Homeಮುಖಪುಟಬಿರ್ಸಾ ಮುಂಡಾ ಜನ್ಮದಿನ: ದಶಕಗಳ ಕಾಲ ಆಡಳಿತ ನಡೆಸಿದವರಿಂದ ಬುಡಕಟ್ಟು ಸಮುದಾಯದ ನಿರ್ಲಕ್ಷ್ಯ- ಪ್ರಧಾನಿ ಮೋದಿ

ಬಿರ್ಸಾ ಮುಂಡಾ ಜನ್ಮದಿನ: ದಶಕಗಳ ಕಾಲ ಆಡಳಿತ ನಡೆಸಿದವರಿಂದ ಬುಡಕಟ್ಟು ಸಮುದಾಯದ ನಿರ್ಲಕ್ಷ್ಯ- ಪ್ರಧಾನಿ ಮೋದಿ

- Advertisement -
- Advertisement -

“ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ಸಂಸ್ಕೃತಿ, ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಕೊಡುಗೆಯನ್ನು ಹೆಮ್ಮೆಯಿಂದ ಗೌರವಿಸಿ, ಸ್ಮರಿಸಲಾಗುತ್ತಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರ ದಶಕಗಳ ಕಾಲ ದೇಶವನ್ನು ಆಳಿದವರು ತಮ್ಮ ಸ್ವಾರ್ಥ ರಾಜಕಾರಣಕ್ಕೆ ಆದ್ಯತೆ ನೀಡಿದ್ದರಿಂದ ಬುಡಕಟ್ಟು ಸಮುದಾಯದ ಬಗ್ಗೆ ಬಹಳ ಕಡಿಮೆ ತಿಳಿದಿದೆ ಎಂದು ವಿಪಕ್ಷ ಕಾಂಗ್ರೆಸ್‌ ಅನ್ನು ಟೀಕಿಸಿದ್ದಾರೆ.

“ಭಾರತದ ಜನಸಂಖ್ಯೆಯ ಸುಮಾರು 10 ಪ್ರತಿಶತದಷ್ಟು ಜನಸಂಖ್ಯೆಯನ್ನು ಒಳಗೊಂಡಿದ್ದರೂ ಸಹ, ದಶಕಗಳಿಂದ ಬುಡಕಟ್ಟು ಜನಾಂಗದವರ ಸಂಸ್ಕೃತಿ ಮತ್ತು ಸಾಮರ್ಥ್ಯವನ್ನು ಕಡೆಗಣಿಸಲಾಗಿದೆ. ಅವರ ಸಮಸ್ಯೆಗಳು, ಶಿಕ್ಷಣ ಮತ್ತು ಆರೋಗ್ಯದ ಬಗ್ಗೆ ಯಾರು ಗಮನಹರಿಸಲಿಲ್ಲ” ಎಂದು ಆರೋಪಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ANI ಉಲ್ಲೇಖಿಸಿದೆ.

ಭೋಪಾಲ್‌ನ ಜಂಜಾಟಿಯಲ್ಲಿ ನಡೆದ ಗೌರವ್ ದಿವಸ್ ಮಹಾಸಮ್ಮೇಳನದಲ್ಲಿ ಬುಡಕಟ್ಟು ಸಮುದಾಯದ ಐತಿಹಾಸಿಕ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.

ಇದನ್ನೂ ಓದಿ: ಬ್ರಿಟೀಷರ ಎದೆ ನಡುಗಿಸಿದ್ದ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ

“ರಾಷ್ಟ್ರ ನಿರ್ಮಾಣಕ್ಕೆ ಬುಡಕಟ್ಟು ಸಮುದಾಯದ ಕೊಡುಗೆಯ ಕುರಿತು ಚರ್ಚೆ ಬಂದಾಗ ಕೆಲವರು ಆಶ್ಚರ್ಯಚಕಿತರಾಗುತ್ತಾರೆ. ಏಕೆಂದರೆ ಅವರಿಗೆ ಅದರ ಬಗ್ಗೆ ಮಾಹಿತಿಯಿಲ್ಲ” ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಬುಡಕಟ್ಟು ಸಮುದಾಯದ ನಾಯಕ ಬಿರ್ಸಾ ಮುಂಡಾ ಅವರು ಬಿಹಾರ ಮತ್ತು ಜಾರ್ಖಂಡ್‌ ಸುತ್ತಮುತ್ತಲಿನ ಛೋಟಾನಾಗ್ಪುರ್ ಪ್ರಸ್ಥಭೂಮಿ ಪ್ರದೇಶದ ಮುಂಡಾ ಬುಡಕಟ್ಟು ಸಮುದಾಯದಲ್ಲಿ ನವೆಂಬರ್ 15, 1875 ರಲ್ಲಿ ಹುಟ್ಟಿದ್ದರು. ಇವರು ತಮ್ಮ ಬಾಲ್ಯದ ಬಹುಭಾಗವನ್ನು ಒಂದು ಹಳ್ಳಿಯಿಂದ ಮತ್ತೊಂದು ಹಳ್ಳಿಗೆ ಸ್ಥಳಾಂತರಗೊಳ್ಳುವುದರಲ್ಲಿಯೇ ಕಳೆದರು. ಅವರು ತಮ್ಮ ಶಿಕ್ಷಕ ಜೈಪಾಲ್ ನಾಗ್ ಅವರ ಮಾರ್ಗದರ್ಶನದಲ್ಲಿ ಸಲ್ಗಾದಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪಡೆದರು. ಜೈಪಾಲ್ ನಾಗ್ ಅವರ ಶಿಫಾರಸ್ಸಿನ ಮೇರೆಗೆ, ಜರ್ಮನ್ ಮಿಷನ್ ಶಾಲೆಗೆ ಸೇರಲು ಇವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡರು.

ಆರಂಭದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರೂ ನಂತರದ ದಿನಗಳಲ್ಲಿ ತಮ್ಮದೇ ಆದ ‘ಬಿರ್ಸೈಟ್‌’ ಎನ್ನುವ ಪಂಥವನ್ನು ಸ್ಥಾಪಿಸಿದರು. ಅತೀ ಶೀಘ್ರದಲ್ಲೇ ಮುಂಡಾ ಮತ್ತು ಒರಾನ್ ಸಮುದಾಯದವರು ಈ ಪಂಥಕ್ಕೆ ಸೇರಲು ಪ್ರಾರಂಭಿಸಿದರು. ಇದು ಬ್ರಿಟಿಷರ ಮತಾಂತರ ಚಟುವಟಿಕೆಗಳಿಗೆ ಸವಾಲಾಗಿ ಪರಿಣಮಿಸಿತು.

1886 ರಿಂದ 1890 ರ ಅವಧಿಯಲ್ಲಿ ಇವರು ಮಿಷನರಿ ವಿರೋಧಿ ಮತ್ತು ಸರ್ಕಾರ ವಿರೋಧಿ ಕಾರ್ಯಕ್ರಮಗಳ ಭಾಗವಾದರು. ಅವರು 1890 ರಲ್ಲಿ ಚೈಬಾಸಾವನ್ನು ತೊರೆಯುವ ಹೊತ್ತಿಗೆ, ಬಿರ್ಸಾ ಬುಡಕಟ್ಟು ಸಮುದಾಯಗಳ ಮೇಲಿನ ಬ್ರಿಟಿಷರ ದಬ್ಬಾಳಿಕೆಯ ವಿರುದ್ಧದ ಚಳವಳಿಯಲ್ಲಿ ಬಿರ್ಸಾ ಮುಂಡಾ ತೀವ್ರವಾಗಿ ತೊಡಗಿಸಿಕೊಂಡರು.

ಮಾರ್ಚ್ 3, 1900 ರಂದು, ಬಿರ್ಸಾ ಮುಂಡಾ ತನ್ನ ಬುಡಕಟ್ಟು ಗೆರಿಲ್ಲಾ ಸೈನ್ಯದೊಂದಿಗೆ ಚಕ್ರಧರಪುರದ ಜಮ್ಕೋಪೈ ಕಾಡಿನಲ್ಲಿ ವಿಶ್ರಾಂತಿಯಲ್ಲಿದ್ದಾಗ ಬ್ರಿಟಿಷ್ ಪೊಲೀಸರು ಅವರನ್ನು ಬಂಧಿಸಿದರು. ನಂತರ ಜೂನ್ 9, 1900 ರಂದು 25 ನೇ ವಯಸ್ಸಿನಲ್ಲಿ ರಾಂಚಿ ಜೈಲಿನಲ್ಲಿ ನಿಧನರಾದರು. ಹೀಗೆ ಈ ಬುಡಕಟ್ಟು ಮತ್ತು ಆದಿವಾಸಿ ಸಮುದಾಯಗಳ ದೈವವಾಗಿ, ಅಲ್ಲಿನ ಸಮುದಾಯಗಳಲ್ಲಿ ಇಂದಿಗೂ ಒಂದು ದಂತಕಥೆಯಾಗಿ ಉಳಿದಿದ್ದಾರೆ.


ಇದನ್ನೂ ಓದಿ: ಇಂದು ‘ಬುಡಕಟ್ಟು ನಾಯಕ ಬಿರ್ಸಾ ಮುಂಡಾ’ ಜನ್ಮದಿನ – #BirsaMunda ಟ್ವಿಟರ್‌ನಲ್ಲಿ ಟ್ರೆಂಡಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...