Homeಅಂಕಣಗಳುಬಹುಜನ ಭಾರತ: ಚಹಾ ತೋಟಗಳ ನವಗುಲಾಮಗಿರಿಯಲ್ಲಿ ನರಳಿರುವ ಆದಿವಾಸಿಗಳು

ಬಹುಜನ ಭಾರತ: ಚಹಾ ತೋಟಗಳ ನವಗುಲಾಮಗಿರಿಯಲ್ಲಿ ನರಳಿರುವ ಆದಿವಾಸಿಗಳು

- Advertisement -
- Advertisement -

ಕಾಂಗ್ರೆಸ್-ಬಿಜೆಪಿ ಪಾಲಿಗೆ ಅಸ್ಸಾಮಿನ Tea Tribe ನಡೆದಾಡುವ ಮತಗಳೇ ವಿನಾ ಮನುಷ್ಯರಲ್ಲ

ದಮನಿತರು ಶೋಷಿತರು ಅವಮಾನಿತರ ನೋವುಗಳಿಗೆ ದನಿಯಾಗಿದ್ದ ಇಂಗ್ಲಿಷ್ ಕಾದಂಬರಿಕಾರ ದಿವಂಗತ ಮುಲ್ಕರಾಜ್ ಆನಂದ್ ಅವರು ಚಹಾ ತೋಟಗಳಲ್ಲಿ ಕಾರ್ಮಿಕರು ಅನುಭವಿಸುವ ರೌರವ ನರಕವನ್ನು ಸೆರೆಹಿಡಿದು ಜಗತ್ತಿಗೆ ತೋರಿದ ಮೊದಲಿಗರು. ಈ ಕಾದಂಬರಿಯ ಹೆಸರು Two Leaves and a Bud (ಎರಡೆಲೆ ಮತ್ತು ಒಂದು ಮುಗುಳು). 1937ರಲ್ಲಿ ಬರೆದಿದ್ದ ಕೃತಿಯದು.

ಒಮ್ಮೆ ಹೊಕ್ಕರೆ ಮತ್ತೆಂದೂ ಹೊರಬೀಳದಂತೆ ಬಂಧಿಸಿ ಹಗಲಿರುಳು ರಕ್ತ ಬೆವರು ಒಂದು ಮಾಡಿಸಿ ದುಡಿಸಿಕೊಳ್ಳುವ ಚಹಾ ತೋಟಗಳ ನರಕದಿಂದ ಮುಕ್ತಿ ನೀಡುವ ಶಕ್ತಿಯಿರುವುದು ಸಾವಿಗೆ ಮಾತ್ರವೇ ಎಂಬ ಕ್ರೂರ ಸತ್ಯ ಈ ಕಾದಂಬರಿಯಲ್ಲಿ ಅನಾವರಣವಾಗುತ್ತ ಹೋಗುತ್ತದೆ. ಅಮಾಯಕರ ಶ್ರಮವನ್ನು ದರೋಡೆ ಮಾಡುವ ಒಡೆಯರ ಪಾಲಿಗೆ ಕೂಲಿಗಳು ದುಡಿವ ಯಂತ್ರಗಳೇ ವಿನಾ ಮನುಷ್ಯರಲ್ಲ. ದಿನಕ್ಕೆ ಬೆಳಗಿನಂತ ರಾತ್ರಿಯತನಕ ಬಿಡುವಿಲ್ಲದೆ ದುಡಿದರೆ ಕೈಗೆ ಬೀಳುವ ಕೂಲಿ ಮೂರು ಆಣೆಗಳು. ದಿನಸಿ ತರಲು ಸಂತೆಗೆ ಹೋದರೆ ಯಾತಕ್ಕೂ ಸಾಲದು. ಮೈಮುರಿಯುವಂತೆ ಹೊಡೆತಗಳನ್ನು ತಿನ್ನಬೇಕಲ್ಲದೆ ಪತ್ನಿ ಪುತ್ರಿಯರನ್ನು ಒಡೆಯರ ಲೈಂಗಿಕ ವಾಂಛೆಗೆ ಒಪ್ಪಿಸಲೇಬೇಕು. ಕೂಲಿಗಳ ಮುರುಕು ವಸತಿಗಳು ಕೊಳಕಿನ ಕೂಪಗಳು. ಕೊಕ್ಕೆಹುಳುಗಳ ಆಗರ. ಹೊಂಚು ಹಾಕುವ ಕಾಲರಾ. ಬಂಡವಾಳ ಹಾಕಿದ ಒಡೆಯರ ಪಾಲಿಗೆ ಕೂಲಿಗಳು ಸುಳ್ಳರು, ಕಳ್ಳರು ಹಾಗೂ ಸೋಮಾರಿಗಳು. ನೈರ್ಮಲ್ಯವೇ ಇಲ್ಲದ ಕೂಪದಲ್ಲಿ ಕೂಲಿ ಗಂಗುವಿನ ಪತ್ನಿ ಸಜನಿ ಕಾಲರಾಕ್ಕೆ ತುತ್ತಾಗಿ ಸಾಯುತ್ತಾಳೆ. ಅಂತ್ಯಕ್ರಿಯೆಗೆ ಗಂಗುವಿನ ಬಳಿ ಹಣವಿಲ್ಲ. ಕೇಳಲು ಹೋದರೆ ಗದರಿ ಅಟ್ಟುತ್ತಾನೆ ಒಡೆಯ. ತೋಟದ ಮ್ಯಾನೇಜರ್ ಕಣ್ಣು ಗಂಗುವಿನ ಮಗಳ ಮೇಲೆ ಬೀಳುತ್ತದೆ. ತಡೆಯಲು ಅಡ್ಡ ಬಂದ ಗಂಗು ಗುಂಡೇಟಿಗೆ ಹೆಣವಾಗಿ ಉರುಳುತ್ತಾನೆ.

ಸಿನೆಮಾಗಳಲ್ಲಿ ಕಾಣುವ ಬೆಟ್ಟಗುಡ್ಡ, ಝರಿ ತೊರೆ, ಕಲಕಲ ನದಿಯ ಸೀಮೆಯ ನಡುವೆ ನಳನಳಿಸುವ ಮನಮೋಹಕ ಹಸಿರು ಚಹಾ ತೋಟಗಳ ಹಿತ್ತಲುಗಳಲ್ಲಿ ಅಸಹನೀಯ ಮೌನ, ಹಸಿವಿನ ಯಾತನೆ, ನಿಟ್ಟುಸಿರು, ರಕ್ತಹೀನತೆ, ರೋಗರುಜಿನಗಳು, ಅಮಾನವೀಯ ಶೋಷಣೆ, ಸಾವಿನ ನೆರಳು ಮೈಚಾಚಿ ಮಲಗಿದೆ. ಬದುಕಿನ ಸಂಗೀತ ಮರೆಯಾಗಿದೆ.

ಕಂಗೆಟ್ಟಿರುವ ಲಕ್ಷ ಲಕ್ಷ ಕಾರ್ಮಿಕರನ್ನು ಮೈದಡವಿ ಮಾತಾಡಿಸುವ ಸರ್ಕಾರಗಳಿಲ್ಲ. ತಮ್ಮ ನೆಲದಲ್ಲೇ ಅನಾಥರಾಗಿರುವ ಅಸಂಖ್ಯಾತರ ಸಾಲಿಗೆ ಸೇರಿ ಹೋಗಿದ್ದಾರೆ ಈ ಶ್ರಮಜೀವಿಗಳು.

ಚೀನಾದಿಂದ ಚಹಾ ಸಸ್ಯಗಳನ್ನು ಕದಿಯುವ ಈಸ್ಟ್ ಇಂಡಿಯಾ ಕಂಪನಿ ಭಾರತದಲ್ಲಿ ದಟ್ಟ ಕಾಡುಗಳನ್ನು ಬೋಳಿಸಿ ಬೆಳೆಸುತ್ತದೆ. ಬ್ರಿಟಿಷ್ ಪ್ಲಾಂಟರುಗಳು 150 ವರ್ಷಗಳ ಹಿಂದೆ ಕಾಡು ಕಡಿದು ಚಹಾ ತೋಟಗಳನ್ನು ಎಬ್ಬಿಸಲು ಮಧ್ಯಭಾರತದ ಆದಿವಾಸಿಗಳನ್ನು ಬಲವಂತದಿಂದ ಒಕ್ಕಲೆಬ್ಬಿಸಿ ಅಸ್ಸಾಮ್ ಮತ್ತು ಬಂಗಾಳಕ್ಕೆ ಪಶುಗಳಂತೆ ಸಾಗಿಸುತ್ತಾರೆ. ಮುಂಡಾ, ಸಂತಾಲ್, ಓರಾನ್, ಗೊಂಡರು, ಖಾರಿಯಾ ಹಾಗೂ ಸಾವೊರಾ ಪಂಗಡಗಳ ಈ ಆದಿವಾಸಿ ಕಾರ್ಮಿಕರನ್ನು ಈಗಲೂ Tea Tribes ಎಂದೇ ಕರೆಯಲಾಗುತ್ತದೆ. ಅಸ್ಸಾಮ್ ಒಂದರಲ್ಲೇ ಈ ಆದಿವಾಸಿ ಕಾರ್ಮಿಕರ ಸಂಖ್ಯೆ ಹತ್ತು ಲಕ್ಷಕ್ಕೂ ಹೆಚ್ಚು. ಅಸ್ಸಾಮಿನ ಜನಸಂಖ್ಯೆಯಲ್ಲಿ ಇವರ ಪ್ರಮಾಣ ಶೇ.18ರಷ್ಟು ಎನ್ನಲಾಗಿದೆ.

ಅಂದಿನ ಬ್ರಿಟಿಷ್ ಸರ್ಕಾರ ಭಾರತದಲ್ಲಿ ಬ್ರಿಟಿಷ್ ಪ್ಲಾಂಟರುಗಳಿಗೆ ಸಂಪನ್ಮೂಲಗಳು ಮತ್ತು ಕೂಲಿ ಕಾರ್ಮಿಕರ ಮೇಲೆ ಎಣೆಯಿಲ್ಲದ ಪ್ರಶ್ನಾತೀತ ಅಧಿಕಾರವನ್ನ ಅಧಿಪತ್ಯ ನೀಡಿತ್ತು. ಬಲವಂತದ ನೇಮಕ, ಅತಿ ಕಡಿಮೆ ಕೂಲಿ, ಅಮಾನವೀಯ ವಸತಿ ಮತ್ತು ಕೆಲಸದ ಪರಿಸ್ಥಿತಿಗಳು ಅಂದಿನ ಬ್ರಿಟಿಷ್ ಮಾಲೀಕರ ಲಾಭವನ್ನು ನೂರ್ಮಡಿಗೊಳಿಸುತ್ತಿದ್ದವು. ಸ್ವತಂತ್ರ ಭಾರತದ ಚಹಾ ತೋಟಗಳ ಕಾರ್ಮಿಕರ ಪರಿಸ್ಥಿತಿ ಹೆಚ್ಚೇನೂ ಬದಲಾಗಿಲ್ಲ.

ತಮ್ಮ ರಾಜ್ಯಗಳಲ್ಲೇ ಬದುಕಿದ್ದರೆ ಇವರಿಗೆ ಸ್ವಾಭಾವಿಕವಾಗಿ ಹಕ್ಕಿನ ಪ್ರಕಾರವೇ ದಕ್ಕಿರುವ ಪರಿಶಿಷ್ಟ ಪಂಗಡಗಳ ಸ್ಥಾನಮಾನ ಸಿಗುತ್ತಿತ್ತು. ಆದರೆ ಅಸ್ಸಾಮ್ ಸರ್ಕಾರ ಇವರಿಗೆ ಆದಿವಾಸಿಗಳ ಸ್ಥಾನಮಾನ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ತಯಾರಿಲ್ಲ. ಈ ಸ್ಥಾನಮಾನಕ್ಕಾಗಿ ಹೋರಾಟ ನಡೆಸಿರುವ ಆದಿವಾಸಿಗಳು ಅಸ್ಸಾಮಿನ ಉಗ್ರರ ಕೆಂಗಣ್ಣಿಗೆ ಗುರಿಯಾಗಿ ಸಾವಿರ ಸಂಖ್ಯೆಯಲ್ಲಿ ಹತ್ಯೆಯಾಗಿ ಹೋಗಿದ್ದಾರೆ. ಚಹಾ ತೋಟಗಳ ಮಾಲೀಕರ ದೌರ್ಜನ್ಯಗಳಿಗೆ ಗುರಿಯಾಗಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಬಡಪಾಯಿಗಳ ವಿರುದ್ಧ ಹತ್ತು ಹಲವು ರೂಪಗಳಲ್ಲಿ ಯುದ್ಧ ಸಾರಿವೆ.

ಅಸ್ಸಾಮ್ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳ ಮೇಲೆ ಸೋಲು ಗೆಲುವಿನ ಮೇಲೆ ಪ್ರಭಾವ ಬೀರಬಲ್ಲವರು ಇವರು. ಸುಮಾರು 40 ವಿಧಾನಸಭಾ ಕ್ಷೇತ್ರಗಳ ಫಲಿತಾಂಶಗಳನ್ನು ಇವರ ಮತಗಳು ತೀರ್ಮಾನಿಸಬಲ್ಲವು. ರಾಜಕೀಯ ಪಕ್ಷಗಳ ಪಾಲಿಗೆ ಈ ಜನರು ನಡೆದಾಡುವ ಉಸಿರಾಡುವ ವೋಟುಗಳು ಅಷ್ಟೇ. ಐದು ವರ್ಷಗಳಿಗೊಮ್ಮೆ ಇವರ ಕಣ್ಣಲ್ಲಿ ಮಣ್ಣು ಹಾಕಿದರೆ ಸಾಕು. ಮುಂದಿನ ಐದು ವರ್ಷಗಳ ಕಾಲ ನಿಶ್ಚಿಂತೆ. ಅಸ್ಸಾಮಿನ ಚುನಾವಣೆಗಳು ಜರುಗಿವೆ. ಹೀಗಾಗಿ ಬಿಜೆಪಿ- ಕಾಂಗ್ರೆಸ್ಸು ಎರಡೂ ಪಕ್ಷಗಳು ಈ ಉಸಿರಾಡುವ ವೋಟುಗಳನ್ನು ರಮಿಸಲು ತೊಡಗಿವೆ.

ನೀರು, ನೆರಳು, ಅನ್ನ ಯಾವ ಸೌಲಭ್ಯವೂ ಸಮರ್ಪಕವಿಲ್ಲ. ಅತಿ ಕಡಿಮೆ ದಿನಗೂಲಿ, ಜೊತೆಗೆ ಲೈಂಗಿಕ ಕಿರುಕುಳ ಎಂದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆಯ ವರದಿಯೊಂದು ಅಸ್ಸಾಮಿನ ಚಹಾ ತೋಟಗಳ ಕಾರ್ಮಿಕರ ಬವಣೆಯನ್ನು ಬಣ್ಣಿಸುತ್ತದೆ. ಶೇ.89ರಷ್ಟು ಚಹಾ ತೋಟಗಳಲ್ಲಿ ನೈರ್ಮಲ್ಯದ ಸೌಲಭ್ಯಗಳಿಲ್ಲ. ಹೆಣ್ಣುಮಕ್ಕಳು ಮಾಸಿಕ ಚಕ್ರದ ದಿನಗಳಲ್ಲೂ ದುಡಿಯಬೇಕಿದೆ. ಶಿಶುವಿಹಾರ ವ್ಯವಸ್ಥೆಯಿಲ್ಲ ಎಂದು 2017ರಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ವಿಕಾಸ ಮಂತ್ರಾಲಯಕ್ಕೆ ಸಲ್ಲಿಸಲಾದ ವರದಿ ಹೇಳಿದೆ

ಚಹಾ ಎಲೆ ಕೀಳುವ ಕೂಲಿಯಾಳುಗಳು ಬಹುತೇಕ ಮಹಿಳೆಯರು. ಕೆಲಸದ ನಡುವೆ ಅವರು ಕುಡಿಯುವ ಚಹಾ ಕಷಾಯಕ್ಕೆ ಸಕ್ಕರೆಯ ಬದಲಿಗೆ ಉಪ್ಪು ಬೆರೆಸಿಕೊಳ್ಳುತ್ತಾರೆ. ಅಧಿಕ ರಕ್ತದೊತ್ತಡ ಅವರ ಬೆನ್ನು ಹತ್ತಿದೆ. ಉಪ್ಪಿನ ಬದಲು ಉಚಿತ ಸಕ್ಕರೆ ಸರಬರಾಜು ಮಾಡುವುದಾಗಿ 2019ರಲ್ಲಿ ರಾಜ್ಯ ಸರ್ಕಾರ ಆಶ್ವಾಸನೆ ನೀಡಿತ್ತು. ಆದರೆ ಅದೂ ಆಶ್ವಾಸನೆಯಾಗೇ ಉಳಿದಿದೆ.

ನರೇಂದ್ರ ಮೋದಿಯವರು ತಮ್ಮನ್ನು ’ಚಾಯ್ ವಾಲಾ’ ಎಂದು ಕರೆದುಕೊಂಡರು. ಚಹಾ ಮಾರಿದೆನೆಂದು ಹೇಳಿಕೊಂಡು ಅದನ್ನು ಚುನಾವಣೆಯಲ್ಲಿ ರಾಜಕೀಯ ಬಂಡವಾಳವನ್ನಾಗಿಯೂ ಮಾಡಿಕೊಂಡರು. ಆದರೆ ದೇಶದ ಚಹಾ ಮಾರುವವರ ಬದುಕುಗಳನ್ನು ಅರಳಿಸುವಂತಹದೇನನ್ನೂ ಅವರು ಮಾಡಲಿಲ್ಲ. 2014ರ ಲೋಕಸಭಾ ಚುನಾವಣೆಗಳ ಪ್ರಚಾರ ಭಾಷಣಗಳಲ್ಲಿ ದಿನಗೂಲಿಯನ್ನು 350 ರುಪಾಯಿಗೆ ಹೆಚ್ಚಿಸುವ ಭರವಸೆ ನೀಡಿದ್ದುಂಟು. ಬಿಜೆಪಿ 2016ರಲ್ಲಿ ಅಸ್ಸಾಮ್ ಚುನಾವಣಾ ಪ್ರಣಾಳಿಕೆಯಲ್ಲಿ ಈ ಆಶ್ವಾಸನೆಯನ್ನು ಅಚ್ಚು ಮಾಡಿತು. ಇದೀಗ ಮತ್ತೊಂದು ಚುನಾವಣೆ ಬಂದಿದೆ. ಆದರೆ ಆಶ್ವಾಸನೆ ಚುನಾವಣೆ ಪ್ರಣಾಳಿಕೆಯ ಪುಟಗಳಲ್ಲೇ ಹೂತು ಹೋಗಿದೆ.


ಇದನ್ನೂ ಓದಿ: ಬಹುಜನ ಭಾರತ: ಬಂಧನದಲ್ಲಿ ಕಳೆದುಹೋಗುವ ಮುಸಲ್ಮಾನ ಬದುಕುಗಳು- ಪರಿಹಾರ ಇಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...