Homeಮುಖಪುಟಬುಡಕಟ್ಟು ಮಹಿಳೆ ಅತ್ಯುನ್ನತ ಸ್ಥಾನಕ್ಕೇರಿರುವುದು ಪ್ರಜಾಪ್ರಭುತ್ವದ ಶಕ್ತಿ: ನೂತನ ರಾಷ್ಟ್ರಪತಿ ಮುರ್ಮು ಮೊದಲ ಭಾಷಣ ಹೀಗಿತ್ತು...

ಬುಡಕಟ್ಟು ಮಹಿಳೆ ಅತ್ಯುನ್ನತ ಸ್ಥಾನಕ್ಕೇರಿರುವುದು ಪ್ರಜಾಪ್ರಭುತ್ವದ ಶಕ್ತಿ: ನೂತನ ರಾಷ್ಟ್ರಪತಿ ಮುರ್ಮು ಮೊದಲ ಭಾಷಣ ಹೀಗಿತ್ತು…

- Advertisement -
- Advertisement -

ದ್ರೌಪದಿ ಮುರ್ಮು ಸೋಮವಾರ ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. “ಬುಡಕಟ್ಟು ಸಮುದಾಯದದ ಮಹಿಳೆಯೂ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಏರಿರುವುದು ಪ್ರಜಾಪ್ರಭುತ್ವದ ಶಕ್ತಿಯನ್ನು ತೋರಿಸುತ್ತದೆ. ಬಡವರು ಸಹ ತಮ್ಮ ಕನಸನ್ನು ನನಸು ಮಾಡಬಹುದು” ಎಂದು ಅವರು ಹೇಳಿದ್ದಾರೆ.

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರು ಪ್ರಮಾಣ ವಚನ ಬೋಧಿಸಿದ ನಂತರ ನೂತನ ರಾಷ್ಟ್ರಪತಿ ಮುರ್ಮು ಅವರು ತಮ್ಮ ಮೊದಲ ಭಾಷಣ ಮಾಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಒಡಿಶಾದ ಬುಡಕಟ್ಟು ಗ್ರಾಮದಿಂದ ದೇಶದ ಅತ್ಯುನ್ನತ ಸಾಂವಿಧಾನಿಕ ಕಚೇರಿಗೆ ಮಾಡಿದ ಪ್ರಯಾಣವು ಪ್ರಜಾಪ್ರಭುತ್ವದ ಶಕ್ತಿಯನ್ನು ತೋರಿಸುತ್ತದೆ. ಇದು ವೈಯಕ್ತಿಕ ಸಾಧನೆಯಲ್ಲ, ಬದಲಾಗಿ ಪ್ರತಿಯೊಬ್ಬ ಬಡ ಭಾರತೀಯನ ಸಾಧನೆಯಾಗಿದೆ” ಎಂದು ತಿಳಿಸಿದರು.

“ನಾನು ಒಡಿಶಾದ ಬಡ ಬುಡಕಟ್ಟು ಗ್ರಾಮದಿಂದ ಬಂದಿದ್ದೇನೆ. ಅಲ್ಲಿ ಮೂಲಭೂತ ಶಿಕ್ಷಣವನ್ನು ಪಡೆಯುವುದು ಕನಸಾಗಿತ್ತು. ಆದರೆ ಅಡೆತಡೆಗಳ ನಡುವೆಯೂ ನಾನು ಜಗ್ಗಲಿಲ್ಲ. ನನ್ನ ಹಳ್ಳಿಯಲ್ಲಿ ಕಾಲೇಜು ಮೆಟ್ಟಿಲೇರಿದ ಮೊದಲ ವ್ಯಕ್ತಿ ನಾನಾಗಿದ್ದೆ” ಎಂದು ಸ್ಮರಿಸಿದ್ದಾರೆ.

“ನಾನು ಎಸ್‌ಟಿ (ಪರಿಶಿಷ್ಟ ಬುಡಕಟ್ಟು) ಸಮುದಾಯದಿಂದ ಬಂದವಳು. ವಾರ್ಡ್ ಕೌನ್ಸಿಲರ್ ಆಗುವುದರಿಂದ ಹಿಡಿದು ರಾಷ್ಟ್ರಪತಿ ಆಗುವವರೆಗೆ ಅವಕಾಶಗಳನ್ನು ಪಡೆದುಕೊಂಡಿದ್ದೇನೆ. ಇದು ಭಾರತದ ಪ್ರಜಾಪ್ರಭುತ್ವದ ಹಿರಿಮೆಯನ್ನು ತೋರಿಸುತ್ತದೆ. ದೂರದ ಹಳ್ಳಿಯ ಬಡ ಕುಟುಂಬದಲ್ಲಿ ಜನಿಸಿದ ಮಹಿಳೆ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ತಲುಪಿರುವುದು ಪ್ರಜಾಪ್ರಭುತ್ವದ ಶಕ್ತಿಯಾಗಿದೆ” ಎಂದು ಬಣ್ಣಿಸಿದ್ದಾರೆ.

ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮುರ್ಮು, ಜುಲೈ 21ರಂದು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ 64.3% ಮತಗಳನ್ನು ಪಡೆದು ಆಯ್ಕೆಯಾದರು.

“ಭಾರತದ ಬಡವರು ಕನಸು ಕಾಣುತ್ತಾರೆ. ಅವರ ಕನಸುಗಳನ್ನು ನನಸಾಗಿಸಬಹುದು ಎಂಬುದಕ್ಕೆ ನನ್ನ ಚುನಾವಣೆ ಸಾಕ್ಷಿಯಾಗಿದೆ. ಶತಮಾನಗಳಿಂದ ವಂಚಿತರಾದವರು, ಅಭಿವೃದ್ಧಿಯ ಲಾಭದಿಂದ ದೂರವಿರುವವರು, ಬಡವರು, ದೀನದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗದವರು ತಮ್ಮ ಪ್ರತಿಬಿಂಬವನ್ನು ನನ್ನಲ್ಲಿ ಕಾಣುತ್ತಿರುವುದು ನನಗೆ ಅತ್ಯಂತ ತೃಪ್ತಿಯ ವಿಷಯವಾಗಿದೆ” ಎಂದಿರುವ ಅವರು ಬೆಂಬಲ ನೀಡಿದ ಶಾಸಕರಿಗೆ ಧನ್ಯವಾದ ತಿಳಿಸಿದ್ದಾರೆ.

“ಇಂದು ನಾನು ಎಲ್ಲಾ ದೇಶವಾಸಿಗಳಿಗೆ, ವಿಶೇಷವಾಗಿ ಭಾರತದ ಯುವಕರು ಮತ್ತು ಮಹಿಳೆಯರಿಗೆ ಭರವಸೆ ನೀಡುತ್ತೇನೆ. ಈ ಸ್ಥಾನದಲ್ಲಿ ಕೆಲಸ ಮಾಡುವಾಗ ನಿಮ್ಮ ಹಿತಾಸಕ್ತಿಯೇ ನನಗೆ ಅತ್ಯಂತ ಮಹತ್ವದ್ದಾಗಿದೆ” ಎಂದಿದ್ದಾರೆ.

ಸ್ವಾತಂತ್ರ್ಯದ ನಂತರ ಜನಿಸಿದವರಾದ ಮುರ್ಮು, ದೇಶವು ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸುತ್ತಿರುವ ನಿರ್ಣಾಯಕ ಸಮಯದಲ್ಲಿ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಮೊದಲು ಶಾಲಾ ಶಿಕ್ಷಕಿಯಾಗಿದ್ದ ಮುರ್ಮು ಅವರು, ದೇಶವು 50ನೇ ಸ್ವಾತಂತ್ರ್ಯದ ವರ್ಷವನ್ನು ಆಚರಿಸುತ್ತಿರುವಾಗ ತನ್ನ ರಾಜಕೀಯ ಪ್ರಯಾಣವನ್ನು ಆರಂಭಿಸಿದ್ದರು.

ಇದನ್ನೂ ಓದಿರಿ: ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ? ವೈರಲ್‌ ವಿಡಿಯೊದ ವಾಸ್ತವವೇನು?

“ಇಂದು ಸ್ವಾತಂತ್ರ್ಯದ 75ನೇ ವರ್ಷದಲ್ಲಿ, ನಾನು ಈ ಹೊಸ ಜವಾಬ್ದಾರಿಯನ್ನು ಪಡೆದುಕೊಂಡಿದ್ದೇನೆ” ಎಂದಿರುವ ಅವರು, “ಭಾರತವು ಮುಂದಿನ 25 ವರ್ಷಗಳ ಮುನ್ನೋಟವನ್ನು ಸಾಧಿಸಲು ಸಜ್ಜಾಗುತ್ತಿರುವ ಐತಿಹಾಸಿಕ ಸಮಯದಲ್ಲಿ ಈ ಜವಾಬ್ದಾರಿಯನ್ನು ತನಗೆ ವಹಿಸಲಾಗಿದೆ” ಎಂದು ಹೇಳಿದ್ದಾರೆ.

“ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಕಂಡ ಕನಸುಗಳನ್ನು ನನಸಾಗಿಸಲು ನಾವು ತ್ವರಿತ ಗತಿಯಲ್ಲಿ ಕೆಲಸ ಮಾಡಬೇಕಾಗಿದೆ” ಎಂದು ಆಶಿಸಿದ್ದಾರೆ.

ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ಅವರು ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರೊಂದಿಗೆ ಸಂಸತ್ತಿಗೆ ಆಗಮಿಸಿದರು. ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಮತ್ತು ಸಿಜೆಐ ಅವರನ್ನು ಬರಮಾಡಿಕೊಂಡರು. ರಾಷ್ಟ್ರಪತಿ ಭವನಕ್ಕೆ ಆಗಮಿಸುವ ಮುನ್ನ ಅವರು ರಾಜ್‌ಘಾಟ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...