Homeಮುಖಪುಟಗುಜರಾತ್: ಬುಡಕಟ್ಟು ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪತಿ ಮತ್ತು ಗ್ರಾಮಸ್ಥರು

ಗುಜರಾತ್: ಬುಡಕಟ್ಟು ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪತಿ ಮತ್ತು ಗ್ರಾಮಸ್ಥರು

- Advertisement -
- Advertisement -

ಗುಜರಾತ್‌ನ ದಾಹೋದ್ ಜಿಲ್ಲೆಯ ಹಳ್ಳಿಯೊಂದರಲ್ಲಿ 23 ವರ್ಷದ ಬುಡಕಟ್ಟು ಮಹಿಳೆಯೊಬ್ಬರ ಮೇಲೆ ಆಕೆಯ ಪತಿ ಮತ್ತು ಇತರ ಕೆಲವು ಗ್ರಾಮಸ್ಥರು ಹಲ್ಲೆ ನಡೆಸಿ, ಬೆತ್ತಲೆಗೊಳಿಸಿ ಹಳ್ಳಿಯಲ್ಲಿ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ.

ಸಂತ್ರಸ್ತ ಮಹಿಳೆಯ ಪತಿ ಮತ್ತು ಇತರ 18 ಮಂದಿ ಗ್ರಾಮಸ್ಥರ ಮೇಲೆ ದೂರು ದಾಖಲಾಗಿದ್ದು, 19 ಜನರನ್ನು ಬಂಧಿಸಲಾಗಿದೆ. ಜುಲೈ 6 ರಂದು ಬುಡಕಟ್ಟು ಪ್ರಾಬಲ್ಯದ ಖಜುರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ ಈ ತಿಂಗಳ ಆರಂಭದಲ್ಲಿ ನಡೆದ ಘಟನೆಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬಳಿಕ ಪೊಲೀಸರು ಮಂಗಳವಾರ ಎಫ್‌ಐಆರ್ ದಾಖಲಿಸಿದ್ದಾರೆ ಸಬ್ ಇನ್ಸ್‌ಪೆಕ್ಟರ್ ಬಿಎಂ ಪಟೇಲ್ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ವೀಡಿಯೊದಲ್ಲಿ, ಮಹಿಳೆಯ ಪತಿ, ಇತರ ಪುರುಷರು, ಅವರ ಸಂಬಂಧಿಕರು ಸಾರ್ವಜನಿಕವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗುವುದು, ಹೊಡೆಯುವುದು ಕಂಡುಬರುತ್ತದೆ ಎಂದು ಸಬ್ ಇನ್ಸ್‌ಪೆಕ್ಟರ್ ಬಿಎಂ ಪಟೇಲ್ ತಿಳಿಸಿದ್ದಾರೆ. ಮಹಿಳೆಗೆ ತನ್ನ ಗಂಡನನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆಯುವ ಶಿಕ್ಷೆಯನ್ನು ಸಹ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ದಲಿತ ಯುವತಿಯನ್ನು ಅಪಹರಿಸಿ ಸತತ 9 ದಿನ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು

ವಿಡಿಯೊದಲ್ಲಿ ಇತರ ಮಹಿಳೆಯರು ಸಂತ್ರಸ್ತೆಗೆ ಬಟ್ಟೆಗಳನ್ನು ನೀಡಲು ಬಂದಾಗ, ಆಕೆಯ ಪತಿ ಬಟ್ಟೆಯನ್ನು ಕಸಿದುಕೊಳ್ಳುವುದನ್ನು ಕಾಣಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆ ಇತ್ತೀಚೆಗೆ ಇನ್ನೊಬ್ಬ ಪುರುಷನೊಂದಿಗೆ ಓಡಿಹೋಗಿದ್ದಳು ಎಂದು ಆರೋಪಿಸಲಾಗಿದೆ. ಆಕೆಯ ಪತಿ ಮತ್ತು ಇತರ ಗ್ರಾಮಸ್ಥರು ಆಕೆಯನ್ನು ಪತ್ತೆ ಹಚ್ಚಿ ಹಳ್ಳಿಗೆ ಕರೆತಂದಿದ್ದಾರೆ. ಜುಲೈ 6 ರಂದು ಆಕೆಗೆ ಅಮಾನವೀಯವಾಗಿ ಶಿಕ್ಷೆ ನೀಡಲಾಗಿದೆ. ವೀಡಿಯೊದಲ್ಲಿ ನೋಡಿದ ಎಲ್ಲ ಆರೋಪಿಗಳನ್ನು ನಾವು ಬಂಧಿಸಿದ್ದೇವೆ ಎಂದು ಪಟೇಲ್ ಮಾಹಿತಿ ನೀಡಿದ್ದಾರೆ.

ಭಾರತೀಯ ದಂಡ ಸಂಹಿತೆಯಡಿ ಗಲಭೆ, ಹಲ್ಲೆ, ಕ್ರಿಮಿನಲ್ ಬೆದರಿಕೆ, ಮಹಿಳೆಗೆ ಅವಮಾನಿಸಿದ ಆರೋಪ ಮತ್ತು ಘಟನೆಯ ವಿಡಿಯೋ ಚಿತ್ರೀಕರಣ ಮತ್ತು ಪ್ರಸಾರಕ್ಕಾಗಿ ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾನೂನು ಕ್ರಮ ಗೊಳ್ಳುತ್ತದೆ ಎಂಬ ವಿಶ್ವಾಸ ಇದೆ.ಆದರೆ ಮರುದಿನವೇ ಎಲ್ಲಾ ಆರೋಪಿಗಳು ಮರಳಿ ಮನೆಗೆ ಸೇರುತ್ತಾರೆಯೋ, ಶಿಕ್ಷೆ ಗೆ ಒಳಪಡುತ್ತಾರಯೋ ಗೊತ್ತಿಲ್ಲ.ಕಾನೂನು ಕುರುಡಾಗಿ ದಿಲ್ಲಿ.

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...