Homeಅಂಕಣಗಳುಬಹುಜನ ಭಾರತ: ಚಹಾ ತೋಟಗಳ ನವಗುಲಾಮಗಿರಿಯಲ್ಲಿ ನರಳಿರುವ ಆದಿವಾಸಿಗಳು

ಬಹುಜನ ಭಾರತ: ಚಹಾ ತೋಟಗಳ ನವಗುಲಾಮಗಿರಿಯಲ್ಲಿ ನರಳಿರುವ ಆದಿವಾಸಿಗಳು

- Advertisement -
- Advertisement -

ಕಾಂಗ್ರೆಸ್-ಬಿಜೆಪಿ ಪಾಲಿಗೆ ಅಸ್ಸಾಮಿನ Tea Tribe ನಡೆದಾಡುವ ಮತಗಳೇ ವಿನಾ ಮನುಷ್ಯರಲ್ಲ

ದಮನಿತರು ಶೋಷಿತರು ಅವಮಾನಿತರ ನೋವುಗಳಿಗೆ ದನಿಯಾಗಿದ್ದ ಇಂಗ್ಲಿಷ್ ಕಾದಂಬರಿಕಾರ ದಿವಂಗತ ಮುಲ್ಕರಾಜ್ ಆನಂದ್ ಅವರು ಚಹಾ ತೋಟಗಳಲ್ಲಿ ಕಾರ್ಮಿಕರು ಅನುಭವಿಸುವ ರೌರವ ನರಕವನ್ನು ಸೆರೆಹಿಡಿದು ಜಗತ್ತಿಗೆ ತೋರಿದ ಮೊದಲಿಗರು. ಈ ಕಾದಂಬರಿಯ ಹೆಸರು Two Leaves and a Bud (ಎರಡೆಲೆ ಮತ್ತು ಒಂದು ಮುಗುಳು). 1937ರಲ್ಲಿ ಬರೆದಿದ್ದ ಕೃತಿಯದು.

ಒಮ್ಮೆ ಹೊಕ್ಕರೆ ಮತ್ತೆಂದೂ ಹೊರಬೀಳದಂತೆ ಬಂಧಿಸಿ ಹಗಲಿರುಳು ರಕ್ತ ಬೆವರು ಒಂದು ಮಾಡಿಸಿ ದುಡಿಸಿಕೊಳ್ಳುವ ಚಹಾ ತೋಟಗಳ ನರಕದಿಂದ ಮುಕ್ತಿ ನೀಡುವ ಶಕ್ತಿಯಿರುವುದು ಸಾವಿಗೆ ಮಾತ್ರವೇ ಎಂಬ ಕ್ರೂರ ಸತ್ಯ ಈ ಕಾದಂಬರಿಯಲ್ಲಿ ಅನಾವರಣವಾಗುತ್ತ ಹೋಗುತ್ತದೆ. ಅಮಾಯಕರ ಶ್ರಮವನ್ನು ದರೋಡೆ ಮಾಡುವ ಒಡೆಯರ ಪಾಲಿಗೆ ಕೂಲಿಗಳು ದುಡಿವ ಯಂತ್ರಗಳೇ ವಿನಾ ಮನುಷ್ಯರಲ್ಲ. ದಿನಕ್ಕೆ ಬೆಳಗಿನಂತ ರಾತ್ರಿಯತನಕ ಬಿಡುವಿಲ್ಲದೆ ದುಡಿದರೆ ಕೈಗೆ ಬೀಳುವ ಕೂಲಿ ಮೂರು ಆಣೆಗಳು. ದಿನಸಿ ತರಲು ಸಂತೆಗೆ ಹೋದರೆ ಯಾತಕ್ಕೂ ಸಾಲದು. ಮೈಮುರಿಯುವಂತೆ ಹೊಡೆತಗಳನ್ನು ತಿನ್ನಬೇಕಲ್ಲದೆ ಪತ್ನಿ ಪುತ್ರಿಯರನ್ನು ಒಡೆಯರ ಲೈಂಗಿಕ ವಾಂಛೆಗೆ ಒಪ್ಪಿಸಲೇಬೇಕು. ಕೂಲಿಗಳ ಮುರುಕು ವಸತಿಗಳು ಕೊಳಕಿನ ಕೂಪಗಳು. ಕೊಕ್ಕೆಹುಳುಗಳ ಆಗರ. ಹೊಂಚು ಹಾಕುವ ಕಾಲರಾ. ಬಂಡವಾಳ ಹಾಕಿದ ಒಡೆಯರ ಪಾಲಿಗೆ ಕೂಲಿಗಳು ಸುಳ್ಳರು, ಕಳ್ಳರು ಹಾಗೂ ಸೋಮಾರಿಗಳು. ನೈರ್ಮಲ್ಯವೇ ಇಲ್ಲದ ಕೂಪದಲ್ಲಿ ಕೂಲಿ ಗಂಗುವಿನ ಪತ್ನಿ ಸಜನಿ ಕಾಲರಾಕ್ಕೆ ತುತ್ತಾಗಿ ಸಾಯುತ್ತಾಳೆ. ಅಂತ್ಯಕ್ರಿಯೆಗೆ ಗಂಗುವಿನ ಬಳಿ ಹಣವಿಲ್ಲ. ಕೇಳಲು ಹೋದರೆ ಗದರಿ ಅಟ್ಟುತ್ತಾನೆ ಒಡೆಯ. ತೋಟದ ಮ್ಯಾನೇಜರ್ ಕಣ್ಣು ಗಂಗುವಿನ ಮಗಳ ಮೇಲೆ ಬೀಳುತ್ತದೆ. ತಡೆಯಲು ಅಡ್ಡ ಬಂದ ಗಂಗು ಗುಂಡೇಟಿಗೆ ಹೆಣವಾಗಿ ಉರುಳುತ್ತಾನೆ.

ಸಿನೆಮಾಗಳಲ್ಲಿ ಕಾಣುವ ಬೆಟ್ಟಗುಡ್ಡ, ಝರಿ ತೊರೆ, ಕಲಕಲ ನದಿಯ ಸೀಮೆಯ ನಡುವೆ ನಳನಳಿಸುವ ಮನಮೋಹಕ ಹಸಿರು ಚಹಾ ತೋಟಗಳ ಹಿತ್ತಲುಗಳಲ್ಲಿ ಅಸಹನೀಯ ಮೌನ, ಹಸಿವಿನ ಯಾತನೆ, ನಿಟ್ಟುಸಿರು, ರಕ್ತಹೀನತೆ, ರೋಗರುಜಿನಗಳು, ಅಮಾನವೀಯ ಶೋಷಣೆ, ಸಾವಿನ ನೆರಳು ಮೈಚಾಚಿ ಮಲಗಿದೆ. ಬದುಕಿನ ಸಂಗೀತ ಮರೆಯಾಗಿದೆ.

ಕಂಗೆಟ್ಟಿರುವ ಲಕ್ಷ ಲಕ್ಷ ಕಾರ್ಮಿಕರನ್ನು ಮೈದಡವಿ ಮಾತಾಡಿಸುವ ಸರ್ಕಾರಗಳಿಲ್ಲ. ತಮ್ಮ ನೆಲದಲ್ಲೇ ಅನಾಥರಾಗಿರುವ ಅಸಂಖ್ಯಾತರ ಸಾಲಿಗೆ ಸೇರಿ ಹೋಗಿದ್ದಾರೆ ಈ ಶ್ರಮಜೀವಿಗಳು.

ಚೀನಾದಿಂದ ಚಹಾ ಸಸ್ಯಗಳನ್ನು ಕದಿಯುವ ಈಸ್ಟ್ ಇಂಡಿಯಾ ಕಂಪನಿ ಭಾರತದಲ್ಲಿ ದಟ್ಟ ಕಾಡುಗಳನ್ನು ಬೋಳಿಸಿ ಬೆಳೆಸುತ್ತದೆ. ಬ್ರಿಟಿಷ್ ಪ್ಲಾಂಟರುಗಳು 150 ವರ್ಷಗಳ ಹಿಂದೆ ಕಾಡು ಕಡಿದು ಚಹಾ ತೋಟಗಳನ್ನು ಎಬ್ಬಿಸಲು ಮಧ್ಯಭಾರತದ ಆದಿವಾಸಿಗಳನ್ನು ಬಲವಂತದಿಂದ ಒಕ್ಕಲೆಬ್ಬಿಸಿ ಅಸ್ಸಾಮ್ ಮತ್ತು ಬಂಗಾಳಕ್ಕೆ ಪಶುಗಳಂತೆ ಸಾಗಿಸುತ್ತಾರೆ. ಮುಂಡಾ, ಸಂತಾಲ್, ಓರಾನ್, ಗೊಂಡರು, ಖಾರಿಯಾ ಹಾಗೂ ಸಾವೊರಾ ಪಂಗಡಗಳ ಈ ಆದಿವಾಸಿ ಕಾರ್ಮಿಕರನ್ನು ಈಗಲೂ Tea Tribes ಎಂದೇ ಕರೆಯಲಾಗುತ್ತದೆ. ಅಸ್ಸಾಮ್ ಒಂದರಲ್ಲೇ ಈ ಆದಿವಾಸಿ ಕಾರ್ಮಿಕರ ಸಂಖ್ಯೆ ಹತ್ತು ಲಕ್ಷಕ್ಕೂ ಹೆಚ್ಚು. ಅಸ್ಸಾಮಿನ ಜನಸಂಖ್ಯೆಯಲ್ಲಿ ಇವರ ಪ್ರಮಾಣ ಶೇ.18ರಷ್ಟು ಎನ್ನಲಾಗಿದೆ.

ಅಂದಿನ ಬ್ರಿಟಿಷ್ ಸರ್ಕಾರ ಭಾರತದಲ್ಲಿ ಬ್ರಿಟಿಷ್ ಪ್ಲಾಂಟರುಗಳಿಗೆ ಸಂಪನ್ಮೂಲಗಳು ಮತ್ತು ಕೂಲಿ ಕಾರ್ಮಿಕರ ಮೇಲೆ ಎಣೆಯಿಲ್ಲದ ಪ್ರಶ್ನಾತೀತ ಅಧಿಕಾರವನ್ನ ಅಧಿಪತ್ಯ ನೀಡಿತ್ತು. ಬಲವಂತದ ನೇಮಕ, ಅತಿ ಕಡಿಮೆ ಕೂಲಿ, ಅಮಾನವೀಯ ವಸತಿ ಮತ್ತು ಕೆಲಸದ ಪರಿಸ್ಥಿತಿಗಳು ಅಂದಿನ ಬ್ರಿಟಿಷ್ ಮಾಲೀಕರ ಲಾಭವನ್ನು ನೂರ್ಮಡಿಗೊಳಿಸುತ್ತಿದ್ದವು. ಸ್ವತಂತ್ರ ಭಾರತದ ಚಹಾ ತೋಟಗಳ ಕಾರ್ಮಿಕರ ಪರಿಸ್ಥಿತಿ ಹೆಚ್ಚೇನೂ ಬದಲಾಗಿಲ್ಲ.

ತಮ್ಮ ರಾಜ್ಯಗಳಲ್ಲೇ ಬದುಕಿದ್ದರೆ ಇವರಿಗೆ ಸ್ವಾಭಾವಿಕವಾಗಿ ಹಕ್ಕಿನ ಪ್ರಕಾರವೇ ದಕ್ಕಿರುವ ಪರಿಶಿಷ್ಟ ಪಂಗಡಗಳ ಸ್ಥಾನಮಾನ ಸಿಗುತ್ತಿತ್ತು. ಆದರೆ ಅಸ್ಸಾಮ್ ಸರ್ಕಾರ ಇವರಿಗೆ ಆದಿವಾಸಿಗಳ ಸ್ಥಾನಮಾನ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ತಯಾರಿಲ್ಲ. ಈ ಸ್ಥಾನಮಾನಕ್ಕಾಗಿ ಹೋರಾಟ ನಡೆಸಿರುವ ಆದಿವಾಸಿಗಳು ಅಸ್ಸಾಮಿನ ಉಗ್ರರ ಕೆಂಗಣ್ಣಿಗೆ ಗುರಿಯಾಗಿ ಸಾವಿರ ಸಂಖ್ಯೆಯಲ್ಲಿ ಹತ್ಯೆಯಾಗಿ ಹೋಗಿದ್ದಾರೆ. ಚಹಾ ತೋಟಗಳ ಮಾಲೀಕರ ದೌರ್ಜನ್ಯಗಳಿಗೆ ಗುರಿಯಾಗಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಬಡಪಾಯಿಗಳ ವಿರುದ್ಧ ಹತ್ತು ಹಲವು ರೂಪಗಳಲ್ಲಿ ಯುದ್ಧ ಸಾರಿವೆ.

ಅಸ್ಸಾಮ್ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳ ಮೇಲೆ ಸೋಲು ಗೆಲುವಿನ ಮೇಲೆ ಪ್ರಭಾವ ಬೀರಬಲ್ಲವರು ಇವರು. ಸುಮಾರು 40 ವಿಧಾನಸಭಾ ಕ್ಷೇತ್ರಗಳ ಫಲಿತಾಂಶಗಳನ್ನು ಇವರ ಮತಗಳು ತೀರ್ಮಾನಿಸಬಲ್ಲವು. ರಾಜಕೀಯ ಪಕ್ಷಗಳ ಪಾಲಿಗೆ ಈ ಜನರು ನಡೆದಾಡುವ ಉಸಿರಾಡುವ ವೋಟುಗಳು ಅಷ್ಟೇ. ಐದು ವರ್ಷಗಳಿಗೊಮ್ಮೆ ಇವರ ಕಣ್ಣಲ್ಲಿ ಮಣ್ಣು ಹಾಕಿದರೆ ಸಾಕು. ಮುಂದಿನ ಐದು ವರ್ಷಗಳ ಕಾಲ ನಿಶ್ಚಿಂತೆ. ಅಸ್ಸಾಮಿನ ಚುನಾವಣೆಗಳು ಜರುಗಿವೆ. ಹೀಗಾಗಿ ಬಿಜೆಪಿ- ಕಾಂಗ್ರೆಸ್ಸು ಎರಡೂ ಪಕ್ಷಗಳು ಈ ಉಸಿರಾಡುವ ವೋಟುಗಳನ್ನು ರಮಿಸಲು ತೊಡಗಿವೆ.

ನೀರು, ನೆರಳು, ಅನ್ನ ಯಾವ ಸೌಲಭ್ಯವೂ ಸಮರ್ಪಕವಿಲ್ಲ. ಅತಿ ಕಡಿಮೆ ದಿನಗೂಲಿ, ಜೊತೆಗೆ ಲೈಂಗಿಕ ಕಿರುಕುಳ ಎಂದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆಯ ವರದಿಯೊಂದು ಅಸ್ಸಾಮಿನ ಚಹಾ ತೋಟಗಳ ಕಾರ್ಮಿಕರ ಬವಣೆಯನ್ನು ಬಣ್ಣಿಸುತ್ತದೆ. ಶೇ.89ರಷ್ಟು ಚಹಾ ತೋಟಗಳಲ್ಲಿ ನೈರ್ಮಲ್ಯದ ಸೌಲಭ್ಯಗಳಿಲ್ಲ. ಹೆಣ್ಣುಮಕ್ಕಳು ಮಾಸಿಕ ಚಕ್ರದ ದಿನಗಳಲ್ಲೂ ದುಡಿಯಬೇಕಿದೆ. ಶಿಶುವಿಹಾರ ವ್ಯವಸ್ಥೆಯಿಲ್ಲ ಎಂದು 2017ರಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ವಿಕಾಸ ಮಂತ್ರಾಲಯಕ್ಕೆ ಸಲ್ಲಿಸಲಾದ ವರದಿ ಹೇಳಿದೆ

ಚಹಾ ಎಲೆ ಕೀಳುವ ಕೂಲಿಯಾಳುಗಳು ಬಹುತೇಕ ಮಹಿಳೆಯರು. ಕೆಲಸದ ನಡುವೆ ಅವರು ಕುಡಿಯುವ ಚಹಾ ಕಷಾಯಕ್ಕೆ ಸಕ್ಕರೆಯ ಬದಲಿಗೆ ಉಪ್ಪು ಬೆರೆಸಿಕೊಳ್ಳುತ್ತಾರೆ. ಅಧಿಕ ರಕ್ತದೊತ್ತಡ ಅವರ ಬೆನ್ನು ಹತ್ತಿದೆ. ಉಪ್ಪಿನ ಬದಲು ಉಚಿತ ಸಕ್ಕರೆ ಸರಬರಾಜು ಮಾಡುವುದಾಗಿ 2019ರಲ್ಲಿ ರಾಜ್ಯ ಸರ್ಕಾರ ಆಶ್ವಾಸನೆ ನೀಡಿತ್ತು. ಆದರೆ ಅದೂ ಆಶ್ವಾಸನೆಯಾಗೇ ಉಳಿದಿದೆ.

ನರೇಂದ್ರ ಮೋದಿಯವರು ತಮ್ಮನ್ನು ’ಚಾಯ್ ವಾಲಾ’ ಎಂದು ಕರೆದುಕೊಂಡರು. ಚಹಾ ಮಾರಿದೆನೆಂದು ಹೇಳಿಕೊಂಡು ಅದನ್ನು ಚುನಾವಣೆಯಲ್ಲಿ ರಾಜಕೀಯ ಬಂಡವಾಳವನ್ನಾಗಿಯೂ ಮಾಡಿಕೊಂಡರು. ಆದರೆ ದೇಶದ ಚಹಾ ಮಾರುವವರ ಬದುಕುಗಳನ್ನು ಅರಳಿಸುವಂತಹದೇನನ್ನೂ ಅವರು ಮಾಡಲಿಲ್ಲ. 2014ರ ಲೋಕಸಭಾ ಚುನಾವಣೆಗಳ ಪ್ರಚಾರ ಭಾಷಣಗಳಲ್ಲಿ ದಿನಗೂಲಿಯನ್ನು 350 ರುಪಾಯಿಗೆ ಹೆಚ್ಚಿಸುವ ಭರವಸೆ ನೀಡಿದ್ದುಂಟು. ಬಿಜೆಪಿ 2016ರಲ್ಲಿ ಅಸ್ಸಾಮ್ ಚುನಾವಣಾ ಪ್ರಣಾಳಿಕೆಯಲ್ಲಿ ಈ ಆಶ್ವಾಸನೆಯನ್ನು ಅಚ್ಚು ಮಾಡಿತು. ಇದೀಗ ಮತ್ತೊಂದು ಚುನಾವಣೆ ಬಂದಿದೆ. ಆದರೆ ಆಶ್ವಾಸನೆ ಚುನಾವಣೆ ಪ್ರಣಾಳಿಕೆಯ ಪುಟಗಳಲ್ಲೇ ಹೂತು ಹೋಗಿದೆ.


ಇದನ್ನೂ ಓದಿ: ಬಹುಜನ ಭಾರತ: ಬಂಧನದಲ್ಲಿ ಕಳೆದುಹೋಗುವ ಮುಸಲ್ಮಾನ ಬದುಕುಗಳು- ಪರಿಹಾರ ಇಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...