Homeಅಂಕಣಗಳುಬಹುಜನ ಭಾರತ: ಚಹಾ ತೋಟಗಳ ನವಗುಲಾಮಗಿರಿಯಲ್ಲಿ ನರಳಿರುವ ಆದಿವಾಸಿಗಳು

ಬಹುಜನ ಭಾರತ: ಚಹಾ ತೋಟಗಳ ನವಗುಲಾಮಗಿರಿಯಲ್ಲಿ ನರಳಿರುವ ಆದಿವಾಸಿಗಳು

- Advertisement -
- Advertisement -

ಕಾಂಗ್ರೆಸ್-ಬಿಜೆಪಿ ಪಾಲಿಗೆ ಅಸ್ಸಾಮಿನ Tea Tribe ನಡೆದಾಡುವ ಮತಗಳೇ ವಿನಾ ಮನುಷ್ಯರಲ್ಲ

ದಮನಿತರು ಶೋಷಿತರು ಅವಮಾನಿತರ ನೋವುಗಳಿಗೆ ದನಿಯಾಗಿದ್ದ ಇಂಗ್ಲಿಷ್ ಕಾದಂಬರಿಕಾರ ದಿವಂಗತ ಮುಲ್ಕರಾಜ್ ಆನಂದ್ ಅವರು ಚಹಾ ತೋಟಗಳಲ್ಲಿ ಕಾರ್ಮಿಕರು ಅನುಭವಿಸುವ ರೌರವ ನರಕವನ್ನು ಸೆರೆಹಿಡಿದು ಜಗತ್ತಿಗೆ ತೋರಿದ ಮೊದಲಿಗರು. ಈ ಕಾದಂಬರಿಯ ಹೆಸರು Two Leaves and a Bud (ಎರಡೆಲೆ ಮತ್ತು ಒಂದು ಮುಗುಳು). 1937ರಲ್ಲಿ ಬರೆದಿದ್ದ ಕೃತಿಯದು.

ಒಮ್ಮೆ ಹೊಕ್ಕರೆ ಮತ್ತೆಂದೂ ಹೊರಬೀಳದಂತೆ ಬಂಧಿಸಿ ಹಗಲಿರುಳು ರಕ್ತ ಬೆವರು ಒಂದು ಮಾಡಿಸಿ ದುಡಿಸಿಕೊಳ್ಳುವ ಚಹಾ ತೋಟಗಳ ನರಕದಿಂದ ಮುಕ್ತಿ ನೀಡುವ ಶಕ್ತಿಯಿರುವುದು ಸಾವಿಗೆ ಮಾತ್ರವೇ ಎಂಬ ಕ್ರೂರ ಸತ್ಯ ಈ ಕಾದಂಬರಿಯಲ್ಲಿ ಅನಾವರಣವಾಗುತ್ತ ಹೋಗುತ್ತದೆ. ಅಮಾಯಕರ ಶ್ರಮವನ್ನು ದರೋಡೆ ಮಾಡುವ ಒಡೆಯರ ಪಾಲಿಗೆ ಕೂಲಿಗಳು ದುಡಿವ ಯಂತ್ರಗಳೇ ವಿನಾ ಮನುಷ್ಯರಲ್ಲ. ದಿನಕ್ಕೆ ಬೆಳಗಿನಂತ ರಾತ್ರಿಯತನಕ ಬಿಡುವಿಲ್ಲದೆ ದುಡಿದರೆ ಕೈಗೆ ಬೀಳುವ ಕೂಲಿ ಮೂರು ಆಣೆಗಳು. ದಿನಸಿ ತರಲು ಸಂತೆಗೆ ಹೋದರೆ ಯಾತಕ್ಕೂ ಸಾಲದು. ಮೈಮುರಿಯುವಂತೆ ಹೊಡೆತಗಳನ್ನು ತಿನ್ನಬೇಕಲ್ಲದೆ ಪತ್ನಿ ಪುತ್ರಿಯರನ್ನು ಒಡೆಯರ ಲೈಂಗಿಕ ವಾಂಛೆಗೆ ಒಪ್ಪಿಸಲೇಬೇಕು. ಕೂಲಿಗಳ ಮುರುಕು ವಸತಿಗಳು ಕೊಳಕಿನ ಕೂಪಗಳು. ಕೊಕ್ಕೆಹುಳುಗಳ ಆಗರ. ಹೊಂಚು ಹಾಕುವ ಕಾಲರಾ. ಬಂಡವಾಳ ಹಾಕಿದ ಒಡೆಯರ ಪಾಲಿಗೆ ಕೂಲಿಗಳು ಸುಳ್ಳರು, ಕಳ್ಳರು ಹಾಗೂ ಸೋಮಾರಿಗಳು. ನೈರ್ಮಲ್ಯವೇ ಇಲ್ಲದ ಕೂಪದಲ್ಲಿ ಕೂಲಿ ಗಂಗುವಿನ ಪತ್ನಿ ಸಜನಿ ಕಾಲರಾಕ್ಕೆ ತುತ್ತಾಗಿ ಸಾಯುತ್ತಾಳೆ. ಅಂತ್ಯಕ್ರಿಯೆಗೆ ಗಂಗುವಿನ ಬಳಿ ಹಣವಿಲ್ಲ. ಕೇಳಲು ಹೋದರೆ ಗದರಿ ಅಟ್ಟುತ್ತಾನೆ ಒಡೆಯ. ತೋಟದ ಮ್ಯಾನೇಜರ್ ಕಣ್ಣು ಗಂಗುವಿನ ಮಗಳ ಮೇಲೆ ಬೀಳುತ್ತದೆ. ತಡೆಯಲು ಅಡ್ಡ ಬಂದ ಗಂಗು ಗುಂಡೇಟಿಗೆ ಹೆಣವಾಗಿ ಉರುಳುತ್ತಾನೆ.

ಸಿನೆಮಾಗಳಲ್ಲಿ ಕಾಣುವ ಬೆಟ್ಟಗುಡ್ಡ, ಝರಿ ತೊರೆ, ಕಲಕಲ ನದಿಯ ಸೀಮೆಯ ನಡುವೆ ನಳನಳಿಸುವ ಮನಮೋಹಕ ಹಸಿರು ಚಹಾ ತೋಟಗಳ ಹಿತ್ತಲುಗಳಲ್ಲಿ ಅಸಹನೀಯ ಮೌನ, ಹಸಿವಿನ ಯಾತನೆ, ನಿಟ್ಟುಸಿರು, ರಕ್ತಹೀನತೆ, ರೋಗರುಜಿನಗಳು, ಅಮಾನವೀಯ ಶೋಷಣೆ, ಸಾವಿನ ನೆರಳು ಮೈಚಾಚಿ ಮಲಗಿದೆ. ಬದುಕಿನ ಸಂಗೀತ ಮರೆಯಾಗಿದೆ.

ಕಂಗೆಟ್ಟಿರುವ ಲಕ್ಷ ಲಕ್ಷ ಕಾರ್ಮಿಕರನ್ನು ಮೈದಡವಿ ಮಾತಾಡಿಸುವ ಸರ್ಕಾರಗಳಿಲ್ಲ. ತಮ್ಮ ನೆಲದಲ್ಲೇ ಅನಾಥರಾಗಿರುವ ಅಸಂಖ್ಯಾತರ ಸಾಲಿಗೆ ಸೇರಿ ಹೋಗಿದ್ದಾರೆ ಈ ಶ್ರಮಜೀವಿಗಳು.

ಚೀನಾದಿಂದ ಚಹಾ ಸಸ್ಯಗಳನ್ನು ಕದಿಯುವ ಈಸ್ಟ್ ಇಂಡಿಯಾ ಕಂಪನಿ ಭಾರತದಲ್ಲಿ ದಟ್ಟ ಕಾಡುಗಳನ್ನು ಬೋಳಿಸಿ ಬೆಳೆಸುತ್ತದೆ. ಬ್ರಿಟಿಷ್ ಪ್ಲಾಂಟರುಗಳು 150 ವರ್ಷಗಳ ಹಿಂದೆ ಕಾಡು ಕಡಿದು ಚಹಾ ತೋಟಗಳನ್ನು ಎಬ್ಬಿಸಲು ಮಧ್ಯಭಾರತದ ಆದಿವಾಸಿಗಳನ್ನು ಬಲವಂತದಿಂದ ಒಕ್ಕಲೆಬ್ಬಿಸಿ ಅಸ್ಸಾಮ್ ಮತ್ತು ಬಂಗಾಳಕ್ಕೆ ಪಶುಗಳಂತೆ ಸಾಗಿಸುತ್ತಾರೆ. ಮುಂಡಾ, ಸಂತಾಲ್, ಓರಾನ್, ಗೊಂಡರು, ಖಾರಿಯಾ ಹಾಗೂ ಸಾವೊರಾ ಪಂಗಡಗಳ ಈ ಆದಿವಾಸಿ ಕಾರ್ಮಿಕರನ್ನು ಈಗಲೂ Tea Tribes ಎಂದೇ ಕರೆಯಲಾಗುತ್ತದೆ. ಅಸ್ಸಾಮ್ ಒಂದರಲ್ಲೇ ಈ ಆದಿವಾಸಿ ಕಾರ್ಮಿಕರ ಸಂಖ್ಯೆ ಹತ್ತು ಲಕ್ಷಕ್ಕೂ ಹೆಚ್ಚು. ಅಸ್ಸಾಮಿನ ಜನಸಂಖ್ಯೆಯಲ್ಲಿ ಇವರ ಪ್ರಮಾಣ ಶೇ.18ರಷ್ಟು ಎನ್ನಲಾಗಿದೆ.

ಅಂದಿನ ಬ್ರಿಟಿಷ್ ಸರ್ಕಾರ ಭಾರತದಲ್ಲಿ ಬ್ರಿಟಿಷ್ ಪ್ಲಾಂಟರುಗಳಿಗೆ ಸಂಪನ್ಮೂಲಗಳು ಮತ್ತು ಕೂಲಿ ಕಾರ್ಮಿಕರ ಮೇಲೆ ಎಣೆಯಿಲ್ಲದ ಪ್ರಶ್ನಾತೀತ ಅಧಿಕಾರವನ್ನ ಅಧಿಪತ್ಯ ನೀಡಿತ್ತು. ಬಲವಂತದ ನೇಮಕ, ಅತಿ ಕಡಿಮೆ ಕೂಲಿ, ಅಮಾನವೀಯ ವಸತಿ ಮತ್ತು ಕೆಲಸದ ಪರಿಸ್ಥಿತಿಗಳು ಅಂದಿನ ಬ್ರಿಟಿಷ್ ಮಾಲೀಕರ ಲಾಭವನ್ನು ನೂರ್ಮಡಿಗೊಳಿಸುತ್ತಿದ್ದವು. ಸ್ವತಂತ್ರ ಭಾರತದ ಚಹಾ ತೋಟಗಳ ಕಾರ್ಮಿಕರ ಪರಿಸ್ಥಿತಿ ಹೆಚ್ಚೇನೂ ಬದಲಾಗಿಲ್ಲ.

ತಮ್ಮ ರಾಜ್ಯಗಳಲ್ಲೇ ಬದುಕಿದ್ದರೆ ಇವರಿಗೆ ಸ್ವಾಭಾವಿಕವಾಗಿ ಹಕ್ಕಿನ ಪ್ರಕಾರವೇ ದಕ್ಕಿರುವ ಪರಿಶಿಷ್ಟ ಪಂಗಡಗಳ ಸ್ಥಾನಮಾನ ಸಿಗುತ್ತಿತ್ತು. ಆದರೆ ಅಸ್ಸಾಮ್ ಸರ್ಕಾರ ಇವರಿಗೆ ಆದಿವಾಸಿಗಳ ಸ್ಥಾನಮಾನ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ತಯಾರಿಲ್ಲ. ಈ ಸ್ಥಾನಮಾನಕ್ಕಾಗಿ ಹೋರಾಟ ನಡೆಸಿರುವ ಆದಿವಾಸಿಗಳು ಅಸ್ಸಾಮಿನ ಉಗ್ರರ ಕೆಂಗಣ್ಣಿಗೆ ಗುರಿಯಾಗಿ ಸಾವಿರ ಸಂಖ್ಯೆಯಲ್ಲಿ ಹತ್ಯೆಯಾಗಿ ಹೋಗಿದ್ದಾರೆ. ಚಹಾ ತೋಟಗಳ ಮಾಲೀಕರ ದೌರ್ಜನ್ಯಗಳಿಗೆ ಗುರಿಯಾಗಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಬಡಪಾಯಿಗಳ ವಿರುದ್ಧ ಹತ್ತು ಹಲವು ರೂಪಗಳಲ್ಲಿ ಯುದ್ಧ ಸಾರಿವೆ.

ಅಸ್ಸಾಮ್ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳ ಮೇಲೆ ಸೋಲು ಗೆಲುವಿನ ಮೇಲೆ ಪ್ರಭಾವ ಬೀರಬಲ್ಲವರು ಇವರು. ಸುಮಾರು 40 ವಿಧಾನಸಭಾ ಕ್ಷೇತ್ರಗಳ ಫಲಿತಾಂಶಗಳನ್ನು ಇವರ ಮತಗಳು ತೀರ್ಮಾನಿಸಬಲ್ಲವು. ರಾಜಕೀಯ ಪಕ್ಷಗಳ ಪಾಲಿಗೆ ಈ ಜನರು ನಡೆದಾಡುವ ಉಸಿರಾಡುವ ವೋಟುಗಳು ಅಷ್ಟೇ. ಐದು ವರ್ಷಗಳಿಗೊಮ್ಮೆ ಇವರ ಕಣ್ಣಲ್ಲಿ ಮಣ್ಣು ಹಾಕಿದರೆ ಸಾಕು. ಮುಂದಿನ ಐದು ವರ್ಷಗಳ ಕಾಲ ನಿಶ್ಚಿಂತೆ. ಅಸ್ಸಾಮಿನ ಚುನಾವಣೆಗಳು ಜರುಗಿವೆ. ಹೀಗಾಗಿ ಬಿಜೆಪಿ- ಕಾಂಗ್ರೆಸ್ಸು ಎರಡೂ ಪಕ್ಷಗಳು ಈ ಉಸಿರಾಡುವ ವೋಟುಗಳನ್ನು ರಮಿಸಲು ತೊಡಗಿವೆ.

ನೀರು, ನೆರಳು, ಅನ್ನ ಯಾವ ಸೌಲಭ್ಯವೂ ಸಮರ್ಪಕವಿಲ್ಲ. ಅತಿ ಕಡಿಮೆ ದಿನಗೂಲಿ, ಜೊತೆಗೆ ಲೈಂಗಿಕ ಕಿರುಕುಳ ಎಂದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆಯ ವರದಿಯೊಂದು ಅಸ್ಸಾಮಿನ ಚಹಾ ತೋಟಗಳ ಕಾರ್ಮಿಕರ ಬವಣೆಯನ್ನು ಬಣ್ಣಿಸುತ್ತದೆ. ಶೇ.89ರಷ್ಟು ಚಹಾ ತೋಟಗಳಲ್ಲಿ ನೈರ್ಮಲ್ಯದ ಸೌಲಭ್ಯಗಳಿಲ್ಲ. ಹೆಣ್ಣುಮಕ್ಕಳು ಮಾಸಿಕ ಚಕ್ರದ ದಿನಗಳಲ್ಲೂ ದುಡಿಯಬೇಕಿದೆ. ಶಿಶುವಿಹಾರ ವ್ಯವಸ್ಥೆಯಿಲ್ಲ ಎಂದು 2017ರಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ವಿಕಾಸ ಮಂತ್ರಾಲಯಕ್ಕೆ ಸಲ್ಲಿಸಲಾದ ವರದಿ ಹೇಳಿದೆ

ಚಹಾ ಎಲೆ ಕೀಳುವ ಕೂಲಿಯಾಳುಗಳು ಬಹುತೇಕ ಮಹಿಳೆಯರು. ಕೆಲಸದ ನಡುವೆ ಅವರು ಕುಡಿಯುವ ಚಹಾ ಕಷಾಯಕ್ಕೆ ಸಕ್ಕರೆಯ ಬದಲಿಗೆ ಉಪ್ಪು ಬೆರೆಸಿಕೊಳ್ಳುತ್ತಾರೆ. ಅಧಿಕ ರಕ್ತದೊತ್ತಡ ಅವರ ಬೆನ್ನು ಹತ್ತಿದೆ. ಉಪ್ಪಿನ ಬದಲು ಉಚಿತ ಸಕ್ಕರೆ ಸರಬರಾಜು ಮಾಡುವುದಾಗಿ 2019ರಲ್ಲಿ ರಾಜ್ಯ ಸರ್ಕಾರ ಆಶ್ವಾಸನೆ ನೀಡಿತ್ತು. ಆದರೆ ಅದೂ ಆಶ್ವಾಸನೆಯಾಗೇ ಉಳಿದಿದೆ.

ನರೇಂದ್ರ ಮೋದಿಯವರು ತಮ್ಮನ್ನು ’ಚಾಯ್ ವಾಲಾ’ ಎಂದು ಕರೆದುಕೊಂಡರು. ಚಹಾ ಮಾರಿದೆನೆಂದು ಹೇಳಿಕೊಂಡು ಅದನ್ನು ಚುನಾವಣೆಯಲ್ಲಿ ರಾಜಕೀಯ ಬಂಡವಾಳವನ್ನಾಗಿಯೂ ಮಾಡಿಕೊಂಡರು. ಆದರೆ ದೇಶದ ಚಹಾ ಮಾರುವವರ ಬದುಕುಗಳನ್ನು ಅರಳಿಸುವಂತಹದೇನನ್ನೂ ಅವರು ಮಾಡಲಿಲ್ಲ. 2014ರ ಲೋಕಸಭಾ ಚುನಾವಣೆಗಳ ಪ್ರಚಾರ ಭಾಷಣಗಳಲ್ಲಿ ದಿನಗೂಲಿಯನ್ನು 350 ರುಪಾಯಿಗೆ ಹೆಚ್ಚಿಸುವ ಭರವಸೆ ನೀಡಿದ್ದುಂಟು. ಬಿಜೆಪಿ 2016ರಲ್ಲಿ ಅಸ್ಸಾಮ್ ಚುನಾವಣಾ ಪ್ರಣಾಳಿಕೆಯಲ್ಲಿ ಈ ಆಶ್ವಾಸನೆಯನ್ನು ಅಚ್ಚು ಮಾಡಿತು. ಇದೀಗ ಮತ್ತೊಂದು ಚುನಾವಣೆ ಬಂದಿದೆ. ಆದರೆ ಆಶ್ವಾಸನೆ ಚುನಾವಣೆ ಪ್ರಣಾಳಿಕೆಯ ಪುಟಗಳಲ್ಲೇ ಹೂತು ಹೋಗಿದೆ.


ಇದನ್ನೂ ಓದಿ: ಬಹುಜನ ಭಾರತ: ಬಂಧನದಲ್ಲಿ ಕಳೆದುಹೋಗುವ ಮುಸಲ್ಮಾನ ಬದುಕುಗಳು- ಪರಿಹಾರ ಇಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....