Homeಅಂಕಣಗಳುಬಹುಜನ ಭಾರತ: ಚಹಾ ತೋಟಗಳ ನವಗುಲಾಮಗಿರಿಯಲ್ಲಿ ನರಳಿರುವ ಆದಿವಾಸಿಗಳು

ಬಹುಜನ ಭಾರತ: ಚಹಾ ತೋಟಗಳ ನವಗುಲಾಮಗಿರಿಯಲ್ಲಿ ನರಳಿರುವ ಆದಿವಾಸಿಗಳು

- Advertisement -
- Advertisement -

ಕಾಂಗ್ರೆಸ್-ಬಿಜೆಪಿ ಪಾಲಿಗೆ ಅಸ್ಸಾಮಿನ Tea Tribe ನಡೆದಾಡುವ ಮತಗಳೇ ವಿನಾ ಮನುಷ್ಯರಲ್ಲ

ದಮನಿತರು ಶೋಷಿತರು ಅವಮಾನಿತರ ನೋವುಗಳಿಗೆ ದನಿಯಾಗಿದ್ದ ಇಂಗ್ಲಿಷ್ ಕಾದಂಬರಿಕಾರ ದಿವಂಗತ ಮುಲ್ಕರಾಜ್ ಆನಂದ್ ಅವರು ಚಹಾ ತೋಟಗಳಲ್ಲಿ ಕಾರ್ಮಿಕರು ಅನುಭವಿಸುವ ರೌರವ ನರಕವನ್ನು ಸೆರೆಹಿಡಿದು ಜಗತ್ತಿಗೆ ತೋರಿದ ಮೊದಲಿಗರು. ಈ ಕಾದಂಬರಿಯ ಹೆಸರು Two Leaves and a Bud (ಎರಡೆಲೆ ಮತ್ತು ಒಂದು ಮುಗುಳು). 1937ರಲ್ಲಿ ಬರೆದಿದ್ದ ಕೃತಿಯದು.

ಒಮ್ಮೆ ಹೊಕ್ಕರೆ ಮತ್ತೆಂದೂ ಹೊರಬೀಳದಂತೆ ಬಂಧಿಸಿ ಹಗಲಿರುಳು ರಕ್ತ ಬೆವರು ಒಂದು ಮಾಡಿಸಿ ದುಡಿಸಿಕೊಳ್ಳುವ ಚಹಾ ತೋಟಗಳ ನರಕದಿಂದ ಮುಕ್ತಿ ನೀಡುವ ಶಕ್ತಿಯಿರುವುದು ಸಾವಿಗೆ ಮಾತ್ರವೇ ಎಂಬ ಕ್ರೂರ ಸತ್ಯ ಈ ಕಾದಂಬರಿಯಲ್ಲಿ ಅನಾವರಣವಾಗುತ್ತ ಹೋಗುತ್ತದೆ. ಅಮಾಯಕರ ಶ್ರಮವನ್ನು ದರೋಡೆ ಮಾಡುವ ಒಡೆಯರ ಪಾಲಿಗೆ ಕೂಲಿಗಳು ದುಡಿವ ಯಂತ್ರಗಳೇ ವಿನಾ ಮನುಷ್ಯರಲ್ಲ. ದಿನಕ್ಕೆ ಬೆಳಗಿನಂತ ರಾತ್ರಿಯತನಕ ಬಿಡುವಿಲ್ಲದೆ ದುಡಿದರೆ ಕೈಗೆ ಬೀಳುವ ಕೂಲಿ ಮೂರು ಆಣೆಗಳು. ದಿನಸಿ ತರಲು ಸಂತೆಗೆ ಹೋದರೆ ಯಾತಕ್ಕೂ ಸಾಲದು. ಮೈಮುರಿಯುವಂತೆ ಹೊಡೆತಗಳನ್ನು ತಿನ್ನಬೇಕಲ್ಲದೆ ಪತ್ನಿ ಪುತ್ರಿಯರನ್ನು ಒಡೆಯರ ಲೈಂಗಿಕ ವಾಂಛೆಗೆ ಒಪ್ಪಿಸಲೇಬೇಕು. ಕೂಲಿಗಳ ಮುರುಕು ವಸತಿಗಳು ಕೊಳಕಿನ ಕೂಪಗಳು. ಕೊಕ್ಕೆಹುಳುಗಳ ಆಗರ. ಹೊಂಚು ಹಾಕುವ ಕಾಲರಾ. ಬಂಡವಾಳ ಹಾಕಿದ ಒಡೆಯರ ಪಾಲಿಗೆ ಕೂಲಿಗಳು ಸುಳ್ಳರು, ಕಳ್ಳರು ಹಾಗೂ ಸೋಮಾರಿಗಳು. ನೈರ್ಮಲ್ಯವೇ ಇಲ್ಲದ ಕೂಪದಲ್ಲಿ ಕೂಲಿ ಗಂಗುವಿನ ಪತ್ನಿ ಸಜನಿ ಕಾಲರಾಕ್ಕೆ ತುತ್ತಾಗಿ ಸಾಯುತ್ತಾಳೆ. ಅಂತ್ಯಕ್ರಿಯೆಗೆ ಗಂಗುವಿನ ಬಳಿ ಹಣವಿಲ್ಲ. ಕೇಳಲು ಹೋದರೆ ಗದರಿ ಅಟ್ಟುತ್ತಾನೆ ಒಡೆಯ. ತೋಟದ ಮ್ಯಾನೇಜರ್ ಕಣ್ಣು ಗಂಗುವಿನ ಮಗಳ ಮೇಲೆ ಬೀಳುತ್ತದೆ. ತಡೆಯಲು ಅಡ್ಡ ಬಂದ ಗಂಗು ಗುಂಡೇಟಿಗೆ ಹೆಣವಾಗಿ ಉರುಳುತ್ತಾನೆ.

ಸಿನೆಮಾಗಳಲ್ಲಿ ಕಾಣುವ ಬೆಟ್ಟಗುಡ್ಡ, ಝರಿ ತೊರೆ, ಕಲಕಲ ನದಿಯ ಸೀಮೆಯ ನಡುವೆ ನಳನಳಿಸುವ ಮನಮೋಹಕ ಹಸಿರು ಚಹಾ ತೋಟಗಳ ಹಿತ್ತಲುಗಳಲ್ಲಿ ಅಸಹನೀಯ ಮೌನ, ಹಸಿವಿನ ಯಾತನೆ, ನಿಟ್ಟುಸಿರು, ರಕ್ತಹೀನತೆ, ರೋಗರುಜಿನಗಳು, ಅಮಾನವೀಯ ಶೋಷಣೆ, ಸಾವಿನ ನೆರಳು ಮೈಚಾಚಿ ಮಲಗಿದೆ. ಬದುಕಿನ ಸಂಗೀತ ಮರೆಯಾಗಿದೆ.

ಕಂಗೆಟ್ಟಿರುವ ಲಕ್ಷ ಲಕ್ಷ ಕಾರ್ಮಿಕರನ್ನು ಮೈದಡವಿ ಮಾತಾಡಿಸುವ ಸರ್ಕಾರಗಳಿಲ್ಲ. ತಮ್ಮ ನೆಲದಲ್ಲೇ ಅನಾಥರಾಗಿರುವ ಅಸಂಖ್ಯಾತರ ಸಾಲಿಗೆ ಸೇರಿ ಹೋಗಿದ್ದಾರೆ ಈ ಶ್ರಮಜೀವಿಗಳು.

ಚೀನಾದಿಂದ ಚಹಾ ಸಸ್ಯಗಳನ್ನು ಕದಿಯುವ ಈಸ್ಟ್ ಇಂಡಿಯಾ ಕಂಪನಿ ಭಾರತದಲ್ಲಿ ದಟ್ಟ ಕಾಡುಗಳನ್ನು ಬೋಳಿಸಿ ಬೆಳೆಸುತ್ತದೆ. ಬ್ರಿಟಿಷ್ ಪ್ಲಾಂಟರುಗಳು 150 ವರ್ಷಗಳ ಹಿಂದೆ ಕಾಡು ಕಡಿದು ಚಹಾ ತೋಟಗಳನ್ನು ಎಬ್ಬಿಸಲು ಮಧ್ಯಭಾರತದ ಆದಿವಾಸಿಗಳನ್ನು ಬಲವಂತದಿಂದ ಒಕ್ಕಲೆಬ್ಬಿಸಿ ಅಸ್ಸಾಮ್ ಮತ್ತು ಬಂಗಾಳಕ್ಕೆ ಪಶುಗಳಂತೆ ಸಾಗಿಸುತ್ತಾರೆ. ಮುಂಡಾ, ಸಂತಾಲ್, ಓರಾನ್, ಗೊಂಡರು, ಖಾರಿಯಾ ಹಾಗೂ ಸಾವೊರಾ ಪಂಗಡಗಳ ಈ ಆದಿವಾಸಿ ಕಾರ್ಮಿಕರನ್ನು ಈಗಲೂ Tea Tribes ಎಂದೇ ಕರೆಯಲಾಗುತ್ತದೆ. ಅಸ್ಸಾಮ್ ಒಂದರಲ್ಲೇ ಈ ಆದಿವಾಸಿ ಕಾರ್ಮಿಕರ ಸಂಖ್ಯೆ ಹತ್ತು ಲಕ್ಷಕ್ಕೂ ಹೆಚ್ಚು. ಅಸ್ಸಾಮಿನ ಜನಸಂಖ್ಯೆಯಲ್ಲಿ ಇವರ ಪ್ರಮಾಣ ಶೇ.18ರಷ್ಟು ಎನ್ನಲಾಗಿದೆ.

ಅಂದಿನ ಬ್ರಿಟಿಷ್ ಸರ್ಕಾರ ಭಾರತದಲ್ಲಿ ಬ್ರಿಟಿಷ್ ಪ್ಲಾಂಟರುಗಳಿಗೆ ಸಂಪನ್ಮೂಲಗಳು ಮತ್ತು ಕೂಲಿ ಕಾರ್ಮಿಕರ ಮೇಲೆ ಎಣೆಯಿಲ್ಲದ ಪ್ರಶ್ನಾತೀತ ಅಧಿಕಾರವನ್ನ ಅಧಿಪತ್ಯ ನೀಡಿತ್ತು. ಬಲವಂತದ ನೇಮಕ, ಅತಿ ಕಡಿಮೆ ಕೂಲಿ, ಅಮಾನವೀಯ ವಸತಿ ಮತ್ತು ಕೆಲಸದ ಪರಿಸ್ಥಿತಿಗಳು ಅಂದಿನ ಬ್ರಿಟಿಷ್ ಮಾಲೀಕರ ಲಾಭವನ್ನು ನೂರ್ಮಡಿಗೊಳಿಸುತ್ತಿದ್ದವು. ಸ್ವತಂತ್ರ ಭಾರತದ ಚಹಾ ತೋಟಗಳ ಕಾರ್ಮಿಕರ ಪರಿಸ್ಥಿತಿ ಹೆಚ್ಚೇನೂ ಬದಲಾಗಿಲ್ಲ.

ತಮ್ಮ ರಾಜ್ಯಗಳಲ್ಲೇ ಬದುಕಿದ್ದರೆ ಇವರಿಗೆ ಸ್ವಾಭಾವಿಕವಾಗಿ ಹಕ್ಕಿನ ಪ್ರಕಾರವೇ ದಕ್ಕಿರುವ ಪರಿಶಿಷ್ಟ ಪಂಗಡಗಳ ಸ್ಥಾನಮಾನ ಸಿಗುತ್ತಿತ್ತು. ಆದರೆ ಅಸ್ಸಾಮ್ ಸರ್ಕಾರ ಇವರಿಗೆ ಆದಿವಾಸಿಗಳ ಸ್ಥಾನಮಾನ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ತಯಾರಿಲ್ಲ. ಈ ಸ್ಥಾನಮಾನಕ್ಕಾಗಿ ಹೋರಾಟ ನಡೆಸಿರುವ ಆದಿವಾಸಿಗಳು ಅಸ್ಸಾಮಿನ ಉಗ್ರರ ಕೆಂಗಣ್ಣಿಗೆ ಗುರಿಯಾಗಿ ಸಾವಿರ ಸಂಖ್ಯೆಯಲ್ಲಿ ಹತ್ಯೆಯಾಗಿ ಹೋಗಿದ್ದಾರೆ. ಚಹಾ ತೋಟಗಳ ಮಾಲೀಕರ ದೌರ್ಜನ್ಯಗಳಿಗೆ ಗುರಿಯಾಗಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಬಡಪಾಯಿಗಳ ವಿರುದ್ಧ ಹತ್ತು ಹಲವು ರೂಪಗಳಲ್ಲಿ ಯುದ್ಧ ಸಾರಿವೆ.

ಅಸ್ಸಾಮ್ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳ ಮೇಲೆ ಸೋಲು ಗೆಲುವಿನ ಮೇಲೆ ಪ್ರಭಾವ ಬೀರಬಲ್ಲವರು ಇವರು. ಸುಮಾರು 40 ವಿಧಾನಸಭಾ ಕ್ಷೇತ್ರಗಳ ಫಲಿತಾಂಶಗಳನ್ನು ಇವರ ಮತಗಳು ತೀರ್ಮಾನಿಸಬಲ್ಲವು. ರಾಜಕೀಯ ಪಕ್ಷಗಳ ಪಾಲಿಗೆ ಈ ಜನರು ನಡೆದಾಡುವ ಉಸಿರಾಡುವ ವೋಟುಗಳು ಅಷ್ಟೇ. ಐದು ವರ್ಷಗಳಿಗೊಮ್ಮೆ ಇವರ ಕಣ್ಣಲ್ಲಿ ಮಣ್ಣು ಹಾಕಿದರೆ ಸಾಕು. ಮುಂದಿನ ಐದು ವರ್ಷಗಳ ಕಾಲ ನಿಶ್ಚಿಂತೆ. ಅಸ್ಸಾಮಿನ ಚುನಾವಣೆಗಳು ಜರುಗಿವೆ. ಹೀಗಾಗಿ ಬಿಜೆಪಿ- ಕಾಂಗ್ರೆಸ್ಸು ಎರಡೂ ಪಕ್ಷಗಳು ಈ ಉಸಿರಾಡುವ ವೋಟುಗಳನ್ನು ರಮಿಸಲು ತೊಡಗಿವೆ.

ನೀರು, ನೆರಳು, ಅನ್ನ ಯಾವ ಸೌಲಭ್ಯವೂ ಸಮರ್ಪಕವಿಲ್ಲ. ಅತಿ ಕಡಿಮೆ ದಿನಗೂಲಿ, ಜೊತೆಗೆ ಲೈಂಗಿಕ ಕಿರುಕುಳ ಎಂದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆಯ ವರದಿಯೊಂದು ಅಸ್ಸಾಮಿನ ಚಹಾ ತೋಟಗಳ ಕಾರ್ಮಿಕರ ಬವಣೆಯನ್ನು ಬಣ್ಣಿಸುತ್ತದೆ. ಶೇ.89ರಷ್ಟು ಚಹಾ ತೋಟಗಳಲ್ಲಿ ನೈರ್ಮಲ್ಯದ ಸೌಲಭ್ಯಗಳಿಲ್ಲ. ಹೆಣ್ಣುಮಕ್ಕಳು ಮಾಸಿಕ ಚಕ್ರದ ದಿನಗಳಲ್ಲೂ ದುಡಿಯಬೇಕಿದೆ. ಶಿಶುವಿಹಾರ ವ್ಯವಸ್ಥೆಯಿಲ್ಲ ಎಂದು 2017ರಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ವಿಕಾಸ ಮಂತ್ರಾಲಯಕ್ಕೆ ಸಲ್ಲಿಸಲಾದ ವರದಿ ಹೇಳಿದೆ

ಚಹಾ ಎಲೆ ಕೀಳುವ ಕೂಲಿಯಾಳುಗಳು ಬಹುತೇಕ ಮಹಿಳೆಯರು. ಕೆಲಸದ ನಡುವೆ ಅವರು ಕುಡಿಯುವ ಚಹಾ ಕಷಾಯಕ್ಕೆ ಸಕ್ಕರೆಯ ಬದಲಿಗೆ ಉಪ್ಪು ಬೆರೆಸಿಕೊಳ್ಳುತ್ತಾರೆ. ಅಧಿಕ ರಕ್ತದೊತ್ತಡ ಅವರ ಬೆನ್ನು ಹತ್ತಿದೆ. ಉಪ್ಪಿನ ಬದಲು ಉಚಿತ ಸಕ್ಕರೆ ಸರಬರಾಜು ಮಾಡುವುದಾಗಿ 2019ರಲ್ಲಿ ರಾಜ್ಯ ಸರ್ಕಾರ ಆಶ್ವಾಸನೆ ನೀಡಿತ್ತು. ಆದರೆ ಅದೂ ಆಶ್ವಾಸನೆಯಾಗೇ ಉಳಿದಿದೆ.

ನರೇಂದ್ರ ಮೋದಿಯವರು ತಮ್ಮನ್ನು ’ಚಾಯ್ ವಾಲಾ’ ಎಂದು ಕರೆದುಕೊಂಡರು. ಚಹಾ ಮಾರಿದೆನೆಂದು ಹೇಳಿಕೊಂಡು ಅದನ್ನು ಚುನಾವಣೆಯಲ್ಲಿ ರಾಜಕೀಯ ಬಂಡವಾಳವನ್ನಾಗಿಯೂ ಮಾಡಿಕೊಂಡರು. ಆದರೆ ದೇಶದ ಚಹಾ ಮಾರುವವರ ಬದುಕುಗಳನ್ನು ಅರಳಿಸುವಂತಹದೇನನ್ನೂ ಅವರು ಮಾಡಲಿಲ್ಲ. 2014ರ ಲೋಕಸಭಾ ಚುನಾವಣೆಗಳ ಪ್ರಚಾರ ಭಾಷಣಗಳಲ್ಲಿ ದಿನಗೂಲಿಯನ್ನು 350 ರುಪಾಯಿಗೆ ಹೆಚ್ಚಿಸುವ ಭರವಸೆ ನೀಡಿದ್ದುಂಟು. ಬಿಜೆಪಿ 2016ರಲ್ಲಿ ಅಸ್ಸಾಮ್ ಚುನಾವಣಾ ಪ್ರಣಾಳಿಕೆಯಲ್ಲಿ ಈ ಆಶ್ವಾಸನೆಯನ್ನು ಅಚ್ಚು ಮಾಡಿತು. ಇದೀಗ ಮತ್ತೊಂದು ಚುನಾವಣೆ ಬಂದಿದೆ. ಆದರೆ ಆಶ್ವಾಸನೆ ಚುನಾವಣೆ ಪ್ರಣಾಳಿಕೆಯ ಪುಟಗಳಲ್ಲೇ ಹೂತು ಹೋಗಿದೆ.


ಇದನ್ನೂ ಓದಿ: ಬಹುಜನ ಭಾರತ: ಬಂಧನದಲ್ಲಿ ಕಳೆದುಹೋಗುವ ಮುಸಲ್ಮಾನ ಬದುಕುಗಳು- ಪರಿಹಾರ ಇಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...