನಾಗ್ ಅವರ ಮಾರ್ಗದರ್ಶನದಲ್ಲಿ ಸಲ್ಗಾದಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪಡೆದರು. ಜೈಪಾಲ್ ನಾಗ್ ಅವರ ಶಿಫಾರಸ್ಸಿನ ಮೇರೆಗೆ, ಜರ್ಮನ್ ಮಿಷನ್ ಶಾಲೆಗೆ ಸೇರಲು ಇವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡರು.

ಆರಂಭದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರೂ ನಂತರದ ದಿನಗಳಲ್ಲಿ ತಮ್ಮದೇ ಆದ ‘ಬಿರ್ಸೈಟ್‌’ ಎನ್ನುವ ಪಂಥವನ್ನು ಸ್ಥಾಪಿಸಿದರು. ಅತೀ ಶೀಘ್ರದಲ್ಲೇ ಮುಂಡಾ ಮತ್ತು ಒರಾನ್ ಸಮುದಾಯದವರು ಈ ಪಂಥಕ್ಕೆ ಸೇರಲು ಪ್ರಾರಂಭಿಸಿದರು. ಇದು ಬ್ರಿಟಿಷರ ಮತಾಂತರ ಚಟುವಟಿಕೆಗಳಿಗೆ ಸವಾಲಾಗಿ ಪರಿಣಮಿಸಿತು.

1886 ರಿಂದ 1890 ರ ಅವಧಿಯಲ್ಲಿ ಇವರು ಮಿಷನರಿ ವಿರೋಧಿ ಮತ್ತು ಸರ್ಕಾರ ವಿರೋಧಿ ಕಾರ್ಯಕ್ರಮಗಳ ಭಾಗವಾದರು. ಅವರು 1890 ರಲ್ಲಿ ಚೈಬಾಸಾವನ್ನು ತೊರೆಯುವ ಹೊತ್ತಿಗೆ, ಬಿರ್ಸಾ ಬುಡಕಟ್ಟು ಸಮುದಾಯಗಳ ಮೇಲಿನ ಬ್ರಿಟಿಷರ ದಬ್ಬಾಳಿಕೆಯ ವಿರುದ್ಧದ ಚಳವಳಿಯಲ್ಲಿ ಬಿರ್ಸಾ ಮುಂಡಾ ತೀವ್ರವಾಗಿ ತೊಡಗಿಸಿಕೊಂಡರು.

ಮಾರ್ಚ್ 3, 1900 ರಂದು, ಬಿರ್ಸಾ ಮುಂಡಾ ತನ್ನ ಬುಡಕಟ್ಟು ಗೆರಿಲ್ಲಾ ಸೈನ್ಯದೊಂದಿಗೆ ಚಕ್ರಧರಪುರದ ಜಮ್ಕೋಪೈ ಕಾಡಿನಲ್ಲಿ ವಿಶ್ರಾಂತಿಯಲ್ಲಿದ್ದಾಗ ಬ್ರಿಟಿಷ್ ಪೊಲೀಸರು ಅವರನ್ನು ಬಂಧಿಸಿದರು. ನಂತರ ಜೂನ್ 9, 1900 ರಂದು 25 ನೇ ವಯಸ್ಸಿನಲ್ಲಿ ರಾಂಚಿ ಜೈಲಿನಲ್ಲಿ ನಿಧನರಾದರು. ಹೀಗೆ ಈ ಬುಡಕಟ್ಟು ಮತ್ತು ಆದಿವಾಸಿ ಸಮುದಾಯಗಳ ದೈವವಾಗಿ, ಅಲ್ಲಿನ ಸಮುದಾಯಗಳಲ್ಲಿ ಇಂದಿಗೂ ಒಂದು ದಂತಕಥೆಯಾಗಿ ಉಳಿದಿದ್ದಾರೆ.


ಇದನ್ನೂ ಓದಿ: ಇಂದು ‘ಬುಡಕಟ್ಟು ನಾಯಕ ಬಿರ್ಸಾ ಮುಂಡಾ’ ಜನ್ಮದಿನ – #BirsaMunda ಟ್ವಿಟರ್‌ನಲ್ಲಿ ಟ್ರೆಂಡಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...